Breaking News

Daily Archives: ಸೆಪ್ಟೆಂಬರ್ 20, 2022

ಯಕ್ಷಗಾನಕ್ಕೆ ಅಡ್ಡಿಯಾದೀತೆಂದು ಆಜಾನ್‌ ಕಿರಿಕಿರಿ ಸಹಿಸಲಾಗದು-ಪ್ರಮೋದ್‌ ಮುತಾಲಿಕ್

ಮಂಗಳೂರು: ‘ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆ ಮೇಲೆ ನಿಷೇಧ ಹೇರಿರುವುದು ಸುಪ್ರೀಂ ಕೋರ್ಟ್‌. ಈ ಆದೇಶದಿಂದ ಯಕ್ಷಗಾನಕ್ಕೆ ತೊಂದರೆ ಆಗುತ್ತದೆ ಎಂಬ ಕಾರಣಕ್ಕೆ ಮುಸ್ಲೀಮರ ಆಜಾನ್‌ನಿಂದ ನಿತ್ಯವೂ ಆಗುವ ಕಿರಿಕಿರಿಯನ್ನು ಸಹಿಸಲಾಗದು’ ಎಂದು ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ಹೇಳಿದರು.   ಇಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಯಕ್ಷಗಾನ ಪ್ರತಿನಿತ್ಯ ನಡೆಯುವುದಿಲ್ಲ. ಅದಕ್ಕೆ ಧ್ವನಿವರ್ಧಕ ಬಳಸುವುದರಿಂದ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುವುದನ್ನು ಎಂದಾದರೆ, ಅದನ್ನು ತಡೆಯಲು ಕ್ರಮವಹಿಸಬೇಕು’ ಎಂದರು. ‘ಮಸೀದಿಗಳಲ್ಲಿ …

Read More »

ಹಾಫ್ ಹೆಲ್ಮೆಟ್ ಧರಿಸುವ ಪೊಲೀಸರಿಗೆ ದಂಡ: ಮುಂದಿನ ದಿನಗಳಲ್ಲಿ ವಾಹನ ಸವಾರರಿಗೂ ಬಿಸಿ

ಬೆಂಗಳೂರು: ಹಾಫ್ ಹೆಲ್ಮೆಟ್ ಧರಿಸದಂತೆ ನಗರದ ಗಲ್ಲಿ-ಗಲ್ಲಿಗಳಲ್ಲಿಯೂ ಸಂಚಾರಿ ಪೊಲೀಸರು ನಿರಂತರವಾಗಿ ಜಾಗೃತಿ ಮೂಡಿಸುತ್ತಿದ್ದಾರೆ. ಸಿಗ್ನಲ್, ಜಂಕ್ಷನ್, ಇನ್ನಿತರ ಆಯಕಟ್ಟಿನ ಸ್ಥಳಗಳಲ್ಲಿ ಐಎಸ್‌ಐ ಮಾರ್ಕ್ ಇರುವ ಹೆಲ್ಮೆಟ್ ಧರಿಸುವಂತೆ ಬೈಕ್ ಸವಾರರಿಗೆ ತಿಳಿ ಹೇಳುತ್ತಿದ್ದಾರೆ. ಆದರೆ ಸುರಕ್ಷತೆಗಾಗಿ ಹೆಲ್ಮೆಟ್ ಧರಿಸುವಂತೆ ಹೇಳುವ ಪೊಲೀಸರು ಅರ್ಧ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸಿ ನಿಯಮ ಉಲ್ಲಂಘಿಸುತ್ತಿದ್ದಾರೆ.‌ ಇದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ವಿರೋಧ ಅಳಿಸಿ ಹಾಕಲು ಪೊಲೀಸ್ ಇಲಾಖೆ ಲಾ ಅಂಡ್ …

Read More »

ಬೆಳಗಾವಿ ತಾಲೂಕಿನ ಕೂಲಿ ಕಾರ್ಮಿಕರ ಸಂಘಟನೆ ವತಿಯಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ, ಬೆಳಗಾವಿ ತಾಲೂಕಿನ ಕೂಲಿ ಕಾರ್ಮಿಕರ ಸಂಘಟನೆ ವತಿಯಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಬೆಳಗಾವಿ ನಗರದಲ್ಲಿ ಇಂದು ಮಂಗಳವಾರ ಕೂಲಿ ಕಾರ್ಮಿಕರ ಸಂಘಟನೆ ವತಿಯಿಂದ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಬೆಳಗಾವಿ ಜಿಲ್ಲೆಯ ವಿವಿಧ ತಾಲೂಕಿನ ಕೂಲಿ ಕಾರ್ಮಿಕರು ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗಿಯಾಗಿದ್ದರು. ತಲೆಯ ಮೇಲೆ ಬುಟ್ಟಿ, ಕೂಲಿ ಕೆಲಸದ ಸಾಮಗ್ರಿ ಹಿಡಿದು ಪ್ಲೇಟ್ …

Read More »

ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ಕರಾಟೆ ಚಾಂಪಿಯನ್‌ಶಿಪ್ ಸ್ಪರ್ಧೆ

ಆತ್ಮ ರಕ್ಷಣೆಗಾಗಿ ಕರಾಟೆ ತರಬೇತಿಯು ಅತ್ಯವಶ್ಯವಾಗಿದೆ.ಈ ಹಿನ್ನೆಲೆ ಬೆಳಗಾವಿ ಜಿಲ್ಲೆಯಲ್ಲಿ ವಿವಿಧೆಡೆ ಕರಾಟೆ ತರಬೇತಿಯನ್ನು ನೀಡಲಾಗುತ್ತಿದೆ. ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಕರಾಟೆ ಮಾಸ್ಟರ್ ಜೀತೇಂದ್ರ ಕಾಕತಿಕರ್ ಹೇಳಿದ್ದಾರೆ. ಬೆಳಗಾವಿ ನಗರದ ಮರಾಠಾ ಮಂದಿರದಲ್ಲಿ ಜಿಲ್ಲಾ ಮಟ್ಟದ ಕರಾಟೆ ಚಾಂಪಿಯನ್ ಸ್ಪರ್ಧೆ ಆಯೋಜಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಬೆಳಗಾವಿ ಜಿಲ್ಲೆಯ ವಿವಿಧ ತಾಲೂಕುಗಳ ೮೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗಿಯಾಗಿದ್ದರು ಈ ವೇಳೆ ಬೆಳಗಾವಿ ಜಿಲ್ಲಾ ಕರಾಟೆ ಅಸೋಸಿಯೇಶನ್ ಅಧ್ಯಕ್ಷರಾದ ಗಜೇಂದ್ರ ಕಾಕತೀಕರ್ …

Read More »

ಓಸಿ, ಇಸ್ಪೀಟ್ ಆಡಲು ಪ್ರೇರೇಪಿಸುತ್ತಿದ್ದ ಆರೋಪಿ ಗಡಿಪಾರು ಮಾಡಿದ ಡಿಸಿಪಿ ಗಡಾದಿ..!

ಓಸಿ ಮತ್ತು ಇಸ್ಪೀಟ್ ಆಡಲು ಜನರನ್ನು ಪ್ರೇರೇಪಿಸುತ್ತಿದ್ದ ಆರೋಪಿಯನ್ನು ಒಂದು ವರ್ಷದವರೆಗೆ ಬೆಳಗಾವಿ ಜಿಲ್ಲೆಯಿಂದ ಗಡಿಪಾರು ಮಾಡಿ ಡಿಸಿಪಿ ರವೀಂದ್ರ ಗಡಾದಿ ಆದೇಶ ಹೊರಡಿಸಿದ್ದಾರೆ. ಅನಗೋಳದ ನಿವಾಸಿ ಪರಶುರಾಮ್ ಬಾಬು ಮೇತ್ರಿ ಗಡಿಪಾರು ಶಿಕ್ಷೆಗೆ ಒಳಗಾಗಿರುವ ಆರೋಪಿ. ಸೆಪ್ಟೆಂಬರ್ 19 2022ರಿಂದ ಸೆಪ್ಟೆಂಬರ್ 18 2023ರವರೆಗೆ 1 ವರ್ಷ ಕಾಲ ಬೆಳಗಾವಿ ಜಿಲ್ಲೆಯಿಂದ ಗಡಿಪಾರು ಮಾಡಿ ಡಿಸಿಪಿ ರವೀಂದ್ರ ಗಡಾದಿ ಆದೇಶ ಹೊರಡಿಸಿದ್ದಾರೆ. ಈ ಆರೋಪಿ ವಿರುದ್ಧ ಒಟ್ಟು 7 …

Read More »

ಈಗ ೨೦೨೩ರ ಚುನಾವಣೆಯಲ್ಲಿ ಉಭಯ ನಾಯಕರ ಮಧ್ಯೆ ಮತ್ತೆ ಟಿಕೆಟ್‌ಗೆ ಫೈಟ್ ಶುರುವಾಗಿದೆ. ಇತ್ತೀಚೆಗೆ ಬೈಲಹೊಂಗಲಕ್ಕೆ ಭೇಟಿ ನೀಡಿದ್ದ ಮಾಜಿ ಸಿಎಂ ಬಿಎಸ್‌ವೈ ಈ ವೇಳೆ ಜಾಣನಡೆ ಪ್ರದರ್ಶನ ಮಾಡಿದ್ದಾರೆ. ಗಾಣಿಗ ಸಮಾಜ ಹಾಗೂ ನೌಕರರ ಸಮಾವೇಶಕ್ಕೆಂದು ಬೈಲಹೊಂಗಲಕ್ಕೆ ಬಿಎಸ್ ಯಡಿಯೂರಪ್ಪ ಆಗಮಿಸಿದ್ದರು. ಬೈಲಹೊಂಗಲದ ಪೃಥ್ವಿ ಗಾರ್ಡನ್‌ನಲ್ಲಿ ಮೊನ್ನೆ ನಡೆದಿದ್ದ ಕಾರ್ಯಕ್ರಮ ಹಿನ್ನೆಲೆ ಬೈಲಹೊಂಗಲಕ್ಕೆ ಬರುತ್ತಿದ್ದಂತೆ ಬಿಎಸ್‌ವೈ ಮಾಜಿ ಶಾಸಕ ಜಗದೀಶ ಮೆಟಗುಡ್ಡ ಮನೆಗೆ ಭೇಟಿ ನೀಡಿದ್ದರು. ಮಾಜಿ ಶಾಸಕ ಜಗದೀಶ್ ಮೆಟಗುಡ್ಡ ಮನೆಯಲ್ಲಿ ಉಪಹಾರ ಸೇವಿಸಿ ಕಾರ್ಯಕ್ರಮಕ್ಕೆ ತೆರಳಿದ್ದರು.

ರಾಜ್ಯದಲ್ಲಿ ವಿಧಾನ ಸಭಾ ಚುನಾವಣೆಗಳು ಸಮೀಪಿಸುತ್ತಿದ್ದಂತೆ ಬೆಳಗಾವಿ ಜಿಲ್ಲೆ ಬೈಲಹೊಂಗಲ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಇತ್ತೀಚೆಗೆ ಮಾಜಿ ಸಿಎಂ ಬಿಎಸ್‌ವೈ ಬೈಲಹೊಂಗಕ್ಕೆ ಆಗಮಿಸಿದ್ದು ಈಗ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಹೌದು ಬೈಲಹೊಂಗಲ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿ-ಕೆಜೆಪಿ ಕಿಚ್ಚು ಇನ್ನೂ ಆರಿಲ್ಲ. ಬೈಲಹೊಂಗಲ ಕ್ಷೇತ್ರದ ಬಿಜೆಪಿ ಟಿಕೆಟ್‌ಗಾಗಿ ಜಗದೀಶ್ ಮೆಟಗುಡ್ ಹಾಗೂ ಡಾ.ವಿಶ್ವನಾಥ ಪಾಟೀಲ್ ಮಧ್ಯೆ ಪೈಪೋಟಿ ಏರ್ಪಟ್ಟಿದೆ. ೨೦೧೩ರ ವಿಧಾನಸಭೆ ಚುನಾವಣೆಯಲ್ಲಿ ಡಾ. ವಿಶ್ವನಾಥ್ ಪಾಟೀಲ್ …

Read More »

ಸರಕಾರಕ್ಕೆ ತಾಕತ್ತು ಇದ್ದರೇ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕನ ಮೇಲೆ ಇಡಿ, ಐಟಿ ದಾಳಿ ನಡೆಸಿ:A.A.P. ಭಾಸ್ಕರ್ ರಾವ್

ಸರಕಾರ ದರ್ಪದಿಂದ ರೈತರ ಮೇಲೆ ದೌರ್ಜನ್ಯ ಮಾಡುತ್ತಿದ್ದಾರೆ. ೪೦% ವ್ಯವಹಾರ ಗಡಿ ದಾಟಿ ಹೈದರಾಬಾದ್ ಹೋಗಿ ಪೋಸ್ಟರ್ ಹಾಕಿ ಮಾನ ಮರ್ಯಾದೆ ತೆಗೆದುಕೊಂಡಿದೆ ಎಂದು ಆಮ್ ಆದ್ಮಿ ರಾಜ್ಯ ಉಪಾಧ್ಯಕ್ಷ ಭಾಸ್ಕರ್ ರಾವ್ ವಾಗ್ದಾಳಿ ನಡೆಸಿದರು. ಇಂದು ಮಂಗಳವಾರ ಬೆಳಗಾವಿ ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಭಾಸ್ಕರ್ ರಾವ್ ರವರು, ಸರಕಾರ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಅಸಹಾಯವಾಗಿ ಸಿಎಂ ಹೇಳುತ್ತಾರೆ. ಇದನ್ನು ನಾವು ಮಾಡಿಲ್ಲ ಎನ್ನುತ್ತಾರೆ. ಆದರೆ ಬೆಳಗಾವಿ …

Read More »

ರಾಮದುರ್ಗ: ಮಾರಕಾಸ್ತ್ರಗಳಿಂದ ವ್ಯಕ್ತಿ ಕೊಲೆ

ರಾಮದುರ್ಗ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಹೊಸೂರ ಗ್ರಾಮದ ಬಳಿ ಸೋಮವಾರ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿ ಪೂಲ್ ಕೆಳಗೆ ಬಿಸಾಕಲಾಗಿದೆ. ಪಾಂಡಪ್ಪ ದುಂಡಪ್ಪ ಜಟಕನ್ನವರ (35) ಕೊಲೆಯಾದವರು. ಬೇರೆಡೆ ಕೊಲೆಗೈದು ಹೊಸೂರ ಹಳ್ಳದ ಬಳಿ ಶವ ಎಸೆಯಲಾಗಿದೆ. ವ್ಯಕ್ತಿಯ ಮೈತುಂಬ ಮಾರಕಾಸ್ತ್ರಗಳಿಂದ ಕೊಚ್ಚಲಾಗಿದ್ದು, ರಕ್ತದ ಮಡುವಿನಲ್ಲಿ ಬಿದ್ದಿದ್ದನ್ನು ಕಂಡು ಜನ ಬೆಚ್ಚಿದರು. ಸ್ಥಳದಲ್ಲಿ ಅವರ ಬೈಕ್ ಕೂಡ ಇದೆ. ಕಟಕೋಳ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದರು. ಶವವನ್ನು ಮರಣೋತ್ತರ ಪರೀಕ್ಷೆಗೆ ರಾಮದುರ್ಗ …

Read More »

ಬೆಳಗಾವಿ| ವರ್ಷ ಮುಗಿದರೂ ಪಾಲಿಕೆಗೆ ಬಿಡದ ಗ್ರಹಣ: ಅಧಿಕಾರ ಸ್ವೀಕರಿಸದ ಚುನಾಯಿತರು

ಬೆಳಗಾವಿ: ಇಲ್ಲಿನ ಮಹಾನಗರ ಪಾಲಿಕೆ ಚುನಾವಣೆ ಮುಗಿದು ವರ್ಷ ಕಳೆದರೂ ಆಯ್ಕೆಯಾದ ಸದಸ್ಯರಿಗೆ ಪ್ರಮಾಣ ವಚನ ಸ್ವೀಕರಿಸುವ ಭಾಗ್ಯ ಕೂಡಿಬಂದಿಲ್ಲ. ಇದೇ ಮೊದಲಬಾರಿಗೆ ಪಾಲಿಕೆ ಚುನಾವಣೆ ರಾಜಕೀಯ ಪಕ್ಷಗಳ ಚಿಹ್ನೆ ಆಧಾರದಲ್ಲಿ ನಡೆದಿದ್ದರಿಂದ ತೀವ್ರ ಕುತೂಹಲ ಕೆರಳಿಸಿತ್ತು. ಆದರೆ, ವರ್ಷದ ಬಳಿಕವೂ ಅಧಿಕಾರ ಕೈಗೆ ಸಿಗದ ಕಾರಣ ಹೊಸ ಸದಸ್ಯರು ಇದ್ದೂ ಇಲ್ಲದಂತಾಗಿದೆ. ತಾವು ಪ್ರತಿನಿಧಿಸುವ ವಾರ್ಡ್‌ನ ಜನರು ಒಂದಿಲ್ಲೊಂದು ಸಮಸ್ಯೆ ಹೊತ್ತು ಮನೆಬಾಗಿಲಿಗೆ ಬರುತ್ತಲೇ ಇದ್ದಾರೆ. ಆದರೆ, ಅವುಗಳನ್ನು ಬಗೆಹರಿಸಲು …

Read More »

ಬಿಜೆಪಿಯವರದ್ದು ಮೊಟ್ಟೆಯ ಕಮಿಷನ್‍ನಂತೆ, ಶಾಲಾ ಬಟ್ಟೆಯಲ್ಲೂ ಕಮಿಷನ್ ಲೂಟಿ?: ಕಾಂಗ್ರೆಸ್

ಬೆಂಗಳೂರು: ವಿದ್ಯಾರ್ಥಿಗಳ (Students) ಸಮವಸ್ತ್ರದಲ್ಲೂ (Uniform) 40% ಲೂಟಿ ಮಾಡಿಲಾಗಿದೆಯೇ ಬಿ.ಸಿ ನಾಗೇಶ್ (B.C Nagesh) ಅವರೇ? ಸಮವಸ್ತ್ರ ಕೊಡುವುದೇ ವಿಳಂಬವಾಗಿದೆ, ಅದರಲ್ಲೂ ತೆಳುವಾದ ಕಳಪೆ ಬಟ್ಟೆಗಳನ್ನು ನೀಡಲಾಗಿದೆ. ಇದರಲ್ಲೂ ಮೊಟ್ಟೆಯ ಕಮಿಷನ್‍ನಂತೆ, ಬಟ್ಟೆಯಲ್ಲೂ ಕಮಿಷನ್ ಲೂಟಿಯೇ ಎಂದು ಕಾಂಗ್ರೆಸ್ (Congress) ಸರಣಿ ಟ್ವೀಟ್ ಮೂಲಕ ಬಿಜೆಪಿ (BJP) ವಿರುದ್ಧ ಚಾಟಿ ಬೀಸಿದೆ. ಟ್ವೀಟ್‍ನಲ್ಲಿ ಏನಿದೆ? ವಿದ್ಯಾರ್ಥಿಗಳ ಸಮವಸ್ತ್ರದಲ್ಲೂ 40% ಲೂಟಿ ಮಾಡಿಲಾಗಿದೆಯೇ ಬಿ.ಸಿ ನಾಗೇಶ್ ಅವರೇ? ಸಮವಸ್ತ್ರ ಕೊಡುವುದೇ ವಿಳಂಬವಾಗಿದೆ, …

Read More »