Breaking News

Monthly Archives: ಆಗಷ್ಟ್ 2022

ಬೆಳಗಾವಿಯಲ್ಲಿಯೇ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕೆಂದು ಬೆಳಗಾವಿ ಬಾರ್ ಆಸೋಸಿಯೇಷನ್ ಒತ್ತಾಯ

ರಾಜ್ಯದ ಎರಡನೇ ರಾಜಧಾನಿ ಎಂದು ಕರೆಯಿಸಿಕೊಳ್ಳುವ ಬೆಳಗಾವಿಯಲ್ಲಿಯೇ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕೆಂದು ಬೆಳಗಾವಿ ಬಾರ್ ಆಸೋಸಿಯೇಷನ್ ಒತ್ತಾಯಿಸಿದೆ. ಗುರುವಾರದಂದು ಬೆಳಗಾವಿ ಬಾರ್ ಆಸೋಸಿಯೇಷನ್‍ನ ಅಧ್ಯಕ್ಷ ಪ್ರಭು ಯತ್ನಟ್ಟಿ ಅವರ ನೇತೃತ್ವದಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಕಾರ್ಯಾಲಯಕ್ಕೆ ಆಗಮಿಸಿದ ಬಾರ್ ಅಸೋಸಿಯೇಷನ್‍ನ ಸದಸ್ಯರು ಪ್ರತಿಭಟನೆಯನ್ನು ನಡೆಸಿದರು. ಬೆಳಗಾವಿಯಲ್ಲಿಯೇ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕೆಂದು ಆಗ್ರಹಿಸಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರಿಗೆ ಬೆಳಗಾವಿ ಜಿಲ್ಲಾಧಿಕಾರಿಗಳ ಮೂಲಕ ಮನವಿವನ್ನು ಸಲ್ಲಿಸಿದರು.ಬೆಳಗಾವಿ ಬಾರ್ ಆಸೋಸಿಯೇಷನ್‍ನ ಅಧ್ಯಕ್ಷ ಪ್ರಭು …

Read More »

ಚಿರತೆ ಬಂದೈತಿ, ಓಡಲೇ….ಓಡಲೇ… ಓಡಲೇ…!

ಬೆಳಗಾವಿ-ಬೆಳಗಾವಿ ಮಹಾನಗರದಲ್ಲಿ ಚಿರತೆ ಪತ್ತೆ ಕಾರ್ಯಾಚರಣೆ ಜೋರಾಗಿ ನಡೆಯುತ್ತಿದೆ.ಇಂದು ಮಧ್ಯಾಹ್ನ 3-00 ಗಂಟೆ ಸುಮಾರಿಗೆ ಹಿಂಡಲಗಾ ಗಣಪತಿ ಮಂದಿರದ ಬಳಿ ಇರುವ ಮಿಲಿಟರಿ ಕ್ವಾಟರ್ಸ್ ಹತ್ತಿರ ಚಿರತೆ ಕಾಣಿಸಿಕೊಂಡಿದೆ.   ಹಿಂಡಲಗಾ ಗಣಪತಿ ಮಂದಿರದ ಹತ್ತಿರದಲ್ಲೇ ಇರುವ ಹನುಮಾನ ನಗರದ ಡಬಲ್ ರಸ್ತೆಯಲ್ಲಿರುವ ಮಿಲಿಟರಿ ಕ್ವಾಟರ್ಸ್ ಗೇಟ್ ಬಳಿ ಚಿರತೆ ಕಾಣಿಸಿಕೊಂಡು ಮತ್ತೆ ಗಾಲ್ಫ್ ಮೈದಾನದಲ್ಲಿ ಪರಾರಿಯಾಗಿದೆ.   ಗಾಲ್ಫ್ ಮೈದಾನದಲ್ಲಿ ಚಿರತೆ ಪತ್ತೆಗೆ ಜಿಸಿಬಿಯಿಂದ ಕಾರ್ಯಾಚರಣೆ ನಡೆಯುತ್ತಿರುವಾಗ,ಗಿಡಗಂಟೆಯಲ್ಲಿ ಅಡಗಿ …

Read More »

ಲಾರಿ ಹಾಗೂ ಟೆಂಪೋ ಟ್ರ್ಯಾಕ್ಸ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ‌ ಅಪಘಾತದಲ್ಲಿ 9 ಜನರು ಸಾವನ್ನಪ್ಪಿದ್ದು 14ಕ್ಕೂ ಹೆಚ್ಚು ಜನರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ.

ತುಮಕೂರು: ತುಮಕೂರು ಜಿಲ್ಲೆ‌ ಶಿರಾ ತಾಲ್ಲೂಕಿನ ಕಳ್ಳಂಬೆಳ್ಳ ಬಳಿಯ ಬಾಲೆನಹಳ್ಳಿ ಗೇಟ್ ಬಳಿ ಗುರುವಾರ ನಸುಕಿನಲ್ಲಿ ಲಾರಿ ಹಾಗೂ ಟೆಂಪೋ ಟ್ರ್ಯಾಕ್ಸ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ‌ ಅಪಘಾತದಲ್ಲಿ 9 ಜನರು ಸಾವನ್ನಪ್ಪಿದ್ದು 14ಕ್ಕೂ ಹೆಚ್ಚು ಜನರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಬೆಳಗಿನ ಜಾವ ಸರಿಸುಮಾರು 4 . 30ಕ್ಕೆ ಈ ದುರಂತ ಸಂಭವಿಸಿದೆ.   ಟೆಂಪೋ ಟ್ರ್ಯಾಕ್ಸ್ ರಾಯಚೂರು ಕಡೆಯಿಂದ ಬೆಂಗಳೂರು ಕಡೆಗೆ ತೆರಳುತ್ತಿತ್ತು. ಲಾರಿ …

Read More »

ಗ್ರಾಮದ ಯುವಕರೆಲ್ಲ ಸೇರಿ ಮಾನಸಿಕ ಅಸ್ವಸ್ಥನೊಬ್ಬನನ್ನು ಮರಕ್ಕೆ ಕಟ್ಟಿಅಮಾನವೀಯವಾಗಿ ಥಳಿತ

ಬೆಳಗಾವಿ (ಆ.25): ಗ್ರಾಮದ ಯುವಕರೆಲ್ಲ ಸೇರಿ ಮಾನಸಿಕ ಅಸ್ವಸ್ಥನೊಬ್ಬನನ್ನು ಮರಕ್ಕೆ ಕಟ್ಟಿಅಮಾನವೀಯವಾಗಿ ಥಳಿಸಿ, ಮೆರವಣಿಗೆ ಮಾಡಿದ ಪರಿಣಾಮ ಗಂಭೀರ ಗಾಯಗೊಂಡ ಆತ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಘಟನೆ ಬಸವನಕುಡಚಿಯಲ್ಲಿ ನಡೆದಿದೆ. ಬೆಳಗಾವಿ ತಾಲೂಕಿನ ಬಸವನಕುಡಚಿ ಗ್ರಾಮದ ಗಾಂಧಿ ಗಲ್ಲಿಯ ವಿಶಾಲ್‌ ಕಲ್ಲಪ್ಪ ಪಟಾಯಿ (28) ಮೃತ ವ್ಯಕ್ತಿ. ವಿಶಾಲ ಪಟಾಯಿ ಮಾನಸಿಕ ಅಸ್ವಸ್ಥನಾಗಿದ್ದ. ಈ ವಿಚಾರ ಗ್ರಾಮಸ್ಥರಿಗೂ ಗೊತ್ತಿತ್ತು. ಈತ ಆಗಾಗ ಗ್ರಾಮದವರ ಮೇಲೆ ಹಲ್ಲೆ ಮಾಡುತ್ತಿದ್ದ ಎಂದು ಹೇಳಲಾಗುತ್ತಿದೆ. …

Read More »

ಆಗಸ್ಟ್ 7ರಂದು ನಡೆದಿದ್ದ ಕೆಪಿಟಿಸಿಎಲ್ ಪರೀಕ್ಷೆಯಲ್ಲಿ ಬಗೆದಷ್ಟು ಅಕ್ರಮಗಳು ಬಯಲಾಗುತ್ತಿದೆ

ಬೆಳಗಾವಿ : ಆಗಸ್ಟ್ 7ರಂದು ನಡೆದಿದ್ದ ಕೆಪಿಟಿಸಿಎಲ್ ಪರೀಕ್ಷೆಯಲ್ಲಿ ಬಗೆದಷ್ಟು ಅಕ್ರಮಗಳು ಬಯಲಾಗುತ್ತಿದ್ದು, ಬೆಳಗಾವಿಯಲ್ಲಿ ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆಗಸ್ಟ್ 7ರಂದು ರಾಜ್ಯಾದ್ಯಂತ ಕೆಪಿಟಿಸಿಎಲ್ ಕಿರಿಯ ಸಹಾಯಕ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋಕಾಕ ಪಟ್ಟಣದಲ್ಲಿ ಅಭ್ಯರ್ಥಿಯೊಬ್ಬ ಸ್ಮಾರ್ಟ್​ವಾಚ್ ಬಳಸಿ ಪರೀಕ್ಷೆ ಬರೆದು ಸಿಕ್ಕಿಹಾಕಿಕೊಂಡಿದ್ದರು.   ಪ್ರಕರಣ ಸಂಬಂಧ ಈಗಾಗಲೇ 9 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಎಸ್ಪಿ ಡಾ ಸಂಜೀವ್ ಪಾಟೀಲ್ ನೇತೃತ್ವದ ತಂಡದಿಂದ ಮತ್ತೆ …

Read More »

ಪ್ಲಾಸ್ಟಿಕ್‌ ಕವರ್​​ನಲ್ಲಿ ನವಜಾತ ಶಿಶುವನ್ನು ಮರಕ್ಕೆ ನೇತು ಹಾಕಿದ ತಾಯಿ

ಬೆಳಗಾವಿ: ಪ್ಲಾಸ್ಟಿಕ್‌ ಕವರ್​​ನಲ್ಲಿ ನವಜಾತ ಶಿಶುವನ್ನು ಮರಕ್ಕೆ ನೇತು ಹಾಕಿರುವ ಅಮಾನವೀಯ ಘಟನೆ ಖಾನಾಪೂರ ತಾಲೂಕಿನ ನೇರಸಾ ಗೌಳಿವಾಡ ಗ್ರಾಮದಲ್ಲಿ ನಡೆದಿದೆ. ಸದ್ಯ ಮಗು ಆರೋಗ್ಯವಾಗಿದ್ದು, ಹೆಚ್ಚಿನ‌ ಚಿಕಿತ್ಸೆಗೆ ಬೆಳಗಾವಿ ಬೀಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.   ಗ್ರಾಮದಲ್ಲಿ ಅಪರಿಚಿತ ತಾಯಿಯೊಬ್ಬರು ನಿನ್ನೆ ರಾತ್ರಿ ಪ್ಲಾಸ್ಟಿಕ್ ಕವರ್​ನಲ್ಲಿ ಗಂಡು ಶಿಶುವನ್ನಿಟ್ಟು ಮರಕ್ಕೆ ನೇತು ಹಾಕಿ ಹೋಗಿದ್ದಾರೆ. ಇತ್ತ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಆಶಾ ಕಾರ್ಯಕರ್ತೆಯರು ಶಿಶುವನ್ನು ಖಾನಾಪೂರ ಸಾರ್ವಜನಿಕ ಆಸ್ಪತ್ರೆಗೆ …

Read More »

ಸಾರ್ವಜನಿಕ ಗಣೇಶೋತ್ಸವಕ್ಕೂ ಅನುಮತಿ ಇರುವ ಕಾರಣ ಗೌರಿ- ಗಣೇಶ ಮೂರ್ತಿಗಳ ಮಾರಾಟ ಭರ್ಜರಿಯಾಗಿ ನಡೆಯುತ್ತಿದೆ.

ಬೆಂಗಳೂರು: ಕಳೆದ ಎರಡು ವರ್ಷಗಳಲ್ಲಿ ಕೊರೊನಾ ಪರಿಣಾಮದಿಂದಾಗಿ ಕುಸಿತಗೊಂಡಿದ್ದ ಗಣೇಶ ಮೂರ್ತಿಗಳ ಮಾರಾಟ ಈ ವರ್ಷ ಚೇತರಿಸಿಕೊಂಡಿದೆ. ಸಾರ್ವಜನಿಕ ಗಣೇಶೋತ್ಸವಕ್ಕೂ ಅನುಮತಿ ಇರುವ ಕಾರಣ ಗೌರಿ- ಗಣೇಶ ಮೂರ್ತಿಗಳ ಮಾರಾಟ ಭರ್ಜರಿಯಾಗಿ ನಡೆಯುತ್ತಿದೆ. ಕಳೆದ ವರ್ಷಕ್ಕಿಂತ ಈ ಸಲ ವಹಿವಾಟು ದುಪ್ಪಟ್ಟುಗೊಂಡಿದೆ. ಗಣೇಶ ಮೂರ್ತಿಗಳ ತಯಾರಿಕೆಯಲ್ಲಿ ತೊಡಗಿದ್ದವರ ಕುಟುಂಬಗಳಲ್ಲೂ ಸಂತಸ ಮನೆ ಮಾಡಿದೆ. ಕಳೆದ 2 ವರ್ಷಗಳಲ್ಲಿ ಕೇವಲ 15ರಿಂದ 20 ಲಕ್ಷ ರೂ. ಆದಾಯ ಬರುತ್ತಿತ್ತು. ಆದರೆ, ಈ …

Read More »

ಹೊಸದಾಗಿ `BPL’ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಗುಡ್ ನ್ಯೂಸ್

ಬೆಂಗಳೂರು : ಬಿಪಿಎಲ್ ಕಾರ್ಡ್ ಗೆ ಹೊಸದಾಗಿ ಅರ್ಜಿ ಸಲ್ಲಿಸಿದವರಿಗೆ ಆಹಾರ ಸಚಿವ ಉಮೇಶ್ ಕತ್ತಿ ಸಿಹಿಸುದ್ದಿ ನೀಡಿದದು, ಶೀಘ್ರವೇ ಬಿಪಿಎಲ್ ಕಾರ್ಡ್ ವಿತರಿಸಲಾಗುವುದು ಎಂದು ಹೇಳಿದ್ದಾರೆ.   ವಿಧಾನಸೌಧದಲ್ಲಿ ಆಹಾರ ಇಲಾಖೆ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ಸಚಿವ ಉಮೇಶ್ ಕತ್ತಿ, ಬಿಪಿಎಲ್ ಕಾರ್ಡ್ ಗೆ 1.5 ಲಕ್ಷ ಹೊಸ ಅರ್ಜಿ ಸ್ವೀಕರಿಸಲಾಗಿದೆ. ಹೊಸ ಕಾರ್ಡುದಾರರಿಗೆ ಪಡಿತರ ವಿತರಿಸಿದಲ್ಲಿ ಸರ್ಕಾರಕ್ಕೆ ಆಗುವ ಹೆಚ್ಚುವರಿ ಹೊರೆ ಬಗ್ಗೆ ಚರ್ಚೆಯಾಗಿದೆ. ಹೊಸ …

Read More »

ಕೆಪಿಎಟಿಸಿಎಲ್‌ ಪರೀಕ್ಷೆ ಅಕ್ರಮ: ಮತ್ತೆ ಮೂವರ ಬಂಧನ

ಬೆಳಗಾವಿ: ಕೆಪಿಟಿಸಿಎಲ್‌ ಕಿರಿಯ ದರ್ಜೆ ಸಹಾಯಕ ಹುದ್ದೆ ಲಿಖೀತ ಪರೀಕ್ಷೆ ವೇಳೆ ನಡೆದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರನ್ನು ಬಂಧಿ ಸಲಾಗಿದ್ದು, ಬಂಧಿತರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ. ಹುಕ್ಕೇರಿಯ ಸರ್ಕಾರಿ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕನಾಗಿರುವ ಕಮತನೂರ ಗ್ರಾಮದ ಆದೇಶ ಈರಪ್ಪ ನಾಗನೂರಿ (26), ಬೈಲಹೊಂಗಲ ತಾಲೂಕಿನ ನಾವಲಗಟ್ಟಿ ಗ್ರಾಮದ ಮಡಿವಾಳಪ್ಪ ಬಾಳಪ್ಪ ತೋರನಗಟ್ಟಿ (36) ಹಾಗೂ ಹೊಸಕೋಟಿ ಗ್ರಾಮದ ಶಂಕರ ಕಲ್ಲಪ್ಪ ಉಣಕಲ್‌ (30) ಎನ್ನುವವರನ್ನು ಬಂ ಧಿಸಲಾಗಿದೆ.   ಬಂಧಿತರಿಂದ ಒಂದು …

Read More »

ನಾಲಿಗೆ ಕಟ್ ಮಾಡುತ್ತೇನೆ ಹುಷಾರ್ ಎಂಬುದಾಗಿ ಈಶ್ವರಪ್ಪಗೆ  ಬೆದರಿಕೆ ಪತ್ರ

ಶಿವಮೊಗ್ಗ: ಮಾಜಿ ಸಚಿವ ಕೆ ಎಸ್ ಈಶ್ವರಪ್ಪಗೆ   ಇಂದು ಬೆದರಿಕೆ ಪತ್ರವೊಂದುಬಂದಿದೆ. ಆ ಪತ್ರದಲ್ಲಿ ನಾಲಿಗೆ ಕಟ್ ಮಾಡುತ್ತೇನೆ ಹುಷಾರ್ ಎಂಬುದಾಗಿ ಎಚ್ಚರಿಕೆ ನೀಡಲಾಗಿದೆ. ಈ ಸಂಬಂಧ ಅವರು ಪೊಲೀಸರಿಗೆ ಸೂಕ್ತ ತನಿಖೆ ನಡೆಸಿ, ಬೆದರಿಕೆ ಹಾಕಿದ ಆರೋಪಿಯನ್ನು ಬಂಧಿಸುವಂತೆ ದೂರು ನೀಡಿದ್ದಾರೆ.   ಶಾಸಕ ಕೆ.ಎಸ್ ಈಶ್ವರಪ್ಪ ಅವರ ಶಿವಮೊಗ್ಗ ನಗರದಲ್ಲಿನ ಮಲ್ಲೇಶ್ವರದ ನಿವಾಸಕ್ಕೆ ಅನಾಮದೇಯ ಬೆದರಿಕೆ ಪತ್ರವೊಂದು ಬಂದಿದೆ. ಆ ಪತ್ರದಲ್ಲಿ ಸ್ವತಂತ್ರ್ಯ ಸೇನಾನಿಯಾದ ನಮ್ಮ ಸಮಾಜದ …

Read More »