Breaking News

Daily Archives: ಏಪ್ರಿಲ್ 27, 2022

ಪಿಎಸ್​ಐ ನೇಮಕಾತಿ ಹಗರಣ: ಅಕ್ರಮಕ್ಕೆ ಬಳಸ್ತಿದ್ದ ಬ್ಲೂಟೂತ್​ ಡಿವೈಸ್ ಕುರಿತ ಸ್ಫೋಟಕ ಮಾಹಿತಿ ಬಹಿರಂಗ

ಕಲಬುರಗಿ: 545 ಪಿಎಸ್​ಐ ಹುದ್ದೆಗಳ ನೇಮಕಾತಿ ಅಕ್ರಮ ಪ್ರಕರಣ ಬಗೆದಷ್ಟೂ ಆಳ ಎಂಬಂತಾಗಿದೆ. ಈ ಪ್ರಕರಣದ ಹಲವರ ಕೈವಾಡವಿದ್ದು, ಒಂದೊಂದಾಗಿ ಬಯಲಾಗುತ್ತಿದೆ. ಇದೀಗ ಇದೇ ಪ್ರಕರಣದಕ್ಕೆ ಸಂಬಂಧಿಸಿದ ಮತ್ತೊಂದು ಸ್ಫೋಟಕ ಮಾಹಿತಿ ಹೊರಬಿದ್ದಿದೆ. ಅದೇನೆಂದರೆ, ಪರೀಕ್ಷೆಯಲ್ಲಿ ಅಕ್ರಮ ಎಸಗಲು ಅಭ್ಯರ್ಥಿಗಳು ಬಳಸುತ್ತಿದ್ದ ಬ್ಲೂಟೂತ್ ಅನ್ನು ಒಡಿಶಾದಲ್ಲಿ ಖರೀದಿಸಲಾಗಿದೆ ಎಂಬ ಸಂಗತಿ ಬಯಲಾಗಿದೆ. ಅಕ್ರಮದಲ್ಲಿ ಭಾಗಿಯಾಗಿದ್ದವರೆಲ್ಲ ಬ್ಲೂಟೂತ್ ಬಳಸಿ ಪರೀಕ್ಷೆ ಎದುರಿಸಿರುವುದು ತನಿಖೆಯಿಂದ ಬಯಲಾಗುತ್ತಿದೆ. ಅಭ್ಯರ್ಥಿಗಳು ಬಳಸಿದ ಬ್ಲೂಟೂತ್​ಗಳನ್ನು ಓಡಿಶಾದಲ್ಲಿ ಖರೀದಿ ಮಾಡಲಾಗಿದೆ. …

Read More »

ಇಫ್ತಾರ್‌ ಕೂಟ ಟೋಪಿ ಹಾಕಲು ನಿರಾಕರಿಸಿದ ಸಂಸದ ಪ್ರಜ್ವಲ್‌ ರೇವಣ್ಣ

ಹುಣಸೂರು: ಹುಣಸೂರಿನಲ್ಲಿ ಸೋಮವಾರ ರಾತ್ರಿ ಆಯೋಜಿಸಿದ್ದ ಇಫ್ತಾರ್‌ ಕೂಟದಲ್ಲಿ ಭಾಗವಹಿಸಿದ್ದ ಸಂಸದ ಪ್ರಜ್ವಲ್‌ ರೇವಣ್ಣ ಟೋಪಿ ಹಾಕಿಸಿಕೊಳ್ಳಲು ಹಿಂದೇಟು ಹಾಕಿದರು. ಕೆಲ ಮುಸ್ಲಿಂ ಯುವಕರು ಟೋಪಿ ಹಾಕಲು ಮುಂದಾದಾಗ ನಯವಾಗಿಯೇ ಕೈಯಲ್ಲಿ ಹಿಡಿದುಕೊಂಡು ಮುಂದೆ ನಡೆದರು.   ಈ ವೇಳೆ ಸಾಮೂಹಿಕ ಉಪಾಹಾರ ಸೇವಿಸುವಂತೆ ಮಾಡಿದ ಮನವಿಗೆ ಎಲ್ಲರ ಜತೆಯಲ್ಲಿ ಊಟಕ್ಕೆ ಕುಳಿತ ಪ್ರಜ್ವಲ್‌ ರೇವಣ್ಣ, ಅನಂತರ ಸಿಹಿ ತಿಂದು ಊಟ ನಿರಾಕರಿಸಿದರು.

Read More »

“ನಾನು ಏನು ಆಗಲ್ಲ ಅಂದ್ಮೇಲೆ ತಕರಾರು ಯಾಕೆ” : ಸಿಎಂ ಎದುರು ಶಾಸಕ ಯತ್ನಾಳ್‌ ಅಸಮಾಧಾನ

ವಿಜಯಪುರ : ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುಂದೆಯೇ ವೇದಿಕೆಯಲ್ಲಿ ಪರೋಕ್ಷವಾಗಿ ಅಸಮಾಧಾನ ವ್ಯಕ್ತ ಪಡಿಸಿದ ಘಟನೆ ನಡೆದಿದೆ. ಸಧ್ಯ ಸಚಿವ ಸ್ಥಾನದ ನಿರೀಕ್ಷೆಯಲ್ಲಿರುವ ಶಾಸಕ ಯತ್ನಾಳ್‌, ‘ಮುಂದಿನ ಬಾರಿಯೂ ಬೊಮ್ಮಾಯಿಯವರೇ ಸಿಎಂ ಆಗ್ತಾರೆ. ಬೊಮ್ಮಾಯಿ ಮತ್ತೆ ಸಿಎಂ ಆದ್ರೆ ನಮಗೇನು ತಕರಾರು ಇಲ್ಲ’ ಎಂದರು. ಆಗ ಯತ್ನಾಳ್‌ ಮಾತಿಗೆ ಸಿಎಂ ಬೊಮ್ಮಾಯಿ ಕೂಡ ಕೈಮುಗಿದ ನಸು ನಕ್ಕರು. ಮಾತು ಮುಂದುವರೆಸಿದ ಶಾಸಕ, ನಮ್ಮದೇನಾದರೂ ತಕರಾರು …

Read More »

ಶೌಚಾಲಯದಲ್ಲಿ ಸಮೋಸಾ ಹಾಗೂ ಇತರ ಖಾದ್ಯ ತಯಾರಿಕೆ – 30 ವರ್ಷಗಳ ಬಳಿಕ ರೆಸ್ಟೊರೆಂಟ್ ಬಂದ್

ಬರೋಬ್ಬರಿ 30 ವರ್ಷಗಳಿಂದ ಶೌಚಾಲಯದಲ್ಲಿ ಸಮೋಸಾ ಹಾಗೂ ಇತರ ಖಾದ್ಯಗಳನ್ನು ತಯಾರಿಸುತ್ತಿದ್ದ ಉಪಹಾರ ಗೃಹವನ್ನು ಪತ್ತೆ ಹಚ್ಚಿ, ಮುಚ್ಚಿಸಿರುವ ಘಟನೆ ಸೌದಿ ಅರೇಬಿಯಾದ ಜೆಡ್ಡಾ ನಗರದಲ್ಲಿ ನಡೆದಿದೆ. ಕೇಳಿದಂತೆಯೇ ವಾಕರಿಕೆ ಬರುವಂತಹ ವಿಚಿತ್ರ ಆಹಾರ ಸಂಸ್ಕೃತಿಯನ್ನು ಅನುಸರಿಸಿಕೊಂಡಿದ್ದ ಸೌದಿ ಅರೇಬಿಯಾದ ಉಪಹಾರ ಗೃಹದ ಬಗ್ಗೆ ಅಲ್ಲಿನ ಸ್ಥಳೀಯ ಅಧಿಕಾರಿಗಳು ಮಾಹಿತಿ ಪಡೆದಿದ್ದರು. ಇದೀಗ ಬರೋಬ್ಬರಿ 3 ದಶಕಗಳ ಬಳಿಕ ಅದನ್ನು ಮುಚ್ಚಿಸಲಾಗಿದೆ. ಉಪಹಾರ ಗೃಹದ ಟಾಯ್ಲೆಟ್‌ನಲ್ಲಿ ತಿಂಡಿ ಹಾಗೂ ಊಟವನ್ನು …

Read More »

ಪಿಎಸ್‌ಐ ಕೇಸ್ – ಮತ್ತೊಬ್ಬ ಆರೋಪಿ ಅರೆಸ್ಟ್, 40 ಲಕ್ಷ ಡೀಲಿಂಗ್?

ಕಲಬುರಗಿ: ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎನ್ನಲಾಗಿರುವ ಬಗ್ಗೆ ದಿನೇ ದಿನೇ ರೋಚಕ ಸಂಗತಿ ಹೊರಬರುತ್ತಿದೆ. ಮಂಗಳವಾರ ಸಿಐಡಿ ತಂಡ ಪಿಎಸ್‌ಐ ಅಕ್ರಮಕ್ಕೆ ಸಂಬಂಧಪಟ್ಟ ಆರೋಪಿ ಎನ್ ಸುನೀಲ್ ಕುಮಾರ್‌ನನ್ನು ಬಂಧಿಸಿದ್ದಾರೆ. ಒಟ್ಟಾರೆಯಾಗಿ ಪಿಎಸ್‌ಐ ನೇಮಕಾತಿ ಅಕ್ರಮದ ಜಾಡನ್ನು ಬೆನ್ನು ಹಿಡಿದ ಸಿಬಿಐ ತಂಡ ಇಲ್ಲಿಯವರೆಗೆ 16 ಆರೋಪಿಗಳನ್ನು ಬಂಧಿಸಿದ್ದಾರೆ. ಕಲಬುರಗಿ ನಿವಾಸಿಯಾಗಿರುವ ಸುನೀಲ್ ಕುಮಾರ್ ಪಿಎಸ್‌ಐ ನೇಮಕಾತಿ ಪರೀಕ್ಷೆಯ ಕೇಂದ್ರ ಸ್ಥಾನವಾದ ದಿವ್ಯಾ ಹಾಗರಗಿ ಒಡೆತನದ ಜ್ಞಾನಜ್ಯೋತಿ ಆಂಗ್ಲ …

Read More »