Breaking News

Daily Archives: ಜುಲೈ 4, 2022

164 ಶಾಸಕರ ಬೆಂಬಲದೊಂದಿಗೆ ಅಧಿಕಾರ ಭದ್ರಗೊಳಿಸಿದ ಶಿಂಧೆ

ವಿಶ್ವಾಸ ಮತಯಾಚನೆಯಲ್ಲಿ ಏಕನಾಥ್‌ ಶಿಂಧೆ ಸರ್ಕಾರವು ಬಹುಮತ ಪಡೆದುಕೊಂಡಿದೆ. ಮಹಾರಾಷ್ಟ್ರ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ್ದ ಶಿಂಧೆ ಬಣ ಇದೀಗ 164 ಶಾಸಕರ ಬೆಂಬಲದೊಂದಿಗೆ ಅಧಿಕಾರ ಭದ್ರಗೊಳಿಸಿದೆ. ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಹುಮತದ ಸಂಖ್ಯೆ 145 ಆಗಿತ್ತು. ಅಂದರೆ ಶಿಂಧೆ ಸರ್ಕಾರಕ್ಕೆ 145 ಶಾಸಕರ  ಬೆಂಬಲ ಬೇಕಿತ್ತು. ಆದರೆ ಅದಕ್ಕಿಂತ ಹೆಚ್ಚಿನ ಶಾಸಕರ ಬೆಂಬಲವನ್ನು ಪಡೆದುಕೊಂಡು ಗೆಲುವಿನ ನಗೆ ಬೀರಿದ್ದಾರೆ. ಏಕನಾಥ್ ಶಿಂಧೆ ಅವರ ಪರವಾಗಿ 164 ಮತಗಳು ಬಿದ್ದಿದ್ದು, ಪ್ರತಿಪಕ್ಷಗಳು ಕೇವಲ …

Read More »

ಬೇಗನೇ ಬೀದಿ ನಾಯಿಗಳ ಸಮಸ್ಯೆಗಳನ್ನು ಬಗೆಹರಿಸಬೇಕು.: ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ

ಬೆಳಗಾವಿಯ ರಾಮತೀರ್ಥ ನಗರ ಸೇರಿದಂತೆ ಮುಂತಾದ ಕಡೆ ಹೆಚ್ಚಾಗಿರುವ ಬೀದಿ ನಾಯಿಗಳ ಹಾವಳಿಯನ್ನು ತಡೆಗಟ್ಟುವಂತೆ ಮಹಾನಗರ ಪಾಲಿಕೆ ಆಯುಕ್ತರಿಗೆ ನಗರಸೇವಕ ಹಣಮಂತ ಕೊಂಗಾಲಿ ಮನವಿ ಮಾಡಿಕೊಂಡಿದ್ದಾರೆ. ಹೌದು ರಾಮತೀರ್ಥ ನಗರ, ಶಿವಬಸವ ನಗರ, ಶ್ರೀನಗರ ಮಹಾಂತೇಶ ನಗರ ಸೇರಿದಂತೆ ಮುಂತಾದ ಪ್ರದೇಶಗಳಲ್ಲಿ ಬೀದಿ ನಾಯಿಗಳ ಕಾಟ ಮಿತಿ ಮೀರಿದೆ. ಆದಷ್ಟು ಬೇಗನೇ ಬೀದಿ ನಾಯಿಗಳ ಸಮಸ್ಯೆಗಳನ್ನು ಬಗೆಹರಿಸಬೇಕು. ಸಂತಾನ ಹರಣ ಚಿಕಿತ್ಸೆ ಮತ್ತು ಸಾಕಾಣಿಕೆ ಕೇಂದ್ರಗಳನ್ನು ಪಾಲಿಕೆ ಅಡಿಯಲ್ಲಿ ಸ್ಥಾಪಿಸಿ …

Read More »

ಬೆಳಗಾವಿ ಅತೀ ದೊಡ್ಡ ಜಿಲ್ಲೆಯಾಗಿರೋದರಿಂದ ನನಗೆ ಇಲ್ಲಿ ಸೇವೆ ಮಾಡಿದ್ದು ತೃಪ್ತಿ: S,P,ಲಕ್ಷ್ಮಣ್ ನಿಂಬರಗಿ

ಬೆಳಗಾವಿಯಲ್ಲಿ ನಿರ್ವಹಿಸಿದ ಸೇವೆ ನನಗೆ ನಿಜಕ್ಕೂ ಸಂತೋಷವನ್ನು ತಂದಿದೆ. ಈ ವೇಳೆ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಸಹಕರಿಸಿದ ಎಲ್ಲರಿಗೂ ವಿಶೇಷವಾಗಿ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಬೆಳಗಾವಿ ನಿರ್ಗಮಿತ ಎಸ್‍ಪಿ ಲಕ್ಷ್ಮಣ್ ನಿಂಬರಗಿ ಹೇಳಿದ್ದಾರೆ. ಬೆಳಗಾವಿಯಿಂದ ವರ್ಗಾವಣೆಗೊಂಡ ಎಸ್‍ಪಿ ಲಕ್ಷ್ಮಣ್ ನಿಂಬರಗಿ ನೂತನ ಎಸ್‍ಪಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಡಾ. ಸಂಜೀವ್ ಪಾಟೀಲ್‍ಗೆ ಅಧಿಕಾರ ಹಸ್ತಾಂತರ ಮಾಡಿದರು. ಈ ವೇಳೆ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಕಳೆದ ಮೂರು ವರ್ಷಗಳಿಂದ …

Read More »

ನೂತನ ಬೆಳಗಾವಿ ಎಸ್‍ಪಿ ಡಾ.ಸಂಜೀವ್ ಪಾಟೀಲ್ ರಿಗೆ ಅಧಿಕಾರ ಹಸ್ತಾಂತರಿಸಿದರ ಲಕ್ಷ್ಮಣ ನಿಂಬರಗಿ

ನೂತನ ಬೆಳಗಾವಿ ಎಸ್‍ಪಿ ಡಾ.ಸಂಜೀವ್ ಪಾಟೀಲ್ ಅವರಿಗೆ ನಿರ್ಗಮಿತ ಎಸ್‍ಪಿ ಲಕ್ಷ್ಮಣ ನಿಂಬರಗಿ ಅಧಿಕಾರ ಹಸ್ತಾಂತರಿಸಿದರು. ಹೌದು ನಾಲ್ಕು ದಿನಗಳ ಹಿಂದೆ ಡಾ.ಸಂಜೀವ್ ಪಾಟೀಲ ಅವರನ್ನು ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿತ್ತು. ಹೀಗಾಗಿ ನಿಕಟಪೂರ್ವ ಎಸ್‍ಪಿ ಲಕ್ಷ್ಮಣ ನಿಂಬರಗಿ ಅವರು ನೂತನ ಎಸ್‍ಪಿ ಡಾ.ಸಂಜೀವ್ ಪಾಟೀಲ್ ಅವರಿಗೆ ಹೂಗುಚ್ಛ ನೀಡಿ ಅಧಿಕಾರ ಹಸ್ತಾಂತರಿಸಿದರು. ಬೆಂಗಳೂರು ಪಶ್ಚಿಮ ಡಿಸಿಪಿ ಆಗಿದ್ದ ಡಾ. ಸಂಜೀವ್ …

Read More »

ಸಿದ್ದರಾಮೋತ್ಸವ’ಕ್ಕೆ ಮೂಲ ಕಾಂಗ್ರೆಸ್ಸಿಗರಿಂದ ಅಸಮಾಧಾನ

ಬೆಂಗಳೂರು: ‘ಸಿದ್ದರಾಮೋತ್ಸವ’ಕ್ಕೆ ಮೂಲ ಕಾಂಗ್ರೆಸ್ಸಿಗರಿಂದ ಅಸಮಾಧಾನ ಭುಗಿಲೆದ್ದಿದ್ದು, ಸಿದ್ದರಾಮಯ್ಯ ಒಬ್ಬರೇ ನಾಯಕರಲ್ಲ ಇನ್ನೂ ಹಿರಿಯ ನಾಯಕರು ಇದ್ದಾರೆ ಎನ್ನುವ ಅರ್ಥದಲ್ಲಿ ಡಿಕೆಶಿ ಟಾಂಗ್ ಕೊಟ್ಟಿದ್ದಾರೆ. ತಮ್ಮ ಹುಟ್ಟುಹಬ್ಬವನ್ನು ಶಕ್ತಿ ಪ್ರದರ್ಶನದ ರೀತಿಯಲ್ಲಿ ಸಿದ್ದರಾಮಯ್ಯ ಆಚರಣೆ ಮಾಡಿಕೊಳ್ಳುತ್ತಿದ್ದು, ಆಗಸ್ಟ್ 3ರಿಂದ ‘ಸಿದ್ದರಾಮೋತ್ಸವ’ ಕಾರ್ಯಕ್ರಮ ಮಾಡಲು ದೇಶಪಾಂಡೆ ಸಮಿತಿ ನಿರ್ಧಾರ ಮಾಡಿದೆ. ಸುಮಾರು 5 ಲಕ್ಷ ಜನರನ್ನು ಸೇರಿಸಿ ಬೃಹತ್ ಕಾರ್ಯಕ್ರಮ ಮಾಡಲು ಸಮಿತಿ ತೀರ್ಮಾನಿಸಿದೆ. ಕಾಂಗ್ರೆಸ್ ಕಾರ್ಯಕರ್ತರು, ಸಿದ್ದರಾಮಯ್ಯ ಅಭಿಮಾನಿಗಳು ಈ ಕಾರ್ಯಕ್ರಮದಲ್ಲಿ …

Read More »

ಸಚಿವ ಸಂಪುಟ ವಿಸ್ತರಣೆ: ಈಗ ಯಾರಿಗೂ ಬೇಡ ಸ್ಥಾನ!

ಬೆಂಗಳೂರು: ರಾಷ್ಟ್ರಪತಿ ಚುನಾವಣೆ ಮುಗಿದ ಅನಂತರ ಸಚಿವ ಸಂಪುಟ ವಿಸ್ತರಣೆ ಮಾಡ ಲಾಗುತ್ತದೆ ಎನ್ನುವ ವದಂತಿ ರಾಜ್ಯ ಬಿಜೆಪಿಯಲ್ಲಿ ಕೇಳಿ ಬರುತ್ತಿದ್ದರೂ ಸ್ಥಾನಾಕಾಂಕ್ಷಿಗಳು ಮಾತ್ರ ಆಸಕ್ತಿಯನ್ನೇ ಕಳೆದುಕೊಂಡಿದ್ದಾರೆ. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆದಾಗಿ ನಿಂದಲೂ ಖಾಲಿ ಇರುವ ಸ್ಥಾನಗಳನ್ನು ಭರ್ತಿ ಮಾಡಲು ಆಕಾಂಕ್ಷಿಗಳು ನಿರಂತರ ಒತ್ತಡ ಹೇರುತ್ತಲೇ ಬಂದಿದ್ದರು. ರಾಜ್ಯದಲ್ಲಿ ಮೇಲಿಂದ ಮೇಲೆ ಉಪ ಚುನಾವಣೆಗಳು ಮತ್ತಿತರ ಹಲವಾರು ಕಾರಣಗಳಿಂದ ಬಿಜೆಪಿ ವರಿಷ್ಠರು ಸಂಪುಟ ವಿಸ್ತರಣೆಯನ್ನು ಮುಂದೂಡುತ್ತಲೇ ಬಂದಿದ್ದಾರೆ. ಈಗ ರಾಜ್ಯ …

Read More »

ಜು. 8ರ ವರೆಗೆ ರಾಜ್ಯಾದ್ಯಂತ ಉತ್ತಮ ಮಳೆ:

ಬೆಂಗಳೂರು: ರಾಜ್ಯಾದ್ಯಂತ ಮುಂದಿನ 5 ದಿನಗಳ ಕಾಲ (ಜು.8ರ ವರೆಗೆ) ಉತ್ತಮ ಮಳೆಯಾಗಲಿದೆ ಎಂದು ತಿಳಿಸಿರುವ ಹವಾಮಾನ ಇಲಾಖೆ, ಕರಾವಳಿ ಜಿಲ್ಲೆಗಳಿಗೆ ಆರೆಂಜ್‌ ಮತ್ತು ಉಳಿದೆಡೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜು.5 ಮತ್ತು 6ರಂದು ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಜು.8ರ ವರೆಗೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಬೆಂಗಳೂರು, ಮೈಸೂರು, ರಾಮನಗರ, ಮಂಡ್ಯ, ಚಾಮರಾಜನಗರ, …

Read More »

ಸಚಿವ ಸಂಪುಟ ವಿಸ್ತರಣೆ: ಈಗ ಯಾರಿಗೂ ಬೇಡ ಸ್ಥಾನ!

ಬೆಂಗಳೂರು: ರಾಷ್ಟ್ರಪತಿ ಚುನಾವಣೆ ಮುಗಿದ ಅನಂತರ ಸಚಿವ ಸಂಪುಟ ವಿಸ್ತರಣೆ ಮಾಡ ಲಾಗುತ್ತದೆ ಎನ್ನುವ ವದಂತಿ ರಾಜ್ಯ ಬಿಜೆಪಿಯಲ್ಲಿ ಕೇಳಿ ಬರುತ್ತಿದ್ದರೂ ಸ್ಥಾನಾಕಾಂಕ್ಷಿಗಳು ಮಾತ್ರ ಆಸಕ್ತಿಯನ್ನೇ ಕಳೆದುಕೊಂಡಿದ್ದಾರೆ. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆದಾಗಿ ನಿಂದಲೂ ಖಾಲಿ ಇರುವ ಸ್ಥಾನಗಳನ್ನು ಭರ್ತಿ ಮಾಡಲು ಆಕಾಂಕ್ಷಿಗಳು ನಿರಂತರ ಒತ್ತಡ ಹೇರುತ್ತಲೇ ಬಂದಿದ್ದರು. ರಾಜ್ಯದಲ್ಲಿ ಮೇಲಿಂದ ಮೇಲೆ ಉಪ ಚುನಾವಣೆಗಳು ಮತ್ತಿತರ ಹಲವಾರು ಕಾರಣಗಳಿಂದ ಬಿಜೆಪಿ ವರಿಷ್ಠರು ಸಂಪುಟ ವಿಸ್ತರಣೆಯನ್ನು ಮುಂದೂಡುತ್ತಲೇ ಬಂದಿದ್ದಾರೆ. ಈಗ ರಾಜ್ಯ …

Read More »

ಜುಲೈ ಅಂತ್ಯದೊಳಗೆ 15,000 ಶಾಲಾ ಶಿಕ್ಷಕರ ನೇಮಕಾತಿ ಆಯ್ಕೆ ಪಟ್ಟಿ ಪ್ರಕಟ – ಸಚಿವ ಬಿ.ಸಿ ನಾಗೇಶ್

ಬೆಂಗಳೂರು: 15,000 ಶಾಲಾ ಶಿಕ್ಷಕರ ನೇಮಕಾತಿ ( Teacher Recruitment 2022 ) ಸಂಬಂಧ ನಡೆದಂತ ಸ್ಪರ್ಧಾತ್ಮಕ ಪರೀಕ್ಷೆಯ ಫಲಿತಾಂಶವನ್ನು ಜುಲೈ ಅಂತ್ಯದೊಳಗೆ ಪ್ರಕಟಿಸಲಾಗುತ್ತದೆ ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.     ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, 15 ಸಾವಿರ ಶಿಕ್ಷಕರ ಪರೀಕ್ಷೆಯ ನಂತ್ರ ಮೌಲ್ಯ ಮಾಪನ ಕಾರ್ಯ ನಡೆಯುತ್ತಿದೆ. ಎರಡು ಪತ್ರಿಕೆಯ ಮೌಲ್ಯಮಾಪನ ಮುಗಿದಿದ್ದು, ಜುಲೈ ಕೊನೆಯ ವಾರ ಮೌಲ್ಯಮಾಪನ …

Read More »

ವೇಶ್ಯಾವಾಟಿಕೆಯ ಮಹಿಳೆಗೆ ಊರು ಬಿಟ್ಟು ಹೋಗುವಂತೆ ಗದರಿದ ಎಸ್​ಪಿ..

ಕೊಪ್ಪಳ: ವೇಶ್ಯಾವಾಟಿಕೆ ನಡೆಸಿ ಸಿಕ್ಕಿಬಿದ್ದಿದ್ದ ಮಹಿಳೆಯೊಬ್ಬರಿಗೆ ಎಸ್​ಪಿಯೊಬ್ಬರು ಊರು ಬಿಟ್ಟು ಹೋಗುವಂತೆ ಗದರಿದ್ದು, ಆ ವಿಡಿಯೋ ಸೋಷಿಯಲ್ ಮೀಡಿಯಾದಲ್ಲೂ ಹರಿದಾಡುತ್ತಿದ್ದು ಹಲವರ ಗಮನ ಸೆಳೆದಿದೆ. ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಈ ಎಚ್ಚರಿಕೆ ನೀಡಿದ್ದಾರೆ.   ಆರೋಪಿಗಳ ಪರೇಡ್ ವೇಳೆ ತಪ್ಪಿತಸ್ಥರ ವಿಚಾರಣೆ ನಡೆಸಿದ ಎಸ್​ಪಿ ಅರುಣಾಂಶು ಗಿರಿ, ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಮಹಿಳೆಯೊಬ್ಬರಿಗೆ ಈ ಎಚ್ಚರಿಕೆ ನೀಡಿದ್ದಾರೆ. ಒಂದಕ್ಕಿಂತ ಹೆಚ್ಚು ಸಲ ವೇಶ್ಯಾವಾಟಿಕೆ ಅಪರಾಧದಲ್ಲಿ ಸಿಕ್ಕಿಬಿದ್ದಿದ್ದರಿಂದ ಆಕೆಗೆ ಅವರು ಹೀಗೆ ಗದರಿದ್ದಾರೆ. …

Read More »