ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಚೊಚ್ಚಲ ಬಜೆಟ್ ಮಂಡಿಸಲಿದ್ದಾರೆ. ಮೊದಲ ಬಜೆಟ್ನಲ್ಲಿ ಬೊಮ್ಮಾಯಿ ಯಾರಿಗೆ ಏನು ಕೊಡುತ್ತಾರೆ ಎಂಬ ಕುತೂಹಲ ಮೂಡಿದೆ. ಇಂದು ಮಧ್ಯಾಹ್ನ 12.30 ರಿಂದ ಸಿಎಂ ವಿಧಾನಸಭೆಯಲ್ಲಿ 2022-23ನೇ ಸಾಲಿನ ಆಯವ್ಯಯ ಮಂಡಿಸಲಿದ್ದಾರೆ. ಇದಕ್ಕೂ ಮುನ್ನ ಬಜೆಟ್ಗೆ ಅನುಮೋದನೆ ನೀಡಲು 12.10ಕ್ಕೆ ಸಚಿವ ಸಂಪುಟ ವಿಶೇಷ ಸಭೆ ನಡೆಯಲಿದೆ. ಬಜೆಟ್ಗೂ ಮುನ್ನ ಸಿಎಂ ದೇವಾಲಯಕ್ಕೆ ತೆರಳಿ, ಪೂಜೆ ಸಲ್ಲಿಸಲಿದ್ದಾರೆ. ಆ ಬಳಿಕ ಆಯವ್ಯಯ ಪ್ರತಿ ಸ್ವೀಕರಿಸಿ …
Read More »Monthly Archives: ಮಾರ್ಚ್ 2022
ರಾಜ್ಯದಲ್ಲಿ ಕೋವಿಡ್ ನಿರ್ಬಂಧ ಸಂಪೂರ್ಣ ತೆರವು
ಬೆಂಗಳೂರು: ಕೊರೋನಾ ಸೋಂಕು ಭಾರೀ ಪ್ರಮಾಣದಲ್ಲಿ ಇಳಿಮುಖವಾದ ಬೆನ್ನಲ್ಲೇ ರಾಜ್ಯದಲ್ಲಿ ಕೋವಿಡ್ ನಿರ್ಬಂಧಗಳನ್ನು ಸಂಪೂರ್ಣವಾಗಿ ತೆರವುಗೊಳಿಸಲಾಗಿದೆ. ರಾಜ್ಯದಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದ್ದು, ಜನಜೀವನ ಹಾಗೂ ಆರ್ಥಿಕತೆಗೆ ಮತ್ತೆ ಚೇತರಿಕೆ ಒದಗಿಸಲು,ಶಿಕ್ಷಣ ,ಸಾಂಸ್ಕೃತಿಕ, ಸಭೆ,ಸಮಾರಂಭಗಳು,ಕ್ರೀಡೆ,ಮನರಂಜನಾ ಚಟುವಟಿಕೆಗಳು, ಜಾತ್ರೆ ,ಉತ್ಸವಗಳು ಸೇರಿದಂತೆ ವಿವಿಧ ರಂಗಗಳ ಮೇಲೆ ವಿಧಿಸಿದ್ದ ನಿರ್ಬಂಧಗಳನ್ನು ತೆರವುಗೊಳಿಸಲಾಗಿದೆ ಮದುವೆ,ಶವ ಸಂಸ್ಕಾರಗಳಲ್ಲಿ ಭಾಗವಹಿಸುವವರ ಸಂಖ್ಯೆಗೆ ಮಿತಿಗೊಳಿಸಲಾಗಿದ್ದ ನಿರ್ಬಂಧಗಳನ್ನು ಕೂಡ ಮುಕ್ತಗೊಳಿಸಲಾಗಿದೆ.ಸಿನೆಮಾ,ನಾಟಕ ಥೇಟರುಗಳು, ಶಾಲೆ,ಕಾಲೇಜು,ಗ್ರಂಥಾಲಯ, ತರಬೇತಿ ಕೇಂದ್ರಗಳು ,ಕ್ರೀಡಾ …
Read More »ಬೊಮ್ಮಾಯಿ ಬಜೆಟ್ ಮೇಲೆ ಬೆಟ್ಟದಷ್ಟು ನಿರೀಕ್ಷೆ: ಬಜೆಟ್ ಮಂಡನೆಗೆ ಮುಖ್ಯಮಂತ್ರಿ ಸಿದ್ಧತೆ.
ಬಜೆಟ್ ಎಂದಾಕ್ಷಣ ಜನ ಸಾಮಾನ್ಯರಿಂದ ಹಿಡಿದು ಉದ್ಯಮಿಗಳ ತನಕ ಹತ್ತು ಹಲವು ನಿರೀಕ್ಷೆಗಳು ಗರಿಗೆದ ರುವುದು ಸಹಜ. ಇಂಥದ್ದೆ ನಿರೀಕ್ಷೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಲಿರುವ ಬಜೆಟ್ ಮೇಲೂ ಇದೆ. ಮೊದಲಿಂದಲೂ ರೈತ ಸಮುದಾಯಕ್ಕೆ ಬಜೆಟ್ನಲ್ಲಿ ವಿಶೇಷ ಆದ್ಯತೆ ನೀಡಲಾಗುತ್ತಿದ್ದು, ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಬಂಗಾರಪ್ಪ, ಎಸ್.ಎಂ.ಕೃಷ್ಣ ಮತ್ತು ಸಿದ್ದರಾಮಯ್ಯ, ಜೆಡಿಎಸ್ ಅಧಿಕಾರದಲ್ಲಿದ್ದಾಗ ಎಚ್.ಡಿ.ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ, ಬಿಜೆಪಿ ಸರ್ಕಾರದಲ್ಲಿ ಬಿ.ಎಸ್.ಯಡಿಯೂರಪ್ಪ ವಿಶೇಷ ಕಾಳಜಿ ವಹಿಸಿದ್ದಾರೆ. ಉಚಿತ ವಿದ್ಯುತ್, ಗ್ರಾಮೀಣ ಕೃಪಾಂಕ, …
Read More »ಅಮರಾವತಿʼಯೇ ಆಂಧ್ರಪ್ರದೇಶದ ರಾಜಧಾನಿ!. ಹೈಕೋರ್ಟ್ನ ಅಂತಿಮ ತೀರ್ಪು ಪ್ರಕಟ
ಅಮರಾವತಿ(ಆಂಧ್ರಪ್ರದೇಶ): ಆಂಧ್ರಪ್ರದೇಶ ರಾಜಧಾನಿ ವಿಚಾರದಲ್ಲಿ 3 ರಾಜಧಾನಿಗಳು, ಸಿಆರ್ಡಿಎ ರದ್ದು ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳ ಕುರಿತು ರಾಜ್ಯ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ರಾಜ್ಯ ಸರ್ಕಾರ ಸಿಆರ್ಡಿಎ ಕಾಯ್ದೆ ಪ್ರಕಾರವೇ ನಡೆದುಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ʻಅಮರಾವತಿʼಯನ್ನು ರಾಜಧಾನಿಯನ್ನಾಗಿ ಅಭಿವೃದ್ಧಿಪಡಿಸಬೇಕು ಎಂದು ಆದೇಶಿಸಲಾಗಿದೆ. ರೈತರೊಂದಿಗೆ ಮಾಡಿಕೊಂಡಿರುವ ಒಪ್ಪಂದದ ಪ್ರಕಾರ 6 ತಿಂಗಳೊಳಗೆ ಮಾಸ್ಟರ್ ಪ್ಲಾನ್ ಪೂರ್ಣಗೊಳಿಸಬೇಕು. ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಕಾಲಕಾಲಕ್ಕೆ ನ್ಯಾಯಾಲಯಕ್ಕೆ ವರದಿ ಸಲ್ಲಿಸುವಂತೆಯೂ ಸೂಚಿಸಿದೆ. …
Read More »ಕಾಂಗ್ರೆಸ್ ಪಾದಯಾತ್ರೆಗೆ ಹೈಕೋರ್ಟ್ ಅಸಮಾಧಾನ: ಬೆಂಗಳೂರು ನಗರದಲ್ಲಿ ಪ್ರತಿಭಟನೆ ನಡೆಸದಂತೆ ತಾಕೀತು
ಬೆಂಗಳೂರು: ಮೇಕೆದಾಟು ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಾದಯಾತ್ರೆಗೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ್ದು, ಬೆಂಗಳೂರು ನಗರದಲ್ಲಿ ಇನ್ಮುಂದೆ ಯಾವುದೇ ಪ್ರತಿಭಟನೆಗಳನ್ನು ಕೈಗೊಳ್ಳದಂತೆ ಆದೇಶ ಹೊರಡಿಸಿದೆ. ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಹಾಗೂ ನ್ಯಾಯಮೂರ್ತಿ ಎಸ್.ಆರ್ ಕೃಷ್ಣಕುಮಾರ್ ಅವರಿದ್ದ ವಿಭಾಗೀಯ ಪೀಠದಿಂದ ಆದೇಶ ಹೊರಡಿಸಲಾಗಿದೆ. ಫ್ರೀಡಂಪಾರ್ಕ್ನಲ್ಲಿ ಪ್ರತಿಭಟನೆ ನಡೆಸುವ ವೇಳೆಯೂ ನಗರದ ಸಾರಿಗೆ-ಸಂಚಾರ ಹಾಗೂ ಜನರ ದಿನನಿತ್ಯದ ಚಟುವಟಿಕೆಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳುವಂತೆ ಸರ್ಕಾರಕ್ಕೆ ತಾಕೀತು ಮಾಡಿತು. ಇಂದು ಹೈಕೋರ್ಟ್ ತಲುಪಲು ನಮಗೇ ಒಂದು ಗಂಟೆ …
Read More »ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಮತ್ತಷ್ಟು ಇಳಿಮುಖ
ದೆಹಲಿ: ದೇಶದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖವಾಗುತ್ತಿದೆ. ಸತತವಾಗಿ ಕಳೆದ 25 ದಿನಗಳಿಂದ ಒಂದು ಲಕ್ಷಕ್ಕಿಂತ ಕಡಿಮೆ ಪ್ರಕರಣಗಳು ಪತ್ತೆಯಾಗುತ್ತಿವೆ. ಕೇಂದ್ರ ಆರೋಗ್ಯ ಸಚಿವಾಲಯವು ಗುರುವಾರ ನೀಡಿರುವ ಅಂಕಿ-ಅಂಶಗಳ ಪ್ರಕಾರ ಹೊಸದಾಗಿ 6,561 ಜನರಿಗೆ ಮಾತ್ರವೇ ಸೋಂಕು ಪತ್ತೆಯಾಗಿದೆ. ಇದರಲ್ಲಿ 142 ಮಂದಿ ಮೃತಪಟ್ಟಿದ್ದಾರೆ. ಹೊಸ ಪ್ರಕರಣಗಳೊಂದಿಗೆ ಸಕ್ರಿಯ ರೋಗಿಗಳು 77,152 ಇದ್ದಾರೆ. ಇದರಿಂದ ಸಕ್ರಿಯ ಪ್ರಕರಣಗಳ ಪ್ರಮಾಣ ಕೇವಲ ಶೇ.0.18 ಮಾತ್ರವೇ ಇದ್ದು, ಶೇ.98.62 ಚೇತರಿಕೆ ಪ್ರಮಾಣ ಇದೆ. …
Read More »ಕಾಮಗಾರಿ ಹಿನ್ನಲೆ ‘ಆಗುಂಬೆ ಘಾಟ್’ ರಸ್ತೆ 10 ದಿನ ಬಂದ್
ಶಿವಮೊಗ್ಗ: ಈಗಾಗಲೇ ರಸ್ತೆ ಕಾಮಗಾರಿ ಹಿನ್ನಲೆಯಲ್ಲಿ ಹಲವು ಬಾರಿ ಬಂದ್ ಆಗಿದ್ದಂತ ಆಗುಂಬೆ ರಸ್ತೆ , ಈಗ ಮತ್ತೆ ಬಂದ್ 10 ದಿನ ಬಂದ್ ಆಗಲಿದೆ. ಈ ಕುರಿತಂತೆ ಶಿವಮೊಗ್ಗ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ರಾಷ್ಟ್ರೀಯ ಹೆದ್ದಾರಿ 169ಎ ಆಗುಂಬೆ-ಹೆಬ್ರಿವರೆಗೆ ರಸ್ತೆ ದುರಸ್ತಿ ಕಾಮಗಾರಿ ಹಿನ್ನಲೆಯಲ್ಲಿ ಮಾರ್ಚ್ 5 ರಿಂದ 15ರವರೆಗೆ ಹತ್ತು ದಿನ ಬೆಳಿಗ್ಗೆ 7 ರಿಂದ ಸಂಜೆ 7ರವೆರೆಗೆ ಆಗುಂಬೆ ಘಾಟ್ ಸಂಚಾರ ನಿಷೇಧಿಸಲಾಗಿದೆ …
Read More »ಪ್ರಿಯಕರನೊಂದಿಗೆ ಸೇರಿ ಪುತ್ರನ ಕೊಲೆ ಮಾಡಿದ ತಾಯಿ!
ಕೊಪ್ಪಳ: ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಮ್ಯಾದರಡೊಕ್ಕಿ ಗ್ರಾಮದಲ್ಲಿ ವ್ಯಕ್ತಿ ನಾಪತ್ತೆಯಾಗಿದ್ದು, ಪೊಲೀಸರ ತನಿಖೆಯಲ್ಲಿ ಆತ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ. ತಾಯಿ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದ ಅಮರಪ್ಪನೊಂದಿಗೆ ಬಸವರಾಜ ಜಗಳವಾಡಿದ್ದಾನೆ. ಬಳಿಕ ತಾಯಿ ಅಮರಪ್ಪ ಮತ್ತು ಅಮರೇಶ ಸೇರಿಕೊಂಡು ದೊಣ್ಣೆಯಿಂದ ಹೊಡೆದು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ. ತಾವರಗೇರಾ ಠಾಣೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ತಾಯಿ ಸೇರಿ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ
Read More »ಅಕ್ರಮ ಗಾಂಜಾ ಮಾರಾಟ ಪ್ರಕರಣ: ಇಬ್ಬರ ಬಂಧನ
ಮೈಸೂರು: ಆಟೊವೊಂದರಲ್ಲಿ ಅಕ್ರಮವಾಗಿ ಗಾಂಜಾವನ್ನಿಟ್ಟುಕೊಂಡು ಮಾರಾಟ ಮಾಡಲು ಯತ್ನಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಹುಣಸೂರು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪಂಚವಳ್ಳಿ ಗ್ರಾಮದ ಸೈಯದ್ ಯೂನಸ್ ಮತ್ತು ಮಂಗಳೂರು ಮಾಳ ಗ್ರಾಮದ ಮಹದೇವ ಬಂಧಿತರು, ಯೂನಸ್ ಮಾರಾಟ ಮಾಡುತ್ತಿದ್ದವನಾಗಿದ್ದು, ಈತನ ಬಳಿಗೆ ಮಹದೇವ ಖರೀದಿಗೆ ಬಂದಿದ್ದನು ಎಂದು ಹೇಳಲಾಗಿದೆ. ಆರೋಪಿ ಯೂನಸ್ ಹನಗೋಡು ಹೋಬಳಿಯ ದೇವರಾಜಕಾಲೋನಿ ಗೇಟ್ನಿಂದ ಹನಗೋಡು ಕಡೆಗೆ ಹೋಗುವ ರಸ್ತೆಯಲ್ಲಿ ಕೆಎ 12 ಎ 2439 …
Read More »ಸಂತೆಕಟ್ಟೆ ರಸ್ತೆ ಅಪಘಾತಕ್ಕೆ ಎಎಸ್ಐ ಹಾಗೂ ಪುತ್ರಿ ಬಲಿ
ಉಡುಪಿ: ಸಂತೆಕಟ್ಟೆ ಎಂಬಲ್ಲಿ ಕೇರಳದ ಕೆಎಸ್ಆರ್ಟಿಸಿ ಬಸ್ ಹಾಗೂ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ, ಕರಾವಳಿ ಕಾವಲು ಪಡೆಯ ಎಎಸ್ಐ ಗಣೇಶ್ ಪೈ (58)ಹಾಗೂ ಪುತ್ರಿ ಗಾಯತ್ರಿ ಪೈ (27)ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಬುಧವಾರ ಮುಂಜಾನೆ ಘಟನೆ ನಡೆದಿದೆ. ಹುಬ್ಬಳ್ಳಿಯಿಂದ ಬಂದ ಪುತ್ರಿಯನ್ನು ಬಸ್ ನಿಲ್ದಾಣದಿಂದ ಮನೆಗೆ ಕರೆದೊಯ್ಯುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು, ಕೊಲ್ಲೂರಿನಿಂದ ಕೇರಳಕ್ಕೆ ಹೋಗುತ್ತಿದ್ದ ಬಸ್ ಡಿಕ್ಕಿ ಹೊಡೆದಿತ್ತು. ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Read More »
Laxmi News 24×7