Breaking News

Daily Archives: ನವೆಂಬರ್ 1, 2022

ರಾಜ್ಯೋತ್ಸವದ ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ 

    ಬೆಳಗಾವಿ: ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಮಂಗಳವಾರ ಕುಂದಾ ನಗರಿ ಬೆಳಗಾವಿ ಅಕ್ಷರಶಃ ಮದುವಣಗಿತ್ತಿಯಂತೆ ಕಂಗೊಳ್ಳಿಸುತ್ತಿದ್ದು, ಕನ್ನಡ ರಾಜ್ಯೋತ್ಸವದ ಮೆರವಣೆಗೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಅಪಾರ ಅಭಿಮಾನಿಗಳ ಜತೆ ಹೆಜ್ಜೆ ಹಾಕಿ ರಾಜೋತ್ಸವಕ್ಕೆ ಇನ್ನಷ್ಟು ಮೆರಗು ತಂದರು.   ನಂತರ ಚೆನ್ನಮ್ಮ ವೃತ್ತದಲ್ಲಿ ಹಾಕಲಾದ ಟೆಂಟ್‌ನಲ್ಲಿ ಕುಳಿತು ರಾಜ್ಯೋತ್ಸವದ ಅದ್ಧೂರಿ ಮೆರವಣಿಗೆಯನ್ನು ವಿಕ್ಷೀಸಿದರು. ಅಪಾರ ಸಂಖ್ಯೆಯ ಯುವಕರು, ಯುವತಿಯರು, ಕನ್ನಡಪರ ಹೋರಾಟಗಾರರು ಶಾಸಕ ಸತೀಶ್‌ …

Read More »

ಗೋಕಾಕ: ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಮಾತನಾಡುತ್ತಿರುವದು.

ಗೋಕಾಕ: ಕನ್ನಡ ಭಾಷಿಕ ಪ್ರದೇಶಗಳು ಒಂದಾಗಿ ಅಖಂಡ ಕರ್ನಾಟಕ ರಚನೆಯಾಗಬೇಕು ಎಂಬ ಕನಸು ನನಸಾಗಿ ಇಂದಿಗೆ 66 ವರ್ಷಗಳು ಪೂರ್ಣಗೊಂಡಿದ್ದು, ನಾವೆಲ್ಲರೂ 67ನೇ ರಾಜ್ಯೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸುತ್ತಿರುವದು ಕರ್ನಾಟಕದ ಇತಿಹಾಸದಲ್ಲಿ ಇದೊಂದು ಐತಿಹಾಸಿಕ ದಿನವಾಗಿದೆ ಎಂದು ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಹೇಳಿದರು.   ಮಂಗಳವಾರದಂದು ತಾಲೂಕಾ ಆಡಳಿತ ವತಿಯಿಂದ ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ 67ನೇ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಅಖಂಡ ಕರ್ನಾಟಕ …

Read More »

ಮೆಳವಂಕಿ ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಸರ್ವೋತ್ತಮ ಜಾರಕಿಹೊಳಿ

  ಗೋಕಾಕ : ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಕಾಳಜಿಯಿಂದ ಸಾರ್ವಜನಿಕ ಸಂಚಾರಕ್ಕಾಗಿ ಮೆಳವಂಕಿ ಹತ್ತಿರ ಸೇತುವೆ ನಿರ್ಮಾಣ ಕಾಮಗಾರಿಗೆ 10 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ತಿಳಿಸಿದರು. ಮಂಗಳವಾರದಂದು ತಾಲೂಕಿನ ಮೆಳವಂಕಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯ ಅನುದಾನದಲ್ಲಿ ಮಂಜೂರಾದ ಸೇತುವೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಈ ಕಾಮಗಾರಿ ಅನುಷ್ಠಾನದಿಂದ ದಂಡಿನಮಾರ್ಗ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದು …

Read More »

ಕರ್ನಾಟಕದಲ್ಲೇ ಬೆಳಗಾವಿ ಉಳಿಸಲು ಹೋರಾಡಿದ್ದ ನಾಗನೂರು ಶ್ರೀ

ಅಥಣಿ(ನ.01): ದೇಶದ ಸ್ವಾತಂತ್ರ್ಯಕ್ಕಾಗಿ ಶ್ರಮಿಸಿದ ಅಗ್ರಗಣ್ಯರಲ್ಲಿ ಬೆಳಗಾವಿ ರುದ್ರಾಕ್ಷಿ ಮಠದ ನಾಗನೂರಿನ ಡಾ. ಶಿವಬಸವ ಸ್ವಾಮೀಜಿಯೂ ಒಬ್ಬರು. ಅವರು ಸ್ವಾತಂತ್ರ್ಯಕ್ಕೆ ಎಷ್ಟು ಶ್ರಮಿಸಿದ್ದರೋ ಅಷ್ಟೇ ಶ್ರಮವಹಿಸಿ ಗಡಿ ನಾಡುವ ಬೆಳಗಾವಿಯಲ್ಲಿ ಕನ್ನಡ ಕಟ್ಟುವ ಕೆಲಸ ಮಾಡಿದ್ದಾರೆ. ಆಗ ಕನ್ನಡ-ಮರಾಠಿಗರ ಭಾಷಾ ಏಕೀಕರಣ ದನಿ ಮುಗಿಲೆತ್ತರಕ್ಕೆ ಏರಿತ್ತು. ಕೇಂದ್ರ ಸರ್ಕಾರ ಫಜಲ್‌ ಅಲಿ ಅವರ ಅಧ್ಯಕ್ಷತೆಯಲ್ಲಿ ಒಂದು ಸಮಿತಿ ನೇಮಿಸಿತ್ತು. ಈ ಸಮಿತಿ ಬೆಳಗಾವಿಗೆ ಭೇಟಿ ನೀಡಿದ್ದಾಗ ಸಮಿತಿಯ ಮುಂದೆ ಶಿವಬಸವ …

Read More »

ಕೈ ಮುಗಿದು ಏರು, ಇದು ಕನ್ನಡದ ತೇರು!

ಹಾವೇರಿ: ‘ಕೈ ಮುಗಿದು ಏರು ಇದು ಕನ್ನಡದ ತೇರು’ ಎಂದು ಬಸ್‌ ಪ್ರಯಾಣಿಕರನ್ನು ಪ್ರೀತಿಯಿಂದ ಸ್ವಾಗತಿಸುತ್ತಿದೆ ‘ಕನ್ನಡ ರಥ’ವಾಗಿ ಪರಿವರ್ತನೆಗೊಂಡಿರುವ ಸಾರಿಗೆ ಬಸ್‌. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹಾವೇರಿ ವಿಭಾಗದ, ಹಿರೇಕೆರೂರು ಘಟಕದ ‘ಶ್ರೀ ದುರ್ಗಾ ಎಕ್ಸ್‌ಪ್ರೆಸ್‌’ ಎಂಬ ಹೆಸರಿನ ಬಸ್‌ ಮಧುವಣಗಿತ್ತಿಯಂತೆ ಕನ್ನಡ ರಾಜ್ಯೋತ್ಸವಕ್ಕಾಗಿ ವಿಶಿಷ್ಟವಾಗಿ ಅಲಂಕೃತಗೊಂಡಿದೆ. ಪ್ರಯಾಣಿಕರಲ್ಲಿ ಕನ್ನಡಾಭಿಮಾನವನ್ನು ಜಾಗೃತಗೊಳಿಸುತ್ತಿದೆ.   ಬಸ್‌ ಮುಂಭಾಗದಲ್ಲಿ ಕನ್ನಡಮ್ಮನ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿದೆ. ಹಿಂಭಾಗದಲ್ಲಿ ‘ಕರುನಾಡ ಕನ್ನಡಿಗ’ ಎಂಬ …

Read More »

ವಿಜಯಪುರ ಪಾಲಿಕೆ ಫಲಿತಾಂಶ ಇಡೀ ಕರ್ನಾಟಕ ವಿಧಾನಸಭಾ ಚುನಾವಣೆ ಮೇಲೆ ಪರಿಣಾಮ ಬೀರುತ್ತೆ: ಬಸನಗೌಡ ಪಾಟೀಲ್ ಯತ್ನಾಳ

ವಿಜಯಪುರ: ವಿಜಯಪುರ ನಗರದಲ್ಲಿ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸ್ಥಳೀಯ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ (Basanagouda Patil Yatnal) ನಿನ್ನೆ ಪ್ರಕಟಗೊಂಡ ವಿಜಯಪುರ ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶ (Vijayapura Corporation Result) ವಿಚಾರವಾಗಿ ಮಾತನಾಡಿದ್ದಾರೆ. ಮಹಾನಗರ ಪಾಲಿಕೆ ಚುನಾವಣೆಯ ಫಲಿತಾಂಶ ಇಡೀ ಕರ್ನಾಟಕ ವಿಧಾನಸಭಾ ಚುನಾವಣೆ (Assembly Elections 2023) ಮೇಲೆ ಪರಿಣಾಮ ಬೀರುತ್ತದೆ. ರಾಜಕಾರಣದ ವಾತಾವರಣ ಬದಲಾವಣೆಯಾಗುತ್ತಿದೆ. ಎಲ್ಲರ ವಿಶ್ವಾಸ ಪ್ರಧಾನಿ …

Read More »

ಬೆಳಗಾವಿಯಲ್ಲಿ ಶ್ವಾನಗಳ ಭರ್ಜರಿ ಪ್ರದರ್ಶನ; ದೇಶದ ನಾನಾ ರಾಜ್ಯದಿಂದ ಬಂದ ಶ್ವಾನಗಳು

ಬೆಳಗಾವಿ ನಗರದ ಶಗುನ್ ಗಾರ್ಡನ್​ನಲ್ಲಿ 1000ಕ್ಕೂ ಅಧಿಕ ಶ್ವಾನಗಳ ಪ್ರದರ್ಶನ ಭಾನುವಾರ (ಅ.30) ವಿಕೇಂಡ್ ಇದ್ದ ಹಿನ್ನೆಲೆ ಕುಂದಾನಗರಿಯಲ್ಲಿ ಶ್ವಾನಗಳ ಭರ್ಜರಿ ಪ್ರದರ್ಶನ ನಡೆಯಿತು. ವರ್ಷಕ್ಕೊಮ್ಮೆ ನಡೆಯುವ ಈ ಶ್ವಾನಗಳ ಪ್ರದರ್ಶನಕ್ಕೆ ದೇಶದ ನಾನಾ ರಾಜ್ಯಗಳಿಂದ ಶ್ವಾನಗಳು ಬಂದಿರುತ್ತವೆ. ಎರಡು ದಿನದಲ್ಲಿ ಸಾವಿರಕ್ಕೂ ಅಧಿಕ ಶ್ವಾನಗಳು, 43 ವಿವಿಧ ತಳಿಗಳು ಪ್ರದರ್ಶನದಲ್ಲಿ ಭಾಗಿಯಾಗಿ ಟ್ರೋಫಿ ಮುಡಿಗೇರಿಸಿಕೊಂಡಿವೆ. ಅಷ್ಟಕ್ಕೂ ಯಾವೆಲ್ಲಾ ತಳಿಗಳು ಭಾಗಹಿಸಿದ್ದವೂ? ಹೇಗೆ ಶ್ವಾಗಳನ್ನ ಇಲ್ಲಿ ಆಯ್ಕೆ ಮಾಡಿ ಟ್ರೋಫಿ …

Read More »

ಬೆಳಗಾವಿ ಕನ್ನಡಿಗರ ಉಸಿರು: ಸಚಿವ ಗೋವಿಂದ ಕಾರಜೋಳ

ಬೆಳಗಾವಿ: ‘ಇತಿಹಾಸದಲ್ಲಿ ‘ವೇಣುಗ್ರಾಮ’ ಎಂದೇ ಹೆಸರಾದ ಬೆಳಗಾವಿಯು ಕನ್ನಡಿಗರ ಉಸಿರು. ಕನ್ನಡಿಗರೇ ಆದ ಕದಂಬರು ಸಮೃದ್ಧ ಸಾಮ್ರಾಜ್ಯ ಕಟ್ಟಿದ್ದೂ ಇದೇ ನೆಲದಲ್ಲಿ. ಕರ್ನಾಟಕ ಏಕೀಕರಣದಲ್ಲೂ ಇಲ್ಲಿನ ಕನ್ನಡಿಗರ ದಿಟ್ಟ ಹೋರಾಟ ಮೈಲಿಗಲ್ಲಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಬಣ್ಣಿಸಿದರು. ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ 67ನೇ ಕರ್ನಾಟಕ ರಾಜ್ಯೋತ್ಸವ ಭಾಷಣ ಮಾಡಿದ ಅವರು, ‘ರಾಜ್ಯದ ಏಕೀಕರಣ ಚಳವಳಿಯಲ್ಲಿ ಜಿಲ್ಲೆಯ ಹಲವಾರು ಮಹನೀಯರು ತ್ಯಾಗ ಮಾಡಿದ್ದಾರೆ. ಬೈಲಹೊಂಗಲದ …

Read More »

ಎಸ್‌ಸಿಗೆ ಶೇ 17, ಎಸ್‌ಟಿಗೆ ಶೇ 7 ಮೀಸಲಾತಿ: ಇಂದಿನಿಂದ ಜಾರಿ

ಬೆಂಗಳೂರು: ಶಿಕ್ಷಣ ಮತ್ತು ಉದ್ಯೋಗ ದಲ್ಲಿ ಪರಿಶಿಷ್ಟ ಜಾತಿಗೆ (ಎಸ್‌ಸಿ)ಶೇ 17, ಪರಿಶಿಷ್ಟ ಪಂಗಡಕ್ಕೆ (ಎಸ್‌ಟಿ) ಶೇ 7 ಮೀಸಲಾತಿಯನ್ನು ರಾಜ್ಯೋತ್ಸವ ದಿನವಾದ ಮಂಗಳವಾರದಿಂದಲೇ (ನ.1) ಅನ್ವಯವಾಗುವಂತೆ ರಾಜ್ಯ ಸರ್ಕಾರ ಜಾರಿ ಮಾಡಿ ಸೋಮವಾರ ಅಧಿಸೂಚನೆ ಹೊರಡಿಸಿದೆ. ಆದರೆ, ಹೆಚ್ಚಳಗೊಳಿಸಿದ ಮೀಸ ಲಾತಿಯನ್ನು ಅನುಷ್ಠಾನಗೊಳಿಸುವ ಪ್ರಕ್ರಿಯೆಗೆ ಸಂಬಂಧಿಸಿದಂತೆ ಈ ಅಧಿಸೂಚನೆಯಲ್ಲಿ ಯಾವುದೇ ಸ್ಪಷ್ಟತೆ ಇಲ್ಲ.‌ ಹೀಗಾಗಿ, ಅಧಿಸೂಚನೆ ಜಾರಿಗೊಳಿಸುವ ಬಗ್ಗೆ ಗೊಂದಲವಿದೆ ಎಂದು ಹೆಸರು ಬಹಿರಂಗ ಪಡಿಸಲು ಬಯಸದ ಸರ್ಕಾರದ …

Read More »

ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕಾಗಿ ಆಗ್ರಹಿಸಿ ಪ್ರತ್ಯೇಕ ರಾಜ್ಯ ಧ್ವಜಾರೋಹಣ; ಬಿಗಿ ಪೊಲೀಸ್ ಬಂದೋಬಸ್ತ್

ಒಂದೆಡೆ ಕಲಬುರಗಿಯಲ್ಲಿ ಪ್ರತ್ಯೇಕ ಕಲ್ಯಾಣ ಕರ್ನಾಟಕ ರಾಜ್ಯಕ್ಕಾಗಿ ಆಗ್ರಹಿಸಲಾಗುತ್ತಿದ್ದು, ಬೆಳಗಾವಿಯಲ್ಲಿ ರಾಜ್ಯೋತ್ಸವಕ್ಕೆ ವಿರುದ್ಧವಾಗಿ ನಾಡದ್ರೋಹಿ ಎಂಇಎಸ್‌ನಿಂದ ಕರಾಳ ದಿನಾಚರಣೆ ಆಚರಿಸುತ್ತಿದೆ. ಈ ಎಲ್ಲ ನಿಟ್ಟಿನಲ್ಲಿ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ಕಲಬುರಗಿ: ಕನ್ನಡ ಮಾತನಾಡುವ ಪ್ರದೇಶಗಳು ಭೌಗೋಳಿಕವಾಗಿ ಒಂದುಗೂಡಿದ ಹೆಮ್ಮೆಯ ದಿನವಿಂದು. ನಾಡಿನ ಸಮಸ್ತ ಜನರು ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿದ್ದರೆ ಕಲಬುರಗಿಯಲ್ಲಿ ಪ್ರತ್ಯೇಕ ಕಲ್ಯಾಣ ರಾಜ್ಯಕ್ಕಾಗಿ ಆಗ್ರಹಿಸಲಾಗುತ್ತಿದೆ. ಮಾತ್ರವಲ್ಲದೆ ಇಂದು ಪ್ರತ್ಯೇಕ ರಾಜ್ಯ ಧ್ವಜಾರೋಹಣ ನಡೆಸಲು ಸಿದ್ಧತೆ ನಡೆಸಲಾಗುತ್ತಿದೆ, ಇನ್ನೊಂದೆಡೆ …

Read More »