Breaking News

Yearly Archives: 2022

ರಾಮಾಯಣಕ್ಕೆ ಅಪಮಾನ: ‘ಆದಿಪುರುಷ್’ ತಂಡಕ್ಕೆ ಗೃಹ ಸಚಿವ ಎಚ್ಚರಿಕೆ

ಆದಿಪುರುಷ್’ ಟೀಸರ್ ಬಿಡುಗಡೆ ಮಾಡಿದ ಬೆನ್ನಲ್ಲೆ ಚಿತ್ರತಂಡ ತೀವ್ರ ಟ್ರೋಲಿಂಗ್ ಎದುರಿಸುತ್ತಿದೆ. ಕಳಪೆ ಮಟ್ಟದ ವಿಎಫ್‌ಎಕ್ಸ್‌ನಿಂದಾಗಿ ವಿಪರೀತ ಟ್ರೋಲ್ ಆಗಿರುವ ಜೊತೆಗೆ ರಾಮಾಯಣದ ಪಾತ್ರಗಳನ್ನು ತಮಗೆ ತೋಚಿದಂತೆ ಪ್ರೆಸೆಂಟ್ ಮಾಡಿರುವುದು ಸಹ ಆಕ್ರೋಶಕ್ಕೆ ಗುರಿಯಾಗಿದೆ.   ಕೆಲವು ಹಿಂದು ಸಂಘಟನೆಗಳು ಸಹ ‘ಆದಿಪುರುಷ್’ ಟೀಸರ್‌ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿವೆ. ಇದರ ಬೆನ್ನಲ್ಲೇ ಈಗ ಮಧ್ಯ ಪ್ರದೇಶ ಗೃಹ ಸಚಿವ ನರೋತ್ತಮ್ ಮಿಶ್ರಾ ಸಹ ‘ಆದಿಪುರುಷ್’ ಟೀಸರ್ ಬಗ್ಗೆ ಕಣ್ಣು ಕೆಂಪಗೆ …

Read More »

ಮನೆಯಂಗಳದಲ್ಲೇ ಕುಸಿದು ಬಿದ್ದು ಮೃತಪಟ್ಟ ಕಾಲೇಜು ವಿದ್ಯಾರ್ಥಿನಿ, ನೀರಿನ ಸಂಪಿಗೆ ತಲೆ ಬಡಿದು ಸಾವು

ಸಾವು ಹೇಗೆ ಬರುತ್ತದೆ? ಎಲ್ಲಿಂದ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ ಎನ್ನುವುದಕ್ಕೆ ಕ್ರೂರ ನಿದರ್ಶನ ಈ ಘಟನೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಚೆನ್ನಿಗರಾಯ ಬಡಾವಣೆಯಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಮನೆಯ ಅಂಗಳದಲ್ಲೇ ಬಿದ್ದು ಪ್ರಾಣ ಕಳೆದುಕೊಂಡಿದ್ದಾಳೆ.   ಚನ್ನರಾಯಪಟ್ಟಣದ ಆದಿಚುಂಚನಗಿರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ಬಿ.ಎಸ್ಸಿ.‌ ವ್ಯಾಸಂಗ ಮಾಡುತ್ತಿರುವ ಸಿ.ಎನ್.‌ ಚಂದನ ಎಂಬಾಕೆಯೇ ಪ್ರಾಣ ಕಳೆದುಕೊಂಡವಳು. ಈಕೆ ಮನೆಯ ಅಂಗಳದಲ್ಲಿದ್ದ ವೇಳೆ ಆಕಸ್ಮಿಕವಾಗಿ ಬಿದ್ದು ಸಾವನ್ನಪ್ಪಿದ್ದಾಳೆ. ಆಕಸ್ಮಿಕವಾಗಿ ಕಾಲು ಜಾರಿ …

Read More »

ರಾಜ್ಯ ಸರ್ಕಾರ ಅಳಿವು ಉಳಿವು ಬಗ್ಗೆ ಕೋಡಿ ಶ್ರೀ ಭವಿಷ್ಯ.!

ಧಾರವಾಡ; ಮಳೆ, ರೋಗದಿಂದ ಭೂಮಿಯಿಂದ ದೇಶಕ್ಕೆ ತೊಂದರೆಯಾಗುತ್ತದೆ. ವಿಶೇಷವಾಗಿ ಹಿಂದೆ ಹೇಳಿದಂತೆ ಕಾಡಿನಿಂದ ನಾಡಿಗೆ ಪ್ರಾಣಿಗಳು ಬರುತ್ತವೆ. ಇದು ಕಾರ್ತಿಕ ಮಾಸದಲ್ಲಿ ತೊಂದರೆಯಾಗುವ ಲಕ್ಷಣ ಇದೆ ಎಂದು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ.   ಜಿಲ್ಲೆಯಲ್ಲಿಂದು ಮಾತನಾಡಿದ ಅವರು, ಪ್ರಾರಂಭದಲ್ಲೇ ನಾನು ಹೇಳಿದಂತೆ ಮಳೆ, ಬೆಂಕಿಯಿಂದ ಕಾಟ, ಮತಾಂಧತೆ ಹೆಚ್ಚಳ, ಸಾವು ನೋವುಗಳಾಗುತ್ತವೆ. ಭೂಮಿ ನಡುಗುತ್ತದೆ, ಕುಸಿಯುತ್ತದೆ ಕೊರೊನಾ ರೋಗ ಹೆಚ್ಚಾಗುತ್ತವೆ. ಜನ ಅಶಾಂತಿಯಿಂದ ಇರುತ್ತಾರೆ ಎಂದು ಹೇಳಿದ್ದೆ ಇದೆಲ್ಲಾ …

Read More »

ರಾಜ್ಯದ ಜನತೆಗೆ ನೆಮ್ಮದಿಯ ಸುದ್ದಿ : ವಿದ್ಯುತ್ ದರ ಏರಿಕೆಗೆ ತಾತ್ಕಾಲಿಕ ಬ್ರೇಕ್?

ಬೆಂಗಳೂರು: ಇಂಧನ ದರ ಹೊಂದಾಣಿಕೆ ಹಿನ್ನೆಲೆಯಲ್ಲಿ ವಿದ್ಯುತ್ ದರವನ್ನು ಏರಿಕೆ ಮಾಡಿದ್ದ ಸರ್ಕಾರ ಪರಿಷ್ಕೃತ ಆದೇಶವನ್ನು ತಾತ್ಕಾಲಿಕವಾಗಿ ಮುಂದೂಡಿಕೆ ಮಾಡಲು ಚಿಂತನೆ ನಡೆಸಿದೆ.   ವಿದ್ಯುತ್ ದರ ಏರಿಕೆ ನಿಯಮ ವಾಪಸ್ ಪಡೆಯುವ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ಅಗತ್ಯವಾದರೆ ವಿದ್ಯುತ್ ದರ ಏರಿಕೆ ನಿಯಾಮಾವಳಿ ಹಿಂಪಡೆಯಲಾಗುವುದು. ವಿದ್ಯುತ್ ದರ ಏರಿಕೆಗೆ ನಮ್ಮ ಸರ್ಕಾರ ಹೊಸ ನಿಯಮಾವಳಿ ರೂಪಿಸಿಲ್ಲ. 2014 ರಲ್ಲಿ ಕಲ್ಲಿದ್ದಲು ಬೆಲೆ ಹೊಂದಾಣಿಕೆಗೆ ರೂಪಿಸಲಾಗಿದ್ದ …

Read More »

ಮಸೀದಿ ಪಕ್ಕದಲ್ಲಿ ಆಕಸ್ಮಿಕವಾಗಿ ಸತ್ತು ಬಿದ್ದಿದ್ದ ಮಂಗಕ್ಕೆ ಗ್ರಾಮಸ್ಥರಿಂದ ಅರ್ಥಪೂರ್ಣ ಅಂತ್ಯಸಂಸ್ಕಾರ

ಅಥಣಿ: ಮಸೀದಿ ಪಕ್ಕದಲ್ಲಿ ಆಕಸ್ಮಿಕವಾಗಿ ಸತ್ತು ಬಿದ್ದಿದ್ದ ಮಂಗಕ್ಕೆ ಗ್ರಾಮಸ್ಥರಿಂದ ಅರ್ಥಪೂರ್ಣ ಅಂತ್ಯಸಂಸ್ಕಾರ ನೆರವೇರಿಸಿ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತೆಲಸಂಗ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಕೋತಿಗೆ ಗ್ರಾಮಸ್ಥರು ಮನುಷ್ಯರಿಗೆ ಮಾಡುವ ಅಂತ್ಯಸಂಸ್ಕಾರ ಕ್ರಿಯೆ ಮಾಡಿದ್ದಾರೆ. ಮೃತ ಮಂಗನ ದೇಹವನ್ನು ಲಕ್ಷ್ಮಿ ದೇವಸ್ಥಾನದ ಎದುರು ಇಟ್ಟು ಸತತ 5ಗಂಟೆಗಳ ಕಾಲ ಭಜನೆ ಮಾಡಿದ್ದಾರೆ. ನಂತರ ಮೆರವಣಿಗೆ ಮಾಡಿ ಮಾಡಿ ಉತ್ತರ ಕ್ರಿಯೆ ನೆರವೆರಿಸಿದ್ದಾರೆ. ಈ ಕಾರ್ಯವನ್ನು ಹಿಂದೂ ಮುಸ್ಲಿಮರು …

Read More »

ದಸರಾ ಹಬ್ಬಕ್ಕೆಂದು ಊರಿಗೆ ವಾಪಸ್​ ಆಗುವಾಗ ಬೈಕ್​ ಟೈರ್​ ಪಂಕ್ಚರ್​ ಆಗಿ ಬೈಕ್ ಅಪಘಾತ ಇಬ್ಬರು ಸ್ಥಳದಲ್ಲೇ ಮೃತಪಟ್ಟು ಮತ್ತಿಬ್ಬರು ಗಂಭೀರ ಗಾಯ ,

ಬೆಳಗಾವಿ : ದಸರಾ ಹಬ್ಬಕ್ಕೆಂದು ಊರಿಗೆ ಹಿಂತಿರುತ್ತಿದ್ದಾಗ ಬೈಕ್​ ಟೈರ್ ಪಂಕ್ಚರ್ ಆಗಿ ಬೈಕ್​ ಅಪಘಾತಕ್ಕೀಡಾಗಿದ್ದು, ಮಹಿಳೆ ಮತ್ತು ಬಾಲಕಿ ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ನಿಪ್ಪಾಣಿ ತಾಲೂಕಿನ ಪುಣೆ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕುರ್ಲಿ ಗ್ರಾಮದ ಬಳಿ ನಡೆದಿದೆ. ಜಿಲ್ಲೆಯ ಸವದತ್ತಿ ತಾಲೂಕಿನ‌ ಮುಗುಳಿಹಾಳ ಗ್ರಾಮದ ಲಕ್ಷ್ಮೀ ಕೊಪ್ಪದ (25) ಹಾಗೂ ಭಾಗ್ಯಶ್ರೀ ವಕಮಿ (13)‌ ಅಪಘಾತದಲ್ಲಿ ಮೃತಪಟ್ಟಿದ್ದು, ರಾಮದರ್ಗು ತಾಲೂಕಿನ ಕಟಕೋಳ ಗ್ರಾಮದ ಹಣಮಂತ ಸಕ್ರಿ …

Read More »

ಮುಜರಾಯಿ ಇಲಾಖೆ ಅನುದಾನ ನಮ್ಮ ರಾಜ್ಯದ ದೇವಸ್ಥಾನಕ್ಕೆ ನೀಡದೇ ಬೇರೆ ರಾಜ್ಯದ ದೇವಸ್ಥಾನಗಳಿಗೆ ಬಿಡುಗಡೆ: ಮಾಜಿ ಶಾಸಕ ರಾಜು ಕಾಗೆ ಆರೋಪ

ಚಿಕ್ಕೋಡಿ: ಮುಜರಾಯಿ ಇಲಾಖೆ ಸಚಿವೆ ಶಶಿಕಲಾ‌ ಜೊಲ್ಲೆ ಮುಜರಾಯಿ ಇಲಾಖೆಗೆ ಸಂಬಂಧಿಸಿದ ಅನುದಾನವನ್ನು ಬೇರೆ ರಾಜ್ಯಗಳ ದೇವಸ್ಥಾನಕ್ಕೆ ನೀಡುತ್ತಿದ್ದಾರೆ. ಆದ್ರೆ, ನಮ್ಮ ಗ್ರಾಮದ ದೇವಸ್ಥಾನಗಳಿಗೆ ಅನುದಾನ ಬಿಡುಗಡೆ ಮಾಡುತ್ತಿಲ್ಲ ‌ಎಂದು‌ ಮಾಜಿ ಶಾಸಕ ರಾಜು ಕಾಗೆ, ಜೊಲ್ಲೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಕಾಗವಾಡ ಮತಕ್ಷೇತ್ರದ ಐನಾಪೂರ ಪಟ್ಟಣದಲ್ಲಿ ಮಾತನಾಡಿದ ಅವರು, ಮುಜರಾಯಿ ಇಲಾಖೆಗೆ ಸಂಬಂಧಿಸಿ ಅನುದಾನವನ್ನು ಮಹಾರಾಷ್ಟ್ರ, ಆಂಧ್ರಪ್ರದೇಶ, ಕಾಶಿ ದೇವಸ್ಥಾನಗಳಿಗೆ ನೀಡಲಾಗುತ್ತಿದೆ. ಆದರೆ, ನಮಗೆ ಸರಿಯಾಗಿ ಅನುದಾನ …

Read More »

ಕುಸ್ತಿ ಗೆದ್ದ ಒಂದೇ ಗಂಟೆಯಲ್ಲಿ ಯುವ ಕುಸ್ತಿಪಟು ಸಾವು

ಸೊಲ್ಲಾಪುರ/ಮಹಾರಾಷ್ಟ್ರ: ಇತ್ತೀಚಿನ ದಿನಗಳಲ್ಲಿ ಯುವಕರಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚು ವರದಿಯಾಗುತ್ತಿವೆ. ಕುಸ್ತಿಯಲ್ಲಿ ಗೆದ್ದು ಸಂಭ್ರಮದ ಗುಂಗಿನಲ್ಲಿರುವಾಗಲೇ ಹೃದಯಾಘಾತದಿಂದ ಯುವ ಕುಸ್ತಿಪಟು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪಂಢರಪುರ ತಾಲೂಕಿನಲ್ಲಿ ನಡೆದಿದೆ. ವಖ್ರಿಯ ಕುಸ್ತಿಪಟು ಮಾರುತಿ ಸುರವಾಸೆ (22) ಮೃತ ಯುವಕ. ಕಳೆದ ರಾತ್ರಿ ಕೊಲ್ಲಾಪುರ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದ ಕುಸ್ತಿ ಪಂದ್ಯವನ್ನು ಮಾರುತಿ ಗೆದ್ದಿದ್ದರು. ಬಳಿಕ ಖುಷಿಯಿಂದ ಹಿಂದಿರುಗಿದ ಸ್ವಲ್ಪ ಸಮಯದ ನಂತರ ಹೃದಯಾಘಾತವಾಗಿದೆ. ಮಾರುತಿಗೆ ಬಾಲ್ಯದಿಂದಲೂ ಕುಸ್ತಿಯೆಂದರೆ ಹೆಚ್ಚಿನ ಒಲವು. …

Read More »

ಪುಂಜಾಲಕಟ್ಟೆ: ಆರೆಸ್ಸೆಸ್ ವಿರುದ್ಧ ಆಕ್ಷೇಪಾರ್ಹ ರಸ್ತೆ ಬರಹ; ತಪ್ಪಿತಸ್ಥರ ಬಂಧನಕ್ಕೆ ಆಗ್ರಹ

ಪುಂಜಾಲಕಟ್ಟೆ: ಆರೆಸ್ಸೆಸ್ ವಿರುದ್ಧ ರಸ್ತೆ ಮೇಲೆ ಆಕ್ಷೇಪಾರ್ಹ ಬರಹ ಬರೆದ ಘಟನೆ ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ ನಯನಾಡು ಸಮೀಪದ ಸ್ನೇಹ ಗಿರಿ ಎಂಬಲ್ಲಿ ಮಂಗಳವಾರ ಬೆಳಗ್ಗೆ ಕಂಡು ಬಂದಿದೆ. ಯಾರೋ ಅಪರಿಚಿತರು ರಸ್ತೆಯಲ್ಲಿ ಆರೆಸ್ಸೆಸ್ ವಿರುದ್ಧ ಬಹಿರಂಗ ಬೆದರಿಕೆ ಹಾಕಿದ್ದು, ಚಡ್ಡಿಗಳೇ ಎಚ್ಚರ, ನಾವು ಪಿಎಫ್ ಐ ಮರಳಿ ಬರುತ್ತೇವೆ ಎಂದು ಬರೆದಿದ್ದಾರೆ.   ಈ ಬಗ್ಗೆ ಸ್ಥಳೀಯರು ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ಈ ಬಗ್ಗೆ ದೂರು ನೀಡಿ ತತ್ …

Read More »

ರಾಜ್ಯ ವಿಧಾನಸಭಾ ಚುನಾವಣೆ: ಬಿಜೆಪಿಯಿಂದ ಬೃಹತ್‌ ಸಮಾವೇಶಕ್ಕೆ ಸಿದ್ಧತೆ

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೈಕೊಡವಿಕೊಂಡು ಸಿದ್ದತೆ ನಡೆಸಲು ಈಗ ರಾಜ್ಯ ಬಿಜೆಪಿ ಘಟಕ ಮುಂದಾಗಿದ್ದು,ಘಟಾನುಘಟಿ ನಾಯಕರುಗಳನ್ನು ಆಹ್ವಾನಿಸಿ ಸಮಾವೇಶ ನಡೆಸಲು ಮುಂದಾಗಿದೆ. ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹಸಚಿವ ಅಮಿತ್ ಶಾ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್, ಕೇಂದ್ರ ಸಚಿವರು ಸೇರಿದಂತೆ ಹಲವು ನಾಯಕರನ್ನು ಮುಂಬರುವ ದಿನಗಳಲ್ಲಿ ರಾಜ್ಯಕ್ಕೆ ಆಹ್ವಾನಿಸಲಾಗುತ್ತಿದೆ.   ಒಂದು ಕಡೆ ಕಾಂಗ್ರೆಸ್ ತನ್ನ ಸಂಘಟನಾತ್ಮಕ …

Read More »