ಗದಗ: ಜಿಲ್ಲೆಯ ಗಜೇಂದ್ರಗಡ ಪಟ್ಟಣ ಹಾಗೂ ಮುಂಡರಗಿ ಶ್ರೀ ಅನ್ನದಾನೀಶ್ವರ ಮಠದಲ್ಲಿ ವಿಭಿನ್ನವಾಗಿ ರಂಜಾನ್ ಹಾಗೂ 889ನೇ ಬಸವ ಜಯಂತಿ ಆಚರಿಸಲಾಯಿತು. ಗಜೇಂದ್ರಗಡ, ಸೂಡಿಯ ಮೈಸೂರು ಮಠದ ಶ್ರೀ ವಿಜಯ ಮಹಾಂತೇಶ್ವರ ಸ್ವಾಮೀಜಿ ಹಾಗೂ ಮೌಲ್ವಿ ನೇತೃತ್ವದಲ್ಲಿ ʻಭಾವೈಕ್ಯತೆ ನಡಿಗೆ ಸಾಮರಸ್ಯದ ಕಡೆಗೆʼ ಎಂಬ ವಿಭಿನ್ನ ಹಾಗೂ ವಿಶೇಷವಾದ ಪಾದಯಾತ್ರೆ ಮಾಡಲಾಯಿತು. ಈ ವೇಳೆ ಬಸವಣ್ಣನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಟ್ರ್ಯಾಕ್ಟರ್ ಮೂಲಕ ಮೆರವಣಿಗೆ ಮಾಡಲಾಯಿತು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾಮರಸ್ಯ …
Read More »Daily Archives: ಮೇ 3, 2022
ಎಂಟಿಬಿಗೆ ಇದೀಗ ಅವರ ತಪ್ಪು ಗೊತ್ತಾಗಿದೆ: ಪರಮೇಶ್ವರ್
ಮಡಿಕೇರಿ: ಎಂಟಿಬಿ ಅವರಿಗೆ ಅವರು ಮಾಡಿದ ತಪ್ಪು ಇದೀಗ ಗೊತ್ತಾಗಿದೆ. ಈಗ ಅವರಿಗೆ ಪಶ್ಚಾತ್ತಾಪ ಆಗಿದೆ ಎಂದು ಕಾಂಗ್ರೆಸ್ ನಾಯಕ ಜಿ. ಪರಮೇಶ್ವರ್ ಹೇಳಿದರು. ಮಡಿಕೇರಿಯ ನಗರ ಸಮೀಪದ ಕರ್ಣಗೇರಿ ಗ್ರಾಮದಲ್ಲಿ ಇರುವ ರಾಜರಾಜೇಶ್ವರಿ ದೇಗುಲಕ್ಕೆ ಪರಮೇಶ್ವರ್ ದಂಪತಿ ಭೇಟಿ ನೀಡಿ ವಾರ್ಷಿಕ ಜಾತ್ರೋತ್ಸವದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಬಿಜೆಪಿಗೆ ಸೇರಿ ತಪ್ಪು ಮಾಡಿದೆವು ಎಂದು ಸಚಿವ ಎಂಟಿಬಿ ನಾಗರಾಜ್ ಬಹಿರಂಗ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, …
Read More »ಮೇ 10 ರಂದು ರಾಜ್ಯ ಸಚಿವ ಸಂಪುಟ ಪುನಾರಚನೆ ಸಾಧ್ಯತೆ ಬಗ್ಗೆ ಮಾಹಿತಿ ಲಭಿಸುತ್ತಿದ್ದು, ಮೂವರು ಡಿಸಿಎಂ ಸೃಷ್ಟಿಯಾಗಲಿದೆ. ಜತೆಗೆ ಇನ್ನು ಕೆಲವೇ ತಿಂಗಳಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೊಸಬರ ನೇಮಕ..
ಬೆಂಗಳೂರು: ಮೇ 10 ರಂದು ರಾಜ್ಯ ಸಚಿವ ಸಂಪುಟ ಪುನಾರಚನೆ ಸಾಧ್ಯತೆ ಬಗ್ಗೆ ಮಾಹಿತಿ ಲಭಿಸುತ್ತಿದ್ದು, ಮೂವರು ಡಿಸಿಎಂ ಸೃಷ್ಟಿಯಾಗಲಿದೆ. ಜತೆಗೆ ಇನ್ನು ಕೆಲವೇ ತಿಂಗಳಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೊಸಬರ ನೇಮಕವಾಗಲಿದೆ. ಈಗ ಲಭ್ಯವಾಗಿರುವ ಮಾಹಿತಿ ಪ್ರಕಾರ, ಒಕ್ಕಲಿಗ, ಹಿಂದುಳಿದ, ಪರಿಶಿಷ್ಟ ಜಾತಿ/ ಪಂಗಡದ ಪ್ರಭಾವಿ ನಾಯಕರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲು ವರಿಷ್ಠರು ಚಿಂತನೆ ನಡೆಸಿದ್ದಾರೆ. ಅದೇ ರೀತಿ ರಾಜ್ಯಾಧ್ಯಕ್ಷ ಸ್ಥಾನಕ್ಕೂ ಹೊಸಬರ ನೇಮಕ ಸಾಧ್ಯತೆ ಇದೆ. ಅಲ್ಲಿಯೂ ಕೂಡಾ …
Read More »10 ಲಕ್ಷ ರೂಪಾಯಿ ಹಣವನ್ನು ಡಬಲ್ ಮಾಡಿ ಕೊಡಲಾಗುವುದು ಎಂದು ಪುಸಲಾಯಿಸಿ 5 ಲಕ್ಷ ರೂಪಾಯಿ ಹಣವನ್ನು ದೋಚಿಕೊಂಡು ಪರಾರಿ
ಮಂಡ್ಯ :- 5 ಲಕ್ಷ ರೂಪಾಯಿ ಹಣಕೊಟ್ಟರೆ 10 ಲಕ್ಷ ರೂಪಾಯಿ ಹಣವನ್ನು ಡಬಲ್ ಮಾಡಿ ಕೊಡಲಾಗುವುದು ಎಂದು ಪುಸಲಾಯಿಸಿ 5 ಲಕ್ಷ ರೂಪಾಯಿ ಹಣವನ್ನು ದೋಚಿಕೊಂಡು ಪರಾರಿಯಾಗಿರುವ ಘಟನೆ ಮಂಗಳವಾರ ಮಧ್ಯಾಹ್ನ ಮದ್ದೂರು ತಾಲ್ಲೂಕಿನ ಉಪ್ಪಿನಕೆರೆ ಗೇಟ್ ಬಳಿ ನಡೆದಿದೆ. ಮದ್ದೂರು ತಾಲ್ಲೂಕಿನ ಉಪ್ಪಿನಕೆರೆ ಗೇಟ್ ಬಳಿಯ ಶ್ರೀ ಕಬ್ಬಾಳಮ್ಮ ಟೀ ಸ್ವಾಲ್ ಬಳಿ ಮಂಗಳವಾರ ಬೆಳಿಗ್ಗೆ ಸುಮಾರು 12 ಗಂಟೆ ವೇಳೆಗೆ ಕುಣಿಗಲ್ ಮೂಲದ ಪುನೀತ್, ಕಿರಣ್ ಎಂಬ …
Read More »ತಾಕತ್ತಿದ್ದರೆ ಮೊಳಕಾಲ್ಮೂರು ಕ್ಷೇತ್ರದಲ್ಲೇ ಸ್ಪರ್ಧಿಸಿ
ಮೊಳಕಾಲ್ಮೂರು: ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಕೈಗೊಳ್ಳದ ಸಚಿವ ಬಿ. ಶ್ರೀರಾಮುಲು ತಾಕತ್ತಿದ್ದರೆ ಮುಂಬರುವ ಚುನಾವಣೆಯಲ್ಲಿ ನನ್ನ ವಿರುದ್ಧ ಗೆದ್ದು ತೋರಿಸಲಿ ಎಂದು ಕಾಂಗ್ರೆಸ್ ಮುಖಂಡ ಡಾ| ಬಿ. ಯೋಗೇಶ್ಬಾಬು ಸವಾಲೆಸೆದರು. ತಾಲೂಕಿನ ಹಾನಗಲ್ ಗ್ರಾಮದ ಪ್ರವಾಸಿಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ಬಿ. ಶ್ರೀರಾಮುಲು ಕೆಲ ದಿನಗಳ ಹಿಂದೆ ಈ ಕ್ಷೇತ್ರ ಅಭಿವೃದ್ಧಿಯಿಂದ ಹಿಂದುಳಿಯಲು ಕಾಂಗ್ರೆಸ್ ಕಾರಣವಾಗಿದೆ ಎಂದು ಹೇಳಿಕೆ ನೀಡಿರುವುದು ಖಂಡನೀಯ. ತಾಕತ್ತಿದ್ದರೆ ಕಾಂಗ್ರೆಸ್ನವರು ನನ್ನ ವಿರುದ್ಧ …
Read More »ಅಶ್ವತ್ಥ ನಾರಾಯಣ್ ಸಹೋದರನ ಪಾತ್ರ ಎಷ್ಟಿದೆ ಅನ್ನೋದನ್ನ ತನಿಖೆ ಮಾಡ್ತಾರೆ: ಶಾಸಕ ಯತ್ನಾಳ್
ವಿಜಯಪುರ : ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಸಚಿವ ಸಿ.ಎನ್.ಅಶ್ವತ್ಥ ನಾರಾಯಣ್ ಸಹೋದರನ ಹೆಸರು ಕೇಳಿಬಂದಿರುವುದರ ಕುರಿತು ತನಿಖೆಯಾಗಬೇಕು. ಇದರಲ್ಲಿ ಯಾರೇ ಇದ್ದರೂ ಮುಲಾಜಿಲ್ಲದೆ ತನಿಖೆಯಾಗಲಿ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿದ್ದಾರೆ. ಪಿಎಸ್ಐ ನೇಮಕಾತಿ ಅಕ್ರಮದ ಕುರಿತು ಮಾತನಾಡಿದ ಅವರು, ಬಿಜೆಪಿ ಸರ್ಕಾರವೇ ಇದನ್ನು ತನಿಖೆ ಮಾಡಿದೆ. ನಮ್ಮ ಸರ್ಕಾರದಿಂದಲೇ ಈ ಪ್ರಕರಣ ಹೊರಗೆ ಬಂದಿದೆ. ಹಿಂದೆ ಕೂಡ ಇಂತಹ ಡೀಲ್ ನಡೆದಿವೆ, ಇದೆ ಮೊದಲೇನಲ್ಲ. ಸರ್ಕಾರ ಈ ಪ್ರಕರಣವನ್ನು ಸಿಐಡಿಗೆ …
Read More »ಅನ್ಯಧರ್ಮದಲ್ಲಿ ಜನಿಸಿದ್ದರೆ ಬಸವಣ್ಣ ವಿಶ್ವಖ್ಯಾತಿ ಪಡೆಯುತ್ತಿದ್ದ: ಶಿವಾನಂದ ಪಾಟೀಲ
ವಿಜಯಪುರ: ಬಸವಣ್ಣ ಇಸ್ಲಾಂ ಧರ್ಮದಲ್ಲಿ ಜನಿಸಿದ್ದರೆ ಮಹ್ಮದ್ ಪೈಗಂಬರರನ್ನು, ಕ್ರೈಸ್ತ ಧರ್ಮದಲ್ಲಿ ಜನಿಸಿದ್ದರೆ ಏಸುವಿಗಿಂತ ಮಿಗಿಲಾಗಿ ಜಗತ್ತನ್ನು ಆವರಿಸಿರುತ್ತಿದ್ದರು. ಆದರೆ ಬಸವಣ್ಣ ಎಂಬ ಮಹಾನ್ ದಾರ್ಶನಿಕ ಕನ್ನಡ ನೆಲದ ಬಾಗೇವಾಡಿಯಲ್ಲಿ ನೆಲೆಸಿದ್ದರಿಂದ ಅವರ ವೈಚಾರಿಕ ಸಂದೇಶಗಳು ಜಗತ್ತಿನ ಮೂಲೆ ಮೂಲೆಗೆ ತಲುಪುವಲ್ಲಿ ವಿಫಲವಾಗಿದೆ ಎಂದು ಬಸವನಬಾಗೇವಾಡಿ ಶಾಸಕ ಶಿವಾನಂದ ಪಾಟೀಲ ಹೇಳಿದರು. ಮಂಗಳವಾರ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದಲ್ಲಿ ರಾಜ್ಯ ಸರ್ಕಾರದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ …
Read More »ಮುಖ್ಯಮಂತ್ರಿ ಬೊಮ್ಮಾಯಿ ನಿವಾಸದಲ್ಲಿ ಹೋಳಿಗೆ ಊಟ ಸವಿದ ಅಮಿತ್ ಶಾ!
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಯೋಜಿಸಿದ್ದ ಭೋಜನಕೂಟದಲ್ಲಿ ಅಮಿತ್ ಶಾ ಭಾಗಿಯಾಗಿದ್ದು, ಇವರ ಜೊತೆಗೆರಾಜ್ಯ ಬಿಜೆಪಿ ನಾಯಕರು ಪಾಲ್ಗೊಂಡಿದ್ದು, ಬೆಳ್ಳಿ ತಟ್ಟೆಯಲ್ಲಿ ಭೋಜನ ಸೇವಿಸಿದರು. ರೇಸ್ ಕೋರ್ಸ್ ರಸ್ತೆಯಲ್ಲಿರುವ ಸಿಎಂ ಅಧಿಕೃತ ನಿವಾಸ ರೇಸ್ ವ್ಯೂ ಕಾಟೇಜ್ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಏರ್ಪಡಿಸಿರುವ ಭೋಜನ ಕೂಟದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ …
Read More »ಅಮಿತ್ ಶಾ ಸಮ್ಮುಖದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆ
ಬೆಂಗಳೂರು: ಬಿಜೆಪಿ ನಾಯಕ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮ್ಮುಖದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರು ಮಂಗಳವಾರ ಬೆಳಿಗ್ಗೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಜತೆ ಹೊರಟ್ಟಿ ಅಮಿತ್ ಶಾ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದರು. ನಂತರ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು. ಬಸವರಾಜ ಹೊರಟ್ಟಿ ಪ್ರತಿನಿಧಿಸುತ್ತಿರುವ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿ ಇದುವರೆಗೆ …
Read More »ಪಿಎಸ್ಐ ನೇಮಕಾತಿ ಅಕ್ರಮ: ಹೋರಾಟ ಕೈಬಿಟ್ಟು ಕಾನೂನು ಸಮರಕ್ಕೆ ಸಜ್ಜಾದ ಅಭ್ಯರ್ಥಿಗಳು
ಬೆಂಗಳೂರು, ಮೇ. 03: ಪಿಎಸ್ಐ ಪರೀಕ್ಷೆಯನ್ನು ರದ್ದು ಗೊಳಿಸಿದ ರಾಜ್ಯ ಸರ್ಕಾರದ ನಿರ್ಧಾರ ವಿರೋಧಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದ ಪಿಎಸ್ಐ ಅಭ್ಯರ್ಥಿಗಳು ಹೋರಾಟವನ್ನು ಕೈ ಬಿಟ್ಟಿದ್ದಾರೆ. ಸರ್ಕಾರದ ಮರು ಪರೀಕ್ಷೆ ನಿರ್ಧಾರದ ವಿರುದ್ದ ಕಾನೂನು ಸಮರ ಸಾರಲು ನಿರ್ದಾರ ಕೈಗೊಂಡಿದ್ದು, ಮಂಗಳವಾರ ಹೋರಾಟವನ್ನು ಅಂತ್ಯಗೊಳಿಸಿದರು. ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಸರ್ಕಾರ ರದ್ದುಗೊಳಿಸಿತ್ತು. ಪ್ರಾಮಾಣಿಕವಾಗಿ ಪರೀಕ್ಷೆ ಬರೆದು ಉತ್ತೀರ್ಣರಾಗಿದ್ದ ಅಭ್ಯರ್ಥಿಗಳು ಸರ್ಕಾರದ …
Read More »
Laxmi News 24×7