ಹುಬ್ಬಳ್ಳಿ: ವಿಆರ್ಎಲ್ ಸಮೂಹ ಸಂಸ್ಥೆಗಳ ಚೇರ್ಮನ್ ಡಾ. ವಿಜಯ ಸಂಕೇಶ್ವರ ಅವರ ಜೀವನಾಧಾರಿತ ‘ವಿಜಯಾನಂದ’ ಸಿನಿಮಾ ಇಂದಿನಿಂದ ಬಿಡುಗಡೆಯಾಗಿದೆ. ವಾಣಿಜ್ಯ ನಗರಿ ಹುಬ್ಬಳ್ಳಿಯ ಪಿವಿಆರ್, ಅಪ್ಸರಾ ಹಾಗೂ ಸಿನಿಪೊಲೀಸ್ ಚಿತ್ರಮಂದಿರದಲ್ಲಿ ವಿಜಯಾನಂದ ಅದ್ಧೂರಿಯಾಗಿ ತೆರೆಕಂಡಿದೆ. ಪಿವಿಆರ್ ಸಿನಿಮಾದಲ್ಲಿ ಡಾ. ವಿಜಯ ಸಂಕೇಶ್ವರ ಅವರ ಅಭಿಮಾನಿಗಳು ಹಾಗೂ ಉದ್ಯಮಿಗಳಿಂದ ಶುಕ್ರವಾರ ಬೆಳಗ್ಗೆ ವಿಶೇಷ ಪ್ರದರ್ಶನ ಆಯೋಜಿಸಲಾಗಿತ್ತು. ಚಲನಚಿತ್ರ ಪ್ರದರ್ಶನದ ಮುಂಚೆ ಮಾಜಿ ಸಿಎಂ ಜಗದೀಶ ಶೆಟ್ಟರ್, ಮಾಜಿ ವಿಧಾನ ಪರಿಷತ್ ಸದಸ್ಯ ಬಸವರಾಜ …
Read More »Daily Archives: ಡಿಸೆಂಬರ್ 9, 2022
ಕರ್ನಾಟಕ-ಮಹಾರಾಷ್ಟ್ರ ಬಸ್ ಸಂಚಾರ ಪುನರಾರಂಭ
ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಹಿನ್ನೆಲೆಯಲ್ಲಿ ಎರಡೂ ರಾಜ್ಯಗಳ ನಡುವೆ ಬಂದ್ ಆಗಿದ್ದ ಸಾರಿಗೆ ಬಸ್ ಸಂಚಾರ ಇಂದಿನಿಂದ ಪುನರಾರಂಭವಾಗಿದೆ. ಕರ್ನಾಟಕದ ಬೆಳಗಾವಿ ಗಡಿ ಹಾಗೂ ಪುಣೆಯಲ್ಲಿ ಮಹಾರಾಷ್ಟ್ರ ಹಾಗೂ ಕನ್ನಡ ಪರ ಸಂಘಟನೆಗಳ ಆಕ್ರೋಶ, ಎರಡೂ ರಾಜ್ಯಗಳ ಬಸ್, ಕಾರು ಸೇರಿದಂತೆ ವಾಹನಗಳ ಮೇಲೆ ಕಲ್ಲು ತೂರಾಟ, ಮಸಿ ಬಳಿದ ಪ್ರಕರಣಗಳ ಬೆನ್ನಲ್ಲೇ ಮುಂಜಾಗೃತಾ ಕ್ರಮವಾಗಿ ಮಹಾರಾಷ್ಟ್ರ ಹಾಗೂ ಬೆಳಗಾವಿ ನಡುವಿನ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಬಸ್ ಗಳಿಲ್ಲದೇ …
Read More »86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ವೈರಲ್
ಹಾವೇರಿ: 86ನೇ ಅಖಿಲಾ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಆಹ್ವಾನ ಪ್ರತಿಕೆ ಇದೀಗ ಎಲ್ಲೆಡೆ ವೈರಲ್ ಆಗಿದೆ. ಜನವರಿ 6, 7, 8ರಂದು ಹಾವೇರಿಯಲ್ಲಿ ನಡೆಯಲಿರುವ ಸಮ್ಮೇಳನದ ಆಮಂತ್ರಣ ಪತ್ರಿಕೆಯು ಅಧಿಕೃತ ಬಿಡುಗಡೆ ಮುನ್ನವೇ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕನ್ನಡದ ಅತಿ ದೊಡ್ಡ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಸೋರಿಕೆ ಆಗಿದ್ದರು ಕನ್ನಡ ಸಾಹಿತ್ಯ ಪರಿಷತ್ತು ಸುಮ್ಮನೆ ಇದ್ದಾರೆ. ಈಗಾಗಲೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಭರ್ಜರಿ …
Read More »ಯಾವದೇ ಬೆದರಿಕೆಗೆ ಬಗ್ಗದೆ ಪ್ರಾಣ ಹೋದರು ಸರಿ ತಮ್ಮ ನಿಲುವಿಗೆ ಬದ್ಧರಾಗಿದದೇವೆ ಎಂದ ಅಕ್ಕಲಕೋಟ ಕನ್ನಡಿಗರು
ನಮ್ಮನ್ನೂ ಕರ್ನಾಟಕಕ್ಕೆ ಸೇರಿಸಿಕೊಳ್ಳಿ ಎಂದು ಮಹಾರಾಷ್ಟçಕ್ಕೆ ಮನವಿ ಸಲ್ಲಿಸಿ ಮಹಾರಾಷ್ಟçದ ಕೆಂಗಣ್ಣಿಗೆ ಗುರಿಯಾಗಿರುವ ಅಕ್ಕಲಕೋಟ ತಾಲೂಕಿನ ಕನ್ನಡಿಗರು ಯಾವದೇ ಬೆದರಿಕೆಗೆ ಬಗ್ಗದೆ ಪ್ರಾಣ ಹೋದರು ಸರಿ ತಮ್ಮ ನಿಲುವಿಗೆ ಬದ್ಧರಾಗಿದದೇವೆ ಎಂದು ಸ್ಪಷ್ಟಪಡಿಸಿದ್ದಾರೆ. ಅಭಿವೃದ್ಧಿ ವಂಚಿತ ಗ್ರಾಮಗಳ ಕನ್ನಡಿಗರು ಮಾಜಿ ಶಾಸಕರ ಸಮ್ಮುಖದಲ್ಲಿ ಅಕ್ಕಲಕೋಟ ತಾಲೂಕಿನ ತಡವಳ ಗ್ರಾಮದಲ್ಲಿ ಸಭೆ ಸೇರಿ ತಮ್ಮ ಹೋರಾಟವನ್ನು ತೀವ್ರಗೊಳಿಸಿದ್ದಾರೆ. ಕರ್ನಾಟಕಕ್ಕೆ ಸೇರಿಸಿ ಎಂದು ೧೧ ಗ್ರಾಮ ಪಂಚಾಯತಿಗಳು ಠರಾವು ಮಂಡಿಸಿದ ಬೆನ್ನಲ್ಲೇ ಚುನಾಯಿತ …
Read More »ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ಕುರಿತಾದ ಪ್ರಶ್ನೆಗಳನ್ನು ತಳ್ಳಿಹಾಕಿದ ಅಭಯ ಪಾಟೀಲ್
ಬೆಳಗಾವಿ ಮಹಾನಗರ ಪಾಲಿಕೆ ಮಹಾಪೌರ ಉಪಮಹಾಪೌರ ಚುನಾವಣೆ ಜನೆವರಿ ತಿಂಗಳ ಮೊದಲ ಅಥವಾ ಎರಡನೆಯ ವಾರದಲ್ಲಿ ನಡೆಯಲಿವೆ ಎಂದು ಬೆಳಗಾವಿ ದಕ್ಷಿಣ ವಿಧಾನಸಭಾ ಮತಕ್ಷೇತ್ರದ ಶಾಸಕ ಅಭಯ ಪಾಟೀಲ್ ಹೇಳಿದರು. ಶುಕ್ರವಾರ ಮಹಾನಗರ ಪಾಲಿಕೆಯ ಸಭಾಗೃಹದಲ್ಲಿ ಕರೆಯಲಾಗಿದ್ದ ಸುದ್ದಿ ಗೋಷ್ಟಿಯಲ್ಲಿ ಮಾತನಾಡಿದ ಅವರು ಬೆಳಗಾವಿ ಕಲಬುರ್ಗಿ ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆಯ ಮಹಾಪೌರ ಉಪಮಹಾಪೌರ ಚುನಾವಣೆ ಏಕ ಕಾಲಕ್ಕೆ ನಡೆದಿದ್ದರೂ ಕೂಡ ಇದುವರೆಗೂ ಬೆಳಗಾವಿಗೆ ಮಹಾಪೌರ ಉಪಮಹಾಪೌರ ಚುನಾವಣೆ ನಡೆದಿಲ್ಲ …
Read More »ಸತ್ತು ಹೋಗಿರುವ M.E.S.ಗೆ ಮರು ಜೀವ ತುಂಬಲು ಮರಾಠಿ ಪುಂಡರಿಗೆ ಪುಷ್ಟಿ ಕೊಡಲಾಗುತ್ತಿದೆ: ಲಕ್ಷ್ಮಣ ಸವದಿ
ಸತ್ತು ಹೋಗಿರುವ ಎಮ್.ಇ.ಎಸ್ ಗೆ ಮರು ಜೀವ ತುಂಬಲು ಮರಾಠಿ ಪುಂಡರಿಗೆ ಪುಷ್ಟಿ ಕೊಡಲಾಗುತ್ತಿದೆ ಎಂದು ಮಾಜಿ ಉಪ ಮುಖ್ಯ ಮಂತ್ರಿ , ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ ಸವದಿ ಹೇಳಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕರ್ನಾಟಕ ಮಹಾರಾಷ್ಟ್ರ ಗಡಿ ವಿಚಾರವಾಗಿ ಪ್ರತಿಕ್ರಿಯೆ ನೀಡಿದರು. ರಾಜಕೀಯ ಲಾಭಕ್ಕಾಗಿ ಗಡಿ ವಿವಾದವನ್ನು ಬಳಸಿಕೊಳ್ಳಲಾಗುತ್ತಿದೆ ಎಂದ ಅವರು ಈಗಾಗಲೇ ಗಡಿ ವಿವಾದ ಸುಪ್ರೀಂ ಕೋರ್ಟ್ ಅಂಗಳದಲ್ಲಿದೆ. ಮರಾಠ ಸಮಾಜ ಭಾರತೀಯ ಜನತಾ ಪಕ್ಷದ …
Read More »ಬೆಳ್ಳಂಬೆಳಗ್ಗೆ ಪೊಲೀಸರ ಕಾರ್ಯಾಚರಣೆ: ಅನುಮಾನಾಸ್ಪದ ವ್ಯಕ್ತಿಗಳ ಮನೆಗಳ ಮೇಲೆ ಪೊಲೀಸರ ದಾಳಿ: ಮಾರಕಾಸ್ತ್ರಗಳ ಪರಿಶೀಲನೆ
ಗದಗ: ಡಿವೈಎಸ್ಪಿ ಶಿವಾನಂದ ಪವಾಡಶೆಟ್ಟರ ನೇತೃತ್ವದಲ್ಲಿ ಪೊಲೀಸರು ಶುಕ್ರವಾರ(ಡಿ.9) ನಗರದ ವಿವಿಧೆಡೆ ಅನುಮಾನಾಸ್ಪದ ವ್ಯಕ್ತಿಗಳ ಮನೆಗಳ ಮೇಲೆ ದಾಳಿ ನಡೆಸಿ ಮಾರಕಾಸ್ತ್ರಗಳ ಪರಿಶೀಲನೆ ನಡೆಸಿದರು. ಗದಗ-ಬೆಟಗೇರಿ ಅವಳಿ ನಗರದ ವಿವಿಧೆಡೆ ಚಾಕು ಇರಿತ ಪ್ರಕರಣ ಸೇರಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಪ್ರಕರಣಗಳು ದಾಖಲಾಗಿದ್ದವು. ಈ ಹಿನ್ನೆಲೆಯಲ್ಲಿ ನಗರದ ಕಮ್ಮಾರಸಾಲು, ರಂಗನವಾಡ, ತೆಗ್ಗಿನ ಪ್ಲಾಟ್ ಸೇರಿ ಹಲವು ಪ್ರದೇಶಗಳ ಮನೆಗಳ ಮೇಲೆ ಪೊಲೀಸರು ಮಾರಕಾಸ್ತ್ರಗಳನ್ನು ಪರಿಶೀಲಿಸಿದರು. ನಗರದಲ್ಲಿ ಕಳೆದೊಂದು ವಾರದಲ್ಲಿ ಎರಡು …
Read More »ಶಾಲಾ ಸಮಯಕ್ಕೆ ಬಸ್ ಸೌಲಭ್ಯ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ
ವಿಜಯಪುರ: ಸೂಕ್ತ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಜಿಲ್ಲೆಯ ಇಂಡಿ ತಾಲೂಕಿನ ಅಂಜುಟಗಿ ಗ್ರಾಮದಲ್ಲಿ ಸಾರಿಗೆ ಸಂಸ್ಥೆ ಬಸ್ ಸಂಚಾರ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಸರಿಯಾದ ಸಮಯಕ್ಕೆ ಬಸ್ ಬಾರದ ಕಾರಣ ಶಾಲಾ-ಕಾಲೇಜು ತರಗತಿಗಳಿಗೆ ಹಾಜರಾಗಲು ತೊಂದರೆಯಾಗುತ್ತಿದೆ. ಈ ಸಮಸ್ಯೆ ಪರಿಹಾರಕ್ಕೆ ಸಾರಿಗೆ ಸಂಸ್ಥೆಯ ಆಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಉಪಯೋಗವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಲಾ ಕಾಲೇಜು ವೇಳೆಗೆ ಬಸ್ ಸೌಲಭ್ಯ ಬೇಕೆಂದು ಬೇಡಿಕೆ ಮುಂದಿಟ್ಟುಕೊಂಡು ಇಂಡಿ, ಝಳಕಿಯಲ್ಲಿರುವ …
Read More »ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ (ವ್ಹಿ. ಆರ್. ಡಬ್ಲ್ಯೂ.) ಹುದ್ದೆ ಆಹ್ವಾನ
ಬೆಳಗಾವಿ: ಖಾನಾಪುರ ತಾಲೂಕಿನ ವ್ಯಾಪ್ತಿಯ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ (ವ್ಹಿ. ಆರ್. ಡಬ್ಲ್ಯೂ.) ಹುದ್ದೆಗಳನ್ನು ಇಲಾಖೆಯ ಗ್ರಾಮೀಣ ಪುನರ್ವಸತಿ ಯೋಜನೆಯಡಿ ಮಾಸಿಕ ರೂ.9,000 ಗಳ ಗೌರವ ಧನ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಆಯಾ ಗ್ರಾಮ ಪಂಚಾಯ್ತಿಗಳ ವ್ಯಾಪ್ತಿಯ ಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಷರತ್ತುಗಳು: ಅರ್ಜಿದಾರರು ವಿಕಲಚೇತನರಿದ್ದು, ಕನಿಷ್ಟ 40% ಅಥವಾ 40% ಕ್ಕಿಂತ ಹೆಚ್ಚಿನ ವಿಕಲತೆ ಪ್ರಮಾಣ ಹೊಂದಿರತಕ್ಕದ್ದು, ಅರ್ಜಿದಾರರು ಆಯಾ ಗ್ರಾಮ …
Read More »ಫಲಕದಲ್ಲಿ ಕಾಮಗಾರಿ ಸಿಸಿ ರಸ್ತೆ ಮಾಯ ಕಳಪೆ ಚರಂಡಿ ಕಾಮಗಾರಿ ಪಂಚಾಯತರಾಜ ಇಂಜಿನಿಯರಿಂಗನ ಬ್ರಹ್ಮಾಂಡ ಭ್ರಷ್ಟಾಚಾರ
ಬೆಳಗಾವಿ: ಫಲಕದಲ್ಲಿ ಕಾಮಗಾರಿ ಸಿಸಿ ರಸ್ತೆ ಮಾಯ ಕಳಪೆ ಚರಂಡಿ ಕಾಮಗಾರಿ ಪಂಚಾಯತರಾಜ ಇಂಜಿನಿಯರಿಂಗನ ಬ್ರಹ್ಮಾಂಡ ಭ್ರಷ್ಟಾಚಾರ ಬೆಳಗಾವಿ ನಗರದ ಕಂಗ್ರಾಳಿ ಕೆ ಎಚ್ ಗ್ರಾಮ ಪಂಚಾಯತ ವ್ಯಾಪ್ತಿಯ ವಾರ್ಡ ನಂಬರ್ 12 ರ ಆಶ್ರಯ ಕಾಲೋನಿ ಸಾರಥಿ ನಗರದಲ್ಲಿ ಕಳಪೆ ಚರಂಡಿ ಕಾಮಗಾರಿ ಮಾಡಿದ್ದು ಬಿಟ್ಟರೆ ಬೇರೆ ಯಾವೂದೇ ಸಿಸಿ ರಸ್ತೆ ಮಾಡದೆ ಕಾಮಗಾರಿ ನಡೆಯದೆ ನಿನ್ನೇ ತಡರಾತ್ರಿ ರಾತ್ರೊ ರಾತ್ರಿ ಈ ಬೋರ್ಡು ಹಾಕಿ ಬಿಲ್ ತೆಗೆದುಕೊಳ್ಳಲು …
Read More »