Breaking News

Daily Archives: ಆಗಷ್ಟ್ 10, 2022

ಅನುಕಂಪದ ಉದ್ಯೋಗ’ ಹಕ್ಕಲ್ಲ – ‘ಸುಪ್ರೀಂ ಕೋರ್ಟ್’ ಮಹತ್ವದ ಅಭಿಪ್ರಾಯ

ನವದೆಹಲಿ: ಉದ್ಯೋಗಿ ಮರಣ ಹೊಂದಿದ ನಂತ್ರ ಅವರ ಕುಟುಂಬದ ಓರ್ವ ಸದಸ್ಯನಿಗೆ ಅನುಕಂಪದ ಆಧಾರದಲ್ಲಿ ( Compassionate employment ) ನೀಡುವ ಉದ್ಯೋಗ ಸ್ಥಾಪಿತವಾದ ಹಕ್ಕಲ್ಲ. ಈ ರೀತಿಯ ಉದ್ಯೋಗ ಪಡೆದವರಿಂದ ಕರ್ತವ್ಯ ಲೋಪಗಳಾದರೇ, ಅವರಿಗೆ ನೀಡಲಾದ ಹುದ್ದೆಯ ಅರ್ಹತೆಯನ್ನು ಹೊಂದುವಲ್ಲಿ ವಿಫಲವಾದರೇ, ಅಂತಹವರನ್ನು ಕೆಲಸದಿಂದ ತೆಗೆಯ ಬಹುದು ಎಂದು ಸುಪ್ರೀಂ ಕೋರ್ಟ್ ( Supreme Court ) ಮಹತ್ವದ ಅಭಿಪ್ರಾಯ ಪಟ್ಟಿದೆ.   ಈ ಸಂಬಂಧ ಪ್ರಕರಣವೊಂದರ ವಿಚಾರಣೆ …

Read More »

ಡೆತ್​ನೋಟ್​ ಬರೆದಿಟ್ಟು ಉಪನ್ಯಾಸಕಿ ಆತ್ಮಹತ್ಯೆ: ಹುಟ್ಟು ಹಬ್ಬದ ದಿನವೇ ದುರಂತ ಅಂತ್ಯ

ಚಾಮರಾಜನಗರ: ಕಾಲೇಜು ಉಪನ್ಯಾಸಕಿಯೊಬ್ಬರು ಹಾಸ್ಟೆಲ್​ನಲ್ಲಿ ನೇಣುಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ಸಂಭವಿಸಿದೆ. ಸಾವಿಗೂ ಮುನ್ನ ಬರೆದ ಡೆತ್‌ನೋಟ್ ಸಿಕ್ಕಿದೆ. ಚಂದನಾ(26) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಯಳಂದೂರು ತಾಲೂಕಿನ ಅಂಬಳೆ ಗ್ರಾಮದ ಚಂದನಾ, ಚಾಮರಾಜನಗರದ ಜೆಎಸ್‌ಎಸ್‌ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇಂದು(ಆ.9) ಅವರ ಬರ್ತ್​ ಡೇ. ಈ ದಿನವೇ ಜೆಎಸ್‌ಎಸ್ ಕಾಲೇಜಿನ ಹಾಸ್ಟೆಲ್​ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಡೆತ್​ನೋಟ್​ ಪತ್ತಯಾಗಿದ್ದು, ‘ನನ್ನ ಸಾವಿಗೆ ನಾನೇ ಕಾರಣ’ ಎಂದು ಬರೆಯಲಾಗಿದೆ. ಚಾಮರಾಜನಗರ ಪಟ್ಟಣ …

Read More »

ಉಮೇಶ ಕತ್ತಿ ಮಂತ್ರಿಯಾಗಲು ಲಾಯಕ್ಕಲ್ಲ:ಸಿದ್ದರಾಮಯ್ಯ

ರಾಜ್ಯ ಸರ್ಕಾರದ ವೀಕೆಂಡ್ ಕಫ್ರ್ಯೂಗೆ ಮಾಜಿ ಸಿಎಂ ಸಿದ್ದರಾಮಯ್ಯ ವಿರೋಧ ವ್ಯಕ್ತಪಡಿಸಿದ್ದಾರೆ. ಮಂಡ್ಯದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಅವರು ಲಸಿಕೆ ನೀಡಲಿ, ನಿಯಮಾವಳಿಗಳನ್ನ ಕಟ್ಟುನಿಟ್ಟಾಗಿ ಮಾಡಲಿ. ನನ್ನ ಪ್ರಕಾರ ವೀಕೆಂಡ್ ಕಫ್ರ್ಯೂ ಬೇಕಿಲ್ಲ ಎಂದರು. ಮಾಸ್ಕ್ ಹಾಕಲ್ಲ ಎಂದ ಸಚಿವ ಉಮೇಶ್ ಕತ್ತಿ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ ಸಿದ್ದರಾಮಯ್ಯ ಉಮೇಶ ಕತ್ತಿ ಸಚಿವರಾಗಿರಲು ಲಾಯಕ್ಕಾ, ಸರ್ಕಾರ ನಡೆಸಲು ಲಾಯಕ್ಕ..? ಮಂತ್ರಿ ಮಾಸ್ಕ್ ಹಾಕಲ್ಲ ಅಂದ್ರೆ …

Read More »

ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದ್ದು, ನಾನು ಕೂಡ ಮುಖ್ಯಮಂತ್ರಿ ಸ್ಥಾನದ ಅಕಾಂಕ್ಷಿ: ಉಮೇಶ್ ಕತ್ತಿ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದ್ದು, ನಾನು ಕೂಡ ಮುಖ್ಯಮಂತ್ರಿ ಸ್ಥಾನದ ಅಕಾಂಕ್ಷಿ ಎಂದು ಹೇಳುವ ಮೂಲಕ ಮತ್ತೆ ಅರಣ್ಯ ಮತ್ತು ಆಹಾರ ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಸಿಎಂ ಸ್ಥಾನವನ್ನು ಜಪಿಸಿದ್ದಾರೆ. ಮಳವಳ್ಳಿ ತಾಲ್ಲೂಕಿನ ಶಿವನಸಮುದ್ರದ ಗಗನಚುಕ್ಕಿ ಜಲಪಾತ ವೀಕ್ಷಣೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಉಮೇಶ ಕತ್ತಿ ಮುಖ್ಯಮಂತ್ರಿ ಬದಲಾವಣೆ ಕೇವಲ ಊಹಾಪೋಹವಾಗಿದೆ. ನಾನು ಕೂಡ 8 ಬಾರಿ ಶಾಸಕನಾಗಿ ಆಯ್ಕೆಯಾಗಿ, ಹಲವು …

Read More »

ವರುಣನ ಆರ್ಭಟ ಜೋರಾಗಿದ್ದು ಜೂನ್ 1ರಿಂದ 990 ಮನೆಗಳು, 1 ಸಾವಿರ ಕಿ.ಮೀ ರಸ್ತೆಗೆ ಹಾನಿ

ಬೆಳಗಾವಿ ಜಿಲ್ಲೆಯಲ್ಲಿ ಈ ವರ್ಷವೂ ವರುಣನ ಆರ್ಭಟ ಜೋರಾಗಿದ್ದು. ಕಳೆದ ಜೂನ್ ಒಂದರಿಂದ ಈವರೆಗೆ ಬೆಳಗಾವಿ ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಗೆ 990 ಮನೆಗಳು, ಒಂದು ಸಾವಿರ ಕಿ.ಮೀ ರಸ್ತೆ ಹಾಗೂ 18 ಸೇತುವೆಗಳಿಗೂ ಹಾನಿಯಾಗಿರುವ ವರದಿಯಾಗಿದೆ. ಹೌದು ಮಹಾರಾಷ್ಟ್ರ ಘಟ್ಟಪ್ರದೇಶ ಮತ್ತು ಬೆಳಗಾವಿ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಬೀಳುತ್ತಿದೆ. ಹಳೆ ಮನೆಗಳು ಕುಸಿಯುತ್ತಿವೆ. ಬೆಳಗಾವಿಯ ಕಾಮತ್ ಗಲ್ಲಿಯ ಅನಿಲ್ ಬಡಮಂಜಿ ಹಾಗೂ ಸವದತ್ತಿ ತಾಲೂಕಿನ ಏಣಗಿ ಗ್ರಾಮದಲ್ಲಿ ನಬಿಸಾಬ್ …

Read More »

ಕ್ವಿಟ್ ಇಂಡಿಯಾ ಚಳವಳಿಗೆ 80 ವರ್ಷ: ಸ್ವಾತಂತ್ರ್ಯ ಯೋಧರಿಗೆ ಜಿಲ್ಲಾಧಿಕಾರಿಗಳಿಂದ ಸನ್ಮಾನ

“ಭಾರತ ಬಿಟ್ಟು ತೊಲಗಿ(ಕ್ವಿಟ್ ಇಂಡಿಯಾ)” ಚಳವಳಿಯಲ್ಲಿ ಭಾಗವಹಿಸಿದ್ದ ಇಬ್ಬರು ಸ್ವಾತಂತ್ರ್ಯ ಯೋಧರನ್ನು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಮಂಗಳವಾರ ಸನ್ಮಾನಿಸಿ, ಗೌರವಿಸಿದರು. ಕ್ವಿಟ್ ಇಂಡಿಯಾ ಚಳವಳಿಗೆ 80 ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಸ್ವಾತಂತ್ರ್ಯ ಯೋಧರ ಮನೆಗಳಿಗೆ ತೆರಳಿ ಅವರನ್ನು ಜಿಲ್ಲಾಡಳಿತದ ಪರವಾಗಿ ಆತ್ಮೀಯವಾಗಿ ಸನ್ಮಾನಿಸಿದರು. ಹಿರಿಯ ಸ್ವಾತಂತ್ರ್ಯ ಯೋಧರಾದ ಇಲ್ಲಿನ ಅನಗೋಳದ ರಾಣಿ ಚೆನ್ನಮ್ಮ ನಗರದ ರಾಜೇಂದ್ರ ಧರ್ಮಪ್ಪಾ ಕಲಘಟಗಿ ಹಾಗೂ ಕುವೆಂಪು‌ ನಗರದ ವಿಠ್ಠಲ ಯಾಳಗಿ ಅವರನ್ನು …

Read More »