Breaking News

Daily Archives: ಏಪ್ರಿಲ್ 30, 2022

ಸಾರ್ವತ್ರಿಕ ಆರೋಗ್ಯ ರಕ್ಷಣೆಗೆ ಆಯುಷ್ಮಾನ್: ಆಯುಷ್ಮಾನ್ ಭಾರತ ದಿನ ಇಂದು

ಬೆಂಗಳೂರು: ಎರಡು ವರ್ಷಗಳಿಂದ ಜನರನ್ನು ಕಾಡುತ್ತಿರುವ ಕೋವಿಡ್ ಸಾಂಕ್ರಾಮಿಕ ಸಂದರ್ಭದಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಅತ್ಯಂತ ಮಹತ್ವದ್ದಾಗಿದೆ. ಸಾರ್ವತ್ರಿಕ ಆರೋಗ್ಯ ರಕ್ಷಣೆ ಗುರಿಯೊಂದಿಗೆ ದೇಶವು ಇಂದು (ಏ.30) ಆಯುಷ್ಮಾನ್ ಭಾರತ ದಿನವನ್ನು ಆಚರಿಸುತ್ತಿದೆ. ಪ್ರಮುಖವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಕಡಿಮೆ ವೆಚ್ಚದ ಆರೋಗ್ಯ ರಕ್ಷಣೆಯ ಅರಿವು ಮೂಡಿಸಲು ಈ ದಿನವನ್ನು ಗೊತ್ತುಪಡಿಸಲಾಗಿದೆ. ಆರೋಗ್ಯ ಮತ್ತು ಯೋಗಕ್ಷೇಮ ಉತ್ತೇಜಿಸಲು ಬಡವರು ಮತ್ತು ಸೌಲಭ್ಯವಂಚಿತರಿಗೆ ಆರೋಗ್ಯ ವಿಮಾ ರಕ್ಷಣೆ ಖಚಿತಪಡಿಸಿಕೊಳ್ಳಲು, ಆಯುಷ್ಮಾನ್ ಭಾರತ ಆರೋಗ್ಯ ಯೋಜನೆಯ ಕುರಿತು …

Read More »

ಎಸ್‌ಎಸ್‌ಎಲ್‌ಸಿ ಉತ್ತರ ಪತ್ರಿಕೆಯಲ್ಲಿ ಸಾಷ್ಟಾಂಗ ನಮಸ್ಕಾರ

ವಿಜಯಪುರ, ಏಪ್ರಿಲ್ 29 ; ಎಸ್‌ಎಸ್‌ಎಲ್‌ಸಿ ಉತ್ತರ ಪತ್ರಿಕೆಗಳ ಮೌಲ್ಯ ಮಾಪನ ನಡೆಯುತ್ತಿದೆ. ಈ ವೇಳೆ ಶಿಕ್ಷಕರಿಗೆ ಉತ್ತರ ಪತ್ರಿಕೆಯೊಂದು ಸಿಕ್ಕಿದ್ದು, ವಿದ್ಯಾರ್ಥಿ ಸಾಷ್ಟಾಂಗ ನಮಸ್ಕಾರ ಹಾಕಿದ್ದಾನೆ. ವಿಜಯಪುರದ ಸ್ನೇಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮೌಲ್ಯ ಮಾಪನದ ವೇಳೆ ಈ ಪತ್ರಿಕೆ ಪತ್ತೆಯಾಗಿದೆ. ಬಿಲ್ ಕಲೆಕ್ಟರ್ ಆಗಿ ಮುಂಬಡ್ತಿ ಪಡೆಯಲು ಒಂದು ಅಂಕ ನೀಡಿ ಎಂದು ಮನವಿ ಮಾಡಿರುವ ಈ ಪತ್ರಿಕೆ ಫೋಟೋ ವೈರಲ್ ಆಗಿದೆ. ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿರುವ …

Read More »

ಕುಡಿದು ಬಂದ ತಂದೆಯನ್ನೇ ಕೊಚ್ಚಿ ಕೊಲೆ ಮಾಡಿ ಅಪ್ರಾಪ್ತ ಬಾಲಕ..!

ಧಾರವಾಡ : ಅಪ್ರಾಪ್ತ ಬಾಲಕನೊಬ್ಬ ತನ್ನ ತಂದೆಯನ್ನೇ ಕೊಚ್ಚಿ ಕೊಲೆ ಮಾಡಿರುವ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಪುಂಡಲೀಕ (43) ಎಂದು ಗುರುತಿಸಲಾಗಿದೆ. ಪ್ರತಿ ದಿನ ಕುಡಿದು ಬಂದು ಮನೆಯಲ್ಲಿ ಗಲಾಟೆ ಮಾಡುತಿದ್ದ ತಂದೆ ಯಿಂದ ರೋಸಿ ಹೋಗಿದ್ದ ಮಗ, ಕೊನೆಗೆ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಬಾಲಕ ಇನ್ನೂ 17 ವರ್ಷದವನಾಗಿದ್ದು, ತಂದೆಯ ಜೊತೆ ಕಳೆದ ನಾಲ್ಕು ದಿನಗಳ ಹಿಂದೆ ಕೂಡಾ ಜಗಳ ಮಾಡಿದ್ದ. ಆದರೂ ತಂದೆ ಕುಡಿದು …

Read More »

ರಾಜ್ಯದಾದ್ಯಂತ ಮೇ.16ರಿಂದ ಶಾಲೆ ಪ್ರಾರಂಭ,

ಬೆಂಗಳೂರು: 2022-23ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ವಾರ್ಷಿಕ ಕಾರ್ಯಸೂಚಿಯನ್ನು ಬಿಡುಗಡೆ ಮಾಡಲಾಗಿದೆ. ಕಳೆದ ಮೂರು ವರ್ಷಗಳಲ್ಲಿನ ಕಲಿಕಾ ಕೊರತೆಯನ್ನು ಸರಿದೂಗಿಸೋ ನಿಟ್ಟಿನಲ್ಲಿ ಮಹತ್ವದ ಕ್ರಮ ಕೈಗೊಳ್ಳಲಾಗಿದೆ.   ಈ ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ( School Education Department ) 2022-23ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ವಾರ್ಷಿಕ ಕಾರ್ಯಸೂಚಿಯನ್ನು ಬಿಡುಗಡೆ ಮಾಡಲಾಗಿದೆ. ಈ ವೇಳಾಪಟ್ಟಿಯಂತೆ ಪ್ರಸಕ್ತ ವರ್ಷವನ್ನು ಕಲಿಕಾ ಚೇತರಿಕೆ ವರ್ಷವೆಂದು ಸಂಕಲ್ಪಿಸಲಾಗಿದ್ದು, ವಾರ್ಷಿಕ ಪಠ್ಯವಸ್ತು ಬೋಧನೆಯನ್ನು ಕಲಿಕಾ …

Read More »

ಗೃಹ ಇಲಾಖೆ ನಿಭಾಯಿಸಲಾಗದೇ ಒದ್ದಾಡುತ್ತಿರುವ ಆರಗ ಜ್ಞಾನೇಂದ್ರರನ್ನು ಬದಲಿಸಲು ಹೈಕಮಾಂಡ್ ಗಂಭೀರ ಚಿಂತನೆ

ಬೆಂಗಳೂರು: ಪಿಎಸ್‍ಐ ಪರೀಕ್ಷಾ ಅಕ್ರಮದ ವಿಚಾರದಲ್ಲಿ ಬೊಮ್ಮಾಯಿ ಸರ್ಕಾರದ ಧೋರಣೆಗೆ ಅದರಲ್ಲೂ ಗೃಹ ಸಚಿವ ಆರಗ ಜ್ಞಾನೇಂದ್ರ ತೋರಿದ ನಡವಳಿಕೆಗಳಿಗೆ ಬಿಜೆಪಿ ಹೈಕಮಾಂಡ್ ಗರಂ ಆಗಿದೆ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ಮರು ಪರೀಕ್ಷೆ ನಡೆಸಲು ಸಿಐಡಿ ವರದಿ ಕೊಟ್ಟರೂ ಆದೇಶ ಹೊರಡಿಸಲು ಮೀನಾಮೇಷ ಎಣಿಸಿದ ಸರ್ಕಾರವನ್ನು ಅಮಿತ್ ಶಾ ತರಾಟೆಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಪರಿಣಾಮ ಇಂದು ತುರ್ತು ಸುದ್ದಿಗೋಷ್ಠಿ ನಡೆಸಿದ ಗೃಹ ಸಚಿವರು, ಮರು ಪರೀಕ್ಷೆ ಆದೇಶವನ್ನು ತರಾತುರಿಯಲ್ಲಿ …

Read More »

ಅರೆಸ್ಟ್ ಆದ ದಿವ್ಯಾ ಹಾಗರಗಿ ಹೈಡ್ರಾಮಾ, ಊಟ ನಿರಾಕರಣೆ, ಎಸಿ ಇಲ್ದೆ ನಿದ್ರೆ ಇಲ್ಲ –

ಕಲಬುರಗಿ: ಪಿಎಸ್‍ಐ ನೇಮಕಾತಿ ಪರೀಕ್ಷೆಯ ಅಕ್ರಮಕ್ಕೆ ಸಾಥ್ ನೀಡಿರುವ ಆರೋಪದಡಿ ಬಿಜೆಪಿ ಮಹಿಳಾ ಘಟಕದ ಮಾಜಿ ಅಧ್ಯಕ್ಷೆ ದಿವ್ಯಾ ಹಾಗರಗಿಯನ್ನು ಶುಕ್ರವಾರ ಸಿಐಡಿ ಅಧಿಕಾರಿಗಳು ಬಂಧಿಸಿದ್ದರು. ಸದ್ಯ 11 ದಿನಗಳ ಕಾಲ ದಿವ್ಯಾ ಹಾಗರಗಿಯನ್ನು ನ್ಯಾಯಾಲಯ ಸಿಐಡಿ ಕಸ್ಟಡಿಗೆ ನೀಡಿದೆ. ಪಿಎಸ್‍ಐ ನೇಮಕಾತಿ ಅಕ್ರಮ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ದಿವ್ಯಾ ಹಾಗರಗಿ ಕಳೆದ 18 ದಿನಗಳಿಂದ ತಲೆ ಮರೆಸಿಕೊಂಡಿದ್ದರು. ಆದರೆ ಸಿಐಡಿ ಅಧಿಕಾರಿಗಳು ಶುಕ್ರವಾರ ಮಹಾರಾಷ್ಟ್ರದ ಪುಣೆಯ ಹೋಟೆಲ್‍ವೊಂದರ ಬಳಿ ದಿವ್ಯಾ …

Read More »