ಚಿಕ್ಕೋಡಿ(ಬೆಳಗಾವಿ): ರಾಜರತ್ನ ಪುನೀತ್ ಸಾವನ್ನಪ್ಪಿ ಕೆಲ ತಿಂಗಳುಗಳು ಕಳೆದರೂ ಅಪ್ಪು ಮೇಲಿನ ಅಭಿಮಾನ ಮಾತ್ರ ಕಡಿಮೆಯಾಗಿಲ್ಲ. ಪುನೀತ್ ರಾಜ್ಕುಮಾರ್ ಅವರ ಅಪ್ಪಟ್ಟ ಅಭಿಮಾನಿಯೋರ್ವ ತನ್ನ ವಿವಾಹದ ದಿನಂದಂದು ರಾಜರತ್ನನಿಗೆ ವಿಭಿನ್ನವಾಗಿ ನಮನ ಸಲ್ಲಿಸಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದ ನಿವಾಸಿಯಾಗಿರುವ ಆನಂದ ಪಟ್ಟಣ ಹಾಗೂ ಜ್ಯೋತಿ ಎನ್ನುವ ಯುವ ಜೋಡಿ ಪುನೀತ್ ಅವರ ನೆನಪಿನಲ್ಲಿ ವಿಶೇಷವಾಗಿ ವಿವಾಹವಾಗಿದ್ದಾರೆ. ರಾಯಬಾಗ ಪಟ್ಟಣದಲ್ಲಿ ಅದ್ದೂರಿಯಾಗಿ ನಡೆದ ವಿವಾಹ ಸಮಾರಂಭ ಸಂಪೂರ್ಣವಾಗಿ ಪುನೀತ್ ಮಯವಾಗಿತ್ತು. ಮದುವೆ …
Read More »Monthly Archives: ಏಪ್ರಿಲ್ 2022
ಡಾ.ರಾಜ್ ಕುಮಾರ್ ಹುಟ್ಟು ಹಬ್ಬಕ್ಕೆ ಭರ್ಜರಿ ಸಿದ್ಧತೆ
ನಾಳೆ (ಏ.24) ಡಾ.ರಾಜ್ ಕುಮಾರ್ ಅವರ ಹುಟ್ಟು ಹಬ್ಬ. ಈ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿಸಲು ನಾನಾ ರೀತಿಯ ಸಿದ್ಧತೆಯನ್ನು ಮಾಡಿಕೊಂಡಿದೆ ಸ್ಯಾಂಡಲ್ ವುಡ್. ಕರ್ನಾಟಕ ಸರಕಾರ ಮತ್ತು ಡಾ.ರಾಜ್ ಕುಮಾರ್ ಸ್ಮಾರಕ ಟ್ರಸ್ಟ್ ಪ್ರತಿ ವರ್ಷದಂತೆ ಈ ವರ್ಷವೂ ನಾನಾ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಅಲ್ಲದೇ, ಕರ್ನಾಟಕ ಸರಕಾರ 2017ನೇ ಸಾಲಿ ಚಲನಚಿತ್ರ ರಾಜ್ಯ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಡಾ.ರಾಜ್ ಪುಣ್ಯಭೂಮಿ ಸ್ಥಳದಲ್ಲಿ ಅಭಿಮಾನಿಗಳು ರಕ್ತದಾನ ಶಿಬಿರ, ಕಣ್ಣುದಾನ ಶಿಬಿರ, ಅನ್ನ …
Read More »ಸಿಐಡಿ ತನಿಖೆ ಪೂರ್ಣವಾದ್ಮೇಲೆ 402 ಪಿಎಸ್ಐ ಹುದ್ದೆಗಳ ಪರೀಕ್ಷೆ
ಬೆಂಗಳೂರು: ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣ ಹಿನ್ನೆಲೆಯಲ್ಲಿ ಸಿಐಡಿ ತನಿಖೆ ಪೂರ್ಣಗೊಂಡ ನಂತರ 402 ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ಪರೀಕ್ಷೆ ಮಾಡಲಾಗುವುದು ಎಂದು ಡಿಜಿಪಿ ಪ್ರವೀಣ್ ಸೂದ್ ತಿಳಿಸಿದರು ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಸಿಐಡಿಯಿಂದ ಪ್ರಸ್ತುತ ತನಿಖೆ ಪೂರ್ಣಗೊಂಡ ತಕ್ಷಣ 402 ಪಿಎಸ್ಐ ಹುದ್ದೆಗಳಿಗೆ ಲಿಖಿತ ಪರೀಕ್ಷೆಯನ್ನು ನಡೆಸಲಾಗುವುದು. ತಪ್ಪಿತಸ್ಥರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಅವರನ್ನು ಪ್ರಸ್ತುತ ಪಟ್ಟಿಯಿಂದ ಹೊರಗಿಡಲಾಗಿದೆ ಎಂದು ತಿಳಿಸಿದ್ದಾರೆ. ಖಾಲಿಯಿರುವ 402 ಪೊಲೀಸ್ ಸಬ್ …
Read More »“ಸಿದ್ದರಾಮಯ್ಯನವರು ಈ ರಾಜ್ಯದ ಮಾಸ್ ಲೀಡರ್, ಅವರು ರಾಜ್ಯದ ಯಾವುದೇ ಕ್ಷೇತ್ರದಿಂದ ಸ್ಪರ್ಧಿಸಿದರೂ ಗೆಲವನ್ನು ಕಾಣುತ್ತಾರೆ.
ಚುನಾವಣಾ ವರ್ಷಕ್ಕೂ ಮುನ್ನವೇ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಸುದ್ದಿ/ಚರ್ಚೆ ನಡೆಯುತ್ತಲೇ ಇತ್ತು. ಕನಿಷ್ಠ ನಾಲ್ಕರಿಂದ ಐದು ಕ್ಷೇತ್ರದ ಹೆಸರು ಮುನ್ನಲೆಗೆ ಬಂದಿತ್ತು. ಇದಕ್ಕೆ ಪೂರಕ ಎನ್ನುವಂತೆ ಎಲ್ಲೂ ಈ ಸುದ್ದಿಗಳಿಗೆ ಖಡಾಖಂಡಿತ ಬ್ರೇಕ್ ಹಾಕುವ ಕೆಲಸವನ್ನು ಸಿದ್ದರಾಮಯ್ಯನವರೂ ಮಾಡಿರಲಿಲ್ಲ. ಚಾಮರಾಜಪೇಟೆಯಿಂದ ಸಿದ್ದರಾಮಯ್ಯನವರು ಸ್ಪರ್ಧಿಸಲಿದ್ದಾರೆ ಎನ್ನುವ ಸುದ್ದಿ ದಿನದಿಂದ ದಿನಕ್ಕೆ ಕ್ಷೀಣಿಸುತ್ತಾ ಸಾಗಿತು. ಇದರ ನಡುವೆ, ಹಾಲೀ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡನವರು ಸಿದ್ದರಾಮಯ್ಯನವರಿಗೆ …
Read More »ಹಿಜಾಬ್ಗಾಗಿ ಹೋರಾಟ: ಶನಿವಾರವೂ ಮೂವರು ವಿದ್ಯಾರ್ಥಿನಿಯರು ಪರೀಕ್ಷೆಗೆ ಗೈರು
ಉಡುಪಿ: ಹಿಜಾಬ್ಗಾಗಿ ಹೋರಾಟ ನಡೆಸುತ್ತಿರುವ ಇಲ್ಲಿನ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿನಿಯರು ಶನಿವಾರ ದ್ವಿತೀಯ ಪಿಯುಸಿ ಪರೀಕ್ಷೆಗೆ ಗೈರಾಗಿದ್ದಾರೆ. ಆಲ್ಮಾಸ್, ಹಾಜ್ರಾ ಶಿಫಾ ಹಾಗೂ ಆಯಿಶಾ ಪರೀಕ್ಷೆಗೆ ಗೈರಾದವರು. ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರು ಶನಿವಾರ ವಿದ್ಯೋದಯ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಗಣಿತ ವಿಷಯದಲ್ಲಿ ಪರೀಕ್ಷೆ ಬರೆಯಬೇಕಿತ್ತು. ಮೂವರ ಪೈಕಿ ಆಲ್ಮಾಸ್ ಶುಕ್ರವಾರ ಕಾಲೇಜಿಗೆ ಬಂದು ಪ್ರವೇಶ ಪತ್ರ ಪಡೆದುಕೊಂಡಿದ್ದರು. ಉಳಿದ ಇಬ್ಬರು ಪಡೆದುಕೊಂಡಿರಲಿಲ್ಲ ಎಂದು …
Read More »ಧಾರವಾಡ- ಬೆಳಗಾವಿ ರೈಲು ಮಾರ್ಗ ನಿರ್ಮಾಣಕ್ಕೆ ಧಾರವಾಡ ಹೈಕೋರ್ಟ್ ತಡೆ
ಧಾರವಾಡ: ಧಾರವಾಡ- ಬೆಳಗಾವಿ ನೂತನ ರೈಲ್ವೆ ಮಾರ್ಗದ ಯೋಜನೆಗೆ ಸಂಬಂಧಸಿದಂತೆ 2021ರ ಅಕ್ಟೋಬರ್ 16ರಂದು ಹುಬ್ಬಳ್ಳಿಯಲ್ಲಿ ಸಂಸತ್ತಿನ ಸದಸ್ಯರು ತೆಗೆದುಕೊಂಡ ನಿರ್ಧಾರಕ್ಕೆ ಗುರುವಾರ ಧಾರವಾಡ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಬೆಳಗಾವಿ ತಾಲೂಕಿನ ಕೆಕೆ ಕೊಪ್ಪ, ದೇಸೂರು ಗ್ರಾಮದ ವ್ಯಾಪ್ತಿಯಲ್ಲಿ ಧಾರವಾಡ-ಬೆಳಗಾವಿ ರೈಲು ಮಾರ್ಗ ಹಾದು ಹೋಗಲಿದೆ. ಇದಕ್ಕೆ ಸಾಕಷ್ಟು ಕೃಷಿ ಭೂಮಿ ಬಳಕೆಯಾಗಲಿದೆ. ಹೀಗಾಗಿ ಕೆಲ ಜನಪ್ರತಿನಿಧಿಗಳು, ರೈತರ ಮುಖಂಡರು ಕೃಷಿ ಭೂಮಿ ಕೈ ಬಿಟ್ಟು ಪಕ್ಕದ ಸರಕಾರಿ …
Read More »ಸಂತೋಷ್ ಆತ್ಮಹತ್ಯೆ ಬೆನ್ನಲ್ಲೆ ಗುತ್ತಿಗೆದಾರರ ಬಿಲ್ ಪಾವತಿ ಬಗ್ಗೆ ಹೈಕೋರ್ಟ್ ಮಹತ್ವದ ಆದೇಶ
ಬೆಂಗಳೂರು, ಏ.22. ರಾಜ್ಯದಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಕಮೀಷನ್ ಗಲಾಟೆ ನಡೆಯುತ್ತಿರುವುದರ ಮಧ್ಯೆಯೇ ಹೈಕೋರ್ಟ್ ಗುತ್ತಿಗೆದಾರರಿಗೆ ನೆರವಿಗೆ ಧಾವಿಸಿದೆ. ನ್ಯಾಯಾಲಯ ಮಹತ್ವದ ಪ್ರಕರಣವೊಂದರಲ್ಲಿ, ಯಾವುದೇ ಲೋಪವಿಲ್ಲದೆ ಕಾಮಗಾರಿ ಪೂರ್ಣಗೊಳಿಸಿದ ಗುತ್ತಿಗೆದಾರಿಗೆ ಸಕಾಲದಲ್ಲಿ ಹಣ ಪಾವತಿ ಮಾಡಬೇಕು ಎಂದು ಸರ್ಕಾರ ಮತ್ತು ಬಿಬಿಎಂಪಿಗೆ ಖಡಕ್ ಆದೇಶ ನೀಡಿದೆ. “ಯಾವುದೇ ಲೋಪವಿಲ್ಲದೆ ಕಾಮಗಾರಿ ಪೂರ್ಣಗೊಳಿಸಿದ್ದರೂ ಗುತ್ತಿಗೆ ಹಣ ಪಾತಿಸುತ್ತಿಲ್ಲವೆಂದು ಆಕ್ಷೇಪಿಸಿ ಗುತ್ತಿಗೆದಾರರು ಕೋರ್ಟ್ ಮೆಟ್ಟಿಲೇರುತ್ತಿರುವ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿವೆ. …
Read More »ಭೂ ನಕ್ಷೆಗೆ ‘ಸ್ವಾವಲಂಬಿ ಆಯಪ್’; ಕಂದಾಯ ಇಲಾಖೆಯಿಂದ ಹೊಸ ಸೇವೆ: ಉದ್ದೇಶವಿದು.
ಬೆಂಗಳೂರು: ಜಮೀನು ಸರ್ವೆಯಲ್ಲಿ ಸಾರ್ವಜನಿಕರಿಗೆ ಆಗುತ್ತಿದ್ದ ಸಮಸ್ಯೆ ಬಗೆಹರಿಸಲು ಕಂದಾಯ ಇಲಾಖೆ ‘ಸ್ವಾವಲಂಬಿ ಆಯಪ್’ ಪರಿಚಯಿಸಿದೆ. ಈ ಮೂಲಕ ಭೂ ಮಾಲೀಕ ತನ್ನ ಭೂಮಿಯನ್ನು ಸ್ವಯಂ ಸರ್ವೆ ಸಿದ್ಧಪಡಿಸಿಕೊಳ್ಳುವ ವ್ಯವಸ್ಥೆ ಜಾರಿಗೊಳಿಸಿದೆ. ನಾಗರಿಕರು ಪಹಣಿ ಹೊಂದಿರುವ ಜಮೀನಿನಲ್ಲಿ 11ಇ, ಪೋಡಿ, ಭೂ ಪರಿವರ್ತನೆ ಪೂರ್ವ ಮತ್ತು ವಿಭಾಗ ಮಾಡಿಕೊಳ್ಳಲು ಸ್ವಾವಲಂಬಿ ಆಯಪ್ ಬಳಸಿಕೊಳ್ಳಬಹುದು. ಏಕ ಮಾಲೀಕತ್ವದ ಪಹಣಿ (ಆರ್ಟಿಸಿ) ಹೊಂದಿರುವರು ಇತರರ ಜಮೀನಿನ ಹಕ್ಕುಗಳಲ್ಲಿ ಮತ್ತು ನಕ್ಷೆಗಳಲ್ಲಿ ಹಸ್ತಕ್ಷೇಪ ಮಾಡುವಂತಿಲ್ಲ. …
Read More »29 ಅಡಿ ತೇರು ಕಟ್ಟಿದ ಅಂಧ ಸೋದರರು!
ಕುಷ್ಟಗಿ (ಕೊಪ್ಪಳ): ಅಪ್ಪನ ಅಕಾಲಿಕ ಸಾವಿನಿಂದಾಗಿ ಹೆಗಲೇರಿದ 29 ಅಡಿ ಎತ್ತರದ ತೇರು ನಿರ್ಮಾಣ ಜವಾಬ್ದಾರಿಯನ್ನು ಯಶಸ್ವಿಯಾಗಿ ಪೂರೈಸಿದ ಸೋದರರಿಬ್ಬರ ಸಾಧನೆಯ ಕತೆ ಇದು. ಈ ಇಬ್ಬರೂ ಅಂಧರಾದರೂ, ಕೇವಲ ಸ್ಪರ್ಶಜ್ಞಾನದಿಂದಲೇ ಕಟ್ಟಿಗೆಯಲ್ಲಿ ವಿವಿಧ ಚಿತ್ತಾರ ಬಿಡಿಸುವಲ್ಲಿ ಪರಿಣತಿ ಸಾಧಿಸಿರುವುದು ವಿಶೇಷ. ಬಾಗಲಕೋಟೆ ಜಿಲ್ಲೆ ಬದಾಮಿ ತಾಲೂಕಿನ ಬೇಲೂರಿನ ಸುರೇಶ ಮತ್ತು ಮಹೇಶ ಬಡಿಗೇರ ಅವರೇ ಈ ಸಾಹಸಿಗರು. ಇವರ ತಂದೆ ಮಲ್ಲಪ್ಪ ಬಿಡಗೇರ ರಾಜ್ಯ ಪ್ರಶಸ್ತಿ ಪುರಸ್ಕೃತ ರಥಶಿಲ್ಪಿ. …
Read More »ಪೆಟ್ರೋಲ್ ಟ್ಯಾಂಕ್ ಮೇಲೆ ಪ್ರೇಯಸಿ, ಬೈಕ್ ಚಲಾಯಿಸುತ್ತಲೇ ರೊಮ್ಯಾನ್ಸ್: ಪ್ರೇಮಿ ಮೇಲೆ 3 ಕೇಸ್.
ಚಾಮರಾಜನಗರ: ಪೆಟ್ರೋಲ್ ಟ್ಯಾಂಕ್ ಮೇಲೆ ಪ್ರೇಯಸಿಯನ್ನು ಕೂರಿಸಿಕೊಂಡು ಬೈಕ್ ಚಲಾಯಿಸುತ್ತ ರೊಮ್ಯಾನ್ಸ್ ಮಾಡಿದ್ದ ಪ್ರೇಮಿಯ ಮೇಲೆ ಮೂರು ಕೇಸ್ಗಳು ಬಿದ್ದಿವೆ. ಚಾಮರಾಜನಗರ ಸಂಚಾರ ಠಾಣೆ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಯುವಕನೊಬ್ಬ ಬೈಕ್ ಟ್ಯಾಂಕ್ ಮೇಲೆ ಯುವತಿಯನ್ನು ಕೂರಿಸಿಕೊಂಡು ಬೈಕ್ ಚಲಾಯಿಸುತ್ತಲೇ ರೊಮ್ಯಾನ್ಸ್ ಮಾಡಿದ್ದ ವಿಡಿಯೋ ಇಂದು ವೈರಲ್ ಆಗಿತ್ತು. ಹಾಡಹಗಲೇ ವಾಹನಗಳು ಸಂಚರಿಸುತ್ತಿದ್ದ ರಸ್ತೆಯಲ್ಲಿ ಅಪಾಯಕಾರಿಯಾಗಿ ಹಾಗೂ ಅಸಭ್ಯವಾಗಿ ನಡೆದುಕೊಂಡಿದ್ದಕ್ಕೆ ಸಾರ್ವಜನಿಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ …
Read More »
Laxmi News 24×7