Breaking News

Daily Archives: ಮೇ 3, 2022

ಅಮಿತ್ ಶಾ ಬೆಂಗಳೂರಿನಲ್ಲಿ ಇರುವಾಗಲೇ ಯತ್ನಾಳ್ ಹೊಸ ಬಾಂಬ್

ವಿಜಯಪುರ, ಮೇ 3: ಬಿಜೆಪಿಯ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಮಾತಿಗೆ ಬಿಜೆಪಿಯಲ್ಲಿ ಎಷ್ಟು ಬೆಲೆ ಇದೆಯೋ ತಿಳಿದಿಲ್ಲ. ಆದರೆ, ರಾಜಕಾರಣದ ಸುತ್ತಮುತ್ತ ವಿವಾದಕಾರೀ ಹೇಳಿಕೆಯನ್ನು ನೀಡುವುದರಲ್ಲಿ ಅವರು ನಿಸ್ಸೀಮರು. ಸ್ವಪಕ್ಷೀಯದವರನ್ನೇ ಅದರಲ್ಲೂ ಪ್ರಮುಖವಾಗಿ ಯಡಿಯೂರಪ್ಪ, ವಿಜಯೇಂದ್ರ ಮತ್ತು ಮುರುಗೇಶ್ ನಿರಾಣಿ ವಿರುದ್ದ ಕಿಡಿಕಾರುವ ಯತ್ನಾಳ್, ಅಮಿತ್ ಶಾ ಅವರು ರಾಜ್ಯ ಪ್ರವಾಸದಲ್ಲಿ ಇದ್ದಾಗಲೇ ಮತ್ತೊಂದು ಹೇಳಿಕೆಯನ್ನು ನೀಡಿ, ಪಕ್ಷದ ನಾಯಕರಿಗೆ ಮುಜುಗರ ತಂದಿದ್ದಾರೆ. “ಕೇಂದ್ರ ಗೃಹ …

Read More »

ಟೋಲ್ ಸಂಗ್ರಹಕ್ಕೆ ಕೇಂದ್ರದ ಹೊಸ ಪ್ಲಾನ್-ಶೀಘ್ರದಲ್ಲಿ ಫಾಸ್ಟ್ ಟ್ರ್ಯಾಕ್ ರದ್ದು !

ನವದೆಹಲಿ: ಹೆದ್ದಾರಿಯ ಟೋಲ್ ಸಂಗ್ರಹ ಕೇಂದ್ರದಲ್ಲಿ ಈಗಾಗಲೇ ಫಾಸ್ಟ್ ಟ್ರ್ಯಾಕ್ ವ್ಯವಸ್ಥೆ ಇದೆ. ಆದರೆ, ಕೇಂದ್ರ ಸರ್ಕಾರ ಈ ಒಂದು ವ್ಯವಸ್ಥೆಯನ್ನ ರದ್ದುಗೊಳಿಸಲು ಮುಂದಾಗಿದೆ. ಅದರ ಬದಲು ಬೇರೆ ವ್ಯವಸ್ಥೆ ಮಾಡಲು ಸಿದ್ದತೆ ನಡೆಸಿದೆ. ಕೇಂದ್ರ ಸರ್ಕಾರ ಸ್ಯಾಟಲೈಟ್ ನ್ಯಾವಿಗೇಷನ್ ಸಿಸ್ಟಂ ಬಳಸಿ ಟೋಲ್ ಸಂಗ್ರಹಿಸಲು ಮುಂದಾಗಿದ್ದು, ಭಾರತದಲ್ಲಿ ಪ್ರಾಯೋಗಿಕವಾಗಿಯೇ ಇದರ ಪರೀಕ್ಷೆಯನ್ನೂ ಮಾಡಲಾಗುತ್ತಿದೆ.   ವಿಶೇಷವೇನೆಂದ್ರೆ ಈ ವ್ಯವಸ್ಥೆಯಲ್ಲಿ ಎಷ್ಟು ಕಿಲೋಮೀಟರ್‌ ವಾಹನಗಳು ಓಡಿರುತ್ತವೆಯೋ ಅಷ್ಟೆಕ್ಕೆ ಮಾತ್ರ ಟೋಲ್ …

Read More »

ಬೆಂಗಳೂರಿನಲ್ಲಿ ಅಮಿತ್ ಶಾ: ಸ್ಮಾರ್ಟ್​ ಪೊಲೀಸ್ E BEATಗೆ ಚಾಲನೆ, ನೃಪತುಂಗ ವಿವಿ ಉದ್ಘಾಟನೆ

ಬೆಂಗಳೂರು: ಸ್ಮಾರ್ಟ್ ಪೊಲೀಸ್ E BEATಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ಚಾಲನೆ ನೀಡಿದರು. ಕ್ಯೂಆರ್ ಕೋಡ್ ಸ್ಕ್ಯಾನ್ ಮೂಲಕ ನೂತನ ಯೋಜನೆಗೆ ಚಾಲನೆ ನೀಡಿ, ಕರ್ನಾಟಕ ಸರ್ಕಾರದ ಮಹತ್ವದ ಪ್ರಯತ್ನವನ್ನು ಶ್ಲಾಘಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಜನರ ಮಾನ ಪ್ರಾಣ ರಕ್ಷಿಸುವುದು ಪೊಲೀಸ್ ಇಲಾಖೆಯ ಸವಾಲಿನ ಕೆಲಸ. ಅಪರಾಧಗಳ ತಡೆಗೆ ಸ್ಮಾರ್ಟ್ ಪೊಲೀಸ್ E BEAT ನೆರವು ಪಡೆದುಕೊಳ್ಳಬೇಕಿದೆ. ಅಪರಾಧ ಪ್ರಕರಣಗಳ …

Read More »

ಬ್ಲೂಟೂತ್ ಬಳಸಿ PSI ಪರೀಕ್ಷೆ ಪಾಸ್ ಮಾಡಿದ್ದ ಪ್ರಭು ಅರೆಸ್ಟ್

ಕಲಬುರಗಿ: PSI ಪರೀಕ್ಷಾ ಅಕ್ರಮ ಕುರಿತು ಸಿಐಡಿ ತನಿಖೆ ಚುರುಕುಗೊಳಿಸಿದ್ದು, ಬಂಧಿತ ಆರೋಪಿಗಳ ಸಂಖ್ಯೆ 40ರ ಗಡಿ ದಾಟಿದೆ. ಇಂದೂ ಸಹ ಬೆಂಗಳೂರಿನಲ್ಲಿ ಒರ್ವ ಆರೋಪಿಯನ್ನು ಬಂಧಿಸಲಾಗಿದೆ. ಕಲಬುರಗಿಯಲ್ಲಿ ಇನ್ನೊಬ್ಬ ಆರೋಪಿ ತಾನೇ ಠಾಣೆಗೆ ಹೋಗಿ ಶರಣಾಗಿದ್ದಾನೆ. ಇಲ್ಲಿನ ಮತ್ತೊಂದು MSI ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ಬಯಲಾಗಿದೆ. ಈ ಕೇಂದ್ರದಲ್ಲಿ ಒಟ್ಟು 8 ಅಭ್ಯರ್ಥಿಗಳು ಪರೀಕ್ಷೆ ಪಾಸ್ ಮಾಡಿದ್ದರು. ಅವರಲ್ಲಿ ಓರ್ವ ಅಭ್ಯರ್ಥಿ ಪ್ರಭು ಬ್ಲೂಟೂತ್ ಬಳಸಿ ಅಕ್ರಮವಾಗಿ ಪರೀಕ್ಷೆ ಪಾಸ್ …

Read More »

ಮೇ 10ರ ಒಳಗಡೆ ಸಿಎಂ ಬದಲಾವಣೆ ಆಗಲಿದ್ದಾರೆ:ಬಸನಗೌಡ ಪಾಟೀಲ್‌ ಯತ್ನಾಳ್‌

ಬೆಂಗಳೂರು: ಒಂದೊಂದು ರಾಜ್ಯದಲ್ಲಿ ಒಂದೊಂದು ಮಾದರಿಯನ್ನು ಜಾರಿ ಮಾಡುತ್ತಿರುವ ಬಿಜೆಪಿ ಹೈಕಮಾಂಡ್‌ ಚುನಾವಣೆ ಹತ್ತಿರ ಬರುತ್ತಿರುವ ಕರ್ನಾಟಕದಲ್ಲಿ ಯಾವ ಮಾದರಿಗೆ ಮಣೆ ಹಾಕುತ್ತದೆ? ಅಥವಾ ಕರ್ನಾಟಕದ್ದೇ ಮಾಡೆಲ್‌ ತರುತ್ತಾ ಎಂಬ ಕುತೂಹಲ ಎದ್ದಿದೆ. ವಿಜಯಪುರದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ಮೇ 10ರ ಒಳಗಡೆ ಸಿಎಂ ಬದಲಾವಣೆ ಆಗಲಿದ್ದಾರೆ ಎಂದು ಹೇಳಿದರೆ ಯಡಿಯೂರಪ್ಪ, ಅಶೋಕ್‌ ಸಿಎಂ ಬದಲಾವಣೆ ಇಲ್ಲ ಎಂದು ತಿಳಿಸಿದ್ದಾರೆ ನಾಯಕರು ಏನೇ ಹೇಳಿದರೂ ಬಿಜೆಪಿ ಹೈಕಮಾಂಡ್‌ ಭಿನ್ನವಾಗಿ …

Read More »

MES ಮುಖಂಡ ಶುಭಂ ಶಳಕೆಯಿಂದ DDPI ಕಚೇರಿಗೆ ನುಗ್ಗಿ ಪುಂಡಾಟಿಕೆ

ಬೆಳಗಾವಿ: ಗಡಿವಿವಾದ ವಿಚಾರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಅಬ್ಬರಿಸುತ್ತಿದ್ದ ಎಂಇಎಸ್ (ಮಹಾರಾಷ್ಟ್ರ ಏಕೀಕರಣ ಸಮಿತಿ) ಯುವ ಘಟಕದ ಅಧ್ಯಕ್ಷ ಶುಭಂ ಶೆಳಕೆ ಇದೀಗ ಸರ್ಕಾರಿ ಕಚೇರಿಯಲ್ಲೂ ಪುಂಡಾಟ ಪ್ರದರ್ಶಿಸಿರುವುದು ಬೆಳಕಿಗೆ ಬಂದಿದೆ. ಮೂರು ದಿನಗಳ ಹಿಂದೆ ನಡೆದ ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಶಿಕ್ಷಣ ಇಲಾಖೆ ಸಿಆರ್‍ಪಿ ಕೌನ್ಸೆಲಿಂಗ್ ವೇಳೆ ಮರಾಠಿ ಶಾಲೆಗೆ ಕನ್ನಡಿಗ ಸಿಆರ್‍ಪಿ ನಿಯೋಜನೆ ಮಾಡಲಾಗಿದೆ. ಮರಾಠಿ ಶಿಕ್ಷಕರ ಮೇಲೆ ಕನ್ನಡ ಹೇರಿಕೆ ಮಾಡಲಾಗುತ್ತಿದೆ ಎಂದು ಆರೋಪಿಸಿ …

Read More »

ಎಂಟು ತಿಂಗಳ ಹಿಂದೆಯಷ್ಟೇಮದುವೆಯಾಗಿದ್ದ ಯುವಕ ಬರ್ಬರವಾಗಿ ಕೊಲೆ

ಚಿಕ್ಕೋಡಿ: ಎಂಟು ತಿಂಗಳ ಹಿಂದೆಯಷ್ಟೇಮದುವೆಯಾಗಿದ್ದ ಯುವನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪೂರ- ಕಾತ್ರಾಳ ರಸ್ತೆ ನಡುವೆ ನಡೆದಿದೆ. ಚಿಂತಾಮಣಿ ಬಂಡಗರ (26) ಕೊಲೆಯಾದ ಯುವಕನಾಗಿದ್ದು, ತಡರಾತ್ರಿ 10 ಗಂಟೆ ಸುಮಾರಿಗೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಐನಾಪೂರದಿಂದ ಕಾತ್ರಾಳ ಕಡೆ ಬೈಕ್ ನಲ್ಲಿ ತೆರಳುವಾಗ ಹಿಂಬದಿಯಿಂದ ಲಾಂಗ್ ನಿಂದ ಹೊಡೆದು ಕೊಲೆ ಮಾಡಲಾಗಿದೆ. ಕೊಲೆಯಾದ ಯುವಕ ಚಿಂತಾಮಣಿ ಬಂಡಗರ, …

Read More »

ಈದ್‌ ಉಲ್‌ ಫಿತ್ರ್‌’ ಹಬ್ಬ ಪೊಲೀಸ್ ರಿಂದ ಬಂದೋಬಸ್ತ್ : ಬೆಳಗಾವಿ

ಬೆಳಗಾವಿ: ನಗರವೂ ಸೇರಿದಂತೆ ತಾಲ್ಲೂಕಿನಾದ್ಯಂತ ‘ಈದ್‌ ಉಲ್‌ ಫಿತ್ರ್‌’ ಹಬ್ಬ, ಬಸವೇಶ್ವರ ಮತ್ತು ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಣೆ ನಿಮಿತ್ತ ಹೆಚ್ಚುವರಿ ‍ಪೊಲೀಸ್ ಬಂದೋಬಸ್ತ್‌ ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ.ಎಂ.ಬಿ. ಬೋರಲಿಂಗಯ್ಯ ತಿಳಿಸಿದ್ದಾರೆ. ಈ ಬಗ್ಗೆ ಸೋಮವಾರ ಪ್ರಕಟಣೆ ನೀಡಿರುವ ಅವರು, ‘ಜಯಂತಿಗಳ ಹಿನ್ನೆಲೆಯಲ್ಲಿ ಪೂಜೆ, ಪ್ರಾರ್ಥನೆ, ಮೆರವಣಿಗೆಗಳು ಜರುಗಲಿರುವುದರಿಂದ ಮುಂಜಾಗ್ರತಾ ಕ್ರಮ ವಹಿಸಲಾಗಿದೆ. ಮೂರು ದಿನದ ಸೂಕ್ತ ಬಂದೋಬಸ್ತ್‌ ಕರ್ತವ್ಯಕ್ಕೆ ರಾಜ್ಯದ ವಿವಿಧ ಜಿಲ್ಲೆ …

Read More »

ನೆರೆಯ ರಾಜ್ಯಕ್ಕೆ ಕರ್ನಾಟಕ ತನ್ನ ಒಂದು ಇಂಚು ಭೂಮಿಯನ್ನು ಸಹ ಕೊಡುವುದಿಲ್ಲ

ಬೆಂಗಳೂರು: ಮಹಾರಾಷ್ಟ್ರದ ರಾಜಕಾರಣಿಗಳು ತಮ್ಮ ರಾಜಕೀಯ ಉಳಿವಿಗಾಗಿ ಭಾಷೆ ಅಥವಾ ಗಡಿ ವಿವಾದವನ್ನು ಬಳಸಿಕೊಳ್ಳಬೇಡಿ ಎಂದು ಒತ್ತಾಯಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ನೆರೆಯ ರಾಜ್ಯಕ್ಕೆ ಕರ್ನಾಟಕ ತನ್ನ ಒಂದು ಇಂಚು ಭೂಮಿಯನ್ನು ಸಹ ಕೊಡುವುದಿಲ್ಲ ಎಂದು ಸೋಮವಾರ ಸ್ಪಷ್ಟಪಡಿಸಿದ್ದಾರೆ. ಇತ್ತೀಚೆಗೆ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರು ಕರ್ನಾಟಕದ ಗಡಿ ವಿಚಾರದ ಬಗ್ಗೆ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ ಬಸವರಾಜ ಬೊಮ್ಮಾಯಿ, ನಮ್ಮ‌ ಒಂದಿಂಚೂ ಜಾಗವನ್ನೂ ಬಿಟ್ಟು ಕೊಡುವುದಿಲ್ಲ. ಮಹಾರಾಷ್ಟ್ರದಲ್ಲಿ …

Read More »

ಅಮಿತ್ ಶಾ ಸಮ್ಮುಖದಲ್ಲಿ ಇಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದ ಬಸವರಾಜ ಹೊರಟ್ಟಿ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ (Basavaraj Horatti) ಅವರು ಇಂದು (ಮೇ 03) ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ನೇತೃತ್ವದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ತಾಜ್ ವೆಸ್ಟೆಂಡ್ ಹೋಟೆಲ್​ನಲ್ಲಿ ಸೇರ್ಪಡೆಯಾಗಿ ಮಾತನಾಡಿದ ಬಸವರಾಜ ಹೊರಟ್ಟಿ, ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ. ಬಿಜೆಪಿಗೆ ಬರುವುದು ಒಳ್ಳೆಯದು ಎಂದು ಅಮಿತ್ ಶಾ ಹೇಳಿದರು. ಜೆಡಿಎಸ್ ಬಗ್ಗೆ ನನಗೆ ಒಳ್ಳೆಯ ಅಭಿಪ್ರಾಯವಿದೆ. ಆದರೆ ಮತದಾರರ …

Read More »