Breaking News

Monthly Archives: ಜುಲೈ 2022

ಬಾಗಲಕೋಟೆ: ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರಿಗೆ ಚಾಕು ಇರಿತ

ಬಾಗಲಕೋಟೆ, ಜುಲೈ 6: ನೂಪುರ್‌ ಶರ್ಮಾ ವಿರುದ್ಧ ಪೋಸ್ಟ್ ವಿಚಾರವಾಗಿ ಎರಡು ಕೋಮು ಗುಂಪುಗಳ ಮಧ್ಯೆ ಭೀಕರ ಗಲಾಟೆ ನಡೆದು ಮೂವರು ಗಾಯಗೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪಟ್ಟಣದಲ್ಲಿ ನಡೆದಿದೆ. ಘಟನೆಯಲ್ಲಿ ಇಬ್ಬರು ಯುವಕರಿಗೆ ಚಾಕು ಇರಿಯಾಗಿದೆ, ಓರ್ವನ ತಲೆಗೆ ಮಚ್ಚಿನಿಂದ ಹಲ್ಲೆ ಮಾಡಲಾಗಿದೆ. ಕೆರುರೂ ಪಟ್ಟಣದಲ್ಲಿ ಬುಧವಾರ ಸಾಯಂಕಾಲ ಸಮಯ ಈ ಘಟನೆ ನಡೆದಿದ್ದು, ಇದರಿಂದ ಇಡೀ ಪಟ್ಟಣ ಉದ್ವಿಗ್ನಗೊಂಡಿದೆ. ಘಟನೆಯಲ್ಲಿ ಹಿಂದೂ ಜಾಗರಣ …

Read More »

ಗೌರಿ ಲಂಕೇಶ್ ಹತ್ಯೆ: ಕೊಲೆ ನೋಡಿದ ಮೊದಲ ಇಬ್ಬರು ಸಾಕ್ಷಿದಾರರು ಕೋರ್ಟ್​​​ಗೆ ಹಾಜರು

ಬೆಂಗಳೂರು : ಪತ್ರಕರ್ತೆ ಗೌರಿಲಂಕೇಶ್ ಹತ್ಯೆ ಪ್ರಕರಣ ಸಂಬಂಧ ವಿಚಾರಣೆ‌ ನಡೆಸುತ್ತಿರುವ ಕೋಕಾ ವಿಶೇಷ ನ್ಯಾಯಾಲಯ ಮುಂದೆ‌ ಇಂದು ಇಬ್ಬರು ಸಾಕ್ಷಿದಾರರು ಹಾಜರಾಗಿ ಹೇಳಿಕೆ ನೀಡಿದ್ದಾರೆ. ಜುಲೈ 4 ರಿಂದ 8 ರವರೆಗೆ ವಿಶೇಷ ನ್ಯಾಯಾಲಯ ಪ್ರಕರಣ ವಿಚಾರಣೆ ನಡೆಸುತ್ತಿದೆ.‌ ಎರಡು ದಿನಗಳ ಹಿಂದೆ ಗೌರಿ ಲಂಕೇಶ್ ಸಹೋದರಿ ಕವಿತಾ ಲಂಕೇಶ್ ಹಾಜರಾಗಿ‌ ಕೋರ್ಟ್ ಮುಂದೆ ಸಾಕ್ಷ್ಯ ನುಡಿದಿದ್ದರು. ಇದರಂತೆ ಅಂದು ಸಂಜೆ ಬೈಕ್ ನಲ್ಲಿ ಅವರ ಮನೆಗೆ ಹೋಗಿದ್ದೆ, ಮನೆ …

Read More »

ಆರ್ಡಿನರಿ ಇದ್ದ ಸರ್ಕಾರಿ ಆಸ್ಪತ್ರೆ ಯನ್ನಾ ಹಾಯ್ ಟೆಕ ಮಾಡಿದ ಬೆಳಗಾವಿ ಉತ್ತರ ಶಾಸಕ ಅನಿಲ್ ಬೆನಕೆ..

ಬೆಳಗಾವಿ ಉತ್ತರ ಕ್ಷೇತ್ರ ಬದಲಾಗುತ್ತಿದೆ.ಒಂದು ಕಡೆ ಅಭಿವೃದ್ಧಿ ಕೆಲಸಗಳು ನಡೆಯುತ್ತಿದ್ದರೆ ಮತ್ತೊಂದು ಕಡೆ ಜನಪರ ಕೆಲಸಗಳು ಸದ್ದು ಮಾಡುತ್ತಿವೆ.ಇಲ್ಲಿನ ಶಾಸಕರಾದ ಅನಿಲ ಬೆನಕೆ ಅವರ ವಿಶೇಷ ಕಾಳಜಿಯಿಂದ ಬೆಳಗಾವಿ ಹೈಟೆಕ್ ಟಚ್ ಪಡೆದುಕೊಳ್ತಿದೆ.ಇದಕ್ಕೆ ಒಂದು ಉತ್ತಮ ಉದಾಹರಣೆ ಇಲ್ಲಿದೆ ನೋಡಿ… ಹೌದು..!! ನಿಜಕ್ಕೂ ಕುಂದಾನಗರಿ ಬದಲಾಗ್ತಿದೆ.ಇಲ್ಲಿನ ಮೂಲಭೂತ ಸೌಕರ್ಯಗಳ ಕಾಮಗಾರಿಗಳು ಟಾಪ್ ಸ್ಪೀಡ್ ನಲ್ಲಿ ಓಡುತ್ತಿದ್ದರೆ ಸರ್ಕಾರಿ ಸಂಸ್ಥೆಗಳು ಹೈಟೆಕ್ ಟಚ್ ಪಡೆದುಕೊಳ್ತಿವೆ.ಜನರಿಗೆ ಅತ್ಯಂತ ಮಹತ್ವವಾದ ಸೇವೆ ನೀಡುವ ಬೀಮ್ಸ್ …

Read More »

ಯಾರನ್ನ ನಂಬಬೇಕೋ ಗೊತ್ತಾಗುತ್ತಿಲ್ಲ. ಡಾ.ವಿಶ್ವ ಸಂತೋಷ ಭಾರತಿ ಗುರೂಜಿ ಕಳವಳ

ಶಿವಮೊಗ್ಗ: ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಅವರು ವಾಮ ಮಾರ್ಗದಿಂದ ಆಸ್ತಿ ಮಾಡಿದ್ದಲ್ಲ. ಯಾರನ್ನ ನಂಬಬೇಕೋ ಗೊತ್ತಾಗುತ್ತಿಲ್ಲ… ಎಂದು ಡಾ. ವಿಶ್ವ ಸಂತೋಷ ಭಾರತಿ ಗುರೂಜಿ ಕಳವಳ ವ್ಯಕ್ತಪಡಿಸಿದರು. ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಡಾ. ವಿಶ್ವ ಸಂತೋಷ ಭಾರತಿ ಗುರೂಜಿ, ಸರಳ ವಾಸ್ತು ಶಾಸ್ತ್ರಜ್ಞ ಚಂದ್ರಶೇಖರ್​ ಗುರೂಜಿ ಅವರ ಹತ್ಯೆ ಖಂಡನೀಯ. ಕೆಲವೊಂದು ಕಾರ್ಯಕ್ರಮವನ್ನು ಅವರೊಂದಿಗೆ ಹಂಚಿಕೊಂಡಿದ್ದೇವೆ. ಗುರೂಜಿ ವಾಮ ಮಾರ್ಗದಿಂದ ಆಸ್ತಿ ಮಾಡಿದ್ದಲ್ಲ. ಅವರ ಜತೆಗೆ ಇದ್ದುಕೊಂಡು …

Read More »

ಧಾರಾವಾಹಿ ನೋಡಿ ತಂದೆ ಮೇಲೆಯೇ ರೇಪ್​ ಕೇಸ್ ಹಾಕಿದ ಬಾಲಕಿ! 7 ವರ್ಷ ಜೈಲಲ್ಲಿದ್ದ ಅಪ್ಪನ ಕಣ್ಣೀರ ಕಥೆಯಿದು.

ಮುಂಬೈ: 10 ಅಪರಾಧಿಗಳು ತಪ್ಪಿಸಿಕೊಂಡರೂ ಪರವಾಗಿಲ್ಲ, ಒಬ್ಬ ನಿರಪರಾಧಿಗೆ ಶಿಕ್ಷೆ ಆಗಬಾರದು ಎನ್ನುತ್ತದೆ ನಮ್ಮ ಕಾನೂನು. ಆದರೆ ಅದೇ ಇನ್ನೊಂದೆಡೆ, ಸುದೀರ್ಘ ವಿಚಾರಣೆಯಿಂದ ಒಬ್ಬ ಅಮಾಯಕ ನಿರಪರಾಧಿ ಎಂದು ಕೋರ್ಟ್​ ಹೇಳುವುದರೊಳಗೆ ಅದೆಷ್ಟೋ ವರ್ಷ ಜೈಲಿನಲ್ಲಿ ಕೊಳೆಯುವ ಸನ್ನಿವೇಶಗಳು ನಡೆಯುತ್ತವೆ. ಅಂಥದ್ದೇ ಘಟನೆ ಮುಂಬೈನಲ್ಲಿ ನಡೆದಿದೆ. ಮಗಳಿಂದಲೇ ಮೋಸ ಹೋಗಿ ಎಲ್ಲವನ್ನೂ ಕಳೆದುಕೊಂಡು ಬೀದಿಗೆ ಬಂದಿರುವ ಅಪ್ಪನ ಕಣ್ಣೀರ ಕಥೆಯಿದು! ವಿಪುಲ್ ನರ್ಕರ್ ಎಂಬ ವ್ಯಕ್ತಿ 28 ವರ್ಷ ವಯಸ್ಸಿನ ಯುವಕ …

Read More »

ಆಸ್ತಿ ವಿಚಾರವಾಗಿ ಕೊಲೆಯಾಗಿದೆ ಅನ್ನೋದು ಸುಳ್ಳು: ಸ್ಫೋಟಕ ಸಂಗತಿ ಬಿಚ್ಚಿಟ್ಟ ಆರೋಪಿ ಮಹಾಂತೇಶ್​ ಪತ್ನಿ

ಹುಬ್ಬಳ್ಳಿ: ನಮ್ಮ ಮತ್ತು ಗುರೂಜಿ ನಡುವೆ ಒಳ್ಳೆಯ ಸಂಬಂಧ ಇತ್ತು. ನಮ್ಮ ಮನೆಯವರು ಈ ರೀತಿ ಮಾಡಿದ್ದು ತಪ್ಪು ಎಂದು ಕೊಲೆ ಆರೋಪಿ ಮಹಾಂತೇಶ ಶಿರೂರ ಪತ್ನಿ ವನಜಾಕ್ಷಿ ಹೇಳಿಕೆ ನೀಡಿದ್ದಾರೆ. ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಕೊಲೆ ಪ್ರಕರಣ ಸಂಬಂಧ ದಿಗ್ವಿಜಯ ನ್ಯೂಸ್ ಜತೆ ಮಾತನಾಡಿದ ವನಜಾಕ್ಷಿ, ಗುರೂಜಿ ನಮ್ಮ ತಂದೆಯಂತೆ ಇದ್ದರು. ನನಗೆ ಬೇಸರ ಆದಾಗ ಗುರೂಜಿ ಜತೆ ಮಾತನಾಡುತ್ತಿದ್ದೆ. ಬೇನಾಮಿ ಆಸ್ತಿ ವಿಚಾರವಾಗಿ ಕೊಲೆ ನಡೆದಿದೆ …

Read More »

ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಿಸದ ಸರ್ಕಾರ: ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ಕಳೆದೆರಡು ಶೈಕ್ಷಣಿಕ ವರ್ಷಗಳಂತೆ ಈ ವರ್ಷವೂ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡುತ್ತಿದ್ದ ಸೈಕಲ್, ಶೂ ಮತ್ತು ಸಾಕ್ಸ್ ಗಳನ್ನು ರಾಜ್ಯ ಬಿಜೆಪಿ ಸರ್ಕಾರ ನಿಲ್ಲಿಸಿದೆಯಂತೆ. ಹಿಂದಿನ ವರ್ಷಗಳಲ್ಲಿ ಕೊರೊನಾ ಕಾರಣ ನೀಡಿದ್ದ ಸರ್ಕಾರ ಈ ವರ್ಷ 40% ಕಮಿಷನ್ ನಿಂದಾಗಿ ಖಾಲಿಯಾಗಿರುವ ಖಜಾನೆ ತೋರಿಸುತ್ತಿದೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.   ‘ಒಂದೆಡೆ ರಾಜ್ಯಬಿಜೆಪಿ ಸರ್ಕಾರದ ಸಚಿವರು, ಆಡಳಿತ ಪಕ್ಷದ ನಾಯಕರು ಮತ್ತು ಅಧಿಕಾರಿಗಳ ದುಷ್ಟಕೂಟ ಕಮಿಷನ್ ದಂಧೆಯಲ್ಲಿ ತೊಡಗಿಕೊಂಡು ರಾಜ್ಯದ ಖಜಾನೆಯನ್ನು …

Read More »

ಕೇಂದ್ರ ಸರ್ಕಾರದಿಂದ ಬಡಜನತೆಗೆ ಬಿಗ್‌ ಶಾಕ್‌: ‘ಗರೀಬ್ ಕಲ್ಯಾಣ್’ ಅನ್ನ ಯೋಜನೆಗೆ ಬ್ರೇಕ್‌.!?

ನವದೆಹಲಿ:ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (ಪಿಎಂಜಿಕೆಎವೈ) ಅಡಿಯಲ್ಲಿ ಉಚಿತ ಆಹಾರ ಧಾನ್ಯಗಳ ಸೌಲಭ್ಯವನ್ನುವನ್ನು ಕೊರೊನಾ ಅವಧಿಯಲ್ಲಿ, ದೇಶದ ಬಡ ಕುಟುಂಬಗಳಿಗೆ ನೀಡಲಾಗುತಿತ್ತು. ಈ ಇದನ್ನು ಸೆಪ್ಟೆಂಬರ್ ನಂತರ ನಿಲ್ಲಿಸಬಹುದು ಎನ್ನಲಾಗಿದೆ. ಹಣಕಾಸು ಸಚಿವಾಲಯದ ಅಡಿಯಲ್ಲಿನ ವೆಚ್ಚಗಳ ಇಲಾಖೆ ಈ ಯೋಜನೆಯನ್ನು ಸೆಪ್ಟೆಂಬರ್ ನಂತರ ವಿಸ್ತರಿಸಬಾರದು ಎಂದು ಸರ್ಕಾರಕ್ಕೆ ಸಲಹೆ ನೀಡಿದೆ ಎನ್ನಲಾಗಿದೆ. ‘ಈ ಯೋಜನೆಯು ದೇಶದ ಮೇಲೆ ಆರ್ಥಿಕ ಹೊರೆಯನ್ನು ತುಂಬಾ ಹೆಚ್ಚಿಸುತ್ತಿದೆ. ಇದು ದೇಶದ ಆರ್ಥಿಕ …

Read More »

ಪಂಚಭೂತಗಳಲ್ಲಿ ಲೀನರಾದ ಚಂದ್ರಶೇಖರ್ ಗುರೂಜಿ: ಸುಳ್ಳಾ ಜಮೀನಿನಲ್ಲಿ ನೆರವೇರಿದ ಅಂತ್ಯಕ್ರಿಯೆ

ಆಪ್ತ ಸಹಾಯಕರಿಂದಲೇ ಬರ್ಬರವಾಗಿ ಹತ್ಯೆ ಆಗಿರುವ ವಾಸ್ತುತಜ್ಞ ಚಂದ್ರಶೇಖರ್ ಗುರೂಜಿ ಮಣ್ಣಲ್ಲಿ ಮಣ್ಣಾಗಿದ್ದು, ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಸುಳ್ಳಾ ಗ್ರಾಮದ ಬಳಿಯ ಜಮೀನಿನಲ್ಲಿ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನೆರವೇರಿದೆ. ಅಣ್ಣನ ಮಗ ಸಂತೋμï ಅಂಗಡಿ ಅಂತಿಮ ವಿಧಿವಿಧಾನ ನೆರವೇರಿಸಿದ್ರು. ಗುರೂಜಿ ಮೃತದೇಹಕ್ಕೆ ಪತ್ನಿ ಅಂಕಿತಾ ಅಂತಿಮ ಪೂಜೆ ಸಲ್ಲಿಸಿದ್ರು. ಪಂಚಾಕ್ಷರಿ ಮಹಾ ಮಂತ್ರದೊಂದಿಗೆ ಅಂತಿಮ ವಿಧಿವಿಧಾನ ನೆರವೇರಿದೆ. ಅರ್ಚಕ ಕೋಟ್ರಯ್ಯಶ್ರೀಗಳ ನೇತೃತ್ವದಲ್ಲಿ ಪುತ್ರಿ ಸ್ವಾತಿ, …

Read More »

ಬೆಳಗಾವಿಯ ಪೊಲೀಸ್ ಮ್ಯೂಸಿಯಂ ವೀಕ್ಷಿಸಿ, ಕೈಯಲ್ಲಿ ಗನ್ ಹಿಡಿದ ಗೃಹ ಸಚಿವರು

ಬೆಳಗಾವಿಯ ಪೊಲೀಸ್ ಮ್ಯೂಸಿಯಂನಲ್ಲಿ ಹಳೆ ಪಿಸ್ತೂಲ್ ಸೇರಿ ಇನ್ನಿತರ ವಸ್ತುಗಳನ್ನು ನೋಡಿ ಗೃಹ ಸಚಿವ ಆರಗ ಜ್ಞಾನೇಂದ್ರ ಆಶ್ಚರ್ಯ ವ್ಯಕ್ತಪಡಿಸಿದರು. ಇದನ್ನು ದೆಹಲಿ ರಾಷ್ಟ್ರೀಯ ಮಟ್ಟದ ಪೊಲೀಸ್ ಮ್ಯೂಸಿಯಂನ್ನಾಗಿ ಮಾಡೋಣ ಎಂದು ಭರವಸೆ ನೀಡಿದರು. ಬೆಳಗಾವಿ ಜಿಲ್ಲಾ ಪೊಲೀಸ್ ಹೆಡ್ ಕ್ವಾಟರ್ಸ ಆವರಣಕ್ಕೆ ಆಗಮಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಜಿಲ್ಲಾ ಪೊಲೀಸರು ಗೌರವ ವಂದನೆ ಸಲ್ಲಿಸಿದರು. ಗೌರವ ವಂದನೆ ಸ್ವೀಕರಿಸಿದ ಬಳಿಕ ಪೊಲೀಸ್ ಸಮುದಾಯ ಭವನದಲ್ಲಿರುವ ಪೊಲೀಸ್ …

Read More »