ರಾಯಚೂರು: ಜಿಲ್ಲಾ ಪೊಲೀಸರು ವಿಮೆ ಮಾಡಿಸದೆ ಓಡಿಸುತ್ತಿರುವ ಬೈಕ್ ಹಾಗೂ ಇತರ ವಾಹನಗಳನ್ನು ಹಿಡಿದು ವಿಮೆ ಮಾಡಿಸುತ್ತಿದ್ದಾರೆ. ವಿಮೆ ಇಲ್ಲದ್ದಕ್ಕೆ ಬೈಕ್ ಹಿಡಿದು ಪೊಲೀಸ್ ಠಾಣೆಗೆ ತಂದು ವಿಮೆ ಮಾಡಿದ್ದಕ್ಕೆ ಸವಾರನೊಬ್ಬ ಪೊಲೀಸರ ಮುಂದೆಯೇ ಕಣ್ಣೀರಿಟ್ಟ ಪ್ರಸಂಗ ನಡೆದಿದೆ. ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಪೊಲೀಸರು ವಾಹನಗಳ ವಿಮೆ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈವರೆಗೆ 400ಕ್ಕೂ ಹೆಚ್ಚು ಬೈಕ್ಗಳನ್ನು ಜಪ್ತಿ ಮಾಡಿರುವ ಪೊಲೀಸರು ಎಲ್ಲಾ ಬೈಕ್ಗಳಿಗೂ ವಿಮೆ ಮಾಡಿಸಿದ್ದಾರೆ. ನಗರದ ಎಸ್ಪಿ ಕಚೇರಿ …
Read More »Monthly Archives: ಜುಲೈ 2022
ಮಂಗಳೂರಿನಲ್ಲಿ ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಮಾರುತ್ತಿದ್ದ 12 ವಿದ್ಯಾರ್ಥಿಗಳ ಬಂಧನ
ಮಂಗಳೂರು: ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ 12 ಮಂದಿ ವಿದ್ಯಾರ್ಥಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಶಾನೂಫ್ ಅಬ್ದುಲ್ ಗಫೂರ್(21), ಮೊಹಮ್ಮದ್ ರಸೀನ್(22), ಗೋಕುಲ ಕೃಷ್ಣನ್(22), ಶಾರೂನ್ ಆನಂದ(19), ಅನಂತು ಕೆ.ಪಿ(18), ಅಮಲ್(21), ಅಭಿಷೇಕ(21), ನಿದಾಲ್(21), ಶಾಹೀದ್ ಎಂ.ಟಿ.ಪಿ(22), ಫಹಾದ್ ಹಬೀಬ್(22), ಮೊಹಮ್ಮದ್ ರಿಶಿನ್(22), ರಿಜಿನ್ ರಿಯಾಜ್(22) ಬಂಧಿತರು. ಬಂಧಿತ ವಿದ್ಯಾರ್ಥಿಗಳೆಲ್ಲರೂ ಕೇರಳ ರಾಜ್ಯದವರಾಗಿದ್ದಾರೆ. ಆರೋಪಿಗಳ ಪೈಕಿ 9 ಮಂದಿ ವಿದ್ಯಾರ್ಥಿಗಳು ಯೇನೆಪೋಯ …
Read More »ಬೆಳಗಾವಿ ಜಿಲ್ಲೆಯಲ್ಲಿ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದ ಜಿಲ್ಲಾಧಿಕಾರಿ
ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಮಳೆರಾಯನ ಆರ್ಭಟ ಮುಂದುವರೆದಿದ್ದು ಇತ್ತ ಗಡಿಜಿಲ್ಲೆ ಬೆಳಗಾವಿಯಲ್ಲೂ ವರ್ಷಧಾರೆ ಮುಂದುವರೆದಿದೆ. ಚಿಕ್ಕೋಡಿ ತಾಲೂಕಿನ ಕೆಳ ಹಂತದ ಯಡೂರು ಕಲ್ಲೋಳ, ಮಲ್ಲಿಕವಾಡ ದತ್ತವಾಡ, ಕಾರದಗಾ ಭೋಜ ಸೇತುವೆಗಳು ಜಲಾವೃತವಾಗಿದ್ದು, ಬೆಳಗಾವಿ ಜಿಲ್ಲೆಯಲ್ಲಿ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ಹೇಳಿದ್ದಾರೆ. ಬೆಳಗಾವಿಯಲ್ಲಿ ತಮ್ಮ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿ ನಿತೇಶ್ ಪಾಟೀಲ್ ಮಹಾರಾಷ್ಟ್ರ ಪಶ್ಚಿಮ ಘಟ್ಟಗಳಲ್ಲಿ ವರುಣರಾಯನ ಆರ್ಭಟ ಮುಂದುವರೆದಿದೆ. ಮಹಾ …
Read More »2-3 ದಿನ ಭಾರಿ ಮಳೆ; ಮುನ್ಸೂಚನೆ ನೀಡಿದ ಸಿಎಂ
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಭಾರಿ ಮಳೆಯಿಂದಾಗಿ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿವೆ. ಮಳೆ ಹಾನಿ ಕುರಿತಾಗಿ ನಿನ್ನೆ ಅಧಿಕಾರಿಗಳ ಜತೆ ಸಭೆ ನಡೆಸಿ ಮುಂಜಾಗೃತಾ ಕ್ರಮ ಹಾಗೂ ಪರಿಹಾರದ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ರಾಜ್ಯದಲ್ಲಿ ಇಂದು ಸ್ವಲ್ಪ ಪ್ರಮಾಣದಲ್ಲಿ ಮಳೆ ಕಡಿಮೆಯಾಗಿದೆ. ಆದರೆ ಇನ್ನೂ 2-3 ದಿನಗಳ ಕಾಲ ಹಲವೆಡೆ ಮಳೆಯಾಗಲಿದೆ. ಅದಕ್ಕೆ ಅನುಗುಣವಾಗಿ …
Read More »ಬೆಳಗಾವಿ ಜಿಲ್ಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಲಘು ಭೂಕಂಪನದ ಅನುಭವ
ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಲಘು ಭೂಕಂಪನದ ಅನುಭವವಾಗಿದ್ದು, ಜನರು ಭಯಭೀತರಾಗಿ ಮನೆಯಿಂದ ಹೊರಗೆ ಓಡಿಬಂದಿರುವ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಶಿರಹಟ್ಟಿ ಗ್ರಾಮದಲ್ಲಿ ಇಂದು ಬೆಳಗ್ಗೆ 6.45 ರ ಸುಮಾರಿಗೆ ಭೂಮಿ ಕಂಪಿಸಿರುವ ಅನುಭವವಾಗಿದ್ದು, ಜನರು ಭಯದಿಂದ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.
Read More »ಬಿಎಸ್ವೈರಿಂದ ಬೊಮ್ಮಾಯಿವರೆಗೆ; 2023ರ ಚುನಾವಣೆ ಕತೆ ಏನು..?
ಬೆಂಗಳೂರು; ಇದೇ ತಿಂಗಳ ಆರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ರಾಜ್ಯ ಪ್ರವಾಸ ಕೈಗೊ೦ಡಿದ್ದರು. ಬೆಂಗಳೂರಿನಲ್ಲಿ ಹಲವು ಯೋಜನೆಗಳನ್ನು ಉದ್ಘಾಟನೆ ಮಾಡಿದರು. ನಂತರ ಅವರು ಮೈಸೂರು ಅರಮನೆಯ ಆವರಣದಲ್ಲಿ ನಡೆದ ವಿಶ್ವಯೋಗಾ ದಿನಾಚರಣೆಯಲ್ಲಿ ಪಾಲ್ಗೊಂಡರು. ಮೋದಿಯವರು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಇಳಿಯುತ್ತಿದ್ದಂತೆ ರಾಜ್ಯಪಾಲರು, ಸಿಎಂ ಬೊಮ್ಮಾಯಿ, ಯಡಿಯೂರಪ್ಪ ಸೇರಿ ಹಲವು ನಾಯಕರು ಮೋದಿಯವರನ್ನು ಬರಮಾಡಿಕೊಂಡರು. ಈ ವೇಲೆ ಪ್ರಧಾನಿ ಮೋದಿಯವರು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಅತ್ಯಂತ ಆತ್ಮೀಯತೆಯಿಂದ …
Read More »ತಿಂಗಳ ಹಿಂದೆ ಕಾಣೆಯಾಗಿದ್ದ ಕಮಾಂಡೋ ವಿಂಗ್ ಸೇನಾಧಿಕಾರಿ ಬೆಳಗಾವಿ ರೈಲು ನಿಲ್ದಾಣದಲ್ಲಿ ಪತ್ತೆ
ಬೆಳಗಾವಿ: ನಾಪತ್ತೆ ಆಗಿದ್ದ ಮರಾಠಾ ಲಘು ಪದಾತಿ ದಳದ ಕಮಾಂಡೋ ಟ್ರೈನಿಂಗ್ ವಿಂಗ್ ನ ಸುಬೇದಾರ್ ಮೇಜರ್ ಸುರ್ಜಿತ್ ಸಿಂಗ್ ಅವರನ್ನು ಬೆಳಗಾವಿ ರೈಲ್ವೆ ನಿಲ್ದಾಣದಲ್ಲಿ ಒಂದು ತಿಂಗಳ ಬಳಿಕ ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಸುಬೇದಾರ್ ಮೇಜರ್ ಸುರ್ಜಿತ್ ಸಿಂಗ್ ಅವರು ನಾಪತ್ತೆಯಾಗಿದ್ದರಿಂದ ಸೇನಾ ವಲಯದಲ್ಲಿ ಆತಂಕಕ್ಕೆ ಕಾರಣವಾಗಿತ್ತು. ಪೊಲೀಸರು ಮತ್ತು ಸೇನೆಯ ಅಧಿಕಾರಿಗಳು ಶ್ರಮವಹಿಸಿ ಸೇನಾ ಅಧಿಕಾರಿಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಅಸ್ವಸ್ಥ ಸ್ಥಿತಿಯಲ್ಲಿ ಸೇನಾಧಿಕಾರಿ ಶುಕ್ರವಾರ ಸಿಕ್ಕಿದ್ದಾರೆ. …
Read More »ಚಿಕ್ಕೋಡಿ: ವಿದ್ಯುತ್ ಅವಘಡದಿಂದ ವಿದ್ಯಾರ್ಥಿನಿ ಸಾವು: ಪರಿಹಾರಕ್ಕಾಗಿ ಬೃಹತ್ ಪ್ರತಿಭಟನೆ
ಚಿಕ್ಕೋಡಿ: ವಿದ್ಯುತ್ ಸ್ಪರ್ಶದಿಂದ ಮೃತಪಟ್ಟ ವಿದ್ಯಾರ್ಥಿ ಕುಟುಂಬಕ್ಕೆ ಸೂಕ್ತ ಪರಿಹಾರ ಕೊಡಬೇಕೆಂದು ಆಗ್ರಹಿಸಿ ಚಿಕ್ಕೋಡಿ ನಗರದಲ್ಲಿ ರಾಜ್ಯ ರೈತ ಸಂಘ ಬೃಹತ್ ಪ್ರತಿಭಟನೆ ನಡೆಸಿ ರಾಜ್ಯ ಸರಕಾರದ ವಿರುದ್ದ ಆಕ್ರೋಶ ಹೊರ ಹಾಕಿದೆ. ಕಳೆದ ಎರಡು ದಿನಗಳ ಹಿಂದೆ ನಿಪ್ಪಾಣಿ ತಾಲೂಕಿನ ಡೋಣೆವಾಡಿ ಮರಾಠಿ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ವಿದ್ಯುತ್ ಅವಘಡದಿಂದ ಮೂರನೆ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಅನುಷ್ಕಾ ಬೆಂಡೆ ಮೃತಪಟ್ಟಿದ್ದು. ಬಾಲಕಿ ಕುಟುಂಬಕ್ಕೆ 50 ಲಕ್ಷ ರೂ ಪರಿಹಾರ ಕೊಡಬೇಕೆಂದು …
Read More »ಹಿಗ್ಗಿದ ಕೃಷ್ಣೆಯ ಒಡಲು: ಮತ್ತೆ ನೆರೆ ಭೀತಿ
ಬೆಳಗಾವಿ: ಜಿಲ್ಲೆಯ ಗಡಿ ಭಾಗ ಮತ್ತು ನೆರೆಯ ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ನದಿಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಘಟಪ್ರಭಾ ನದಿಗೆ 10 ಸಾವಿರಕ್ಕೂ ಅಧಿಕ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಇದರಿಂದ ಜಿಲ್ಲೆಯ ಪ್ರಮುಖ ಜಲಾಶಯವಾಗಿರುವ ಹಿಡಕಲ್ ಜಲಾಶಯಮಟ್ಟದಲ್ಲಿ ಒಂದೇ ದಿನ ಮೂರು ಅಡಿಗಳಷ್ಟು ಏರಿಕೆಯಾಗಿದೆ. ಒಟ್ಟು 2175 ಅಡಿ ಸಾಮರ್ಥ್ಯದ ಜಲಾಶಯದಲ್ಲಿ ಈಗ 2093 ಅಡಿಗಳಷ್ಟು ನೀರು ಸಂಗ್ರಹವಾಗಿದೆ. …
Read More »ಕರ್ನಾಟಕ ಸರ್ಕಾರದಿಂದ ಅಮರನಾಥ ಯಾತ್ರೆಯಲ್ಲಿ ಸಿಲುಕಿದವರಿಗೆ ಸಹಾಯವಾಣಿ
ಬೆಂಗಳೂರು: ಶುಕ್ರವಾರ ಸಂಜೆ ಅಮರನಾಥ ಗುಹೆಯ ಬಳಿ ಮೇಘ ಸ್ಫೋಟ ಉಂಟಾಗಿದ್ದು, ತೀರ್ಥಯಾತ್ರೆಗೆ ತೆರಳಿದ್ದ ಭಕ್ತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕನಿಷ್ಠ 15 ಮಂದಿ ಸಾವನ್ನಪ್ಪಿದ್ದಾರೆ. ಅಮರನಾಥ ಯಾತ್ರೆಗೆ ತೆರಳಿರುವ ಕರ್ನಾಟಕದ ಯಾತ್ರಾರ್ಥಿಗಳು ಸಿಲುಕಿದ್ದು, ಅವರ ಸಹಾಯಕ್ಕೆ ಸರ್ಕಾರ ಸಹಾಯವಾಣಿ ಆರಂಭಿಸಿದೆ. ಕರ್ನಾಟಕದ ಯಾವುದೇ ವ್ಯಕ್ತಿಯು ಸಿಕ್ಕಿಬಿದ್ದಲ್ಲಿ ದಯವಿಟ್ಟು ಕೆಳಗಿನ ಸಂಖ್ಯೆಗೆ ಕರೆ ಮಾಡಿ ಸಂಪರ್ಕ ಮಾಡಿ. 080-1070, 22340676, ಇಮೇಲ್: incomedmkar@gmail.com ಮೇಘಸ್ಫೋಟದಿಂದ ಉಂಟಾದ ಭಾರೀ ಪ್ರಮಾಣದ ಪ್ರವಾಹ …
Read More »
Laxmi News 24×7