ಬೆಂಗಳೂರು: ವಿಧಾನಮಂದಲ ಚಳಿಗಾಲದ ಅಧಿವೇಶನದ ನಡುವೆಯೇ ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಡಿಸೆಂಬರ್ 21ರಂದು ಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿಯೇ ಚುನಾವಣೆ ನಡೆಯಲಿದೆ. ಹಾಲಿ ಹಂಗಾಮಿ ಸಭಾಪತಿಯಾಗಿ ರಘುನಾಥ್ ರಾವ್ ಮಲ್ಕಾಪುರೆ ಕಾರ್ಯನಿರ್ವಹಿಸುತ್ತಿದ್ದು, ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಬಿಜೆಪಿ ಅಭ್ಯರ್ಥಿಯಾಗುವ ಸಾಧ್ಯತೆ ದಟ್ಟವಾಗಿದೆ. ಈ ಬಾರಿ ವಿಧಾನ ಮಂಡಲ ಚಳಿಗಾಲದ ಅಧಿವೇಶನ ಗಡಿ ಜಿಲ್ಲೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ …
Read More »Daily Archives: ಡಿಸೆಂಬರ್ 8, 2022
ಕೆಲ ದಿನಗಳ ಹಿಂದೆ ಕಣ್ಮರೆಯಾಗಿದ್ದ ಕುಷ್ಟಗಿಯ ಕೃಷಿ ಅಧಿಕಾರಿ ಬೆಂಗಳೂರಿನಲ್ಲಿ ಪತ್ತೆ
ಕುಷ್ಟಗಿ: ಡಿ.1ರಿಂದ ಕಣ್ಮರೆಯಾಗಿದ್ದ ಕುಷ್ಟಗಿ ಕೃಷಿ ಇಲಾಖೆ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ರಾಘವೇಂದ್ರ ಕೊಂಡಗುರಿ ಅವರು, ಸಾಮಾಜಿಕ ಜಾಲತಾಣ ಸುಳಿವಿನಿಂದ ಪತ್ತೆ ಹಚ್ಚಿರುವ ಮಾಹಿತಿ ಪೋಲಿಸ್ ಮೂಲಗಳು ದೃಢಪಡಿಸಿವೆ. ಡಿ.1 ರ ಬೆಳಗ್ಗೆ ಅವರ ಸ್ವಗ್ರಾಮ ಹಿರೇಅರಳಹಳ್ಳಿ (ಯಲಬುರ್ಗಾ) ಗ್ರಾಮದಿಂದ ಅವರ ಪರಿಚಯಸ್ಥ ಹನುಮಂತ ಕೊಂಡಗುರಿ ಬೈಕಿನಲ್ಲಿ ಕುಷ್ಟಗಿ ಬಸ್ ನಿಲ್ದಾಣದವರೆಗೂ ಬಂದಿಳಿದು, ಅಲ್ಲಿಂದ ಕಣ್ಮರೆಯಾಗಿದ್ದರು. ಮನೆಯಲ್ಲಿ ತಮ್ಮ ಎರಡು ಮೋಬೈಲ್ ಬಿಟ್ಟು ಹೋದವರು ಸಂಜೆಯಾದರೂ ಮನೆಗೆ ಮರಳದೇ …
Read More »ಹೆಚ್. ವಿಶ್ವನಾಥ್ – ಸಿದ್ದರಾಮಯ್ಯ ಭೇಟಿ ಬೆನ್ನಲ್ಲೇ ಕುತೂಹಲ ಕೆರಳಿಸಿದೆ ‘ಬಾಂಬೆ ಬಾಯ್ಸ್’ ನಡೆ.!
ಜೆಡಿಎಸ್ – ಕಾಂಗ್ರೆಸ್ ನೇತೃತ್ವದ ಮೈತ್ರಿ ಸರ್ಕಾರ ಪತನಗೊಳ್ಳಲು ಕಾರಣರಾಗಿದ್ದ ‘ಬಾಂಬೆ ಬಾಯ್ಸ್’ ಈಗ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಈ ಪೈಕಿ ಬಹುತೇಕರು ಮಂತ್ರಿಯಾಗಿದ್ದು, ಹೆಚ್. ವಿಶ್ವನಾಥ್ ಅವರಿಗೆ ಅವಕಾಶ ಸಿಕ್ಕಿಲ್ಲ. ವಿಧಾನಸಭಾ ಚುನಾವಣೆಗೆ ಇನ್ನು ಐದಾರು ತಿಂಗಳು ಬಾಕಿ ಇದ್ದು, ರಾಜ್ಯ ರಾಜಕಾರಣದಲ್ಲಿ ಕೆಲವೊಂದು ಬದಲಾವಣೆಗಳಾಗುತ್ತಿವೆ. ಇದರ ಮಧ್ಯೆ ಬಿಜೆಪಿ ವಿಧಾನಪರಿಷತ್ ಸದಸ್ಯ ಹೆಚ್. ವಿಶ್ವನಾಥ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾಗಿ ಅಚ್ಚರಿ …
Read More »ಸಂಚಾರ ನಿಯಮ ಉಲ್ಲಂಘನೆ ಮಾಡಿದವರಿಗೆ ಇನ್ಮುಂದೆ ಸಂಕಷ್ಟ..
ಬೆಂಗಳೂರು: ಟ್ರಾಫಿಕ್ ದಂಡ ಕಟ್ಟದೇ ಓಡಾಡ್ತಿದ್ರೆ ನಿಮ್ಮ ವಾಹನಗಳನ್ನ ರೋಡಿಗಿಳಿಸೋಕೆ ಅಗಲ್ಲ, ಪೊಲೀಸರು ದಂಡದ ರಶೀದಿಯನ್ನ ನಿಮ್ಮ ಮನೆಗೆ ಕಳಿಸಿದ್ರೂ ಡೋಂಟ್ ಕೇರ್ ಎಂದವರಿಗೆ ಕಾದಿದೆ ಬಿಗ್ ಶಾಕ್. ಸಂಚಾರ ನಿಯಮ ಉಲ್ಲಂಘನೆ ಮಾಡಿದವರಿಗೆ ಇನ್ಮುಂದೆ ಸಂಕಷ್ಟ. ದಂಡ ಬಾಕಿ ಉಳಿಸಿಕೊಂಡಿರುವ ವಾಹನಗಳ ಮೇಲೆ ಕಾನೂನು ಅಸ್ತ್ರ. ಆರ್ಟಿಓ ಮತ್ತು ಇನ್ಶೂರೆನ್ಸ್ ಕಂಪನಿಗಳ ಮೂಲಕ ದಂಡ ವಸೂಲಿಗೆ ಫ್ಲಾನ್ ರೂಪಿಸಲಾಗಿದೆ. ಪೊಲೀಸರು ವೈಟ್ ಮತ್ತು ಯೆಲ್ಲೋ ಬೋರ್ಡ್ ವಾಹನಗಳ ದಂಡ ವಸೂಲಿಗೆ …
Read More »ಕರವೇ ಕಾರ್ಯಕರ್ತರು ಪೊಲೀಸರ ವಶಕ್ಕೆ.
ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರನ್ನ ಪೊಲೀಸರು ಬಂಧಿಸಿದ ಹಿನ್ನೆಲೆ ಪೊಲೀಸರ ವಿರುದ್ಧ ಕರವೇ ಶಿವರಾಮೇ ಗೌಡ ಕೆಂಡಾಮಂಡಲವಾಗಿದ್ದಾರೆ. ಎಂಇಎಸ್ ಪುಂಡರನ್ನ,ಮರಾಠಿ ಪುಂಡರನ್ನ ಮೊದಲು ಬಂಧಿಸಿ, ಕರ್ನಾಟಕದ ಬಸ್ಸುಗಳಿಗೆ ಬೆಂಕಿ ಹಚ್ಚಿದವರನ್ನ ಬಂಧಿಸಿ, ನಮ್ಮನ್ನ ಬಂಧಿಸಿ ಹೋರಾಟವನ್ನ ಹತ್ತಿಕ್ಕಲಾಗ್ತಿದೆ. ರಾಜ್ಯ ಸರ್ಕಾರ ಕನ್ನಡಪರ ಹೋರಾಟವನ್ನ ಹತ್ತಿಕ್ಕುತ್ತಿದೆ, ಎಂಇಎಸ್ ಹಾಗೂ ಶಿವಸೇನೆ ವಿರುದ್ಧ ಕರವೇ ಪ್ರತಿಭಟನೆ ನಡೆಸುತ್ತಿದೆ. ಪ್ರತಿಭಟನೆ ಆರಂಭಕ್ಕೂ ಮುನ್ನವೇ ರಾಜ್ಯ ಸರ್ಕಾರ ಹತ್ತಿಕ್ಕುತ್ತಿದೆ, ಹೋರಾಟಕ್ಕೂ ಮೊದಲೇ ನಮ್ಮನ್ನ ಬಂಧಿಸಲಾಗುತ್ತಿದೆ. ಎಂದು …
Read More »ಗುಜರಾತ್ ಎಲೆಕ್ಷನ್ ಬೇರೆ.. ಕರ್ನಾಟಕದ ಎಲೆಕ್ಷನ್ ಬೇರೆ: ಸಿ.ಎಂ.ಇಬ್ರಾಹಿಂ
ಬೆಂಗಳೂರು: ಗುಜರಾತ್ ಎಲೆಕ್ಷನ್ ಬೇರೆ.. ಕರ್ನಾಟಕದ ಎಲೆಕ್ಷನ್ ಬೇರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ. ಕಾಂಗ್ರೆಸ್ ಡ್ರೈವರ್ ಇಲ್ಲದ ಬಸ್. ಗೊತ್ತು ಗುರಿಯೂ ಇಲ್ಲ. ಹೆಚ್ಡಿಕೆ ಕರೆಸಿ ಸರ್ಕಾರ ಮಾಡಿ ಆನಂತ್ರ ಅವರೇ ಮುಂಬಯಿಗೆ ಕಳಿಸಿದ್ರು. ಕರ್ನಾಟಕದಲ್ಲಿ ಪ್ರಾದೇಶಿಕ ಶಕ್ತಿಗೆ ಜನ ಮಣೆ ಹಾಕ್ತಾರೆ. ಕರ್ನಾಟಕದಲ್ಲಿ ಮೋದಿ ಮ್ಯಾಜಿಕ್ ನಡೆಯಲ್ಲ, ದೇವೇಗೌಡರ ದೊಡ್ಡ ಮ್ಯಾಜಿಕ್ ನಡೆಯುತ್ತೆ ಎಂದು ಇಬ್ರಾಹಿಂ ಹೇಳಿದ್ದಾರೆ.
Read More »ಮುತಗಾ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಹೇಮಲತಾ ಕಿವಡಸಣ್ಣವರ ವರ್ಗಾವಣೆ ಕೋರಿ ಪ್ರತಿಭಟನೆ
ಮುತಗಾ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಹೇಮಲತಾ ಕಿವಡಸಣ್ಣವರ ಅವರನ್ನು ವರ್ಗಾವಣೆ ಮಾಡಲು ಕೋರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎದುರು ಪ್ರತಿಭಟನೆ ನಡೆಸಲಾಯಿತು. ಮುತಗಾ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಹೇಮಲತಾ ಕಿವಡಸಣ್ಣವರ ಅವರು ಸಮಯಕ್ಕೆ ಸರಿಯಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬರುವುದಿಲ್ಲ. ಮತ್ತು ಕಾಳಜಿ ಪೂರ್ವಕವಾಗಿ ರೋಗಿಗಳೊಂದಿಗೆ ವ್ಯವಹರಿಸುವದಿಲ್ಲ ಜೊತೆಗೆ ಆಸ್ಪತ್ರೆಯಲ್ಲಿ ಯಾವದೇ ರೀತಿಯ ಸೌಲಭ್ಯಗಳನ್ನು ಕಲ್ಪಿಸಲಾಗಿಲ್ಲ ಎಂದು ಸತೀಶ್ ಶಹಾಪುರಕರ …
Read More »ಗಡಿ ವಿವಾದ ಹಿನ್ನೆಲೆ ಮಹಾರಾಷ್ಟ್ರದಲ್ಲಿ ಕರ್ನಾಟಕ ಬಸ್ ಗಳ ಟಾರ್ಗೆಟ್
ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ಹಿನ್ನೆಲೆ ಮಹಾರಾಷ್ಟ್ರದಲ್ಲಿ ಕರ್ನಾಟಕ ಬಸ್ ಗಳ ಟಾರ್ಗೆಟ್ ಮಾಡಲಾಗುತ್ತಿರುವದನ್ನು ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣ ಗೌಡ ಬಣ ಖಂಡಿಸಿದೆ. ರಾಜ್ಯ ರಸ್ತೆ ಸಾರಿಗೆ ಬಸ್ ಗಳಿಗೆ ಕಪ್ಪು ಬಣ್ಣ ಬಳಿದು ವಿರೋಧಿಸಿ ಮಹಾರಾಷ್ಟ್ರ ಪುಂಡರ ವಿರುದ್ಧ ಕ್ರಮಕ್ಕೆ ಆಗ್ರಹ ಮಾಡಲಾಗಿದೆ. ಮಹಾರಾಷ್ಟ್ರ ಪುಂಡರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಕರವೇ ನಾರಾಯಣ ಗೌಡ ಬಣದ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಿ ಮಹಾರಾಷ್ಟ್ರದಲ್ಲಿ ಶಿವಸೇನೆ, ಮಹಾರಾಷ್ಟ್ರ ನವ ನಿರ್ಮಾಣ …
Read More »ನವಲಗುಂದ ಲಾಡ್ಜ್ನಲ್ಲಿ ಯುವಜೋಡಿ ಸಾವಿಗೆ ಶರಣು: ಅಣ್ಣ-ತಂಗಿ ಅಂತಾ ಗೊತ್ತಿದ್ರೂ ಪ್ರೀತಿಸಿ ದುರಂತ ಅಂತ್ಯ
ಧಾರವಾಡ: ಒಂದೇ ಫ್ಯಾನಿಗೆ ನೇಣು ಬಿಗಿದುಕೊಂಡು ಯುವಜೋಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಧಾರವಾಡದ ನವಲಗುಂದ ಪಟ್ಟಣದಲ್ಲಿ ನಿನ್ನೆ (ಡಿ.7) ರಾತ್ರಿ ನಡೆದಿದೆ. ನವಲಗುಂದ ತಾಲೂಕು ಬೆಳವಟಗಿ ಗ್ರಾಮದ ಕುಮಾರ ತಳವಾರ (22) ಹಾಗೂ ಧಾರವಾಡ ತಾಲೂಕು ನೀರಲಕಟ್ಟಿ ಗ್ರಾಮದ ದೀಪಾ ಎತ್ತಿನಗುಡ್ಡ (18) ಆತ್ಮಹತ್ಯೆ ಮಾಡಿಕೊಂಡ ಜೋಡಿ. ನವಲಗುಂದ ಪಟ್ಟಣದ ಅಶೋಕ ಲಾಡ್ಜ್ನಲ್ಲಿ ಇಬ್ಬರು ಸಾವಿಗೆ ಶರಣಾಗಿದ್ದಾರೆ. ಇಬ್ಬರು ಕಳೆದ ಮೂರು ದಿನಗಳಿಂದ ಲಾಡ್ಜ್ನಲ್ಲಿದ್ದರು. ಪರಿಚಯಸ್ಥರ ಮೂಲಕ ಲಾಡ್ಜ್ನಲ್ಲಿ ರೂಮ್ ಪಡೆದಿದ್ದರು …
Read More »ಗುಜರಾತ್ ಫಲಿತಾಂಶ ಕರ್ನಾಟಕಕ್ಕೆ ಅನ್ವಯಿಸಲ್ಲ, ಸಿಎಂ ಹಗಲುಗನಸು:H.D.K.
ದೇವನಹಳ್ಳಿ: ಗುಜರಾತ್ ಚುನಾವಣಾ ಫಲಿತಾಂಶ ಕರ್ನಾಟಕಕ್ಕೆ ಅನ್ವಯವಾಗಲ್ಲ, ಸಿಎಂ ಬಸವರಾಜ ಬೊಮ್ಮಾಯಿ ಅವರು ಹಗಲುಗನಸು ಕಾಣುತ್ತಿದ್ದಾರೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ದೇವನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್ಡಿಕೆ, ಗುಜರಾತ್ ಹಾಗೂ ಹಿಮಾಚಲ ಪ್ರದೇಶ ರಾಜ್ಯಗಳ ಚುನಾವಣಾ ಫಲಿತಾಂಶದ ಬಗ್ಗೆ ಮೊದಲೇ ಗೊತ್ತಿರುವುದೇ… ಗುಜರಾತ್ ಫಲಿತಾಂಶದ ಬಗ್ಗೆ ವಿಶೇಷ ವಾಖ್ಯಾನ ಮಾಡುವಂತಹದ್ದಿಲ್ಲ. 5 ವರ್ಷದಿಂದ ಗುಜರಾತ್ನಲ್ಲಿ ವಿರೋಧ ಪಕ್ಷವೇ ಇರಲಿಲ್ಲ. ಆದ್ದರಿಂದ ಗುಜರಾತ್ ಫಲಿತಾಂಶ ಏನು ಬರಲಿದೆ ಎಂದು ಮೊದಲೇ ಎಲ್ಲರಿಗೂ …
Read More »