Breaking News

Daily Archives: ಆಗಷ್ಟ್ 27, 2022

ಅನಿರೀಕ್ಷಿತ ಮಳೆಯಿಂದಾಗಿ ಜನಜೀವನ ಹಾಗೂ ವಾಹನ ಸಂಚಾರ ಅಸ್ತವ್ಯಸ್ತ

ಒಂದು ವಾರದಿಂದ ಶಾಂತವಾಗಿದ್ದ ಮಳೆರಾಯ ಬೆಳಗಾವಿಯಲ್ಲಿ ಮತ್ತೆ ತನ್ನ ಆರ್ಭಟ ಆರಂಭಿಸಿದ್ದು. ಮಧ್ಯಾಹ್ನ ಸತತವಾಗಿ ಮಳೆಯಾಗಿದ್ದರಿಂದ ಜನಜೀವನ ಅಸ್ತವ್ಯಸ್ಥವಾಗಿತ್ತು. ಹೌದು ಬೆಳಗ್ಗೆಯಿಂದ ಸ್ವಲ್ಪ ಪ್ರಮಾಣದ ಬಿಸಿಲಿತ್ತು. ಆದರೆ ಮಧ್ಯಾಹ್ನದ ನಂತರ ಏಕಾಏಕಿ ಜೋರಾಗಿ ಮಳೆ ಆರಂಭವಾಯಿತು. ಇದರಿಂದ ಜನ ಹೊರಗಡೆ ಓಡಾಡಲು ತೀವ್ರ ಪರದಾಡುವಂತಾಯಿತು.ನಗರದ ಚನ್ನಮ್ಮ ಸರ್ಕಲ್, ಖಡೇಬಜಾರ್, ಕಾಲೇಜು ರಸ್ತೆ, ಶನಿವಾರ್ ಕೂಟ ಸೇರಿದಂತೆ ಮುಂತಾದ ರಸ್ತೆಗಳಲ್ಲಿ ದೊಡ್ಡ ಪ್ರಮಾಣದಲ್ಲಿ ನೀರು ಹರಿಯುತ್ತಿತ್ತು. ಇನ್ನು ಗಣೇಶೋತ್ಸವ ಹಬ್ಬ ಬರುತ್ತಿರುವ …

Read More »

ಜ್ಯೋತಿಷಿ ರುಂಡ ಕಡಿದು ಕೊಲೆ ಮಾಡಿದ್ದ ಆರೋಪಿ ಅಂದರ್..!

ಗುರೂಜಿ ಭೇಟಿಯಾಗಲು ಚೆನ್ನೈಗೆ ಹೊರಟಿದ್ದ ಜ್ಯೋತಿಷಿಯನ್ನು ಬೆಳಗಾವಿ ತಾಲೂಕಿನ ಹಲಗಾದಲ್ಲಿ ನಡು ರಸ್ತೆಯಲ್ಲಿಯೇ ಬರ್ಬರವಾಗಿ ಹತ್ಯೆ ಮಾಡಿದ್ದ ಆರೋಪಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸುವಲ್ಲಿ ಹಿರೇಬಾಗೇವಾಡಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಹೌದು ಬೆಳಗಾವಿ ತಾಲೂಕಿನ ಶಿಂಧೋಳ್ಳಿ ಗ್ರಾಮದ ಗದಗಯ್ಯ ಹಿರೇಮಠನ ರುಂಡವನ್ನೇ ಕತ್ತರಿಸಿ ಕೊಲೆ ಮಾಡಲಾಗಿತ್ತು. ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದ ಹಿರೇಬಾಗೇವಾಡಿ ಪೊಲೀಸರು ಕೆಲವೇ ಗಂಟೆಗಳಲ್ಲಿ ಪ್ರಕರಣ ಭೇದಿಸಿದ್ದು. ಕೊಲೆ ಮಾಡಿದವನು ಬೇರೆ ಯಾರೂ ಅಲ್ಲ, ಕೊಲೆಯಾದ ಗದಗಯ್ಯನ ಆಪ್ತಮಿತ್ರ ವಿಠಲ್ …

Read More »

ಪೊಲೀಸರ ಸೋಗಿನಲ್ಲಿ ಲಕ್ಷಾಂತರ ರೂ. ಗಾಂಜಾ ಸಾಗಿಸುತ್ತಿದ್ದ ಖದೀಮರ ಬಂಧನ

ನಿಮ್ಮ ಗಾಡಿಯಲ್ಲಿ ಗಾಂಜಾ ಸಾಗಿಸುತ್ತಿದ್ದಿರಿ ಎಂದು ಪೊಲೀಸರ ಸೋಗಿನಲ್ಲಿ ತಪಾಸಣೆ ಮಾಡಿದ ಖದೀಮರು ಗಾಡಿಯಲ್ಲಿದ್ದ 4,79,250 ರೂಪಾಯಿ ನಗದು ದೋಚಿಕೊಂಡು ಪರಾರಿಯಾಗಿದ್ದರು. ಸಧ್ಯ ಈ ಆರೋಪಿಗಳನ್ನು ಬಂಧಿಸುವಲ್ಲಿ ಕಿತ್ತೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಳಗಾವಿಯ ರಾಮತೀರ್ಥನಗರದ ನಿವಾಸಿ ಅತಾವುಲ್ಲಾ ಮಹಮ್ಮದ್‍ಹಯಾತ್ ಹೊನಗೇಕರ್ ಹಣ ಕಳೆದುಕೊಂಡ ವ್ಯಕ್ತಿ. ಬಳಿಕ ಇವರು ಈ ಸಂಬಂಧ ಕಿತ್ತೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ಗಂಭೀರವಾಗಿ ಪರಿಗಣಿಸಿದ್ದ ಕಿತ್ತೂರು ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.ಬಂಧಿತರಿಂದ 70 …

Read More »

ಪಿಎಸ್‌ಐ ನೇಮಕಾತಿ ಪರೀಕ್ಷೆ ಹಗರಣ: ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದಿದ್ದ ಅಭ್ಯರ್ಥಿ ಬಂಧನ

ಕಲಬುರಗಿ: 545 ಪಿಎಸ್‌ಐ ನೇಮಕಾತಿಯ ಪರೀಕ್ಷೆ ಹಗರಣ ತನಿಖೆ ಸಿಐಡಿ ತೀವ್ರಗೊಳಿಸಿದ್ದು, ಮಹಿಳಾ ಕೋಟಾದಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದಿದ್ದ ರಚನಾ ಎಂಬ ಅಭ್ಯರ್ಥಿಯನ್ನು ಬಂಧಿಸಲಾಗಿದೆ. ಪಿಎಸ್‌ಐ ಮಹಿಳಾ ಕೋಟಾದಲ್ಲಿ ಮೊದಲ ರ‍್ಯಾಂಕ್ ಪಡೆದಿದ್ದ ರಚನಾ ಬಂಧಿತ ಆರೋಪಿ ಯಾಗಿದ್ದು, ವಿಶೇಷವೆನಂದರೆ ಪಿಎಸ್‌ಐ ಪರೀಕ್ಷಾ ಅಕ್ರಮ ಹೋರಾಟದಲ್ಲಿ ಮುಂಚೂಣಿ ಪಾತ್ರ ವಹಿಸಿದ್ದರು.   ರಚನಾ ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ಮೂಲದವಳಾಗಿದ್ದು, ಪಿಎಸ್‌ಐ ಹಗರಣ ಹೊರ ಬಂದಾಗಿನಿಂದ ನಾಪತ್ತೆಯಾಗಿದ್ದರು.‌ ಬೆಂಗಳೂರು ಸಿಐಡಿ ಅಧಿಕಾರಿಗಳು …

Read More »

ಗೋಕಾಕದಲ್ಲಿ ಮನೆಗಳ್ಳತನ ಮಾಡಿದ್ದ ಕುಖ್ಯಾತ ಕಳ್ಳರ ಬಂಧನ!

ಗೋಕಾಕ : ಶಹರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಕಳೆದ ಕೆಲವು ತಿಂಗಳುಗಳಿಂದ ಮನೆ ಕಳ್ಳತನ ಮಾಡುತ್ತಿದ್ದ ಕಳ್ಳರನ್ನು ಬಂಧಿಸಿದ್ದಾರೆ. ನಗರದ ಜಿ.ಆರ್.ಬಿ.ಸಿ. ಕಾಲೋನಿಯಲ್ಲಿ ತಿರುಗಾಡುತ್ತಿದ್ದ ಒಬ್ಬನಿಗೆ ಹಿಡಿದುಕೊಂಡು ಠಾಣೆಗೆ ತಂದು ವಿಚಾರಣೆಗೆ ಒಳಪಡಿಸಿದ್ದಾರೆ, ಸದರಿಯವನು ತಾನು ಮತ್ತು ಇನ್ನೊಬ್ಬ ಕೂಡಿಕೊಂಡು ಇದೇ ವರ್ಷ 2022 ಮಾರ್ಚ್ ತಿಂಗಳಲ್ಲಿ ಲಕ್ಷ್ಮೀ ಬಡಾವಣೆಯಲ್ಲಿಯ ಒಂದು ಮನೆ ಹಾಗೂ ಜುಲೈ ಆಶ್ರಯ ಬಡಾವಣೆಯಲ್ಲಿಯ ಒಂದು ಕಳ್ಳತನ ಮಾಡಿದ ಬಗ್ಗೆ ಹಾಗೂ ಜೂನ್ ತಿಂಗಳಲ್ಲಿ ವಿದ್ಯಾ …

Read More »

ಸಿದ್ದರಾಮಯ್ಯರ ಕಿರಿಯ ಸಹೋದರ ರಾಮೇಗೌಡ ನಿಧನ

ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕಿರಿಯ ಸಹೋದರ ರಾಮೇಗೌಡ (64) ಶುಕ್ರವಾರ (ಆಗಸ್ಟ್.26) ರಾತ್ರಿ ನಿಧನರಾಗಿದ್ದಾರೆ. ಮೈಸೂರು ತಾಲೂಕಿನ ಸಿದ್ದರಾಮನಹುಂಡಿ ನಿವಾಸಿ ರಾಮೇಗೌಡ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.   ಮೃತ ರಾಮೇಗೌಡರ ಅಂತ್ಯಕ್ರಿಯೆ ಶನಿವಾರ ಸ್ವಗ್ರಾಮ ಸಿದ್ದರಾಮನ ಹುಂಡಿಯ ಅವರ ಜಮೀನಿನಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Read More »

ಇಂದು ಬೆಳಗಿನ ಜಾವ ಕೆರೆಗೆ ನೀರು ಕುಡಿಯಲು ಬಂದಿದ್ದ ಚಿರತೆ ಮತ್ತೆ ಎಸ್ಕೇಪ್

ಬೆಳಗಾವಿಯ ಕ್ಲಬ್ ರೋಡ್‍ನಲ್ಲಿ ರಸ್ತೆ ದಾಟುವಾಗ ಜಸ್ಟ್ ಮಿಸ್ ಆಗಿದ್ದ ಚಿರತೆ ಇಂದು ಬೆಳಗಿನ ಜಾವ ಮತ್ತೆ ಎಸ್ಕೇಪ್ ಆಗಿದ್ದು, ಕೆರೆಗೆ ನೀರು ಕುಡಿಯಲು ಬಂದಿದ್ದ ವೇಳೆ ಪರಾರಿಯಾಗಿದೆ ಹೌದು ಕಳೆದ 23 ದಿನಗಳಿಂದ ಕುಂದಾನಗರಿ ಬೆಳಗಾವಿಯಲ್ಲಿ ಭೀತಿ ಹುಟ್ಟಿಸಿರುವ ಚಿರತೆ ಅರಣ್ಯ ಇಲಾಖೆ ಅಧಿಕಾರಿಗಳ ಜೊತೆಗೆ ಚೆಲ್ಲಾಟ ಆಡುತ್ತಿದೆ. ಇಂದು ಬೆಳಗಿನ ಜಾವ ಹಿಂಡಲಗಾ ಗಣಪತಿ ಮಂದಿರದ ಪಕ್ಕದಲ್ಲಿರುವ ಕೆರೆಗೆ ನೀರು ಕುಡಿಯಲು ಬಂದಿತ್ತು. ಈ ವೇಳೆ ಅರಣ್ಯ …

Read More »

ಚಿರತೆಯು ಭಯ ಸಿಎಂ ಬೊಮ್ಮಾಯಿಗೆ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಪತ್ರ

ಬೆಳಗಾವಿ ನಾಗರಿಕರಲ್ಲಿ ಭಯ ಹುಟ್ಟಿಸಿರುವ ಹಾಗೂ 10 ಸಾವಿರಕ್ಕೂ ಅಧಿಕ ಶಾಲಾ ಮಕ್ಕಳ ಶಿಕ್ಷಣಕ್ಕೆ ಕುತ್ತು ತಂದಿರುವ ಗಾಲ್ಫ್ ಕ್ಲಬ್ ಮೈದಾನದಲ್ಲಿಯ ಚಿರತೆಯನ್ನು ಹಿಡಿಯಲು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಹಾಗೂ ಚಿರೆತೆ ಹಿಡಿಯುವ ಪರಿಣಿತರ ತಂಡವನ್ನು ಬೆಳಗಾವಿಗೆ ಕಳಿಸುವಂತೆ ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಸಿಎಂ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ. ಬೆಳಗಾವಿಯ ಹಿಂಡಲಗಾ ರಸ್ತೆಯಲ್ಲಿರುವ ಹನುಮಾನ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಸಹಸ್ರಾರು ನಾಗರಿಕರು …

Read More »

ಲಿಂಗರಾಜ್ ಕಾಲೇಜಿನಲ್ಲಿ ಕನ್ನಡ ಹಬ್ಬದ ಸಂಭ್ರಮ..!!

ಬೆಳಗಾವಿಯ ಪ್ರತಿಷ್ಠಿತ ಕೆಎಲ್‌ಇ ಸಂಸ್ಥೆಯ ಲಿಂಗರಾಜ್ ಕಾಲೇಜಿನ ಕನ್ನಡ ವಿಭಾಗದ ವತಿಯಿಂದ ಕನ್ನಡ ಹಬ್ಬ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ವಿಧ್ಯಾರ್ಥಿಗಳು ಸಾಂಪ್ರದಾಯಿಕ ಉಡುಪನ್ನು ಧರಿಸಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಕನ್ನಡ ಹಬ್ಬಕ್ಕೆ ವಿಶೇಷ ಮೆರಗನ್ನು ತಂದರು. ಹೌದು ಪ್ರತಿಷ್ಠಿತ ಕೆಎಲ್‌ಇ ಸಂಸ್ಥೆಯ ಲಿಂಗರಾಜ್ ಕಾಲೇಜಿನಲ್ಲಿ ಕನ್ನಡ ವಿಭಾಗ ಹಾಗೂ ಐಕ್ಯುಎಸಿ ವಿಭಾಗಗಳ ಸಂಯುಕ್ತಾಶ್ರಯದಲ್ಲಿ ಇಂದು ಶನಿವಾರ ಆಗಸ್ಟ್ ೨೭ ರಂದು ಕಾಲೇಜಿನ ಆವರಣದಲ್ಲಿ ಕನ್ನಡ ಹಬ್ಬ ವಿಶೇಷ ಕಾರ್ಯಮವನ್ನು …

Read More »

ಸಂತೋಷ್ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ!

ಯರಗಟ್ಟಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಯರಗಟ್ಟಿ ತಾಲೂಕಿನ ಮಲಗಲಿ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.   ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ …

Read More »