Breaking News

Daily Archives: ಮೇ 11, 2022

16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್

ಚೀನಾ :ಅಪ್ರಾಪ್ತರ ದೈಹಿಕ ಮತ್ತು ಮಾನಸಿಕ ಆರೋಗ್ಯ ರಕ್ಷಿಸಲು ವಿವಿಧ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಲೈವ್-ಸ್ಟ್ರೀಮಿಂಗ್ ಮಾಡುವುದನ್ನು ನಿಷೇಧಿಸಲು ಚೀನಾ ಮುಂದಾಗಿದೆ. ಹೊಸ ನಿಯಮಗಳ ಪ್ರಕಾರ, 16 ವರ್ಷದೊಳಗಿನವರನ್ನು ಲೈವ್-ಸ್ಟ್ರೀಮಿಂಗ್ ಅನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.   16 ಮತ್ತು 18 ರ ನಡುವಿನ ವಯಸ್ಸಿನ ಬಳಕೆದಾರರು ಲೈವ್ ಸ್ಟ್ರೀಮ್ ಮಾಡುವ ಮೊದಲು ತಮ್ಮ ಪೋಷಕರು ಅಥವಾ ಪೋಷಕರಿಂದ ಅನುಮತಿಯನ್ನು ಪಡೆಯಬೇಕು ಎಂದು ಸೌತ್ ಚೀನಾ ಮಾರ್ನಿಂಗ್ ಪೋಸ್ಟ್ ವರದಿ ಮಾಡಿದೆ. …

Read More »

ಎಪಿಪಿ ಪಿಯುಸಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ : ಆರಗ ಜ್ಞಾನೇಂದ್ರ

ಶಿವಮೊಗ್ಗ: ಪಿಎಸ್‌ಐ ಹುದ್ದೆಗಳಿಗೆ ನೇಮಕಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ ಗೃಹಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದು, ಈಗಾಗಲೇ ಪ್ರಿಯಾಂಕ್ ಖರ್ಗೆ ಅವರಿಗೆ ಮೂರು ಬಾರಿ ನೋಟಿಸ್ ನೀಡಲಾಗಿದೆ. ಹೀಗಿದ್ದರೂ ಅವರು ಮಾಹಿತಿ ನೀಡುತ್ತಿಲ್ಲ ಎಂದು ಹೇಳಿದ್ದಾರೆ.   ಮಾಹಿತಿ ಕೊಡದೆ ಮಾಧ್ಯಮಗಳ ಬಂದು ಮುಂದೆ ಪ್ರಿಯಾಂಕ್ ಖರ್ಗೆ ಬೂಕಾಳಿ ಬಿಡುತ್ತಿದ್ದಾರೆ. ಕಾಂಗ್ರೆಸ್ ನಾಯಕರು ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಎಪಿಪಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದ್ದು, …

Read More »

ಭಾರತೀಯ ರೈಲ್ವೆ ಹೊಸ ನಿಯಮ : ರಾತ್ರಿ ರೈಲಿನಲ್ಲಿ ಜೋರಾಗಿ ಮಾತನಾಡುವಂತಿಲ್ಲ

ನವದೆಹಲಿ: ರೈಲ್ವೆ ಪ್ರಯಾಣಿಕರು ರಾತ್ರಿ ಪ್ರಯಾಣದ ಸಂದರ್ಭದಲ್ಲಿ ಮೊಬೈಲ್‌ನಲ್ಲಿ ಏರಿದ ಧ್ವನಿಯಲ್ಲಿ ಮಾತನಾಡುವುದನ್ನು ಅಥವಾ ‘ಲೌಡ್‌ ಸ್ಪೀಕರ್‌’ನಲ್ಲಿ ಸಂಗೀತ ಕೇಳುವುದನ್ನು ಭಾರತೀಯ ರೈಲ್ವೆ ನಿಷೇಧಿಸಿದೆ. ಪ್ರಯಾಣಿಕರಿಗೆ ಆರಾಮದಾಯಕ ಪ್ರಯಾಣವನ್ನು ಖಾತರಿಪಡಿಸುವ ಉದ್ದೇಶ|ದಿಂದ ಭಾರತೀಯ ರೈಲ್ವೆ ಹೊಸದಾಗಿ ಪ್ರಯಾಣಿಕ ಸ್ನೇಹಿ ಮಾರ್ಗಸೂಚಿಗಳನ್ನು ಹೊರಡಿಸಿದೆ.   ಅದರ ಪ್ರಕಾರ, ಪ್ರಯಾಣಿಕರು ದೂರು ನೀಡಿದರೆ, ಆ ಸಮಸ್ಯೆ ಪರಿಹರಿಸುವ ಜವಾಬ್ದಾರಿ ರೈಲಿನಲ್ಲಿರುವ ಸಿಬ್ಬಂದಿಯದ್ದಾಗಿರುತ್ತದೆ. ರೈಲಿನಲ್ಲಿರುವ ರೈಲ್ವೆ ತಪಾಸಣೆ ಸಿಬ್ಬಂದಿ, ಆರ್‌ಪಿಎಫ್, ಎಲೆಕ್ಟ್ರಿಷಿಯನ್, ಅಡುಗೆ ಮತ್ತು …

Read More »

ಯುವಕನ ಕೈಯಲ್ಲಿ ಮಗು ಕೊಟ್ಟು ಅಪರಿಚಿತ ಮಹಿಳೆ ನಾಪತ್ತೆ

ರಾಯಚೂರು : ಶೌಚಾಯಲಯಕ್ಕೆ ಹೋಗಿ ಬರ್ತಿನಿ ಇಟ್ಕೊಳಿ ಅಂತ ಹೇಳಿ ಅಪರಿಚಿತ ಮಹಿಳೆ 9 ತಿಂಗಳ ಹಸುಗೂಸನ್ನು ಯುವಕನೊಬ್ಬನ ಕೈಗೆ ಕೊಟ್ಟು ನಾಪತ್ತೆಯಾಗಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ಮೈಸೂರು ಮೂಲದ ಯುವಕ ಕೆಲಸದ ಮೇಲೆ ರಾಯಚೂರಿಗೆ ಹೋಗಿದ್ದಾಗ ಈ ಘಟನೆ ನಡೆದಿದ್ದು, ಯುವಕ ಕರೆತಂದ ಮಗುವನ್ನು ಲಷ್ಕರ್ ಠಾಣೆ ಪೊಲೀಸರು ರಕ್ಷಿಸಿ ಮಾನವೀಯತೆ ಮೆರೆದಿದ್ದಾರೆ.   ಮೈಸೂರಿನ ಹೆಚ್.ಡಿ.ಕೋಟೆಯ ನಿವಾಸಿ ರಘು ವೈಯಕ್ತಿಕ ಕೆಲಸಕ್ಕಾಗಿ ರಾಯಚೂರಿಗೆ ತೆರಳಿದ್ದರು. ಈ ಮಧ್ಯೆ ಮೈಸೂರಿಗೆ …

Read More »

ನನ್ನನ್ನು ತಿಹಾರ್ ಜೈಲಿಗಾದ್ರೂ ಹಾಕಲಿ, ಪರಪ್ಪನ ಆಗ್ರಹಾರಕ್ಕಾದ್ರೂ ಹಾಕಲಿ. ನಾನು ಹೆದರುವುದಿಲ್ಲ:D.K.

ಶಿವಮೊಗ್ಗ: ನನ್ನನ್ನು ತಿಹಾರ್ ಜೈಲಿಗಾದ್ರೂ ಹಾಕಲಿ, ಪರಪ್ಪನ ಆಗ್ರಹಾರಕ್ಕಾದ್ರೂ ಹಾಕಲಿ. ನಾನು ಹೆದರುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಸಚಿವ ಡಾ.ಸಿ ಎನ್ ಅಶ್ವತ್ಥ್​ ನಾರಾಯಣ ಅವರಿ​ಗೆ ತಿರುಗೇಟು ನೀಡಿದ್ದಾರೆ. ಶಿವಮೊಗ್ಗದ ಜನಧ್ವನಿ ಕಾರ್ಯಕ್ರಮಕ್ಕೆ ಆಗಮಿಸಿದ ವೇಳೆ ಸುದ್ದಿಗಾರರೂಂದಿಗೆ ಮಾತನಾಡಿದ ಅವರು, ಯಾವ ಜೈಲಿಗಾದ್ರೂ ಹಾಕಲಿ, ನಾವು ಅವರಿಗೆ ಆಜ್ಞೆ ಮಾಡುವುದಕ್ಕೆ ಆಗಲ್ಲ ಎಂದರು.   ರಾಜ್ಯದಲ್ಲಿ ಪರೀಕ್ಷೆ, ನೇಮಕಾತಿ ಎಲ್ಲದರಲ್ಲೂ ಭ್ರಷ್ಟಾಚಾರ ನಡೆಯುತ್ತಿದೆ. ಸರ್ಟಿಫಿಕೇಟ್​ಗಳು, …

Read More »

ಮೇ ಮೂರನೇ ವಾರದಲ್ಲಿ ಎಸ್‌ಎಸ್‌ಎಲ್ ಸಿ ರಿಸಲ್ಟ್

ಬೆಂಗಳೂರು: ಎಸ್​ಎಸ್​​ಎಲ್​ಸಿ ಪರೀಕ್ಷೆ ಫಲಿತಾಂಶ ಇದೇ ತಿಂಗಳ ಮೂರನೇ ವಾರದಲ್ಲಿ ಪ್ರಕಟ ವಾಗಲಿದೆ. ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಾಹಿತಿ ನೀಡಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈಗಾಗಲೇ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಗಿದಿದೆ.   ಫಲಿತಾಂಶದ ತಯಾರಿಯ ಕೊನೆಯ ಘಟ್ಟದಲ್ಲಿ ಕೆಲಸ ನಡೆಯುತ್ತಿದೆ. ಮೂರನೇ ವಾರ ಫಲಿತಾಂಶ ಲಭ್ಯವಾಗಲಿದೆ ಎಂದು ತಿಳಿಸಿದರು.  

Read More »

ಆಶಾ ಕಾರ್ಯಕರ್ತೆಯರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮೇ.17 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಆಶಾ ಕಾರ್ಯಕರ್ತೆಯರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮೇ.17 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಎಐಯುಟಿಯುಸಿ ರಾಜ್ಯ ನಾಯಕರಾದ ಕಾ.ಎಂ ಉಮಾದೇವಿ ಹೇಳಿದರು.   ಪಟ್ಟಣದ ಜಿಜೆಸಿಪಿ ಕಾಲೇಜು ಬಳಿ ನಡೆದ ಪ್ರತಿಭಟನಾ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು, ನಿಗದಿತ ವೇತನವಿಲ್ಲದೆ ಅನಿಶ್ಚಿತೆಯಿಂದ ಬದುಕುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಸೂಕ್ತ ವೇತನದ ಭದ್ರತೆ ಕಲ್ಪಿಸಬೇಕು, ಆರ್ ಸಿ ಎಚ್ ಪೋರ್ಟಲ್ ಮೂಲಕ ನೀಡಲಾಗುತ್ತಿರುವ ಕೇಂದ್ರ ಸರ್ಕಾರದ ಪ್ರೋತ್ಸಾಹಧನ ನಿಗದಿತ …

Read More »