ಮಂಡ್ಯ: ಗಂಡಸ್ತನದ ವಿಚಾರಕ್ಕೆ ನಡೆದ ಜಗಳ ಸ್ನೇಹಿತನ ಕೊಲೆಯಲ್ಲಿ ಅಂತ್ಯವಾದ ಘಟನೆ ಜಿಲ್ಲೆಯ ಮದ್ದೂರು ತಾಲೂಕಿನ ಕೊಪ್ಪ ಗ್ರಾಮದಲ್ಲಿ ನಡೆದಿದೆ. ಸಾಗರ್ ಕೊಲೆಗೀಡಾದ ಯುವಕ. ಸಾಗರ್ ತನ್ನ ಸ್ನೇಹಿತ ಕುಂಟನಹಳ್ಳಿ ಪ್ರಸಾದ್ನ ಬರ್ತಡೇ ಪಾರ್ಟಿಗೆ ಕೊಪ್ಪದ ಸಿಂಚನ ಡಾಬಾಗೆ ಕಳೆದ ವಾರ ಹೋಗಿದ್ದನು. ಕೇಕ್ ಕಟ್ ಮಾಡಿಸಿ ನಂತರ ಸ್ನೇಹಿತರೊಂದಿಗೆ ಪಾರ್ಟಿ ಮಾಡಿದ್ದಾನೆ. ಪಾರ್ಟಿ ಮುಗಿಸಿದ ಮೇಲೆ ಜೊತೆಯಲ್ಲಿದ್ದ ಸ್ನೇಹಿತರೇ ಹೊಟ್ಟೆ ಮತ್ತು ಎದೆಯ ಭಾಗಕ್ಕೆ ಚಾಕುವಿನಂದ ಚುಚ್ಚಿ ಪರಾರಿಯಾಗಿದ್ದಾರೆ. …
Read More »Daily Archives: ಮೇ 13, 2022
ಹೆದ್ದಾರಿ ದರೋಡೆ: ಆರು ಜನರ ಬಂಧನ
ಗುತ್ತಲ: ದರೋಡೆ ಆರೋಪದ ಮೇಲೆ ಆರು ಮಂದಿಯನ್ನು ಗುತ್ತಲ ಠಾಣೆ ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಮಧ್ಯರಾತ್ರಿ ರಾಣೆಬೆನ್ನೂರ ಕಡೆಯಿಂದ ಗುತ್ತಲ ಕಡೆಗೆ ಬರುತ್ತಿದ್ದ ಬೊಲೆರೊ ವಾಹನವನ್ನು ಪಟ್ಟಣದ ಹೊರವಲಯದ ಕುರಗೂಂದ ಕ್ರಾಸ್ ಹತ್ತಿರ ತಡೆದು ಪರಿಶೀಲನೆ ಮಾಡಿದಾಗ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಶಿವರಾಜ ಮೊಡಿಕಾರ, ಪರಶುರಾಮ ಮೊಡಿಕಾರ, ಚಿರಂಜೀವಿ ಮೊಡಿಕೇರ, ಗಾಳೇಪ್ಪ ನಾಸಿಕ್, ಗುಡದಯ್ಯ ಮೊಡಿಕೇರ ಬಂಧಿತರು. ಮಚ್ಚು, 2 ಬಡಿಗೆ, ಕಾರದಪುಡಿ ಹಾಗೂ ವಾಹನ ವಶಪಡಿಸಿಕೊಳ್ಳಲಾಗಿದೆ. ಪಟ್ಟಣದಲ್ಲಿ …
Read More »ವಿಧಾನಪರಿಷತ್ ಚುನಾವಣೆ: ವೆಚ್ಚಕ್ಕೆ ಮಿತಿ ಇಲ್ಲ, ಅಕ್ರಮವಾದರೆ ಕ್ರಮ
ಬೆಳಗಾವಿ: ‘ಕರ್ನಾಟಕ ಪಶ್ಚಿಮ ಶಿಕ್ಷಕರ ಹಾಗೂ ವಾಯವ್ಯ ಪದವೀಧರರ ಮತ್ತು ಶಿಕ್ಷಕರ ಮತಕ್ಷೇತ್ರದಿಂದ ವಿಧಾನಪರಿಷತ್ಗೆ ಜೂನ್ 13ರಂದು ನಡೆಯಲಿರುವ ಚುನಾವಣೆಯಲ್ಲಿ ಅಭ್ಯರ್ಥಿಗಳ ವೆಚ್ಚಕ್ಕೆ ಮಿತಿ ನಿಗದಿಪಡಿಸಿಲ್ಲ’ ಎಂದು ಚುನಾವಣಾಧಿಕಾರಿಯೂ ಆಗಿರುವ ಪ್ರಾದೇಶಿಕ ಆಯುಕ್ತ ಆಮ್ಲಾನ್ ಆದಿತ್ಯ ಬಿಸ್ವಾಸ್ ತಿಳಿಸಿದರು. ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ‘ಚುನಾವಣಾ ಆಯೋಗ ನೀಡಿರುವ ಮಾರ್ಗಸೂಚಿಗಳ ಪ್ರಕಾರ ಚುನಾವಣೆ ನಡೆಸಲಾಗುವುದು. ಮತದಾರರ ಮೇಲೆ ಪ್ರಭಾವ ಬೀರುವಂತಹ ಚಟುವಟಿಕೆಗಳು ಹಾಗೂ ಅಕ್ರಮ ವೆಚ್ಚದ ಮೇಲೆ ನಿಗಾ …
Read More »ಈಡೇರದ ಲಾರಿ ಚಾಲಕರ ಕನಸು
ಶಿವಮೊಗ್ಗ: ಜಿಲ್ಲೆಯಲ್ಲಿ ಸುಸಜ್ಜಿತವಾದ ಟ್ರಕ್ ಟರ್ಮಿನಲ್ ನಿರ್ಮಿಸುವ ಕನಸು ದಶಕಗಳು ಕಳೆದರೂ ನನಸಾಗಿಲ್ಲ. ಜಿಲ್ಲೆಗೆ ಸರಕು ಹೊತ್ತು ತರುವ ಲಾರಿಗಳ ಚಾಲಕರು ರಸ್ತೆ ಬದಿಯಲ್ಲೇ ಸಮಯ ಕಳೆಯುತ್ತಿದ್ದಾರೆ. ಬಿ.ಎಸ್. ಯಡಿಯೂರಪ್ಪ ಅವರು 2008-11ರ ಅವಧಿಯಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಟ್ರಕ್ ಟರ್ಮಿನಲ್ ನಿರ್ಮಿಸುವ ಪ್ರಸ್ತಾಪಕ್ಕೆ ಮತ್ತೆ ಜೀವ ಬಂದಿತ್ತು. ಮಾಚೇನಹಳ್ಳಿ ಕೈಗಾರಿಕಾ ಪ್ರದೇಶ, ಸಾಗರ ರಸ್ತೆ, ಸೋಮಿನಕೊಪ್ಪ ರಸ್ತೆಯಲ್ಲಿ ಸ್ಥಳ ಹುಡುಕಾಟವೂ ನಡೆದಿತ್ತು. ಆದರೆ, ಯೋಜನೆ ನನೆಗುದಿಗೆ ಬಿದಿತ್ತು. ಡಿ.ದೇವರಾಜ ಅರಸು …
Read More »ಮೇ 19ರಂದು ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ
ಮಡಿಕೇರಿ: ಮೇ 19ರಂದು ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ಘೋಷಿಸಿದ್ದಾರೆ. ಎಸ್ ಎಸ್ ಎಸ್ ಎಲ್ ಸಿ ಫಲಿತಾಂಶ ಮೇ ಮೂರನೇ ವಾರದಲ್ಲಿ ಪ್ರಕಟಗೊಳ್ಳಲಿದೆ ಎಂದು ಹೇಳಲಾಗುತ್ತಿತ್ತು. ಆದ್ರೇ ನಿರ್ಧಿಷ್ಟ ದಿನಾಂಕ ಘೋಷಣೆಯಾಗಿರಲಿಲ್ಲ. ಇದೀಗ ಸಚಿವ ಬಿ.ಸಿ ನಾಗೇಶ್ ಅವರು, ಮೇ.19ರಂದು ಎಸ್ ಎಸ್ ಎಲ್ ಸಿ ಫಲಿತಾಂಶವನ್ನು …
Read More »ಕೆಜಿಎಫ್ ಚಾಪ್ಟರ್ 2 ಚಿತ್ರ ಮೀರಿಸಿ ದಾಖಲೆ ಬರೆದ ಪವರ್ ಸ್ಟಾರ್ ಜೇಮ್ಸ್ ಸಿನಿಮಾ!
ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಬಿಗ್ ಸ್ಟಾರ್ ಸಿನಿಮಾಗಳು ಬಿಡುಗಡೆ ಆದ್ಮಲೇ ಒಂದಲ್ಲ ಒಂದು, ರೆಕಾರ್ಡ್ಗಳನ್ನು ಮಾಡೋದು ಪ್ರತಿಷ್ಠೆಯ ಪ್ರಶ್ನೆಯಾಗುತ್ತಿದೆ. ಹೌದು ಕನ್ನಡ ಸಿನಿಮಾಗಳ ಬಗ್ಗೆ ಪರಭಾಷೆಯ ನಟರು, ಕನ್ನಡ ಚಿತ್ರಗಳ ಅದ್ದೂರಿ ಮೇಕಿಂಗ್ ಹಾಗೂ ಕ್ವಾಲಿಟಿ ಜೊತೆಗೆ ಬಾಕ್ಸ್ ಆಫೀಸ್ ಕಲೆಕ್ಷನ್ ಬಗ್ಗೆ ಮಾತನಾಡುತ್ತಿದ್ದಾರೆ. ಅದಕ್ಕೆ ಕಾರಣ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅಭಿನಯದ ಜೇಮ್ಸ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಕೆಜಿಎಫ್ ಚಾಪ್ಟರ್ 2 ಸಿನಿಮಾಗಳು ಕಾರಣ. ಆದರೆ, …
Read More »ಬಸವ, ರಾಜಾಹುಲಿ ,ಗಪ ಚುಪ ಚರ್ಚೆ
ಬೆಂಗಳೂರು,ಮೇ 13- ಸಚಿವ ಸಂಪುಟ ವಿಸ್ತರಣೆ, ವಿಧಾನಪರಿಷತ್ ಹಾಗೂ ರಾಜ್ಯಸಭೆ ಚುನಾವಣೆ , ಅಭ್ಯರ್ಥಿಗಳ ಆಯ್ಕೆ ಮತ್ತು ದೆಹಲಿ ಪ್ರವಾಸ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜೊತೆ ಮಾತುಕತೆ ನಡೆಸಿದರು. ಕಳೆದ ರಾತ್ರಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ಕುಮಾರ್ ಕಟೀಲ್ ಜೊತೆ ಮಾತುಕತೆ ನಡೆಸಿದ ಬೆನ್ನಲ್ಲೇ ಇಂದು ಬೆಳಗ್ಗೆ ಕಾವೇರಿ ನಿವಾಸಕ್ಕೆ ಆಗಮಿಸಿದ ಬೊಮ್ಮಾಯಿ ಅವರು, ಬಿಎಸ್ವೈ ಜೊತೆ ಸುಮಾರು 20 ನಿಮಿಷಕ್ಕೂ ಹೆಚ್ಚು …
Read More »ಹಿಂದೂಗಳು ಸತ್ತರೇ, ಹೂಳಲು ನಿಮ್ಮ ಮನೆಗೆ ಬರ್ಬೇಕಾ – ಸಿದ್ದು ವಿರುದ್ಧ ಮುತಾಲಿಕ್ ಕಿಡಿ
ಬಾಗಲಕೋಟೆ: ಚುನಾವಣೆಯಲ್ಲಿ ಗೆದ್ದು 6 ತಿಂಗಳಲ್ಲಿ ಹಿಂದೂ ರುದ್ರಭೂಮಿಯನ್ನು ಮುಸ್ಲಿಂ ಸಮೂದಾಯಕ್ಕೆ ಕೊಟ್ಟಿದ್ದಿರಾ. ಹಾಗಾದರೆ ಹಿಂದೂಗಳು ಸತ್ತರೇ, ಹೂಳಲು ನಿಮ್ಮ ಮನೆಗೆ ಬರಬೇಕಾ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದರು. ಬಾದಾಮಿ ಪಟ್ಟಣದ ಹಿಂದೂ ಸಮಾಜ ಉತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈಗಾಗಲೇ ಮುಸ್ಲಿಮರಿಗೆ ಹನ್ನೆರೆಡು ಎಕರೆ ಜೊತೆಗೆ, ನಮ್ಮದು ಮೂರು ಎಕರೆ ಸೇರಿಸಿ ಕೊಟ್ಟಿದ್ದೀರಿ. ಇದರಿಂದಾಗಿ ಬಾದಾಮಿ ಕ್ಷೇತ್ರದಲ್ಲಿ ಒಂದೂ ಹಿಂದೂಗಳ …
Read More »ಜಾತ್ರೆಗಳು ನಮ್ಮ ಭವ್ಯ ಪರಂಪರೆಯನ್ನು ಬಿಂಬಿಸುತ್ತವೆ- ಶಾಸಕ ಬಾಲಚಂದ್ರ ಜಾರಕಿಹೊಳಿ.
ರಾಜಾಪೂರ- ಗ್ರಾಮ ದೇವತೆ ಜಾತ್ರೆಗೆ ಚಾಲನೆ ನೀಡಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ. ಮೂಡಲಗಿ- ಜಾತ್ರಾ ಉತ್ಸವಗಳು ನಮ್ಮ ಭಾರತೀಯ ಪರಂಪರೆ, ಇತಿಹಾಸ ವನ್ನು ಬಿಂಬಿಸುತ್ರಿವೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ತಾಲ್ಲೂಕಿನ ರಾಜಾಪೂರ ಗ್ರಾಮದಲ್ಲಿ ನಡೆಯುತ್ತಿರುವ ಗ್ರಾಮ ದೇವತೆ ಹಾಗೂ ಚೂನಮ್ಮದೇವಿ ಜಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜೊತೆಗೆ ಜಾತ್ರೆಗಳು ನಮ್ಮ ಸಾಂಸ್ಕೃತಿಕ ರಾಯಭಾರಿಯಾಗಿವೆ ಎಂದು ಅವರು ತಿಳಿಸಿದರು. …
Read More »ಬೆಕ್ಕಿನ ಮರಿ ಎಂದು ಚಿರತೆ ಮರಿ ಮನೆಗೆ ಹೊತ್ತು ತಂದ ಬಾಲಕ..
ನಾಸಿಕ್(ಮಹಾರಾಷ್ಟ್ರ): ಬೆಕ್ಕಿನ ಮರಿ ಎಂದುಕೊಂಡು ಚಿರತೆ ಮರಿವೊಂದನ್ನ ಬಾಲಕನೊಬ್ಬ ಮನೆಗೆ ಕರೆತಂದಿರುವ ಘಟನೆ ಮಹಾರಾಷ್ಟ್ರದ ನಾಸಿಕ್ನಲ್ಲಿ ನಡೆದಿದೆ. ಇದರಿಂದ ಕುಟುಂಬಸ್ಥರು ಕೆಲ ಕಾಲ ದಿಢೀರ್ ಶಾಕ್ಗೊಳಗಾಗಿದ್ದಾರೆ. ಬೆಕ್ಕಿನ ಮರಿ ಎಂದು ಚಿರತೆ ಮರಿ ಮನೆಗೆ ಹೊತ್ತು ತಂದ ಬಾಲಕನಾಸಿಕ್ನ ಮಾಲೆಗಾಂವ್ನ ರೈತ ಠಾಕ್ರೆ ಕುಟುಂಬವಾಗಿದ್ದು, ಇವರು ವಾಸ ಮಾಡುವ ಮನೆಯ ಸ್ವಲ್ಪ ದೂರದಲ್ಲಿ ಚಿರತೆವೊಂದು ಮರಿಗೆ ಜನ್ಮ ನೀಡಿದೆ. ಆಟವಾಡುತ್ತ ಅಲ್ಲಿಗೆ ತೆರಳಿರುವ ಬಾಲಕ ಅದು ಬೆಕ್ಕಿನ ಮರಿ ಎಂದುಕೊಂಡು ಮನೆಗೆ …
Read More »
Laxmi News 24×7