Breaking News

Daily Archives: ಮೇ 5, 2022

ಮನೆ, ವಾಹನ, ಇತರೆ ಸಾಲಗಾರರಿಗೆ ಶಾಕಿಂಗ್ ನ್ಯೂಸ್: ತಟ್ಟಲಿದೆ ಬಡ್ಡಿ ದರದ ಬಿಸಿ

ನವದೆಹಲಿ: ನಾಲ್ಕು ವರ್ಷದ ಬಳಿಕ ಸಾಲದ ಮೇಲಿನ ಬಡ್ಡಿ ದರ ಏರಿಕೆ ಮಾಡಲಾಗಿದೆ. ಹಣದುಬ್ಬರ ಹತ್ತಿಕ್ಕಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ದಿಢೀರ್ ನಿರ್ಧಾರ ಕೈಗೊಂಡಿದೆ. ರೆಪೋ ದರ ಶೇಕಡ 0.4 ರಷ್ಟು, ಸಿ.ಆರ್.ಆರ್. ದರ ಶೇಕಡ 0.5 ರಷ್ಟು ಹೆಚ್ಚಳವಾಗಿದೆ. ಇದರಿಂದ ಇಎಂಐ ತುಟ್ಟಿಯಾಗಲಿದೆ. ಆರ್ಬಿಐ ಕೈಗೊಂಡ ಈ ಕ್ರಮದಿಂದ ವಾಹನ, ಗೃಹ ಮತ್ತು ಇತರೆ ಸಾಲಗಳ ಮೇಲಿನ ಬಡ್ಡಿ ದರಗಳು ಏರಿಕೆಯಾಗಲಿದೆ. ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ …

Read More »

ಹಾಸನ ಡಿಸಿ ಎಷ್ಟು ದಿನ ಆಟ ಆಡುತ್ತಾರೆ ಎಂದು ನಾನೂ ನೋಡುತ್ತೇನೆ: ಎಚ್‌.ಡಿ. ರೇವಣ್ಣ

ಹಾಸನ, ಮೇ 5: ಚೆನ್ನಾಗಿದ್ದ ತಾಲೂಕು ಕಚೇರಿ ಕಟ್ಟಡವನ್ನು ರಾತ್ರೋರಾತ್ರಿ ಒಡೆದಂತೆ ಡಿಸಿ ಕಚೇರಿಯನ್ನೂ ಒಡೆದರೆ ಪರಿಣಾಮ ಬೇರೆಯಾಗುತ್ತದೆ ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ಎಚ್ಚರಿಕೆ ನೀಡಿದರು. ಹಾಸನದಲ್ಲಿ ಮಾತಾನಾಡಿದ ಅವರು, ಅಧಿಕಾರ ಇದೆ ಎಂದು ದರ್ಪ ನಡೆಸೋದು ಸರಿಯಲ್ಲ. ಹಾಸನ ಜಿಲ್ಲಾಧಿಕಾರಿ ಅನ್ ಫಿಟ್ ಆಗಿದ್ದಾರೆ. ಅವರು ರಬ್ಬರ್ ಸ್ಟಾಂಪ್ ಇದ್ದಂತೆ. ರಾತ್ರೋರಾತ್ರಿ ಕಟ್ಟಡ ಹೊಡೆಯಲು ಅವರನ್ನು ಇಟ್ಟುಕೊಂಡಿದ್ದಾರೆ. ಡಿಸಿ ಎಷ್ಟು ದಿನ ಆಟ ಆಡುತ್ತಾರೆ ನಾನೂ …

Read More »

ಒತ್ತುವರಿದಾರರಿಗೇ ಭೂಮಿ ಹಂಚಿಕೆಗೆ ಸರ್ಕಾರದ ನಿರ್ಧಾರ; ಬಗರ್ ಹುಕುಂ ಸಮಸ್ಯೆಗೆ ಶಾಶ್ವತ ಪರಿಹಾರ

ಬೆಂಗಳೂರು: ಅರಣ್ಯ ಇಲಾಖೆ ವಶದಲ್ಲಿರುವ 6 ಲಕ್ಷ ಹೆಕ್ಟೇರ್ ಭೂಮಿಯನ್ನು ಕಂದಾಯ ಇಲಾಖೆಗೆ ಹಸ್ತಾಂತರ ಮಾಡಲಾಗುತ್ತದೆ. ಈ ಭೂಮಿಯಲ್ಲಿ ಅಗತ್ಯವಿರುವಷ್ಟು ಸರ್ಕಾರದ ಬಳಿ ಉಳಿಸಿಕೊಂಡು ಉಳಿದ ಭೂಮಿಯನ್ನು ಒತ್ತುವರಿದಾರರಿಗೆ ಹಂಚಿಕೆ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಾದ್ಯಂತ ಕಂದಾಯ ಇಲಾಖೆಗೆ ಸುಮಾರು 6 ಲಕ್ಷ ಹೆಕ್ಟೇರ್ ಡೀಮ್ಡ್ ಫಾರೆಸ್ಟ್ ಪ್ರದೇಶ ಹಸ್ತಾಂತರವಾಗುತ್ತದೆ. ಇದನ್ನು ಸಾರ್ವಜನಿಕ ಉದ್ದೇಶದ ಬಳಕೆಗೆ ಮೀಸಲಿಡಲು ಆದ್ಯತೆ …

Read More »

ಬಿಜೆಪಿ ಶಾಸಕ ಯತ್ನಾಳ್ ಕುತೂಹಲದ ಹೇಳಿಕೆ

ವಿಜಯಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟ ವಿಸ್ತರಣೆ, ಪುನಾರಚನೆ ಬಗ್ಗೆ ಬಿಜೆಪಿಯಲ್ಲಿ ಪ್ರಕ್ರಿಯೆ ಆರಂಭವಾಗಿದ್ದು, ನಾಲ್ವರಿಗೆ ಸಚಿವ ಸ್ಥಾನ, ನಾಲ್ವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಪ್ರತಿಕ್ರಿಯೆ ನೀಡಿ, ಸಂಪುಟದ ಬಗ್ಗೆ ಯಾವ ನಿರ್ಧಾರ ಕೈಗೊಳ್ಳಬೇಕೆಂಬುದನ್ನು ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ. ಎಲ್ಲ ಸಮುದಾಯ ಮತ್ತು ಎಲ್ಲ ಜಿಲ್ಲೆಗಳಿಗೂ ಪ್ರಾತಿನಿಧ್ಯ ನೀಡುವ ಬಗ್ಗೆ ಪಕ್ಷದ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಾಗುತ್ತದೆ …

Read More »

ಆಸ್ಪತ್ರೆ ಸಿಬ್ಬಂದಿಗಳ ನಿರ್ಲ್ಯಕ್ಷ: ನವಜಾತ ಶಿಶುವಿನ ಮೊಣಕಾಲು, ಕೈಕಾಲುಗಳನ್ನು ಕಚ್ಚಿ ಗಾಯಗೊಳಿಸಿದ ಇಲಿಗಳು.

ಜಾರ್ಖಂಡ್‌: ಸಿಬ್ಬಂದಿಗಳ ನಿರ್ಲಕ್ಷ್ಯದಿಂದಾಗಿ ಇಲಿಗಳು ನವಜಾತ ಶಿಶುವಿನ ಮೊಣಕಾಲು ಮತ್ತು ಕೈಕಾಲುಗಳನ್ನು ಕಚ್ಚಿರುವ ಘಟನೆ ಗಿರಿದಿಹ್‌ನಲ್ಲಿರುವ ಜಾರ್ಖಂಡ್‌ನ ಸರ್ಕಾರಿ ಆಸ್ಪತ್ರೆಯಲ್ಲಿ ಬೆಳಕಿಗೆ ಬಂದಿದೆ. ನಿರ್ಲಕ್ಷ್ಯದ ಆಘಾತಕಾರಿ ಪ್ರಕರಣದಲ್ಲಿ ಇಲಿಗಳು ನವಜಾತ ಶಿಶುವಿನ ಮೊಣಕಾಲು ಮತ್ತು ಕೈಕಾಲುಗಳನ್ನು ಕಚ್ಚಿದ ಘಟನೆ ಗಿರಿದಿಹ್‌ನಲ್ಲಿರುವ ಜಾರ್ಖಂಡ್‌ನ ಸರ್ಕಾರಿ ಆಸ್ಪತ್ರೆಯಲ್ಲಿ ಇಬ್ಬರು ಹೊರಗುತ್ತಿಗೆ ಕಾರ್ಮಿಕರ ಸೇವೆಯನ್ನು ವಜಾಗೊಳಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.   ಈ ಘಟನೆಯು ಮೇ 2 ರಂದು ಗಿರಿದಿಹ್ ಸದರ್ ಆಸ್ಪತ್ರೆಯಲ್ಲಿ …

Read More »