Breaking News

Daily Archives: ಮೇ 15, 2022

: ಮೈಸೂರಿನ ಮಾನಸಗಂಗೋತ್ರಿಯ ಮಹಿಳಾ ಹಾಸ್ಟೆಲ್ ನಲ್ಲಿ ಏನ್ರೀ ಇದು ಕಥೆ..!

ಮೈಸೂರು: ಮೈಸೂರಿನ ಮಾನಸಗಂಗೋತ್ರಿಯ ಮಹಿಳಾ ವಿದ್ಯಾರ್ಥಿನಿಲಯ ಸಮಸ್ಯೆಯ ಆಗರವಾಗಿದೆ. ಸದ್ಯ ಇಲ್ಲಿನ ವಿದ್ಯಾರ್ಥಿನಿಯರ ಗೋಳು ಹೇಳತೀರದಾಗಿದ್ದು,ಹಾಸ್ಟೆಲ್‌ ಮುಂದೆ ನಿಂತು ಮೈಸೂರು ವಿವಿ ಕುಲಪತಿಗೆ ಧಿಕ್ಕಾರ ಹಾಕಿದ್ದಾರೆ.   ಅಂದ ಹಾಗೇ ಮಾನಸಗಂಗೋತ್ರಿಯ ಆವರಣದಲ್ಲಿರುವ ಬ್ಲಾಕ್ 1 (ಕಟ್ಟಡ) ರಲ್ಲಿರುವ ಮಹಿಳಾ ವಿದ್ಯಾರ್ಥಿನಿಲಯದ ಹಲವು ಕೊಠಡಿಗಳು ಕಳೆದ ಕೆಲವು ದಿನಗಳಿಂದ ಅವ್ಯವಸ್ಥೆಯಿಂದ ಕೂಡಿವೆ. ಅದರಲ್ಲೂ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ನಿಲಯದ ಕೊಠಡಿಗಳಿಗೆ ನೀರು ನುಗ್ಗಿದೆ.ಅಲ್ಲದೆ, ಕೆಲ ಕೊಠಡಿಗಳ ಗೋಡೆಗಳು ಬಿರುಕು …

Read More »

35 ವಯೋಮಾನದವರಿಗೆ ಆದ್ಯತೆ.. 75 ದಾಟಿದವರಿಗೆ ಕೋಕ್ : ಇದು ಕಾಂಗ್ರೆಸ್ ನ ತೀರ್ಮಾನ

ಉದಯಪುರ: ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವು, ಪಕ್ಷ ಸಂಘಟನೆ ಮಾಡುವ ಉದ್ದೇಶದಿಂದ ರಾಜಸ್ಥಾನದಲ್ಲಿ ಕಾಂಗ್ರೆಸ್ ಚಿಂತನಾ ಶಿಬಿರ ನಡೆಯುತ್ತಿದೆ. ಈ ಕಾರ್ಯಕ್ರಮದಲ್ಲಿ ರಾಜ್ಯದಿಂದ ಸಿದ್ದರಾಮಯ್ಯ, ಡಿಕೆಶಿವಕುಮಾರ್, ಮಲ್ಲಿಕಾರ್ಜುನ್ ಖರ್ಗೆ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ಇನ್ನು ಗುಲಾಬ್ ನಬಿ, ಹಿರಿಯ ನಾಯಕ ಪಿ ಚಿದಂಬರಂ, ಪ್ರಿಯಾಂಕ ಗಾಂಧಿ ವಾದ್ರಾ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ದೇಶದ ವಿವಿದೆಡೆಯ ನಾಯಕರು ಒಟ್ಟಿಗೆ ಸೇರಿ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಚಿಂಥನ ಮಂಥನ …

Read More »

ಸೋಮವಾರ ಶಾಲೆ ಆರಂಭ, ಸಿಹಿಯೊಂದಿಗೆ ಮಕ್ಕಳಿಗೆ ಸ್ವಾಗತ

ಬೆಂಗಳೂರು,ಮೇ 15: ಕೋವಿಡ್‌ನಿಂದಾಗಿ ಕಳೆದ ಎರಡೂವರೆ ವರ್ಷಗಳಲ್ಲಿ ಶಾಲೆಗಳಲ್ಲಿ ಸರಿಯಾಗಿ ಭೌತಿಕ ತರಗತಿಗಳು ನಡೆದಿಲ್ಲ. ವಿದ್ಯಾರ್ಥಿಗಳು ಸಹ ಶೈಕ್ಷಣಿಕವಾಗಿ ಬಹಳ ಹಿಂದೆ ಉಳಿದಿದ್ದಾರೆ. ಇದರಿಂದಾಗಿ 2022-23 ನೇ ಶೈಕ್ಷಣಿಕ ವರ್ಷವನ್ನು ಮೇ 16ರಿಂದ ಪ್ರಾರಂಭಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಅದರಂತೆ ಮೇ 16ರ ಸೋಮವಾರ ಕಲಿಕಾ ಚೇತರಿಕೆ ಕಾರ್ಯಕ್ರಮ ಆರಂಭವಾಗಲಿದ್ದು ಮಕ್ಕಳನ್ನು ಬಹಳ ಸಂತೋಷದಿಂದ ಬರಮಾಡಿಕೊಳ್ಳಲು ಸರ್ಕಾರಿ ಶಾಲೆಗಳಲ್ಲಿ ಸಿಹಿ ಖಾದ್ಯವನ್ನು ನೀಡಲು ಶಿಕ್ಷಣ ಇಲಾಖೆ ಸೂಚಿಸಿದೆ. ಮಕ್ಕಳು ಶಾಲೆಗೆ …

Read More »

ಪ್ರಜ್ವಲ್​ ಅವರಿಗೆ ಎಂದು ಎಷ್ಟು ಸರಿ ಕೂಗ್ತೀರಾ, ನನಗೂ ಒಂದು ಸರಿ ಜೈಕಾರ ಹಾಕಿದ್ರೆ ನಿಮ್ ಗಂಟಲು ಹೋಗ್ಬಿಡ್ತಿತ್ತಾ?: ಶಾಸಕ ಶಿವಲಿಂಗೇಗೌಡ

ಹಾಸನ: ಪ್ರಜ್ವಲ್ ಅವರಿಗೆ, ಪ್ರಜ್ವಲ್ ಅವರಿಗೆ ಎಂದು ಎಷ್ಟು ಸಲ ಕೂಗುತ್ತೀರಾ ನಾನು ಇಲ್ಲೇ ಇದ್ದೀನಿ ಒಬ್ಬನಾದ್ರೂ ಜೈ ಕಾರ ಹಾಕೋದು ಬೇಡ್ವಾ ಎಂದು ಶಾಸಕ ಶಿವಲಿಂಗೇಗೌಡ ಅಸಮಾಧಾನ ಹೊರಹಾಕಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಮುಂಜಾನಳ್ಳಿಯಿಂದ ಒಬ್ಬ ಹುಡುಗ ಬಂದಿದ್ದಾನೆ. ಶಿವಲಿಂಗೇಗೌಡನಿಗೆ ಜೈ ಅಂದ್ರೆ ನಿನ್ನ ಗಂಟು ಹೋಗ್ಬಿಡುತ್ತಾ, ನಿಮ್ಮ ಪಿಎ ಒಬ್ಬ ಇದ್ದಾನೆ ಬೇಜಾರು ಮಾಡ್ಕೋಬೇಡಿ. ಅವನು ಹತ್ತು ಹುಡುಗರು ಕಟ್ಟಿಕೊಂಡು ಎಲ್ಲಿ ಹೋದರೂ ಹೀಗೆ ಕೂಗಿಸುತ್ತಾನೆ ಯಾಕೆ ಎಂದು …

Read More »

ಅಪಘಾತದಲ್ಲಿ ಪ್ರಿಯಕರ ಸಾವು- ಆಘಾತಗೊಂಡ ಪ್ರಿಯತಮೆ ಆತ್ಮಹತ್ಯೆ

ತುಮಕೂರು: ಪ್ರಿಯಕರನ ಸಾವಿನಿಂದ ಮನನೊಂದ ಯುವತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ತುಮಕೂರಿನಲ್ಲಿ ನಡೆದಿದೆ. ಧನುಷ್(23), ಸುಷ್ಮಾ(22) ಮದುವೆಯಾಗ ಬೇಕಾಗಿದ್ದ ಮೃತ ದುರ್ದೈವಿಗಳು. ಧನುಷ್ ಮತ್ತು ಸುಷ್ಮಾ ಕಳೆದ ಎರಡು ವರ್ಷಗಳಿಂದ ಪ್ರೀತಿಸಿ ಮದುವೆಗೆ ಮನೆಯವರನ್ನು ಒಪ್ಪಿಸಿದ್ದರು. ಆದರೆ ಮೇ 11 ರಂದು ಧನುಷ್ ಅಪಘಾತದಲ್ಲಿ ಸಾವನ್ನಪ್ಪಿದ್ದು, ಮೇ 14 ರಂದು ರಾತ್ರಿ ಸುಷ್ಮಾ ವಿಷ ಸೇವಿಸಿ ಸಾವನ್ನಪ್ಪಿದ್ದಾಳೆ. ತುಮಕೂರುನ ಮಸ್ಕಲ್ ಗ್ರಾಮದ ಧನುಷ್, ಮೇ 11 …

Read More »

ಸಿಎಂ ಕಾರ್ಯಕ್ರಮಕ್ಕೂ ತಟ್ಟಿತು ಲೋಡ್ ಶೆಡ್ಡಿಂಗ್ ಬಿಸಿ

ಧಾರವಾಡ: ಸಿಎಂ ಹಾಗೂ ಕೇಂದ್ರ ಹಾಗೂ ರಾಜ್ಯ ಸಚಿವರು ಭಾಗವಹಿಸಿದ್ದ ಉಳವಿ ಚನ್ನಬಸವೇಶ್ವರ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲೂ ವಿದ್ಯುತ್ ವ್ಯತ್ಯಯದ ಬಿಸಿ ಉಂಟಾಗಿದೆ. Advertisements ಧಾರವಾಡದಲ್ಲಿ ಇಂದು ಉಳವಿ ಚನ್ನಬಸವೇಶ್ವರರ ಕಂಚಿನ ಪುತ್ಥಳಿ ಅನಾವರಣ ಕಾರ್ಯಕ್ರಮ ಇತ್ತು. ಈ ಕಾರ್ಯಕ್ರಮಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಸೇರಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಚಿವ ಹಾಲಪ್ಪ ಆಚಾರ್ ಭಾಗವಹಿಸಿದ್ದರು. ಮೊದಲು ರೇಲ್ವೆ ಸ್ಟೇಷನ್ ರಸ್ತೆಯಲ್ಲಿ ಇರುವ ಚನ್ನಬಸವೇಶ್ವರ ಪುತ್ಥಳಿ ಅನಾವರಣ ಮಾಡಿದ …

Read More »

ಗಂಡನ ಜೊತೆ ಜಗಳ – ಸಾಯ್ತೀನಿ ಅಂತ ಕೆರೆಯಲ್ಲಿ ಕೂತ ಮಹಿಳೆ

ಬೆಂಗಳೂರು: ಸಾಮಾನ್ಯವಾಗಿ ಗಂಡ, ಹೆಂಡತಿ ಜಗಳ ಉಂಡು ಮಲಗುವರೆಗೂ ಅಂತ ಗಾದೆ ಮಾತಿದೆ. ಅದೆಷ್ಟೋ ದಂಪತಿಗಳು ಜಗಳವಾಡಿ ಸ್ವಲ್ಪ ಹೊತ್ತಿನಲ್ಲೇ ಸರಿಹೋಗಿ ಅನ್ಯೋನ್ಯವಾಗಿರುತ್ತಾರೆ. ಆದರೆ ಮಹಿಳೆಯೊಬ್ಬರು ಗಂಡನ ಜೊತೆಗೆ ಜಗಳವಾಡಿ ಸಾಯುತ್ತೇನೆ ಅಂತ ಕೆರೆಯಲ್ಲಿ ಕೂತ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೋರಮಂಗಲ 3ನೇ ಬ್ಲಾಕ್‍ನಲ್ಲಿ ಈ ಘಟನೆ ನಡೆದಿದ್ದು, ವಾಕಿಂಗ್ ಹೋಗುವ ವೇಳೆ ಗಂಡನೊಂದಿಗೆ ಮಹಿಳೆ ಜಗಳವಾಡಿದ್ದಾರೆ. ನಂತರ ಕೋಪ ಮಾಡಿಕೊಂಡು ಮಹಿಳೆ ನಾನು ಸಾಯುತ್ತೇನೆ ಎಂದು ಕೋರಮಂಗಲ ಮೂರನೇ ಬ್ಲಾಕ್ …

Read More »

ಕೋವಿಡ ಸಾವಿನ ಪರಿಹಾರ ಪಡೆಯಲು ನಕಲಿ ದಾಖಲೆ ಸೃಷ್ಟಿಸಿ ಪರಿಹಾರ ಪಡೆದಿದ್ದಾರೆ ಜೈಲು ಶಿಕ್ಷೆ , ಪರಿಹಾರ ಧನ ವಾಪಸ್!

ಕೋವಿಡ ಸಾವಿನ ಪರಿಹಾರ ಪಡೆಯಲು ನಕಲಿ ದಾಖಲೆ ಸೃಷ್ಟಿಸಿ ಪರಿಹಾರ ಪಡೆದಿದ್ದಾರೆ ಜೈಲು ಶಿಕ್ಷೆ , ಪರಿಹಾರ ಧನ ವಾಪಸ್! ಕೋವಿಡ ನಿಂದ ಜನ ತತ್ತರಿಸಿ ಹೋಗಿದ್ದು ಇಡಿ ಜಗತ್ತಿಗೆ ಗೊತ್ತು ಅದರಲ್ಲಿ ಸುಮಾರು ಜನ ಪ್ರಾಣ ಕೂಡ ಕಳೆದು ಕೊಂಡಿದ್ದಾರೆ, ಬರಿ ಜನ ಅಷ್ಟೇ ಅದರಲ್ಲಿ ಸುಮಾರು ಜನ ವೈದ್ಯರು, ನರ್ಸಿಂಗ್ ಸ್ಟಾಫ್, ಹಿರಿಯ ಕಿರಿಯ ವೈದ್ಯರು, ಸಹಾಯಾಯಕರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಸಹಾಯಕಿಯರು ಈ ರೀತಿ ಎಲ್ಲ …

Read More »

ಹುಬ್ಬಳ್ಳಿಯಲ್ಲಿ ಏಷ್ಯಾದಲ್ಲಿಯೇ ಅತಿದೊಡ್ಡ ಭಗವದ್ಗೀತಾ ಜ್ಞಾನ ದಿವ್ಯಕಲಾಲೋಕ ಅನಾವರಣ

ಧಾರವಾಡ : ಮುಗಿಲೆತ್ತರಕ್ಕೆ ತಲೆಯೆತ್ತಿರುವ ಕಟ್ಟಡ. ಒಳಗೆ ಹೋದಂತೆ ನಿಸರ್ಗ ಸೌಂದರ್ಯ ಉಣಬಡಿಸುವ ಪರಿಸರ. ಮುಂದೆ ಹೆಜ್ಜೆ ಹಾಕುತ್ತಿದ್ದಂತೆ ಆಧ್ಯಾತ್ಮಿಕ ಜೀವನಕ್ಕೆ ಅಗತ್ಯವಾದ ಚಿತ್ರಣಗಳು. ಇದೆಲ್ಲದಕ್ಕೂ ಸಾಕ್ಷಿಯಾಗಿರುವುದು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ವತಿಯಿಂದ ನಿರ್ಮಾಣ ಮಾಡಿರುವ ಜ್ಞಾನಲೋಕ ಮ್ಯೂಸಿಯಂ/ಭಗವದ್ಗೀತಾ ಜ್ಞಾನ ದಿವ್ಯಕಲಾಲೋಕ. ಇಷ್ಟು ದಿನ ವಾಣಿಜ್ಯನಗರಿಯಾಗಿ ಬಿಂಬಿತವಾಗಿದ್ದ ಹುಬ್ಬಳ್ಳಿ ಇನ್ಮುಂದೆ ಧಾರ್ಮಿಕ ಹಾಗೂ ಆಧ್ಯಾತ್ಮಿಕ ನಗರವಾಗಿ ಹೊರಹೊಮ್ಮಲಿದೆ. ಇಲ್ಲಿನ ಬೈರಿದೇವರಕೊಪ್ಪದ ಗಾಮನಗಟ್ಟಿ ರಸ್ತೆಯಲ್ಲಿ ನಿರ್ಮಾಣಗೊಂಡಿರುವ ಈ ಮ್ಯೂಸಿಯಂ ಏಷ್ಯಾದಲ್ಲಿಯೇ ಅತಿದೊಡ್ಡ ಮ್ಯೂಸಿಯಂ …

Read More »

ನಂಗು ಬೇಕು ದ್ರಾಕ್ಷಿ ನಂಗೂ ಬೇಕು..! ರಸ್ತೆ ಬದಿ ಬಿದ್ದಿದ್ದ ದ್ರಾಕ್ಷಿಗಾಗಿ ಮುಗಿಬಿದ್ದ ಜನ!

ಮಂಡ್ಯ: ಯಾವುದೇ ವಸ್ತು ರಸ್ತೆಯಲ್ಲಿ ಬಿದ್ದಿದ್ದಾಗ ಎತ್ತಿಕೊಳ್ಳೋದಕ್ಕೆ ಹಿಂದೆ ಮುಂದೆ ನೋಡೋ ಜನರು ಮಾತ್ರ, ರಸ್ತೆ ಪಕ್ಕದಲ್ಲಿ ಬಿದ್ದಿದ್ದ ರಾಶಿ ರಾಶಿ ದ್ರಾಕ್ಷಿಯನ್ನು ನನಗೂ ಬೇಕು.. ನನಗೂ ಬೇಕು ಎಂಬುದಾಗಿ ನಾ ಮುಂದು, ತಾ ಮುಂದು ಎನ್ನುವಂತೆ ಮುಗಿಬಿದ್ದು ಬಾಚಿಕೊಂಡು ಹೋಗಿರೋ ಘಟನೆ, ಮಂಡ್ಯದಲ್ಲಿ ನಡೆದಿದೆ.   ಮಂಡ್ಯ ಜಿಲ್ಲೆಯ ವಿಸಿ ಫಾರ್ಮ್ ಗೇಟ್ ಬಳಿಯ ರಸ್ತೆಯ ಪಕ್ಕದಲ್ಲಿಯೇ ರಾಶಿ ರಾಶಿ ದ್ರಾಕ್ಷಿಯನ್ನು ಯಾರೋ ಸುರಿದು ಹೋಗಿದ್ದರು. ಹೀಗೆ ರಸ್ತೆಯ …

Read More »