ಚಿತ್ರದುರ್ಗ: ಮುರುಘಾ ಮಠಕ್ಕೆ ನೂತನ ಪೀಠಾಧ್ಯಕ್ಷ ಅಥವಾ ಆಡಳಿತಾಧಿಕಾರಿ ನೇಮಕ ಮಾಡುವಲ್ಲಿ ಸರ್ಕಾರ ವಿಳಂಬ ನೀತಿ ಮುಂದುವರಿಸಿದರೆ ನ್ಯಾಯಾಲಯದ ಮೆಟ್ಟಿಲೇರಲು ವೀರಶೈವ ಲಿಂಗಾಯತ ಸಮಾಜದ ಸಭೆ ಶನಿವಾರ ಒಮ್ಮತದ ನಿರ್ಣಯ ಕೈಗೊಂಡಿತು. ತಾಲ್ಲೂಕಿನ ಸೀಬಾರದಲ್ಲಿರುವ ಎಸ್. ನಿಜಲಿಂಗಪ್ಪ ಸ್ಮಾರಕದಲ್ಲಿಮಾಜಿ ಸಚಿವ ಎಚ್. ಏಕಾಂತಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯು ಮೂರು ನಿರ್ಣಯಗಳನ್ನು ಅನುಮೋದಿಸಿತು. ಸಭೆಯ ತೀರ್ಮಾನದ ಕುರಿತು ಮುಖ್ಯಮಂತ್ರಿಗೆ ಪತ್ರ ಬರೆಯಲು ನಿರ್ಧರಿಸಲಾಯಿತು. ‘ಶಿವಮೂರ್ತಿ ಶರಣರ ಬಂಧನದ ಬಳಿಕ ಮುರುಘಾ ಮಠ ಹಾಗೂ …
Read More »
Laxmi News 24×7