Breaking News

Daily Archives: ಸೆಪ್ಟೆಂಬರ್ 3, 2022

ಪೊಲೀಸ್‌ ನೇಮಕಾತಿ ವಯೋಮಿತಿ ಹೆಚ್ಚಿಸಲು ಆಗ್ರಹ

ರಾಯಚೂರು: ಪೊಲೀಸ್‌ ನೇಮಕಾತಿಯಲ್ಲಿ ವಯೋಮಿತಿ ಹೆಚ್ಚಿಸಬೇಕು, ಖಾಲಿ ಇರುವ ಎಲ್ಲ ಹುದ್ದೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿ ಅಖೀಲ ಭಾರತ ನಿರುದ್ಯೋಗ ಯುವಜನರ ಹೋರಾಟ ಸಮಿತಿ ಸದಸ್ಯರು ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಈ ಕುರಿತು ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಒಂದೆಡೆ ಪದವೀಧರರು ಡಿಗ್ರಿಗಳನ್ನು ಪಡೆದು ಸಣ್ಣ ಪುಟ್ಟ ಕೆಲಸ ಮಾಡುವ ಪರಿಸ್ಥಿತಿ ಇದೆ. ಅಲ್ಲದೇ, ಕೋವಿಡ್‌ -19 ಪರಿಸ್ಥಿತಿಯಲ್ಲಿ, ಉದ್ಯೋಗ ಕಳೆದುಕೊಂಡು ಯುವಕರು ಕಂಗಾಲಾಗಿದ್ದಾರೆ. ಆದರೆ, ಸರ್ಕಾರಿ …

Read More »

ಮುರುಘಾ ಶ್ರೀಗಳಿಗೆ ಮತ್ತೊಂದು ಕಂಟಕ : ಲೈಂಗಿಕ ದೌರ್ಜನ್ಯ‌ ಮೆಡಿಕಲ್‌ ಟೆಸ್ಟ್‌ ರಿಪೋರ್ಟ್‌ ಬಹಿರಂಗ

ಚಿತ್ರದುರ್ಗ : ಫೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀಗಳಿಗೆ ಮತ್ತೊಂದು ಕಂಟಕ ಎದುರಾಗಿದ್ದು, ಲೈಂಗಿಕ ದೌರ್ಜನ್ಯ‌ ಮೆಡಿಕಲ್‌ ಟೆಸ್ಟ್‌ ರಿಪೋರ್ಟ್ ಬಹಿರಂಗವಾಗಿದೆ. ಅಪ್ರಾಪ್ತರಿಗೆ ಲೈಂಗಿಕ ದೌರ್ಜನ್ಯ ನೀಡಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮುರುಘಾಮಠದ ಡಾ.ಶಿವಮೂರ್ತಿ ಮುರುಘಾ ಶರಣರನ್ನು 2 ನೇ ಅಪರ ಜಿಲ್ಲಾ ಕೋರ್ಟ್ ಎದುರು ಶುಕ್ರವಾರ ಹಾಜರುಪಡಿಸಲಾಗಿದ್ದು, ಸೆ. 5 ರವರೆಗೆ ಅವರನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ನಿನ್ನೆ ಪೊಲೀಸ್‌ ಕಸ್ಟಡಿಗೆ ಒಪ್ಪಿಸಿದ ಬೆನ್ನಲ್ಲೇ ಪೊಲೀಸರು ಜಿಲ್ಲಾಸ್ಪತ್ರೆಯಲ್ಲಿ ಶ್ರೀಗಳನ್ನು ವೈದ್ಯಕೀಯ ಟೆಸ್ಟ್‌ …

Read More »

ಮೋದಿ ಎಲ್ಲವನ್ನೂ ಮಾರಾಟ ಮಾಡುತ್ತಿದ್ದಾರೆಯೇ ಹೊರತು ಯಾವುದನ್ನೂ ಸ್ಥಾಪಿಸುತ್ತಿಲ್ಲ: ಎಂ.ಬಿ.ಪಾಟೀಲ್

ತುಮಕೂರು,ಸೆ.03: ಪ್ರಾಥಮಿಕ ಶಾಲೆಯಿಂದ ಐಐಟಿವರೆಗೆ ಸ್ಥಾಪನೆಯಾಗಿರುವುದು ಕಾಂಗ್ರೆಸ್ ಪಕ್ಷದಿಂದಲೇ ಹೊರತು ಬಿಜೆಪಿಯಿಂದಲ್ಲ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.   ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಎಪ್ಪತ್ತು ವರ್ಷದಲ್ಲಿ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ, ಕಾಂಗ್ರೆಸ್ ಮುಂದಾಲೋಚನೆಯಿಂದಲೇ ಹಸಿರು, ಬಿಳಿ ಮತ್ತು ಹಳದಿ ಕ್ರಾಂತಿಯಾಯಿತು, ನವರತ್ನಗಳ ಮೂಲಕ ಉದ್ಯಮ ಸ್ಥಾಪಿಸಿ ಉದ್ಯೋಗ ದೊರಕಿಸಿದೆ ಎಂದರು. ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದ ಮೇಲೆ ರೈಲ್ವೆ, ಬಂದರು …

Read More »

ಟಿಪ್ಪುನನ್ನು ವರ್ಣನೆ ಮಾಡಿದಕ್ಕೆ ಮುರುಘಾ ಸ್ವಾಮೀಜಿಗೆ ಈ ಗತಿ ಬಂದಿದೆ: ಯತ್ನಾಳ್

ವಿಜಯಪುರ, ಸೆಪ್ಟೆಂಬರ್ 3: ಚಿತ್ರದುರ್ಗದ ಮುರಘಾ ಮಠದ ಸ್ವಾಮೀಜಿ ಮೇಲೆ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದಿರುವ ಮೇಲೆ ಶಿವಮೂರ್ತಿ ಮುರುಘಾ ಶರಣರು ಮತ್ತೆ ಮಠದ ಪೀಠಾಧಿಪತಿಯಾಗಬಾರದು ಎಂದು ವಿಜಯಪುರ ಶಾಸಕ ಬಸನಗೌಡ ಯತ್ನಾಳ್ ಅಭಿಪ್ರಾಯಪಟ್ಟಿದ್ದಾರೆ.   ಈ ಪ್ರಕರಣದ ಬಗ್ಗೆ ನಗರದಲ್ಲಿ ಮಾತನಾಡಿದ ಯತ್ನಾಳ್, “ದೇಶ ಹಾಳಾಗುವುದಕ್ಕೆ ಪ್ರಗತಿಪರರೇ ಕಾರಣ, ಇಂದು ಸ್ವಾಮೀಜಿಯ ಪರಿಸ್ಥಿತಿಗೂ ಅವರೇ ಕಾರಣ, ಮುರುಘಾ ಶರಣರು ಟಿಪ್ಪು ಸುಲ್ತಾನ ಫೋಟೋ ತೆಗೆದುಕೊಂಡು …

Read More »

ರಾಜ್ಯಾದ್ಯಂತ 4,244 ಹೊಸ ಅಂಗನವಾಡಿ ಕೇಂದ್ರ ಪ್ರಾರಂಭಿಸಲು ಸರ್ಕಾರ ಆಡಳಿತಾತ್ಮಕ ಅನುಮೋದನೆ

ಬೆಂಗಳೂರು: ರಾಜ್ಯದ ಸುಮಾರು 16 ಲಕ್ಷ ಕುಟುಂಬಗಳ ಮಕ್ಕಳ ಪೌಷ್ಟಿಕಾಂಶ ಮತ್ತು ಶಾಲಾ ಪೂರ್ವ ಶಿಕ್ಷಣದ ಪ್ರಯೋಜನ ಪಡೆಯುವ ಹಾಗೂ 8100 ಮಹಿಳೆಯರಿಗೆ ಉದ್ಯೋಗಾವಕಾಶ ನೀಡುವಂತಹ 4244 ಅಂಗನವಾಡಿ ಕೇಂದ್ರಗಳನ್ನು ಪ್ರಾರಂಭಿಸಲು ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ. ಇದಕ್ಕಾಗಿ 268.98 ಕೋಟಿ ರೂಪಾಯಿಗಳ ಅನುದಾನವನ್ನು ಮೀಸಲಿಡಲಾಗಿದ್ದು, ಶೀಘ್ರದಲ್ಲಿ ಅಂಗನವಾಡಿ ಕೇಂದ್ರಗಳನ್ನು ಪ್ರಾರಂಭಿಸಲಾಗುವುದು ಎಂದು ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಶ್ರೀ ಹಾಲಪ್ಪ …

Read More »

ಸ್ಮಶಾನ ಇಲ್ಲದ್ದಕ್ಕೆ ಗ್ರಾಮ ಪಂಚಾಯತ್ ಚಾವಡಿ ಮೇಲೇ ಸಂಸ್ಕಾರಕ್ಕೆ ಸಿದ್ಧತೆ; ಕೊನೇಲಿ ಆಗಿದ್ದೇ ಬೇರೆ..

ಬಾಗಲಕೋಟೆ: ಸ್ಮಶಾನ ಇಲ್ಲದೆ ಸರ್ಕಾರಿ ಜಾಗದಲ್ಲಿ ಸಂಸ್ಕಾರಕ್ಕೆ ಮುಂದಾದಂತಹ ಪ್ರಕರಣಗಳು ಬಹಳಷ್ಟಿದ್ದು, ಇಂದು ಅಂಥದ್ದೇ ಮತ್ತೊಂದು ಪ್ರಕರಣ ಕಂಡುಬಂದಿದೆ. ಸ್ಮಶಾನ ಇಲ್ಲದ ಕಾರಣಕ್ಕೆ ಗ್ರಾಮ ಪಂಚಾಯತ್ ಚಾವಡಿ ಮೇಲೇ ಶವಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಂಡ ಘಟನೆಯೊಂದು ನಡೆದಿದೆ.   ಬಾಗಲಕೋಟೆ ಜಿಲ್ಲೆಯ ಕೆರಕಲಕಟ್ಟಿ ಗ್ರಾಮ ಪಂಚಾಯತ್ ಚಾವಡಿ ಮೇಲೆ ಅಂತ್ಯಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಂಡು ಒಂದಷ್ಟು ಕಾಲ ಪ್ರಕ್ಷುಬ್ಧ ವಾತಾವರಣ ಉಂಟಾಗಿತ್ತು. ನಿನ್ನೆ ರಾತ್ರಿ ಸಾವಿಗೀಡಾಗಿದ್ದ ಬೀಳಗಿ ಮತಕ್ಷೇತ್ರದ ಬಾದಾಮಿ ತಾಲೂಕಿನ‌ ಕೆರಕಲಮಟ್ಟಿಯ ಕಾಳಪ್ಪ …

Read More »

ನಾನು ಮುರುಘಾ ಮಠಕ್ಕೆ ಹೋಗಿ ಬರ್ತಿನಿ; ಗದ್ದುಗೆಯಲ್ಲಿ ದರ್ಶನ ಪಡೆಯುತ್ತೇನೆ- ಎಂ.ಬಿ ಪಾಟೀಲ್‌

ತುಮಕೂರು: ಸಿದ್ದಗಂಗಾ ಮಠಕ್ಕೆ ಮಾಜಿ ಸಚಿವ ಎಂ.ಬಿ.ಪಾಟೀಲ್ ನೀಡಿದ್ದಾರೆ. ಈ ವೇಳೆ ಮಾತನಾಡಿದ ಅವರು, ನಾನು ಮುಂದೆನೂ ಮುರುಘಾ ಮಠಕ್ಕೆ ಹೋಗ್ತೀನಿ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.   ತುಮಕೂರಿನಲ್ಲಿ ಮಾತನಾಡಿದ ಅವರು, ಚಿತ್ರದುರ್ಗ ಮುರುಘಾಮಠ ಬಹಳ ಐತಿಹಾಸಿಕ ಮಠ. 5 ಸಾವಿರ ವಿರಕ್ತ ಶಾಖಾ ಮಠ ಹೊಂದಿದ್ದಂತಹ ದೊಡ್ಡ ಮಠ ಇದು. ಅಲ್ಲಿ ಯಾರು ಇರ್ತಾರೆ, ಯಾರು ಇರಲ್ಲ ಅನ್ನೋದು ಮುಖ್ಯವಲ್ಲ. ನಾಳೆ ನಾನು ಚಿತ್ರದುರ್ಗಕ್ಕೆ ಹೋದರೆ …

Read More »

ಜಿಲ್ಲೆಯ ಉತ್ತರ ಕ್ಷೇತ್ರದಲ್ಲಿ ವಿವಿಧ ಗಣೇಶ ಮಂಟಪಗಳಿಗೆ ವೀರ್ ಸಾವರ್ಕರ್ ಭಾವಚಿತ್ರ ವಿತರಣೆ

ಬೆಳಗಾವಿ: ಜಿಲ್ಲೆಯ ಉತ್ತರ ಕ್ಷೇತ್ರದಲ್ಲಿ ವಿವಿಧ ಗಣೇಶ ಮಂಟಪಗಳಿಗೆ ವೀರ್ ಸಾವರ್ಕರ್ ಭಾವಚಿತ್ರ ವಿತರಣೆ ಮಾಡಲಾಗುತ್ತಿದೆ. ಸ್ಥಳೀಯ ಬಿಜೆಪಿ ನಾಯಕ, ಬೆಳಗಾವಿ ಮಹಾನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮುರುಘೇಂದ್ರಗೌಡ ಪಾಟೀಲ್ ನೇತೃತ್ವದಲ್ಲಿ ವೀರ್ ಸಾವರ್ಕರ್ ಭಾವಚಿತ್ರ ವಿತರಣೆ ಮಾಡಲಾಗುತ್ತಿದೆ. ಈ ಬಾರಿ ಗಣೇಶೋತ್ಸವ ವೀರ್ ಸಾವರ್ಕರ್ ಗಣೇಶೋತ್ಸವವನ್ನಾಗಿ ಆಚರಿಸಲು ಕರೆ ನೀಡಲಾಗಿದೆ. ಬೆಳಗಾವಿ ನಗರದ ವಿವಿಧ ಬಡಾವಣೆಗಳಲ್ಲಿ ಒಟ್ಟು 378 ಸಾರ್ವಜನಿಕ ಗಣೇಶ ವಿಗ್ರಹ ಪ್ರತಿಷ್ಠಾಪನೆ ಮಾಡಲಾಗುತ್ತಿದೆ. ಗಣೇಶ ಪ್ರತಿಷ್ಠಾಪನೆಗೂ ಮುನ್ನವೇ …

Read More »

ಪೊಲೀಸ್ ಎಂದು ನಂಬಿಸಿ ಮಹಿಳೆಯ ಚಿನ್ನಾಭರಣ ಎಗರಿಸಿದ್ದ ಆರೋಪಿ ಅಂದರ್

ಚಿಕ್ಕೋಡಿ: ತಾನು ಪೊಲೀಸ್ ಎಂದು ನಂಬಿಸಿ ಮಹಿಳೆಯ ಬಳಿ ಇದ್ದ ಚಿನ್ನಾಭರಣ ಎಗರಿಸಿದ್ದ ಆರೋಪಿಯನ್ನು ಸಂಕೇಶ್ವರ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮಹಾರಾಷ್ಟ್ರದ ಸಾಂಗ್ಲಿಯ ಮಹಮ್ಮದ್ ಯೂಸುಫ್ ಇರಾನಿ ಎಂದು ಗುರುತಿಸಲಾಗಿದೆ. ಇತ್ತಿಚೆಗೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ವಿಜಯಲಕ್ಷ್ಮೀ ರಾಜು ಚೌಗಲೆ ಎಂಬ ಮಹಿಳೆಗೆ ತಾನು ಪೊಲೀಸ್ ಎಂದು ನಂಬಿಸಿ, ಬೇರೆ ಕಡೆ ಗಮನ ಸೆಳೆದು 1.5 ಲಕ್ಷ ರೂ. ಬೆಲೆಯ ಚಿನ್ನಾಭರಣ ಕದ್ದು ಪರಾರಿಯಾಗಿದ್ದ. ಪ್ರಕರಣ ದಾಖಲಿಸಿಕೊಂಡ …

Read More »

ಲೋಕಕಲ್ಯಾಣಕ್ಕಾಗಿ 220 ಕಿ.ಮೀ. ಉರುಳು ಸೇವೆ ಮಾಡಿದ ಪಂಡರಪುರದ ವಿಠ್ಠಲನ ಭಕ್ತ

ಚಿಕ್ಕೋಡಿ: ಇಷ್ಟಾರ್ಥ ಸಿದ್ಧಿಗಾಗಿ ಭಕ್ತರು ದೇವಸ್ಥಾನಗಳಲ್ಲಿ ಉರುಳು ಸೇವೆ ಮಾಡೋದನ್ನ ಕೇಳಿದ್ದೀವಿ, ನೋಡಿದ್ದೀವಿ‌. ಅಷ್ಟೆ ಯಾಕೆ ಪಾದಯಾತ್ರೆ ಮೂಲಕ ತಮ್ಮ ಮನೆದೇವರ ಹರಕೆ ತೀರಿಸಿದವರನ್ನೂ ಸಹ ನೋಡಿರ್ತೀವಿ. ಆದರೆ ಇಲ್ಲೊಬ್ಬ ವಿಠ್ಠಲನ ಭಕ್ತ ಲೋಕಕಲ್ಯಾಣಕ್ಕಾಗಿ ಸುಮಾರು 220 ಕಿ.ಮೀ. ಉರುಳು ಸೇವೆ ಮಾಡಿ ಪಂಡರಪುರದ ವಿಠ್ಠಲನ ಕೃಪೆಗೆ ಪಾತ್ರನಾಗಿದ್ದಾ‌ನೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬೇವನೂರು ಗ್ರಾಮದ ನಿವಾಸಿ ಶಹಾಜೀ ಜಾಧವ್ ಉರುಳು ಸೇವೆ ಸಲ್ಲಿಸಿದ ಭಕ್ತ. ಶಹಾಜೀ ಅಥಣಿ ತಾಲೂಕಿನ …

Read More »