ಅಣ್ಣನಿಂದ ತಮ್ಮನ ಕೊಲೆ ನಡೆದಿರುವ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲ್ಲೂಕಿನ ಕುದುರಗುಂಡ ಗ್ರಾಮದಲ್ಲಿ ನಡೆದಿದೆ. ಸಾಹೇಬಗೌಡ ಚನ್ನಬಸಪ್ಪಗೌಡ ಹದಗಲ್ಲ (27)ಮೃತ ದುರ್ದೈವಿಯಾಗಿದ್ದು ಈತನಿಗೆ ಎರಡು ಗಂಡು ಮಕ್ಕಳು ಇದ್ದರು ಎಂದು ತಿಳಿದುಬಂದಿದೆ. ನಿಂಗನಗೌಡ ಚನ್ನಬಸಪ್ಪಗೌಡ ಹದಗಲ್ಲ ತಮ್ಮನನ್ನು ಕ್ಷುಲ್ಲಕ ಕಾರಣಕ್ಕೆ ಬಡಿಗೆಯಿಂದ ಹೊಡೆದು ಪರಾರಿಯಾದ ಘಟನೆ ಗ್ರಾಮದಲ್ಲಿ ನಡೆದಿದೆ. ಸ್ಥಳದಲ್ಲಿ ಸಂಬಂಧಿಕರ ಆಕ್ರಂಧನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಕಲಕೇರಿ ಪೊಲೀಸ್ ಠಾಣಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. …
Read More »Monthly Archives: ಮಾರ್ಚ್ 2022
ಉಕ್ರೇನ್ನಿಂದ ಬಂದ ಮಕ್ಕಳನ್ನ ತಬ್ಬಿ ಕಣ್ಣೀರಿಟ್ಟ ಕುಟುಂಬಸ್ಥರು!
ನವದೆಹಲಿ: ಯುದ್ಧಪೀಡಿತ ಉಕ್ರೇನ್ನಿಂದ ಇಂದು ಕೂಡ ನೂರಾರು ಜನರು ತಾಯ್ನಾಡಿಗೆ ವಾಪಸ್ ಆಗಿದ್ದಾರೆ. ಅನೇಕ ವಿದ್ಯಾರ್ಥಿಗಳನ್ನ ಹೊತ್ತು ವಿಮಾನವೊಂದು ದೆಹಲಿಯ ಏರ್ಪೋರ್ಟ್ಗೆ ಬರುತ್ತಿದ್ದಂತೆ ಮಕ್ಕಳನ್ನ ತಬ್ಬಿಕೊಂಡು ಪೋಷಕರು ಸಂತೋಷದಿಂದ ಕಣ್ಣೀರು ಹಾಕಿದ್ದಾರೆ. ಕಳೆದ ಏಳು ದಿನಗಳಿಂದ ಉಕ್ರೇನ್ನ ವಿವಿಧ ನಗರಗಳ ಮೇಲೆ ರಷ್ಯಾ ದಾಳಿ ನಡೆಸುತ್ತಿದ್ದು, ಪರಿಣಾಮ ಸಾವಿರಾರು ಭಾರತೀಯರು ತೊಂದರೆಗೊಳಗಾಗಿದ್ದಾರೆ. ಅವರನ್ನ ಅಲ್ಲಿಂದ ಕರೆತರುವ ಪ್ರಯತ್ನ ನಡೆಸಿರುತ್ತಿರುವ ಕೇಂದ್ರ ಸರ್ಕಾರ ಆಪರೇಷನ್ ಗಂಗಾ ಯೋಜನೆ ಹಮ್ಮಿಕೊಂಡಿದೆ.
Read More »ಮೋಜು ಮಸ್ತಿಗಾಗಿ ಬೈಕ್ ಕಳ್ಳತನಕ್ಕೆ ಇಳಿದಿದ್ದ ಆರೋಪಿ ಬಂಧನ
ನೆಲಮಂಗಲ: ವ್ಯವಸಾಯ ಮಾಡಿಕೊಂಡಿದ್ದ ವ್ಯಕ್ತಿಯೊಬ್ಬ ಮೋಜು ಮಸ್ತಿಗಾಗಿ ಬೈಕ್ ಕಳ್ಳತನಕ್ಕೆ ಇಳಿದು ನೆಲಮಂಗಲ ಟೌನ್ ಪೊಲೀಸರ ಅತಿಥಿಯಾಗಿದ್ದಾನೆ. ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ದೊಡ್ಡತರಹಳ್ಳಿಯ ಸುನಿಲ್ ಅಲಿಯಾಸ್ ಸುನಿ (29) ಬಂಧಿತ ಆರೋಪಿಯಾಗಿದ್ದು, ಈತನಿಂದ ಒಟ್ಟು 11ಬೈಕ್ ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ. ಊರಲ್ಲಿ ವ್ಯವಸಾಯ ಮಾಡ್ಕೊಂಡಿದ್ದ ಆರೋಪಿ ಸುನೀಲ್ ಮೋಜು ಮಸ್ತಿಗಾಗಿ ಬೈಕ್ ಕಳ್ಳತನಕ್ಕೆ ಇಳಿದಿದ್ದ. ಈತ ನೆಲಮಂಗಲ, ಮಾದನಾಯಕನಹಳ್ಳಿ, ಪೀಣ್ಯ, ಹಾಸನ , …
Read More »ಉಕ್ರೇನ್ ಮೇಲೆ ರಷ್ಯಾ ಮಿಲಿಟರಿ ಕಾರ್ಯಾಚರಣೆ ನಡೆಸುತ್ತಿರುವ ಪರಿಣಾಮ ಸಾವಿರಾರು ವಿದ್ಯಾರ್ಥಿಗಳು ಸಂಕಷ್ಟದಲ್ಲಿ
ನವದೆಹಲಿ: ಉಕ್ರೇನ್ ಮೇಲೆ ರಷ್ಯಾ ಮಿಲಿಟರಿ ಕಾರ್ಯಾಚರಣೆ ನಡೆಸುತ್ತಿರುವ ಪರಿಣಾಮ ಸಾವಿರಾರು ವಿದ್ಯಾರ್ಥಿಗಳು ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ. ಸುರಕ್ಷಿತವಾಗಿ ಈ ವಿದ್ಯಾರ್ಥಿಗಳನ್ನು ಭಾರತಕ್ಕೆ ವಾಪಸ್ ಕರೆತರುವ ಕೆಲಸ ನಡೆಯುತ್ತಿದೆ. ಇದರ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಇಂದು ರಷ್ಯಾ ಅಧ್ಯಕ್ಷ ವಾಡ್ಲಿಮಿರ್ ಪುಟಿನ್ ಜೊತೆ ಮಹತ್ವದ ಮಾತುಕತೆ ನಡೆಸಿದರು. ದೂರವಾಣಿ ಮೂಲಕ ನಡೆದ ಮಾತುಕತೆಯಲ್ಲಿ ಉಕ್ರೇನ್ನಲ್ಲಿನ ಪರಿಸ್ಥಿತಿ ಬಗ್ಗೆ ಚರ್ಚೆ ನಡೆಸಲಾಗಿದ್ದು, ವಿಶೇಷವಾಗಿ ಖಾರ್ಕಿವ್ನಲ್ಲಿ ಸಿಲುಕಿಕೊಂಡಿರುವ ಭಾರತೀಯ ವಿದ್ಯಾರ್ಥಿಗಳನ್ನ ವಾಪಸ್ ಕರೆತರುವ ಬಗ್ಗೆ …
Read More »ಹೆಸರಿಗಷ್ಟೇ ನೀರು, ಬರೀ ರಾಜಕೀಯ ಪುಡಾರಿಗಳ ದರ್ಬಾರು! ಮೇಕೆದಾಟು ಎಣ್ಣೆ ಘಾಟು, ಬಂಡೆ- ಮಂಡೆ ಒಡೆದ ಹಣವಲ್ಲದೆ ಮತ್ತೇನು?
ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಬಿಜೆಪಿ ಹರಿಹಾಯ್ದಿದೆ, ಮೇಕೆದಾಟು ಪಾದಯಾತ್ರೆ ಬಗ್ಗೆ ಲೇವಡಿ ಮಾಡಿರುವ ಬಿಜೆಪಿ, , ಇದು ಮೇಕೆದಾಟು ಪಾದಯಾತ್ರೆ ಎಂದು ಹೇಳಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಬಿಚೆಪಿ, ಸುಳ್ಳಿನ ಜಾತ್ರೆ ಗೆ ಬಂದವರಿಗೆಲ್ಲ ಹಣದ ಆಮಿಷ, ಇದು ಬಂಡೆ ಮತ್ತು ಮಂಡೆ ಒಡೆದ ಹಣವಲ್ಲದೆ ಮತ್ತೇನು? ವಿಶೇಷವಾಗಿ, ಮೇಕೆದಾಟು -ಎಣ್ಣೆ ಘಾಟು ಎಂದು ಲೇವಡಿ ಮಾಡಿದೆ. ಮೂರು ದಿನಗಳ ಕಾಲ ಬೆಂಗಳೂರು ನಗರವಾಸಿಗಳು ಟ್ರಾಫಿಕ್ …
Read More »ಹೊಸ ವೇತನ ಸಂಹಿತೆ ಬಗ್ಗೆ ಅತೀ ಮಹತ್ವದ ಮಾಹಿತಿ ನೀಡಿದ ಕಾರ್ಮಿಕ ಸಚಿವಾಲಯ!
ನವದೆಹಲಿ : ಕೇಂದ್ರ ಸರ್ಕಾರವು ಶೀಘ್ರದಲ್ಲೇ ಹೊಸ ವೇತನ ಸಂಹಿತೆಯನ್ನು ಜಾರಿಗೊಳಿಸಬಹುದು. ಈ ಮೊದಲು ಏಪ್ರಿಲ್ 1 ರಿಂದ ಜಾರಿಗೆ ಬರಲಿದ್ದು, ನಂತರ ಅಕ್ಟೋಬರ್ ನಿಂದ ಜಾರಿಗೆ ಬರುವ ಸಾಧ್ಯತೆ ಇತ್ತು. ಆದರೆ ರಾಜ್ಯ ಸರ್ಕಾರಗಳ ಊಹಾಪೋಹಗಳಿಂದ ಅದು ಜಾರಿಯಾಗಿಲ್ಲ. ಈಗ ಈ ನಿಯಮವನ್ನು ಹೊಸ ಆರ್ಥಿಕ ವರ್ಷದಿಂದ ಜಾರಿಗೆ ತರಬಹುದು. ವೇತನ ಸಂಹಿತೆ(New Wage Code) ಕುರಿತು ಕಾರ್ಮಿಕ ಸಚಿವಾಲಯವು ಎಲ್ಲಾ ವಲಯಗಳ ಮಾನವ ಸಂಪನ್ಮೂಲ ಮುಖ್ಯಸ್ಥರೊಂದಿಗೆ ಚರ್ಚೆ ನಡೆಸುತ್ತಿದೆ. …
Read More »6 ದಿನಗಳಲ್ಲಿ ಸುಮಾರು 6,000 ರಷ್ಯನ್ನರ ಹತ್ಯೆ’ : ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ
ಕೇವ್ : ಇಂದಿಗೆ ಉಕ್ರೇನ್ ಮೇಲೆ ರಷ್ಯಾ ದಾಳಿ ನಡೆಸಿ ಏಳನೇ ದಿನಗಳಾಗಿವೆ. ಈ ನಡುವೆ ಉಕ್ರೇನ್ ಅಧ್ಯಕ್ಷ ವೊಲೊಡಿಮೈರ್ ಝೆಲೆನ್ಸ್ಕಿ(Volodymyr Zelenskyy) ಬುಧವಾರ, ‘6 ದಿನಗಳಲ್ಲಿ ಸುಮಾರು 6,000 ರಷ್ಯನ್ನರು’ ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ. ಇನ್ನು ಕಳೆದ ಕೆಲವು ದಿನಗಳಿಂದ ತೀವ್ರ ಶೆಲ್ ದಾಳಿಯಲ್ಲಿರುವ ಉಕ್ರೇನ್ʼನ ಎರಡನೇ ಅತಿದೊಡ್ಡ ನಗರ ಖಾರ್ಕಿವ್ʼನಲ್ಲಿ ರಷ್ಯಾದ ವಾಯುಗಾಮಿ ಪಡೆಗಳು ಬಂದಿಳಿದಿರುವಂತೆಯೇ ಝೆಲೆನ್ಸ್ಕಿ ಹೇಳಿದ್ದಾರೆ. ಇನ್ನು ಕಳೆದ ಕೆಲವು ದಿನಗಳಿಂದ ತೀವ್ರ ಶೆಲ್ …
Read More »‘3ನೇ ಮಹಾಯುದ್ಧ’ ಫಿಕ್ಸ್, ‘ಉಕ್ರೇನ್’ ಮೇಲೆ ‘ಅಣು ಬಾಂಬ್’ ಹಾಕಲು ರಷ್ಯಾ ತಯಾರಿ
ರಷ್ಯಾ: ದಿನೇ ದಿನೇ ರಷ್ಯಾ ಹಾಗೂ ಉಕ್ರೇನ್ ನಡುವಿನ ಯುದ್ಧ ತಾರಕಕ್ಕೇರುತ್ತಿದೆ. ಇಂದು 7ನೇ ದಿನಕ್ಕೆ ಕಾಲಿಟ್ಟಿರುವ ಯುದ್ಧದ ನಡುವೆಯೂ 3ನೇ ಮಹಾಯುದ್ಧ ಫಿಕ್ಸ್ ಎಂದು ಹೇಳಲಾಗುತ್ತಿದೆ. ಒಂದು ವೇಳೆ ಮೂರನೇ ಮಹಾಯುದ್ಧ ನಡೆದ್ರೇ, ಪರಮಾಣು ಬಾಂಬ್ ಸ್ಪೋಟ ಕೂಡ ಆಗಲಿದೆ ಎಂಬ ಮಾಹಿತಿ ಹೊರ ಬಿದ್ದಿದೆ.ಈ ಬಗ್ಗೆ ರಷ್ಯಾದ ವಿದೇಶಾಂಗ ಸಚಿವ ಸರ್ಜಿ ಲಾವ್ರೋವ್ ಅವರು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದು, ಮೂರನೇ ಮಹಾಯುದ್ಧ ನಡೆದರೆ, ಅದು ಪರಮಾಣು ಶಸ್ತ್ರಾಸ್ತ್ರಗಳನ್ನು …
Read More »ಭಾರತದ ಧ್ವಜ ಹಿಡಿದು ಪ್ರಾಣ ಉಳಿಸಿಕೊಂಡ ಪಾಕಿಸ್ತಾನದ ವಿದ್ಯಾರ್ಥಿಗಳು! ಅನುಭವ ಇಲ್ಲಿದೆ ಕೇಳಿ.
ನವದೆಹಲಿ: ಇಡೀ ವಿಶ್ವದಲ್ಲಿ ಭಾರತದ ಮಹಿಮೆ ಮತ್ತೊಮ್ಮೆ ಪ್ರಚಾರಕ್ಕೆ ಬಂದಿದೆ. ಭಾರತದ ಮಣ್ಣಿನಲ್ಲಿ ಜೀವಿಸಿ, ಭಾರತದ ಅನ್ನವನ್ನು ಉಂಡು ಭಾರತದ ಬೆನ್ನಿಗೆ ಚೂರಿ ಹಾಕುವಲ್ಲಿ ಕೆಲವು ಭಾರತೀಯರು ಎನಿಸಿಕೊಂಡವರೇ ಒಂದೆಡೆ ಅಪಪ್ರಚಾರದಲ್ಲಿ ತೊಡಗಿಕೊಂಡರೆ, ಶತ್ರರಾಷ್ಟ್ರ ಎನಿಸಿಕೊಂಡಿರುವ ಪಾಕಿಸ್ತಾನಿಗಳು ತಮ್ಮ ಪ್ರಾಣವನ್ನು ಉಳಿಸಿಕೊಳ್ಳಲು ಹೇಗೆ ಭಾರತದ ಧ್ವಜವನ್ನು ಬಳಕೆ ಮಾಡಿಕೊಂಡರು ಎನ್ನುವುದನ್ನು ಈ ವಿದ್ಯಾರ್ಥಿಗಳ ಬಾಯಲ್ಲಿಯೇ ಕೇಳಿದರೆ ಒಳ್ಳೆಯದು. ಯೂಕ್ರೇನ್ನಲ್ಲಿ ಸಿಲುಕಿರುವ ಅಸಂಖ್ಯ ಭಾರತೀಯರ ವಾಪಸಿಗೆ ಭಾರತ ಸರ್ಕಾರ ಇನ್ನಿಲ್ಲದ ಶ್ರಮ …
Read More »ರಷ್ಯಾ ದಾಳಿಗೆ ಸಾವನ್ನಪ್ಪಿದ ನವೀನ್ ಕುಟುಂಬಕ್ಕೆ ಪರಿಹಾರ ನೀಡುತ್ತೇವೆ ಮೃತದೇಹವನ್ನು ಭಾರತಕ್ಕೆ ತರಲು ಕಷ್ಟ
ಬೆಂಗಳೂರು : ರಷ್ಯಾ ನಡೆಸಿದ ದಾಳಿಗೆ ಉಕ್ರೇನ್ ನಲ್ಲಿ ಕನ್ನಡಿಗ ವಿದ್ಯಾರ್ಥಿ ನವೀನ್ ಮೃತಪಟ್ಟಿದ್ದು, ನವೀನ್ ಕುಟುಂಬಕ್ಕೆ ಪರಿಹಾರ ನೀಡುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮೃತದೇಹವನ್ನು ಭಾರತಕ್ಕೆ ತರಲು ಪ್ರಯತ್ನಿಸುತ್ತೇವೆ. ಯುದ್ಧ ನಡೆಯುತ್ತಿರುವ ಹಿನ್ನೆಲೆ ಸ್ವಲ್ಪ ಕಷ್ಟವಾಗುತ್ತಿದೆ ಅಂತ ಬೊಮ್ಮಾಯಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವೀನ್ ಮೃತದೇಹ ಹೋಲುವ ಕೆಲ ಫೋಟೋ ಬಂದಿದೆ. ನವೀನ್ ಸ್ನೇಹಿತರು ಫೋಟೋಗಳನ್ನು ಕಳುಹಿಸಿದ್ದಾರೆ. ಈ ಬಗ್ಗೆ ಭಾರತದ ರಾಯಭಾರ ಕಚೇರಿ ಜತೆ …
Read More »
Laxmi News 24×7