Breaking News

Daily Archives: ಡಿಸೆಂಬರ್ 14, 2022

ರೋಹಿತ್‌ ಪವಾರ್‌ ಗೋಪ್ಯ ಸಭೆ

ಬೆಳಗಾವಿ: ಎನ್‌ಸಿಪಿ ಮುಖಂಡ ಶರದ್‌ ಪವಾರ್‌ ಅವರ ಸಹೋದರ ಸಂಬಂಧಿ, ಮಹಾರಾಷ್ಟ್ರದ ಶಾಸಕ ರೋಹಿತ್‌ ಪವಾರ್‌ ಅವರು ಮಂಗಳವಾರ ಬೆಳಗಾವಿಯ ಎಂಇಎಸ್‌ ಮುಖಂಡರ ಜತೆ ಗೋಪ್ಯ ಸಭೆ ನಡೆಸಿದರು. ‘ಗಡಿ ವಿಚಾರವಾಗಿ ನಡೆದ ಬೆಳವಣಿಗೆಗಳ ಮಾಹಿತಿ ಪಡೆಯಲು, ಮಹಾ ವಿಕಾಸ ಅಘಾಡಿ ನಾಯಕರ ಸೂಚನೆ ಮೇರೆಗೆ ರೋಹಿತ್ ಅವರು ಸೋಮವಾರ ಸಂಜೆ ಬೆಳೆಗಾವಿಗೆ ಬಂದರು. ಇಲ್ಲಿನ ಮರಾಠಿಗರ ಸ್ಥಿತಿಗತಿಗಳ ಮಾಹಿತಿ ಪಡೆದರು’ ಎಂದು ಎಂಇಎಸ್‌ನ ಮುಖಂಡರು ತಿಳಿಸಿದ್ದಾರೆ. ಮಂಗಳವಾರ ಸಮೀಪದ ಹಿಂಡಲಗಾ …

Read More »

ಬೆಳಗಾವಿ ಅಧಿವೇಶನದಲ್ಲಿ ಹಲಾಲ್‌ ನಿಷೇಧ ಮಸೂದೆ ಮಂಡನೆಗೆ ಸಿದ್ಧತೆ

ಬೆಂಗಳೂರು: ರಾಜ್ಯದಲ್ಲಿ ‘ಹಲಾಲ್‌’ ಲೇಬಲ್‌ ಹಾಕಿದ ಆಹಾರ ಪದಾರ್ಥಗಳ ಮಾರಾಟ ನಿಷೇಧಕ್ಕಾಗಿ ವಿಧಾನಪರಿಷತ್‌ ಸದಸ್ಯ ಎನ್‌.ರವಿಕುಮಾರ್‌ ಅವರು ಬೆಳಗಾವಿಯಲ್ಲಿ ನಡೆಯುವ ವಿಧಾನಮಂಡಲ ಅಧಿವೇಶನದಲ್ಲಿ ಖಾಸಗಿ ಮಸೂದೆ ಮಂಡಿಸಲಿದ್ದಾರೆ.   ಈ ಸಂಬಂಧ ಖಾಸಗಿ ಮಸೂದೆಯನ್ನು ಮಂಡಿಸಲು ಅವರು ವಿಧಾನಪರಿಷತ್‌ ಸಭಾಪತಿಯವರಿಗೆ ಬುಧವಾರ ನೋಟಿಸ್‌ ನೀಡಿದ್ದಾರೆ. ಆಹಾರ ಪದಾರ್ಥಗಳ ಮೇಲೆ ‘ಹಲಾಲ್‌’ ಲೇಬಲ್‌ ಹಾಕಿ ಮಾರುವುದನ್ನು ನಿಷೇಧಿಸಬೇಕು. ಇದಕ್ಕಾಗಿ ‘ಆಹಾರ ಸುರಕ್ಷೆ ಮತ್ತು ಗುಣಮಟ್ಟ ಕಾಯ್ದೆ’ಗೆ ಸೂಕ್ತ ತಿದ್ದುಪಡಿ ಅಗತ್ಯವಿದೆ. ಇದರಿಂದ ಸರ್ಕಾರದ …

Read More »

ಕೆಪಿಟಿಸಿಎಲ್ ಪರೀಕ್ಷೆ ಮತ್ತೊಬ್ಬ ಪರಾರಿಯಾದ ಆರೋಪಿ ಅಂದರ್

ಗೋಕಾಕ ಶಹರ ಪೊಲೀಸ್ ಠಾಣೆ  ಪ್ರಕರಣದಲ್ಲಿ ತನಿಖಾಧಿಕಾರಿ ಶ್ರೀ ವೀರೇಶ್ ತಿ ದೊಡಮನಿ DYSP DCRB ಇವರು ತನಿಖೆ ಮುಂದುವರೆಸಿ  ದಿನಾಂಕ 14-12-2022 ರಂದು ಈ ಕೇಸಿನಲ್ಲಿಯ ಪರಾರಿ ಇದ್ದ ಇನ್ನೊಬ್ಬ ಪ್ರಮುಖ ಆರೋಪಿ ಸೋಮನಗೌಡ ಶಂಕರಗೌಡ ಪಾಟೀಲ ಬಂಧಿಸಿದ್ದಾರೆ ವಯಸ್ಸು 36 ವರ್ಷ ರಾಯಭಾಗ ಇವನಿಗೆ ದಸ್ತಗೀರ ಮಾಡಿದ್ದು ಈತನು ದಿನಾಂಕ 07-08-2022 ರಂದು ನಡೆದ ಕೆಪಿಟಿಸಿಎಲ್ ಜ್ಯೂನಿಯರ್ ಅಸಿಸ್ಟಂಟ್ ಹುದ್ದೆಗೆ ನೇಮಕಾತಿ ನಡೆದ ಪರೀಕ್ಷೆಯ ಕಾಲಕ್ಕೆ ಗದಗ …

Read More »

ಸಂಕ್ರಾಂತಿ ವೇಳೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಫೈನಲ್: ಸಿದ್ದರಾಮಯ್ಯ

ಬಾಗಲಕೋಟೆ : ಜನವರಿ 15 ರಂದು ಕಾಂಗ್ರೆಸ್ ಪಕ್ಷ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದ್ದಾರೆ. ಅವರು ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಬೆಳಗಲ್ಲ ಗ್ರಾಮದಲ್ಲಿ ಬಳಿ ಎಸ್ ಆರ್ ಕೆ ಶುಗರ್ ಕಾರ್ಖಾನೆ ಯ ಅಡಿಗಲ್ಲು ಸಮಾರಂಭ ಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಾತನಾಡುತ್ತಾ, ಜನವರಿ ಡಿಕೆ ಶಿವಕುಮಾರ್ ಹಾಗೂ ನನ್ನ ನೇತೃತ್ವದಲ್ಲಿ ಎರಡು ತಂಡಗಳನ್ನು ರಚನೆ ಮಾಡಿ,ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕ ದಲ್ಲಿ ಪ್ರವಾಸ …

Read More »

ಜಿ.ಪಂ, ತಾಲೂಕು ಪಂಚಾಯತ್‌ ಚುನಾವಣೆ ವಿಳಂಬ: ರಾಜ್ಯ ಸರ್ಕಾರಕ್ಕೆ 5 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್

ಬೆಂಗಳೂರು: ಜಿ.ಪಂ, ತಾಲೂಕು ಪಂಚಾಯತ್‌ ಚುನಾವಣೆಗಳನ್ನು ನಡೆಸಲು ರಾಜ್ಯ ಸರ್ಕಾರ ವಿಳಂಬ ಮಾಡುತ್ತಿರುವುದಕ್ಕೆ ಹೈಕೋರ್ಟ್‌ ಸರ್ಕಾರಕ್ಕೆ ದಂಡ ಹಾಕಿ ಚಾಟಿ ಬೀಸಿದೆ. ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯಿತಿ ಚುನಾವಣೆ ನಡೆಸಲು ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ 5 ಲಕ್ಷ ರೂ.ದಂಡ ವಿಧಿಸಿದೆ.   ಪದೇ ಪದೇ ‌ಕಾಲಾವಕಾಶ ಕೇಳಿದ ಸರ್ಕಾರ ಹಾಗೂ ಸೀಮಾ ನಿರ್ಣಯ ಆಯೋಗದ ನಡೆಗೆ ತೀವ್ರ ಅಸಮಧಾನ ವ್ಯಕ್ತಪಡಿಸಿದ ಹೈಕೋರ್ಟ್, 24 ವಾರ ಕಾಲಾವಕಾಶ ನೀಡಿದರೂ ಸರ್ಕಾರ …

Read More »

ಬಾಲಿವುಡ್ ನ “ಸ್ಪೆಷಲ್ 26” ಸಿನಿಮಾ ಸ್ಟೈಲ್.ಸಿಬಿಐ ಅಧಿಕಾರಿಗಳು ಎಂದು ನಂಬಿಸಿ ಲಕ್ಷಾಂತರ ರೂ. ಲೂಟಿ!

ನವದೆಹಲಿ: ಬಾಲಿವುಡ್ ನ ಅಕ್ಷಯ್ ಕುಮಾರ್ ನಟನೆಯ “ಸ್ಪೆಷಲ್ 26” ಸಿನಿಮಾದ ರೀತಿಯಲ್ಲೇ ಸಿಬಿಐ ಅಧಿಕಾರಿಗಳೆಂದು ಪೋಸು ನೀಡಿ ಉದ್ಯಮಿಯೊಬ್ಬರ ಮನೆಯೊಳಗೆ ನುಗ್ಗಿ 30 ಲಕ್ಷ ರೂಪಾಯಿ ನಗದು ಹಾಗೂ ಚಿನ್ನಾಭರಣವನ್ನು ದೋಚಿಕೊಂಡು ಹೋಗಿರುವ ಘಟನೆ ಕೋಲ್ಕತಾದ ಭವಾನಿಪುರ್ ನಲ್ಲಿ ನಡೆದಿದೆ.   ಇತ್ತೀಚೆಗೆ ಕೋಲ್ಕತಾದ ಉದ್ಯಮಿಯೊಬ್ಬರ ಮನೆಗೆ ಸುಮಾರು 7-8 ಮಂದಿಯ ಗುಂಪೊಂದು ಆಗಮಿಸಿದ್ದು, ತಾವು ಸಿಬಿಐ ಅಧಿಕಾರಿಗಳೆಂದು ಹೇಳಿ ಮನೆಯೊಳಗೆ ನುಗ್ಗಿದ್ದರು ಎಂದು ಉದ್ಯಮಿ ಸುರೇಶ್ ವಾಧ್ವಾ (60ವರ್ಷ) …

Read More »

ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ವಿರುದ್ದ ಎಬಿವಿಪಿ ಪ್ರತಿಭಟನೆ

ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿ ಎಬಿವಿಪಿ ಕಾರ್ಯಕರ್ತರು ವಿಜಯಪುರ ನಗರದ ಜಿಲ್ಲಾಧಿಕಾರಿ ಕಚೇರಿಯ ಎದುರು ಬುಧವಾರ ಬೃಹತ್ ಪ್ರತಿಭಟನೆ ನಡೆಸಿದರು. ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಶೈಕ್ಷಣಿಕ ಸಮಸ್ಯೆ ಬಗೆಹರಿಸಬೇಕು. ‌ ಪದವಿ ಪರಿಕ್ಷೆ ಫಲಿತಾಂಶ ನಿಗದಿತ ಸಮಯದಲ್ಲಿ ಪ್ರಕಟಿಸಬೇಕು. ಪದೇ ಪದೇ ವಿದ್ಯಾರ್ಥಿಗಳ ಪಠ್ಯಕ್ರಮ ಬದಲಾವಣೆ ಮಾಡಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದರು. ಯುಜಿ ಮತ್ತು ಪಿಜಿ ವಿದ್ಯಾರ್ಥಿಗಳ ಶುಲ್ಕ ಕಡಿಮೆ ಮಾಡಬೇಕು.‌ ಪ್ರಶ್ನೆ ಪತ್ರಿಕೆ ಇಂಗ್ಲಿಷ್ ಹಾಗೂ ಕನ್ನಡದಲ್ಲಿ …

Read More »

ಕಬ್ಬಿನ ಜಮೀನಿನಲ್ಲಿ ಆಕಸ್ಮಿಕ ಬೆಂಕಿ ಅವಘಡದಿಂದ ಸುಮಾರು ಎರಡು ಲಕ್ಷ ಮೌಲ್ಯದ ಕಬ್ಬು ಭಸ್ಮ

ಆಕಸ್ಮಿಕವಾಗಿ ಬೆಂಕಿ ಅವಘಡದಿಂದ ಕಬ್ಬಿನ ಬೆಳೆ ಹಾನಿಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಮುಳವಾಡ ರೈಲ್ವೆ ನಿಲ್ದಾಣದ ಬಳಿ ನಡೆದಿದೆ. ಶಂಕ್ರಪ್ಪ ಮಹಾದೇವಪ್ಪ ಕಳಸಗೌಂಡ ಎಂಬುವರ ಎರಡು ಎಕರೆ ಕಬ್ಬು ಭಸ್ಮವಾಗಿದೆ. ಕಬ್ಬಿನ ಜಮೀನಿನಲ್ಲಿ ಆಕಸ್ಮಿಕ ಬೆಂಕಿ ಅವಘಡದಿಂದ ಸುಮಾರು ಎರಡು ಲಕ್ಷ ಮೌಲ್ಯದ ಕಬ್ಬು ಭಸ್ಮವಾಗಿದೆ. ಮನಗೂಳಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಈ ಕುರಿತು ದೂರು ದಾಖಲಾಗಿರುವ ಕುರಿತು ಮಾಹಿತಿ ಲಭ್ಯವಾಗಿಲ್ಲ.

Read More »

ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ದೆಹಲಿಯಲ್ಲಿ ಕರ್ನಾಟಕ ಕಾಂಗ್ರೆಸ್ ನಾಯಕರ ಸಭೆ

ಬೆಂಗಳೂರು,ಡಿ.14- ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ದೆಹಲಿಯಲ್ಲಿ ಕರ್ನಾಟಕ ಕಾಂಗ್ರೆಸ್ ನಾಯಕರ ಸಭೆ ನಡೆದಿದೆ. ಈ ಸಭೆಯ ರಹಸ್ಯವನ್ನು ಕರ್ನಾಟಕ ಬಿಜೆಪಿ ಟ್ವೀಟ್ ಮೂಲಕ ಬಿಚ್ಚಿಟ್ಟಿದೆ, ಕಾಂಗ್ರೆಸ್ ನಾಯಕರ ವಿರುದ್ಧ ಟೀಕೆ ಮಾಡಿದೆ.   ಸರಣಿ ಟ್ವೀಟ್ ಮಾಡಿರುವ ಕರ್ನಾಟಕ ಬಿಜೆಪಿ, ಚುನಾವಣೆ ಹತ್ತಿರ ಬರುತ್ತಿದ್ದಂತೆ ಕಾಂಗ್ರೆಸ್‍ನ ಒಳಜಗಳ ದಿನೇ ದಿನೇ ಹೆಚ್ಚಾಗಿ ಬೀದಿರಂಪವಾಗುತ್ತಿದೆ. ಇವರೆಲ್ಲ ದೇಶೋದ್ಧಾರಕ್ಕಾಗಿ ಗುದ್ದಾಡಿಕೊಳ್ಳುತ್ತಿಲ್ಲ ಎಂದು ವ್ಯಂಗ್ಯವಾಡಿದೆ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ …

Read More »

ವರದಕ್ಷಿಣೆ ಕಿರುಕುಳ ಪ್ರಕರಣದಲ್ಲಿ ಹಿರಿಯ ನಟಿ ಅಭಿನಯಗೆ 2 ವರ್ಷ, ತಾಯಿಗೆ 5 ವರ್ಷ ಜೈಲು!

ಸಹೋದರನ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪದಲ್ಲಿ ಹಿರಿಯ ನಟಿ ಅಭಿನಯಗೆ ಹೈಕೋರ್ಟ್ ಏಕಸದಸ್ಯ ಪೀಠ 2 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಅನುಭವ ಖ್ಯಾತಿಯ ನಟಿ ಅಭಿನಯ ಸೋದರ ಶ್ರೀನಿವಾಸ್ ಅವರ ಪತ್ನಿ ಲಕ್ಷ್ಮೀದೇವಿಗೆ ವರದಕ್ಷಿಣೆ ಕಿರುಕುಳ ನೀಡಿದ್ದಕ್ಕಾಗಿ ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ 2002ರಲ್ಲಿ ಪ್ರಕರಣ ದಾಖಲಾಗಿತ್ತು.   ಪ್ರಕರಣದಲ್ಲಿ ಅಭಿನಯಸೇರಿದಂತೆಐವರಮೇಲೆಕೇಸ್ದಾಖಲಾಗಿತ್ತು. 1998 ರಲ್ಲಿಅಭಿನಯಅಣ್ಣಶ್ರೀನಿವಾಸ್ಜೊತೆಲಕ್ಷ್ಮೀದೇವಿವಿವಾಹವಾಗಿದ್ದರು. ಮದುವೆವೇಳೆಶ್ರೀನಿವಾಸ್ 80 ಸಾವಿರನಗದು, 250 ಗ್ರಾಂಚಿನ್ನಭರಣಪಡೆದಿದ್ದರುಎಂದುಹೇಳಲಾಗಿತ್ತು. ನಂತರಮತ್ತೆ1ಲಕ್ಷಹಣತರುವಂತೆಅಭಿನಯಕುಟುಂಬಸ್ಥರಿಂದಕಿರುಕುಳನೀಡಲಾಗಿತ್ತುಎಂದುದೂರುದಾಖಲಾಗಿತ್ತು. ಹಣಕ್ಕಾಗಿ ಲಕ್ಷ್ಮೀದೇವಿಗೆಅಭಿನಯಕುಟುಂಬ ಕಿರುಕುಳನೀಡಿತವರುಮನೆಗೆಕಳುಹಿಸಿದ್ದರು. ಈಸಂಬಂಧಚಂದ್ರಾಲೇಔಟ್ಪೊಲೀಸ್ಠಾಣೆಗೆಲಕ್ಷ್ಮಿದೇವಿದೂರುನೀಡಿದ್ದರು. …

Read More »