Breaking News

Yearly Archives: 2022

ಬೆಳಗಾವಿ:ರೈಲ್ವೆ ನಿಲ್ದಾಣ ಅಭಿವೃದ್ಧಿ ಪರಿಶೀಲನೆ

ಬೆಳಗಾವಿ: ಬೆಳಗಾವಿ ರೈಲು ನಿಲ್ದಾಣದ ಅಭಿವೃದ್ಧಿ ಕಾಮಗಾರಿ ವೀಕ್ಷಿಸಲು ಶನಿವಾರ ಭೇಟಿ ನೀಡಿದ ನೈರುತ್ಯ ವಲಯ ರೇಲ್ವೆ ಮಹಾಪ್ರಬಂಧಕ ಸಂಜೀವ ಕಿಶೋರಿ ಅವರಿಗೆ ಸಂಸದೆ ಮಂಗಲಾ ಅಂಗಡಿ ಅವರು ಸುಧಾರಣಾ ಕಾಮಗಾರಿಗಳ ಪಟ್ಟಿ ನೀಡಿದರು. ಬೆಳಗಾವಿ- ಕಿತ್ತೂು- ಧಾರವಾಡ ನೂತನ ರೈಲು ಮಾರ್ಗ ನಿರ್ಮಾಣ ಕಾಮಗಾರಿ ಬೇಗ ಪ್ರಾರಂಭಿಸಬೇಕು. ನಗರದ ಟಿಳಕವಾಡಿ ಸಿಎಲ್‌ಸಿ ಸಂಖ್ಯೆ 383 ಹಾಗೂ 382 (ಟಿಳಕವಾಡಿ ಗೇಟ್‌ ನಂಬರ್‌ 1 ಹಾಗೂ 2) ಹತ್ತಿರ ರೈಲ್ವೆ …

Read More »

ನಿಂಗಾನಂದಗೆ ‘ಮಿಸ್ಟರ್‌ ಲಿಂಗರಾಜ’ ಪಟ್ಟ

ಬೆಳಗಾವಿ: ಇಲ್ಲಿನ ಕೆಎಲ್‌ಇ ಸಂಸ್ಥೆಯ ಲಿಂಗರಾಜ ಕಾಲೇಜಿನ ಕ್ರೀಡಾ ವಿಭಾಗ ಹಾಗೂ ಜಿಲ್ಲಾ ದೇಹದಾರ್ಢ್ಯ ಅಸೋಸಿಯೇಷನ್ ಆಶ್ರಯದಲ್ಲಿ ಶನಿವಾರ ಆಯೋಜಿಸಿದ್ದ 36ನೇ ‘ಮಿಸ್ಟರ್ ಲಿಂಗರಾಜ’ ಸ್ಪರ್ಧೆ ಗಮನ ಸೆಳೆಯಿತು. ಸ್ಪರ್ಧೆಯಲ್ಲಿ ಬಿ.ಎ ಪ್ರಥಮ ವರ್ಷದ ನಿಂಗಾನಂದ ಹಿರೇಮಠ ‘ಮಿಸ್ಟರ್ ಲಿಂಗರಾಜ’ ಪ್ರಶಸ್ತಿ ಪಡೆದುಕೊಂಡರು. ಪ್ರವೀಣ ಕುದರಿಮುತಿ ದ್ವಿತೀಯ, ಅರ್ಪಿತ್‌ ತೋರಗಲ್ ತೃತೀಯ ಸ್ಥಾನ ಪಡೆದರು. ಸ್ಪರ್ಧೆಯ ನಿರ್ಣಾಯಕರಾಗಿ ಅಂತರರಾಷ್ಟ್ರೀಯ ಖ್ಯಾತಿಯ ಅಜಿತ್ ಸಿದ್ದಣ್ಣವರ, ಜಿಲ್ಲಾ ದೇಹದಾರ್ಢ್ಯ ಅಸೋಸಿಯೇಷನ್‍ ಅಧ್ಯಕ್ಷ ಎಂ.ಕೆ.ಗುರವ್, …

Read More »

ಮದ್ಯಪಾನ ಮಾಡಿ ವಾಹನ ಚಲಾವಣೆ: ನ್ಯಾಯಾಲಯದಲ್ಲಿ ಮಾತ್ರ ದಂಡ ಪಾವತಿ.. ಹೈಕೋರ್ಟ್​ ಸೂಚನೆ

ಬೆಂಗಳೂರು: ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿದ್ದನ್ನು ಪ್ರಶ್ನಿಸಿದ್ದ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ಮಾಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂಬುದಾಗಿ ಸಾಕ್ಷ್ಯರಹಿತ ಆರೋಪದಲ್ಲಿ ಬಿಹಾರ ಮೂಲದ ಇಬ್ಬರು ಯುವಕರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ. ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದುಪಡಿಸಬೇಕು ಎಂದು ಕೋರಿ ಬಿಹಾರ ರಾಜ್ಯದ ಪಾಟ್ನಾ ಮೂಲದ ಪ್ರಿಯಾಂಶು ಕುಮಾರ್ ಮತ್ತು ಅಲೋಕ್ ಕುಮಾರ್ ಎಂಬುವರು ಸಲ್ಲಿಸಿದ್ದ ಪ್ರಕರಣದ ವಿಚಾರಣೆ ನಡೆಸಿದ ನ್ಯಾ.ಮೊಹಮ್ಮದ್ ನವಾಜ್ ಅವರಿದ್ದ ನ್ಯಾಯಪೀಠ, ತನಿಖಾಧಿಕಾರಿಗಳು …

Read More »

ತಡರಾತ್ರಿ ಹಿಂಡಲಗಾ ಜೈಲಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಬೆಳಗಾವಿ: ಇಲ್ಲಿನ ಹಿಂಡಲಗಾ ಜೈಲಿನಲ್ಲಿ ವಿಚಾರಣಾಧೀನ ಕೈದಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಳೆದ 3 ತಿಂಗಳ ಹಿಂದೆ ಪೋಕ್ಸೋ ಪ್ರಕರಣದಲ್ಲಿ ಈತನನ್ನು ಬಂಧಿಸಲಾಗಿತ್ತು. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಬಚ್ಚನಕೇರಿ ಗ್ರಾಮದ ಮಂಜುನಾಥ ಮಹಾಂತೇಶ ನಾಯ್ಕರ (20) ನೇಣಿಗೆ ಶರಣಾಗಿರುವ ಕೈದಿ. ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಕಳೆದ ಮೂರು ತಿಂಗಳಿಂದಲೂ ಆರೋಪಿ ಹಿಂಡಲಗಾ ಜೈಲಿನಲ್ಲಿದ್ದನು. …

Read More »

ಇಂದು ಗಾಂಧಿ ಜಯಂತಿ; ಸೇವಾಕಾರ್ಯಕ್ಕೆ ಗಾಂಧೀಜಿ ಪ್ರೇರಣೆ

ಬೆಳಗೆರೆ ಕೃಷ್ಣಶಾಸ್ತ್ರಿಗಳು ಮೊದಲಿನಿಂದ ಗಾಂಧೀಜಿಯವರ ವ್ಯಕ್ತಿತ್ವದಿಂದ ಪ್ರಭಾವಿತರಾಗಿದ್ದರು. 1936ರಲ್ಲಿ ಗಾಂಧೀಜಿ ಕರ್ನಾಟಕಕ್ಕೆ ಭೇಟಿ ಕೊಟ್ಟಾಗ ಬೆಳಗೆರೆ ಕೃಷ್ಣಶಾಸ್ತ್ರಿಗಳು ಸ್ವಯಂಸೇವಕರಾಗಿ ಕಾರ್ಯ ನಿರ್ವಹಿಸಿದರು. ಮೋಹನದಾಸ ಕರಮಚಂದ್‌ ಗಾಂಧಿ, ಜನಸಾ ಮಾನ್ಯರ “ಬಾಪು’ (ತಂದೆ), ಮಹಾತ್ಮಾ, ಹುಟ್ಟಿ ಇಂದಿಗೆ 153 ವರ್ಷಗಳಾಗಿವೆ. “ಮೋಹನ’ ಎಂದರೆ ಮನಸ್ಸನ್ನು ಆಕರ್ಷಿಸುವುದು ಎಂದರ್ಥ. ನಿಜವಾಗಿ, ಮೋಹನ ದಾಸ ಕರಮಚಂದ್‌ ಗಾಂಧಿಯವರ ಆಕರ್ಷಣೆಗೆ ಒಳಗಾಗದವರೇ ಇಲ್ಲ. “ಗಾಂಧಿ ಒಬ್ಬ ವ್ಯಕ್ತಿ ಅಲ್ಲ, ಒಂದು ಪಂಥ ಎನ್ನುವುದು ಅಂದಿನ ದಿನಗಳಲ್ಲಿ ಕೇಳಿ ಬರುತ್ತಿದ್ದ …

Read More »

ಜೈ ಜವಾನ್‌, ಜೈ ಕಿಸಾನ್‌ ಲಾಲ್‌ ಬಹದ್ದೂರ್‌ ಶಾಸ್ತ್ರಿಯವರಿಗೊಂದು ಸಲಾಂ

ದೇಶದ ಎರಡನೇ ಪ್ರಧಾನಿ, ಸ್ವಾತಂತ್ರ್ಯ ಸಮರದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಹೋರಾಟ ನಡೆಸಿದ ಮತ್ತು ಬಡವರ ಏಳಿಗೆಗಾಗಿ ಸರ್ವಥಾ ಶ್ರಮಿಸಿದ, 1965ರ ಇಂಡೋ-ಪಾಕಿಸ್ಥಾನ ಯುದ್ಧದಲ್ಲಿ ಸೇನೆಯನ್ನು ಹುರಿದುಂಬಿಸಿ ಭಾರತ ಗೆಲ್ಲುವಂತೆ ಮಾಡಿದ ಮಹಾನ್‌ ನಾಯಕರಿವರು. 1964ರಿಂದ 1966ರ ವರೆಗೆ ಪ್ರಧಾನಿ ಹುದ್ದೆಯಲ್ಲಿದ್ದ ಇವರು, ದೇಶದ ಏಳಿಗೆಗಾಗಿ ನೀಡಿದ ಕೊಡುಗೆಗಳು ನೂರಾರು. ಇಂದು ಲಾಲ್‌ ಬಹದ್ದೂರ್‌ ಶಾಸ್ತ್ರಿಯವರ ಜನ್ಮದಿನ. ತನ್ನಿಮಿತ್ತವಾಗಿ ಅವರ ಕುರಿತ ವಿಶೇಷ ಸಂಗತಿಗಳು ಇವು… 1904, ಅಕ್ಟೋಬರ್‌ 2 ಇದು …

Read More »

ಅಕ್ಟೋಬರ್ ತಿಂಗಳಾಂತ್ಯಕ್ಕೆ ಮೂಡಲಗಿಗೆ ಉಪನೋಂದಾಣಾಧಿಕಾರಿಗಳ ಕಛೇರಿ ಆರಂಭ: ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಮೂಡಲಗಿ ತಾಲೂಕಿನ ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿರುವ ಉಪನೋಂದಣಾಧಿಕಾರಿಗಳ ಕಛೇರಿಯು ಈ ತಿಂಗಳ ಅಂತ್ಯದೊಳಗೆ ಆರಂಭಗೊಳ್ಳಲಿದೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಈಗಾಗಲೇ ಈ ಕಛೇರಿ ಆರಂಭಕ್ಕೆ ಎಜಿ ಕೋಡ್ (ಅಕೌಂಟಂಟ್ ಜನರಲ್) ಬಂದಿದ್ದು, ಇನ್ನು ಡಿಡಿಓ ಕೋಡ್ ಬರಬೇಕಿದೆ. ಇದರ ಜೊತೆಗೆ ಎಂಪಿಎಸ್ ಕೋಡ್, ಖಜಾನೆ-1 ಮತ್ತು ಖಜಾನೆ-2 ಕೂಡ ಅನುಮತಿಗೆ ಕಾಯುತ್ತಿದ್ದು, ಈ ತಿಂಗಳಾಂತ್ಯಕ್ಕೆ ಮೂಡಲಗಿಗೆ ಉಪನೋಂದಣಾಧಿಕಾರಿಗಳ ಕಾರ್ಯಾಲಯ ಆರಂಭವಾಗಲಿದೆ …

Read More »

ಸಂಕನೂರು ಹಳ್ಳದಲ್ಲಿ ಕೊಚ್ಚಿಹೋದ ನಾಲ್ವರು ಮಹಿಳೆಯರು

ಕೊಪ್ಪಳ: ಯಲಬುರ್ಗಾ ತಾಲೂಕಿನ ಸಂಕನೂರು ಗ್ರಾಮದ ಹಳ್ಳದಲ್ಲಿ ನಾಲ್ವರು ಮಹಿಳೆಯರು ಕೊಚ್ಚಿ ಹೋಗಿದ್ದಾರೆ ಎನ್ನುವ ಶಂಕೆ ವ್ಯಕ್ತವಾಗಿದೆ. ಹಳ್ಳದಲ್ಲಿ ಕೊಚ್ಚಿ ಹೋದವರನ್ನು ಸಂಕನೂರು ಗ್ರಾಮದ ಗಿರಿಜಾ ಕಲ್ಲನಗೌಡ ಮಾಲಿ ಪಾಟೀಲ್ (32), ಭುವನೇಶ್ವರಿ ಶಾಂತವೀರಯ್ಯ ಪೊಲೀಸ್ ಪಾಟೀಲ್ (40) ಪವಿತ್ರಾ ಸಿದ್ದಯ್ಯ ಪೊಲೀಸ್ ಪಾಟೀಲ್(45) ವೀಣಾ ಬಸವರಾಜ ಮಾಲಿ ಪಾಟೀಲ್(19) ಕೊಚ್ಚಿ ಹೋಗಿದ್ದಾರೆ ಎಂದು ಸ್ಥಳೀಯ ಗ್ರಾಮಸ್ಥರು ಹೇಳುತ್ತಿದ್ದಾರೆ.   ಈ ಮಹಿಳೆಯರು ಗ್ರಾಮ ಸಮೀಪದಲ್ಲಿನ ಸೀಡ್ಸ್ ಕಂಪನಿಯಲ್ಲಿ ಹತ್ತಿ ಬೀಜ …

Read More »

ಹೌಸಿಂಗ್ ಸೊಸೈಟಿ ಹೆಸರಿನಲ್ಲಿ ವಂಚನೆ: ನಿರ್ದೇಶಕ ಅರೆಸ್ಟ್, ಮಾಜಿ ಅಧ್ಯಕ್ಷ ಎಸ್ಕೇಪ್

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಭೂಮಿ ಕಬಳಿಸಲು ಕಿಡಿಗೇಡಿಗಳು ಇಲ್ಲದ ದಾಖಲೆಗಳನ್ನು ಸೃಷ್ಟಿ ಮಾಡಿ ಮೋಸ ಮಾಡುತ್ತಿರುವ ಹಲವು ಪ್ರಕರಣಗಳು ಕಂಡುಬಂದಿವೆ. ಅದೇ ರೀತಿಯಲ್ಲಿ ಬೋಗಸ್ ಹೌಸಿಂಗ್ ಸೊಸೈಟಿ ಮಾಡಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಸಂಸ್ಥೆಯ ನಿರ್ದೇಶಕ ಹಾಗೂ ಸಿಇಒ ಬಂಧಿಸಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಇತ್ತೀಚೆಗೆ ವಂಚನೆ ಪ್ರಕರಣವೊಂದು ಶೇಷಾದ್ರಿಪುರಂ ಪೊಲೀಸ್ ಠಾಣೆಯ ಮೆಟ್ಟಿಲೇರಿತ್ತು.ಈ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಹೌಸಿಂಗ್ ಸೊಸೈಟಿಯ ಹಾಲಿ ನಿರ್ದೇಶಕ …

Read More »

ಬೆಳಗಾವಿಯ ಮಾಡಂಗೇರಿ ಗ್ರಾಮದಲ್ಲಿ ಮನೆಗೋಡೆ ಕುಸಿದು ತಾಯಿ ಮಗು ಸ್ಥಳದಲ್ಲೇ ಸಾವು

ಬೆಳಗಾವಿ : ನಿರಂತರವಾಗಿ ಸುರಿದ ಧಾರಾಕಾರ ಮಳೆಗೆ ಮನೆ ಗೋಡೆ ಕುಸಿದು ತಾಯಿ ಮತ್ತು ಮಗು ಸ್ಥಳದಲ್ಲೇ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಯರಗಟ್ಟಿ ತಾಲೂಕಿನ ಮಾಡಂಗೇರಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಯಲ್ಲವ್ವ ಮಹಾದೇವ ಬಾಗಿಲದ (40), ಪ್ರಜ್ಬಲ್ ಮಹಾದೇವ ಬಾಗಿಲದ (5) ಎಂದು ಗುರುತಿಸಲಾಗಿದೆ. ಮನೆಯಲ್ಲಿದ್ದ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಯರಗಟ್ಟಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಮೂರು ದಿನಗಳಿಂದ ಯರಗಟ್ಟಿ ತಾಲೂಕಿನಾದ್ಯಂತ ನಿರಂತರ ಮಳೆ ಆಗುತ್ತಿದ್ದು,ಇದರಿಂದ ಶಿಥಿಲಾವಸ್ಥೆಯಲ್ಲಿದ್ದ …

Read More »