ಪಣಜಿ: ಗೋವಾ ಬೀಚ್ನಲ್ಲಿ ಪ್ರವಾಸಿಗನೊಬ್ಬ ಅಜಾಗರೂಕತೆಯಿಂದ ಕಾರನ್ನು ಚಲಾಯಿಸಿ, ಪೇಚಿಗೆ ಸಿಲುಕಿದ ಘಟನೆ ಶುಕ್ರವಾರ (ಜೂ.17) ನಡೆದಿದೆ. ದೆಹಲಿ ಮೂಲದ ಲಲಿತ್ಕುಮಾರ್ ದಯಾಳ್ ಎಂಬಾತ ಬಾಡಿಗೆಗೆ ಕಾರನ್ನು ಪಡೆದು ಕಡಲ ತೀರದಲ್ಲಿ ಚಲಾಯಿಸಿದ್ದಾನೆ. ಈ ವೇಳೆ ಕಾರು ನೀರಿನಲ್ಲಿ ಮುಳುಗಿದೆ. ಘಟನೆ ಹಣಜುಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಲಲಿತ್ಕುಮಾರ್ ಚಲಾಯಿಸುತ್ತಿದ್ದ ಕ್ರೇಟಾ ಕಾರು, ಶೇಟಯೆ ವಾಡಾದ ಸಂಗೀತಾ ಗವಂಡಾಳಕರ್ ರವರಿಗೆ ಸೇರಿದೆ ಎಂದು …
Read More »Daily Archives: ಜೂನ್ 18, 2022
ಮತ್ತಷ್ಟು ಕ್ಷೀಣಿಸಿದ ಸೋನಿಯಾ ಆರೋಗ್ಯ; ಮೂಗಿನಲ್ಲಿ ರಕ್ತಸ್ರಾವ
ನವದೆಹಲಿ; ಕೊವಿಡ್ ಹಿನ್ನೆಲೆಯಲ್ಲಿ ವಾರದ ಹಿಂದೆ ನವದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿರುವ ಕಾಂಗ್ರೆಸ್ ನಾಯಕ ಸೋನಿಯಾಗಾಂಧಿ ಆರೋಗ್ಯದಲ್ಲಿ ಮತ್ತಷ್ಟು ಏರುಪೇರಾಗಿದೆ. ಅವರಿಗೆ ಪಂಗಲ್ ಇನ್ಫೆಕ್ಷನ್ ಹೆಚ್ಚಾಗಿದ್ದು ಚಿಕಿತ್ಸೆ ಮುಂದವರೆಸಲಾಗುತ್ತಿದೆ ಎಂದು ಕಾಂಗ್ರೆಸ್ ಪ್ರಕಟಣೆಯಲ್ಲಿ ತಿಳಿಸಿದೆ. ಫಂಗಲ್ ಇನ್ಫೆಕ್ಷನ್ನಿಂದ ಸೋನಿಯಾಗಾಂಧಿಯವರ ಮೂಗಿನಿಂದ ರಕ್ತಸ್ರಾವವಾಗಿದೆ. ಶ್ವಾಸಕೋಶ ಸೋಂಕಿನಿಂದ ಬಳಲುತ್ತಿರುವ ಸೋನಿಯಾಗಾಂಧಿಯವರಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಅವರಿಗೆ ಕೊವಿಡ್ ಬಂದಿದ್ದರಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಕೊವಿಡ್ ನಂತರ ಅವರ ಆರೋಗ್ಯದಲ್ಲಿ ಏರುಪೇರಾಗುತ್ತಿದೆ ಎಂದು ತಿಳಿದುಬಂದಿದೆ.
Read More »ವಿವಿಧ ಇಲಾಖೆಗಳಲ್ಲಿನ ಗ್ರೂಪ್ ‘ಬಿ’, ‘ಸಿ’ ಹುದ್ದೆಗಳ ಅರ್ಹತಾ ಪಟ್ಟಿ ಪ್ರಕಟ
ಬೆಂಗಳೂರು, ಜೂ. 17: ಕರ್ನಾಟಕ ಲೋಕ ಸೇವಾ ಆಯೋಗ(ಕೆಪಿಎಸ್ಸಿ)ದಿಂದ ಅಧಿಸೂಚಿಸಲಾದ ವಿವಿಧ ಇಲಾಖೆಗಳಲ್ಲಿನ ಗ್ರೂಪ್ ‘ಬಿ’ ಮತ್ತು ‘ಸಿ’ ವೃಂದದ ಹುದ್ದೆಗಳ ನೇಮಕಾತಿ ಸಂಬಂಧ ಆಯುಷ್ ಇಲಾಖೆಯಲ್ಲಿನ ಫಾರ್ಮಸಿಸ್ಟ್ ಹುದ್ದೆಗಳ 1:3 ಅರ್ಹತಾ ಪಟ್ಟಿ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿನ ಸಹಾಯಕ ವೈಜ್ಞಾನಿಕ ಅಧಿಕಾರಿ ಹುದ್ದೆಗಳ ಹೆಚ್ಚುವರಿ ಆಯ್ಕೆಪಟ್ಟಿ ಪ್ರಕಟಿಸಲಾಗಿದೆ. ಅಭ್ಯರ್ಥಿಗಳ ಮಾಹಿತಿಗಾಗಿ ಕಟ್ಆಫ್ ಅಂಕಗಳನ್ನು ಆಯೋಗದ ವೆಬ್ಸೈಟ್ https://kpsc.kar.nic.in/List ನಲ್ಲಿ ಪ್ರಕಟಿಸಲಾಗಿದೆ ಎಂದು ಕೆಪಿಎಸ್ಸಿ ಅಧಿಕೃತ ಪ್ರಕಟನೆ …
Read More »ಸಾಲ ವಸೂಲಾತಿ ವೇಳೆ ದರ್ಪ ತೋರುವಂತಿಲ್ಲ: RBI ಗವರ್ನರ್ ಎಚ್ಚರಿಕೆ
ಮುಂಬೈ: ಸಾಲ ವಸೂಲಾತಿ ಏಜೆಂಟ್ ಗಳು ಬಳಸುವ ಕಠಿಣ ಕ್ರಮಗಳ ವಿರುದ್ಧ ಆರ್.ಬಿ.ಐ. ಗವರ್ನರ್ ಎಚ್ಚರಿಕೆ ನೀಡಿದ್ದಾರೆ. ಕೆಲವು ಸಾಲದಾತರು ತಮ್ಮ ವಸೂಲಾತಿ ಏಜೆಂಟ್ ಗಳ ಮೇಲೆ ಸಾಕಷ್ಟು ದೂರು ನೀಡಿದ್ದಾರೆ. ಏಜೆಂಟರ ಮೇಲೆ ನಿಯಂತ್ರಣಗಳಿಲ್ಲದಿದ್ದರೆ ಕಿರುಕುಳ ನೀಡುತ್ತಾರೆ ಎನ್ನಲಾಗಿದ್ದು, ಇಂತಹ ಸಂದರ್ಭದಲ್ಲಿ ನಿಯಂತ್ರಿತ ಘಟಕಗಳು ಭಾಗಿಯಾಗಿರುವ ಪ್ರಕರಣಗಳಲ್ಲಿ ಆರ್.ಬಿ.ಐ. ಗಂಭೀರ ಕ್ರಮ ತೆಗೆದುಕೊಳ್ಳುತ್ತದೆ ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ ದಾಸ್ ಹೇಳಿದ್ದಾರೆ. ಹೊತ್ತಲ್ಲದ ಹೊತ್ತಲ್ಲಿ ಕರೆ ಮಾಡುವುದು, ಅಸಭ್ಯ …
Read More »ಖಾನಾಪೂರ ತಾಲೂಕಿನ ಮದುವೆಯಾದ ಏಳೇ ದಿನಕ್ಕೆ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ
ಬೆಳಗಾವಿ: ಮದುವೆಯಾದ ಏಳೇ ದಿನಕ್ಕೆ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಖಾನಾಪೂರ ತಾಲೂಕಿನ ಲಕ್ಕೇಬೈಲ್ ಗ್ರಾಮದಲ್ಲಿ ನಡೆದಿದೆ. ಖಾನಾಪೂರ ತಾಲೂಕಿನ ಲಕ್ಕೇಬೈಲ್ ಗ್ರಾಮದ ದೇಮಪ್ಪ ಅರ್ಜುನ್ ಸನದಿ (23) ಮೃತ ಯುವಕ. ಮೃತ ದೇಮಪ್ಪ ಕಳೆದ ವಾರವಷ್ಟೇ ತನ್ನ ಸೋದರತ್ತೆಯ ಮಗಳನ್ನು ಮದುವೆಯಾಗಿದ್ದನು. ತನ್ನ ಸಂಬಂಧಿಕರ ಮನೆಗೆ ಹೋಗಿ ರಾತ್ರಿ ಮನೆಗೆ ಮರಳಿದ್ದ ಬಳಿಕ ಮಧ್ಯರಾತ್ರಿ ಮಲಗುವ ಕೊಠಡಿಯಲ್ಲಿ ನೇಣು ಹಾಕಿಕೊಂಡು ಸಾವಿಗೆ ಶರಣಾಗಿದ್ದಾನೆ. ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ …
Read More »ರಾತ್ರಿ 10 ರಿಂದ ಬೆಳಿಗ್ಗೆ 6 ತನಕ ಧಾರ್ಮಿಕ ಸ್ಥಳ, ಪಬ್,ರೆಸ್ಟೋರೆಂಟ್ಗಳಲ್ಲಿ ಧ್ವನಿವರ್ಧಕ ಬ್ಯಾನ್: ಹೈಕೋರ್ಟ್
ಬೆಂಗಳೂರು:ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆಯವರೆಗೆ ಧ್ವನಿವರ್ಧಕಗಳ ಬಳಕೆಗೆ ಈ ಹಿಂದೆ ಹೊರಡಿಸಿದ್ದ ನಿಷೇಧವನ್ನು ಜಾರಿಗೊಳಿಸುವಂತೆ ಕರ್ನಾಟಕ ಹೈಕೋರ್ಟ್ ಶುಕ್ರವಾರ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಪಬ್ಗಳು, ರೆಸ್ಟೋರೆಂಟ್ಗಳು ಮತ್ತು ಧಾರ್ಮಿಕ ಸ್ಥಳಗಳು ಸೇರಿದಂತೆ ಎಲ್ಲಾ ಧ್ವನಿವರ್ಧಕಗಳ ಮೇಲೆ ನಿಷೇಧ ಹೇರಲಾಗಿದೆ. ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್.ಕಿಣಗಿ ಅವರ ವಿಭಾಗೀಯ ಪೀಠವು ಧ್ವನಿವರ್ಧಕಗಳು, ಸಾರ್ವಜನಿಕ ವಿಳಾಸ ವ್ಯವಸ್ಥೆಗಳು ಮತ್ತು ಸಂಗೀತ …
Read More »ಆಹಾರ ಮತ್ತು ನಾಗರಿಕ ಸರಬರಾಜು ನಿಗಮದಲ್ಲಿನ ಭ್ರಷ್ಟಾಚಾರ, ಗೋಣಿಚೀಲ ಗೋಲ್ಮಾಲ್!;
ಬೆಂಗಳೂರು ಹೆಸರಿಗೆ ಟೆಂಡರ್…! ಆದರೆ ಖರೀದಿಯೇ ಆಗಲ್ಲ. ರೈತರಿಗೆ ಹಣ ಪಾವತಿಯಾಗೋದು ಲೆಕ್ಕದಲ್ಲಷ್ಟೇ. ಆಹಾರ ಮತ್ತು ನಾಗರಿಕ ಸರಬರಾಜು ನಿಗಮದಲ್ಲಿನ ಭ್ರಷ್ಟಾಚಾರದ ಪರಿಯಿದು. ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿಸುವ ರಾಗಿ, ಭತ್ತ ಮತ್ತು ಮೆಕ್ಕೆಜೋಳ ರೈತರಿಗೆ ಉಚಿತವಾಗಿ ಗೋಣಿಚೀಲ (ಗನ್ನಿ ಬ್ಯಾಗ್) ವಿತರಣೆ ಹೆಸರಿನಲ್ಲಿ ಅಕ್ರಮ ನಡೆದಿದೆ. ರೈತರಿಗೆ ಚೀಲವನ್ನೂ ಕೊಡದೆ, ಹಣವನ್ನೂ ಕೊಡದೆ, ಕೇಂದ್ರ ಸರ್ಕಾರದಿಂದ ಬಿಡುಗಡೆಯಾದ ಕೋಟಿಗಟ್ಟಲೆ ದುಡ್ಡನ್ನು ರೈತರ ಹೆಸರೇಳಿಕೊಂಡು ನಿಗಮದ ಅಧಿಕಾರಿಗಳೇ ಜೇಬಿಗಿಳಿಸಿದ್ದಾರೆ. …
Read More »ಯಾರಾಗಲಿದ್ದಾರೆ ಬಿಜೆಪಿಯ ರಾಷ್ಟ್ರಪತಿ ಅಭ್ಯರ್ಥಿ?
ರಾಷ್ಟ್ರಪತಿ ಚುನಾವಣೆಗೆ ಪ್ರತಿಪಕ್ಷಗಳಲ್ಲಾ ಸೇರಿ ಮೀಟಿಂಗ್ ಮಾಡಿ ರಣತಂತ್ರ ರೂಪಿಸಿದ್ರೆ ಇತ್ತ ಆಡಳಿತ ರೂಢ ಬಿಜೆಪಿ ಈ ಬಾರಿ ಕೂಡ ನಮ್ಮ ಪಕ್ಷದವರೇ ರಾಷ್ಟ್ರಪತಿ ಆಗ್ಬೇಕು ಅಂತ ಪ್ರತಿತಂತ್ರ ಹೆಣೀತಿದೆ. ಬಿಜೆಪಿ ಅಭ್ಯರ್ಥಿಯಾಗಿ ಈಗಿರೋ ರಾಮನಾಥ್ ಕೋವಿಂದ್ ಅವರೇ ಮತ್ತೆ ಸ್ಪರ್ಧೆ ಮಾಡೋದು ಸದ್ಯ ದೂರದ ಮಾತು. ಹಾಗಾಗಿ ಹೊಸ ಅಭ್ಯರ್ಥಿ ಯಾರು ಅನ್ನೋದೆ ಈಗ ಬಿಜೆಪಿ ವಲಯದಲ್ಲಿ ಮೂಡಿರೋ ಕುತೂಹಲ. ಸದ್ಯಕ್ಕೆ ಪ್ರಧಾನಿ ಮೋದಿ G-7 ದೇಶಗಳ ಸಭೆಗೆ …
Read More »ನೂತನ D.H.O.ಆಗಿ ಡಾ.ಮಹೇಶ್ ಕೋಣಿ, ಸಂತಾನೋತ್ಪತ್ತಿ ಮಕ್ಕಳ ಅಭಿವೃದ್ಧಿ ಅಧಿಕಾರಿಗಳಾಗಿ ಡಾ. ಚೇತನ್ ಕಂಕನವಾಡಿ ನೇಮಕ
ಬೆಳಗಾವಿಯ ನೂತನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾಗಿ ಡಾ. ಮಹೇಶ ಕೋಣಿ ಹಾಗೂ ಜಿಲ್ಲಾ ಸಂತಾನೋತ್ಪತ್ತಿ ಮತ್ತು ಮಕ್ಕಳ ಅಧಿಕಾರಿಗಳಾಗಿ ಡಾ ಚೇತನ ಬಿ ಕಂಕಣವಾಡಿ ಅಧಿಕಾರ ಸ್ವಿಕರಿಸಿದರು ಹೌದು ಬೆಳಗಾವಿಯಲ್ಲಿ ದಿನಾಂಕ ಶುಕ್ರವಾರ ೧೭ ಜೂನ್ ರಂದು ನೂತನ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾಗಿ ಡಾ ಮಹೇಶ ಕೋಣಿ ಹಾಗೂ ಜಿಲ್ಲಾ ಸಂತಾನೋತ್ಪತ್ತಿ ಮತ್ತು ಮಕ್ಕಳ ಅಧಿಕಾರಿಗಳಾಗಿ ಡಾ ಚೇತನ ಬಿ ಕಂಕಣವಾಡಿ …
Read More »ಬಿಜೆಪಿ ಸೋಲಿಗೆ ಸಮರ್ಥನೀಯ ಉತ್ತರ ಕೊಟ್ಟ ಕಾರಜೋಳ
ಮೊನ್ನೆ ನಡೆದ ವಾಯವ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಹೊಳೆಯನ್ನು ಹರಿಸಿ ಚುನಾವಣೆಯಲ್ಲಿ ವಿಜಯವನ್ನು ಸಾಧಿಸಿದೆ. ಇದು ನಿಜವಾದ ಫಲಿತಾಂಶವಲ್ಲ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೊಳ ಹೇಳಿದ್ದಾರೆ. ಬೆಳಗಾವಿಯಲ್ಲಿ ಪ್ರವಾಸೀ ಮಂದಿರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ್ ಕಾಂಗ್ರೆಸ್ ವಾಯವ್ಯ ಶಿಕ್ಷಕರ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಹಣದ ಹೊಳೆಯನ್ನು ಹರಿಸಿ ಗೆಲುವನ್ನು ಸಾಧಿಸಿದೆ. ಈ ವೇಳೆ ಹಣದ ಹೊಳೆಯನ್ನು ಹೇಗೆ ಹರಿಸಿತು …
Read More »
Laxmi News 24×7