Breaking News

Daily Archives: ಡಿಸೆಂಬರ್ 20, 2022

ಹತ್ತಿ ಕಟಾವಿಗೂ ಕೊಡಬೇಕು ಪೊಲೀಸರ ರಕ್ಷಣೆ!

ರಾಯಚೂರು: ಸಮಾಜದಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಪಾತ್ರ ಪ್ರಮುಖವಾದುದು. ಸಾರ್ವಜನಿಕವಾಗಿ ಎಷ್ಟೇ ಟೀಕೆ ವ್ಯಕ್ತಪಡಿಸಿದರೂ, ಪೊಲೀಸರಿಲ್ಲದ ಸಮಾಜವನ್ನು ಕಲ್ಪಿಸಿಕೊಳ್ಳಲೂ ಸಾಧ್ಯವಿಲ್ಲ. ವಿವಿಧ ಸಂದರ್ಭಗಳಲ್ಲಿ ಸೂಕ್ತ ಬಂದೋಬಸ್ತ್​​ ಮಾಡಿ, ಭದ್ರತೆ ಒದಗಿಸುವ ಕೆಲಸ ಮಾಡುತ್ತಾರೆ.   ಗಣ್ಯ ವ್ಯಕ್ತಿಗಳ ಭೇಟಿ, ಸಮಾವೇಶ, ಗಲಭೆ ಮುಂತಾದ ಸಂದರ್ಭದಲ್ಲಿ ಅಗತ್ಯಕ್ಕನುಗುಣವಾಗಿ ಅಗತ್ಯವಿದ್ದಾಗ ಸೂಕ್ತ ಭದ್ರತೆ ಪೊಲೀಸ್ ಇಲಾಖೆಯಿಂದ ಲಭಿಸುತ್ತದೆ. ಆದರೆ ಇದೀಗ ರಾಯಚೂರಿ ದೇವದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರೊಬ್ಬರು ವಿಶೇಷ ಬಂದೋಬಸ್ತ್​​ ವ್ಯವಸ್ಥೆ ಮಾಡಿ …

Read More »

2ರಡೂವರೆ ತಿಂಗಳು ಹಸುಗೂಸಿನೊಂದಿಗೆ ಅಧಿವೇಶನಕ್ಕೆ ಬಂದ ಶಾಸಕಿ!

ಮಹಾರಾಷ್ಟ್ರ: ತನ್ನ ಎರಡೂವರೆ ತಿಂಗಳು ಹಸುಗೂಸಿನೊಂದಿಗೆ ಎನ್‌ಸಿಪಿ ಶಾಸಕಿ ಸರೋಜ್ ಬಾಬುಲಾಲ್ ಅಹಿರ್ ಅವರು ನಾಗಪುರದಲ್ಲಿ ವಿಧಾನಮಂಡಳದ ಅಧಿವೇಶನಕ್ಕೆ ಹಾಜರಾದ ಪ್ರಸಂಗ ನಡೆಯಿತು. ಎನ್‌ಸಿಪಿ ಶಾಸಕಿ ಸರೋಜ್ ಬಾಬುಲಾಲ್ ಅಹಿರ್ ಅವರು ಸೆ.30ರಂದು ಮಗುವಿಗೆ ಜನ್ಮ ನೀಡಿದ್ದರು. ಇಂದಿನಿಂದ(ಸೋಮವಾರ) ಅಧಿವೇಶನ ಶುರುವಾಗಿದ್ದು, ಪುಟ್ಟ ಮಗುವಿನ ಜತೆ ಆಗಮಿಸುವ ಮೂಲಕ ಗಮನ ಸೆಳದರು. ಈ ಕುರಿತು ಪ್ರತಿಕ್ರಿಯಿಸಿದ ಶಾಸಕಿ, ‘ಕರೊನಾ ಹಿನ್ನೆಲೆ ಕಳೆದ ಎರಡೂವರೆ ವರ್ಷಗಳಿಂದ ನಾಗ್ಪುರದಲ್ಲಿ ಯಾವುದೇ ಅಧಿವೇಶನ ನಡೆದಿರಲಿಲ್ಲ. ನಾನೀಗ …

Read More »

ಶಿಕ್ಷಕನಿಂದ ಹಲ್ಲೆ, ವಿದ್ಯಾರ್ಥಿ ಸಾವು

ಗದಗ, ಡಿಸೆಂಬರ್‌, 19: ಅತಿಥಿ ಶಿಕ್ಷಕನೊಬ್ಬ 10 ವರ್ಷದ ವಿದ್ಯಾರ್ಥಿಯ ಮೇಲೆ ಮನ ಬಂದಂತೆ ಹಲ್ಲೆ ನಡೆಸಿದ್ದಾರೆ. ಹಲ್ಲೆಗೊಳಗಾದ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ಹದ್ಲಿ ಗ್ರಾಮದಲ್ಲಿ ನಡೆದಿದೆ. ಹದ್ಲಿ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಅತಿಥಿ ಶಿಕ್ಷಕ ಮುತ್ತಪ್ಪ ಹಡಗಲಿ ಎಂಬಾತ 10 ವರ್ಷದ ವಿದ್ಯಾರ್ಥಿ ಭರತ್ ಮೇಲೆ ಹಲ್ಲೆ ನಡೆಸಿದ್ದಾನೆ. ಶಿಕ್ಷಕನಿಂದ ಏಟು ತಿಂದ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದ. ನಂತರ ಆತನನ್ನು …

Read More »