Breaking News

Daily Archives: ಅಕ್ಟೋಬರ್ 9, 2022

ಚುನಾವಣೆ ನಡೆದು ಒಂದೂವರೆ ವರ್ಷದ ಬಳಿಕ ಮರು ಮತ ಎಣಿಕೆ ನಡೆಸಲು ಕೋರ್ಟ್​ ಆದೇಶ

ಚಿಕ್ಕೋಡಿ(ಬೆಳಗಾವಿ): ಪಂಚಾಯತ್​ ಚುನಾವಣೆ ನಡೆದು ಒಂದೂವರೆ ವರ್ಷ ಕಳೆದ ಬಳಿಕ ಮರು ಮತ ಎಣಿಕೆ ನಡೆಸಲು ನ್ಯಾಯಾಲಯ ಆದೇಶ ಹೊರಡಿಸಿದ್ದು, ಎಲ್ಲರ ಚಿತ್ತ ಕೋರ್ಟ್​ನತ್ತ ನೆಟ್ಟಿದೆ. ಈ ಆದೇಶ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಬರುವ ಅ.20 ರಂದು ನ್ಯಾಯಾಧೀಶರ ಸಮ್ಮುಖದಲ್ಲಿ ಮರು ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹೆಬ್ಬಾಳ ಗ್ರಾಮ ಪಂಚಾಯಿತಿಗೆ ಕಳೆದ 2020 ಡಿಸೆಂಬರ್ 23 ರಂದು ಚುನಾವಣೆ ನಡೆದಿತ್ತು. ಚುನಾವಣಾ ಫಲಿತಾಂಶ …

Read More »

ಮಗನನ್ನು ನೋಡಲು ಬಿಡಲಿಲ್ಲವೆಂದು ಮಾವನ ಕೊಂದ ಅಳಿಯ

ದೊಡ್ಡಬಳ್ಳಾಪುರ: ಹೆಂಡತಿಯ ತವರು ಮನೆಯಲ್ಲಿ ತನ್ನ ಮಗನನ್ನು ನೋಡಲು ಅವಕಾಶ ನೀಡಲಿಲ್ಲ ಎಂದು ಕುಪಿತಗೊಂಡು ಮಾವನ ಕೊಲೆಗೈದು ಪರಾರಿಯಾಗಿದ್ದ ಅಳಿಯನನ್ನು ದೊಡ್ಡಬೆಳವಂಗಲ ಪೊಲೀಸರು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಆರೂಢಿ ಗ್ರಾಮದ ಸುಬ್ಬರಾಯಪ್ಪನನ್ನು ಅಳಿಯ ಪ್ರತಾಪ್ ಕೊಲೆ ಮಾಡಿ ಪರಾರಿಯಾಗಿದ್ದ. ಆರೋಪಿ ಪ್ರತಾಪ್​ನನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಚಾಲಕನಾಗಿದ್ದ ಪ್ರತಾಪ್​​ಗೆ ಪಿಣ್ಯಾದಲ್ಲಿ ಹೋಟೆಲ್ ನಡೆಸುತ್ತಿದ್ದ ಶಿಲ್ಪಾಳ ಪರಿಚಯವಾಗಿತ್ತು, ಪರಿಚಯ ಪ್ರೀತಿಗೆ ತಿರುಗಿ ನಾಲ್ಕು ವರ್ಷದ ಹಿಂದೆ ಮದುವೆಯಾಗಿದ್ದರು. ಬಳಿಕ ಶಿಲ್ಪಾ ಹೆರಿಗೆಗಾಗಿ ತವರು …

Read More »

ವಾಲ್ಮೀಕಿ ಜಯಂತಿ ಆಚರಣೆ ಮಾಡಿಲ್ಲ‌ ಎಂದು ಆಕ್ರೋಶ , ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ದ ಆಕ್ರೋಶ

ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಮಾಡಿಲ್ಲ‌ ಎಂದು ಆಕ್ರೋಶ ವ್ಯಕ್ತವಾಗಿದೆ. ಗ್ರಾಮ ಪಂಚಾಯತಿ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ದ ಆಕ್ರೋಶ ಹೊರಹಾಕಿರುವ ಘಟನೆ ವಿಜಯಪುರ ಜಿಲ್ಲೆ ದೇವರಹಿಪ್ಪರಗಿ ತಾಲೂಕಿನ ಕೊಂಡಗೂಳಿ ಗ್ರಾಮದಲ್ಲಿ ನಡೆದಿದೆ‌. ಗ್ರಾಮ ಪಂಚಾಯತಿಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ ಮಾಡಿಲ್ಲ‌ ಎಂದು ವಾಲ್ಮೀಕಿ ಸಮುದಾಯದ ಜನರಿಂದ ಅಸಮಾಧಾನ ವ್ಯಕ್ತವಾಗಿದೆ. ಕೊಂಡಗೂಳಿ ಗ್ರಾಮದಲ್ಲಿ ವಾಲ್ಮೀಕಿ ಸಮುದಾಯದ ಜನರು ಹೆಚ್ಚಿದ್ದೇವೆ. ನಮ್ಮ ಸಮುದಾಯಕ್ಕೆ ಗ್ರಾಪಂ ಸಿಬ್ಬಂದಿಗಳು ಅವಮಾನ ಮಾಡಿದ್ದಾರೆಂದು ಹಾಗೂ ಅಧಿಕಾರಿಗಳು …

Read More »

ವಾಲ್ಮೀಕಿ ಜಯಂತಿ ವಿಜಯೋತ್ಸವ ಮಾದರಿಯಲ್ಲಿ ಆಚರಣೆ..!!

ಬೆಳಗಾವಿಯ ನೆಹರು ನಗರದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಅದ್ದೂರಿಯಾಗಿ ಆಚರಿಸಲಾಯಿತು. ರಾಜ್ಯ ಸರ್ಕಾರ ಮೀಸಲಾತಿ ಪ್ರಮಾಣವನ್ನು ಹೆಚ್ಚಳ ಮಾಡುವ ಐತಿಹಾಸಿ ನಿರ್ಧಾರ ಕೈಗೊಂಡಿದಕ್ಕೆ ಹರ್ಷ ವ್ಯಕ್ತಪಡಿಸಲಾಯಿತು. ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಬೆಳಗಾವಿಯ ನೆಹರು ನಗರದ ನಿವಾಸಿಗಳು ವಿಜಯೋತ್ಸವ ರೀತಿಯಲ್ಲಿ ಆಚರಿಸಿದರು.ಶ್ರೀ ಮಹರ್ಷಿ ವಾಲ್ಮೀಕಿ ಯುವಕ ಮಂಡಳ ವತಿಯಿಂದ ಆಯೋಜಿಸಿದ್ದ ಜಯಂತೋತ್ಸವ ಕಾರ್ಯಕ್ರಮದಲ್ಲಿ ನಗರದ ನೂರಾರು ಯುವಕರು ಪಾಲ್ಗೊಂಡು ಶ್ರೀ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ …

Read More »

ರಾಮದುರ್ಗದಲ್ಲಿ ಶ್ರೀರಾಮಸೇನೆ ಕಾರ್ಯಕರ್ತ ಸೇರಿ ಇಬ್ಬರಿಗೆ ಚಾಕು ಇರಿತ

ಬೆಳಗಾವಿ : ಬೈಕ್ ಪಕ್ಕಕ್ಕೆ ಇಡುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಶ್ರೀರಾಮಸೇನೆ ಕಾರ್ಯಕರ್ತ ಸೇರಿ ಇಬ್ಬರಿಗೆ ಚಾಕು ಇರಿತವಾಗಿದ್ದು, ಓರ್ವನ ಮೇಲೆ ಹಲ್ಲೆ ಮಾಡಿರುವ ರಾಮದುರ್ಗ ಪಟ್ಟಣದಲ್ಲಿ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ಶ್ರೀರಾಮಸೇನೆ ಕಾರ್ಯಕರ್ತ ಗೋಪಾಲ್ ಬಂಡಿವಡ್ಡರ್‌ಗೆ ಚಾಕು ಇರಿತವಾಗಿದ್ದು, ರವಿ ಬಂಡಿವಡ್ಡರ್ ಎಂಬ ಯುವಕನ ತಲೆಗೆ ರಾಡ್ ನಿಂದ ಹಲ್ಲೆ ಮಾಡಲಾಗಿದೆ. ಇತ್ತ ಜಗಳ ಬಿಡಿಸಲು ಹೋದ ನಂಜುಂಡಿ ಸಾಬಣ್ಣ ಬಂಡಿವಡ್ಡರ್ ಎಂಬುವವರ ಮೇಲೆಯೂ ಹಲ್ಲೆಯಾಗಿದೆ. …

Read More »

,ಕಬ್ಬು ತುಂಬಿದ ಟ್ರ‍್ಯಾಕ್ಟರಗಳ ಪ್ರವೇಶಕ್ಕೆ ಸಮಯ ನಿಗದಿ ಮಾಡಿರುವ ಎಸಿ ಸಂತೋಷ ಕಾಮಗೌಡರ

ಸದ್ಯ ಕಬ್ಬು ನುರಿಸುವ ಹಂಗಾಮು ಪ್ರಾರಂಭವಾಗಿದೆ.ಇದರಿಂದಾಗಿ ಟ್ರ‍್ಯಾಕ್ಟರಗಳು ಲೋಡಾಗಿ ಕಬ್ಬನ್ನು ತುಂಬಿಕೊಂಡು ಹೋಗುತ್ತಿರುವದರಿಂದ ಇದು ಜನರ ಪ್ರಾಣಕ್ಕೆ ಕುತ್ತು ತರಬಹುದು .ಇದನ್ನು ತಪ್ಪಿಸಲು‌‌ ಚಿಕ್ಕೋಡಿ ಎಸಿ ಸಂತೋಷ ಕಾಮಗೌಡರ ಹೊಸ ಪ್ಲ್ಯಾನಯೊಂದನ್ನು ಹಾಕಿದ್ದಾರೆ…ಅದೇನೂ ಅಂತೀರಾ ಹಾಗಾದರೆ ಈ ವರದಿಯನ್ನು ನೋಡಿ… ಚಿಕ್ಕೋಡಿ ಉಪವಿಭಾಗದಲ್ಲಿ ಅತಿ ಹೆಚ್ಚಾಗಿ ಕಬ್ಬನ್ನು ಬೆಳೆಯುತ್ತಾರೆ. ಈಗಾಗಲೇ ಕೆಲ ದಿನಗಳ ಹಿಂದೆ ಕೆಲ‌ ಸಕ್ಕರೆ ಕರ‍್ಖಾನೆಗಳು ಪ್ರಾರಂಭವಾಗಿವೆ. ಸಕ್ಕರೆ ಕರ‍್ಖಾನೆಗಳು ಮರುಪ್ರಾರಂಭ ಅಗುತ್ತಿದ್ದಂತೆ ಎಲ್ಲ ಕಡೆಗಳಲ್ಲೂ ಸಹ …

Read More »

ಬೆಳಗಾವಿ ನಗರದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅತ್ಯಂತ ಅದ್ದೂರಿಯಾಗಿ ಆಚರಣೆ

ಬೆಳಗಾವಿ ನಗರದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅತ್ಯಂತ ಅದ್ದೂರಿಯಾಗಿ ಆವರಣೆ ಮಾಡಲಾಯಿತು. ಹೌದು ಬೆಳಗಾವಿ ನಗರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಬೆಳಗಾವಿ, ಮಹಾನಗರ ಪಾಲಿಕೆ ಬೆಳಗಾವಿ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಇಂದು ರವಿವಾರ ಅತ್ಯಂತ ಅದ್ಧೂರಿಯಾಗಿ ಮಹರ್ಷಿ ಮಾಲ್ಮೀಕಿ ಜಯಂತಿಯನ್ನು ಆಚರಣೆ ಮಾಡಲಾಯಿತು. ಈ ವೇಳೆ ಮಹರ್ಷಿ ವಾಲ್ಮೀಕಿರವರ ಭಾವಚಿತ್ರದ ಅದ್ದೂರಿ ಶೋಭಾಯಾತ್ರೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಶೋಭಾಯಾತ್ರೆಗೆ ಜಿಲ್ಲಾಧಿಕಾರಿ ನಿತೇಶ ಪಾಟೀಲ್, ಅಪರ ಜಿಲ್ಲಾಧಿಕಾರಿಗಳಾದ ಅಶೋಕ ದುಡಗುಂಟಿ, …

Read More »

ರಾಜ್ಯ ಸರ್ಕಾರದಿಂದ ಗ್ರಾಮಲೆಕ್ಕಿಗರ ಹುದ್ದೆಯ ನೇಮಕಾತಿ ವಿಧಾನ ಬದಲು : ಇನ್ಮುಂದೆ ‘ಸ್ಪರ್ಧಾತ್ಮಕ ಪರೀಕ್ಷೆ’ ಮೂಲಕ ಆಯ್ಕೆ

ಬೆಂಗಳೂರು: ಈವರೆಗೆ ಗ್ರಾಮಲೆಕ್ಕಿಗರ ಹುದ್ದೆಗೆ ( Village Accountant Recruitment ) ಅಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ ಅವರು ದ್ವಿತೀಯ ಪಿಯುಸಿಯಲ್ಲಿ ( Second PUC ) ಗಳಿಸಿದಂತ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತಿತ್ತು. ಆದ್ರೇ ಇದೀಗ ಈ ವಿಧಾನಕ್ಕೆ ರಾಜ್ಯ ಸರ್ಕಾರ ( Karnataka Government ) ಬ್ರೇಕ್ ಹಾಕಲಿದೆ. ಇದರ ಬದಲಾಗಿ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಗ್ರಾಮಲೆಕ್ಕಿಗರ ನೇಮಕಕ್ಕೆ ಸಮಿತಿಯನ್ನು ರಚಿಸಿ ಆದೇಶಿಸಿದೆ. ಈ ಕುರಿತಂತೆ …

Read More »

ತೆಲುಗು ನಟನ ಆಫೀಸ್ ನಲ್ಲಿ ಅಪ್ಪು ಪುತ್ಥಳಿ

ಕನ್ನಡ ಚಿತ್ರರಂಗ ಕಂಡ ಅಸಾಧಾರಣ ಪ್ರತಿಭೆ, ಕರುನಾಡಿನ ನಮ್ಮೆಲ್ಲರ ಪ್ರೀತಿಯ ನಟ ಪುನೀತ್ ರಾಜ್ ಕುಮಾರ್ ಅಗಲಿ ಒಂದು ವರ್ಷ ಸಮೀಪವಾಗುತ್ತಿದೆ. ದಿನಗಳು ಉರುಳಿದರೂ ಅಪ್ಪು ನೆನಪು ಮಾತ್ರ ಮರೆಯಾಗುತ್ತಿಲ್ಲ. ಕೇವಲ ಕರುನಾಡು ಮಾತ್ರವಲ್ಲ, ದೇಶದ ಮೂಲೆ ಮೂಲೆಯಲ್ಲಿರುವ ಜನರು ಅಪ್ಪು ನೆನೆದು ಇಂದಿಗೂ ಕಣ್ಣೀರು ಹಾಕುತ್ತಿದ್ದಾರೆ. ಅವರ ಸಾಧನೆಗಳ ಮೂಲಕ, ಸಾಮಾಜಿಕ ಕಾರ್ಯಗಳನ್ನು ಮುಂದುವರೆಸುವ ಮೂಲಕ ಅಪ್ಪು ಅಭಿಮಾನಿಗಳು ಮತ್ತೆ ತಮ್ಮ ನೆಚ್ಚಿನ ನಟನನ್ನು ಸ್ಮರಿಸಿಕೊಳ್ಳುತ್ತಿದ್ದಾರೆ. ಇದೀಗ ತೆಲುಗಿನ …

Read More »

ಧಾರವಾಡ ಪ್ರವೇಶಕ್ಕೆ ಅನುಮತಿ ಸಿಗದಿದ್ದರೆ ಹೊರಗಿದ್ದೇ ಚುನಾವಣೆ ಕಣಕ್ಕಿಳಿಯುತ್ತೇನೆ: ಮಾಜಿ ಸಚಿವ ವಿನಯ ಕುಲಕರ್ಣಿ..

ಬೆಳಗಾವಿ: 2023ರ ವಿಧಾನಸಭೆ ಚುನಾವಣೆಗೆ ಧಾರವಾಡ ಗ್ರಾಮೀಣ ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆ‌. ಧಾರವಾಡ ಪ್ರವೇಶಕ್ಕೆ ‌ಅನುಮತಿ ಸಿಗದಿದ್ದರೂ ಹೊರಗಿದ್ದೇ ಕಣಕ್ಕಿಳಿಯುತ್ತೇನೆ. ಯಾವುದೇ ಕಾರಣಕ್ಕೂ ಕ್ಷೇತ್ರ ಬದಲಿಸುವುದಿಲ್ಲ ಎಂದು ಮಾಜಿ ಸಚಿವ ವಿನಯ್​ ಕುಲಕರ್ಣಿ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಚುನಾವಣೆ ಬರುವಷ್ಟರಲ್ಲೇ, ನನಗೆ ಧಾರವಾಡ ಜಿಲ್ಲಾ ಪ್ರವೇಶಕ್ಕೆ ಅನುಮತಿ ನೀಡುವ ವಿಶ್ವಾಸವಿದೆ‌. ಒಂದು ವೇಳೆ ಪ್ರವೇಶಕ್ಕೆ ಅನುಮತಿ ಇಲ್ಲದಿದ್ದರೂ ಹೊರಗಿದ್ದೆ ಚುನಾವಣೆ ಕಣಕ್ಕಿಳಿಯುವೆ ಯಾವುದೇ ಕಾರಣಕ್ಕೂ ಕ್ಷೇತ್ರ ಬದಲಾಯಿಸುವುದಿಲ್ಲ ಎಂದರು. ಪಂಚಮಸಾಲಿ ಮೀಸಲು …

Read More »