ಮೂಡಲಗಿ: ಸುಣಧೋಳಿ ಗ್ರಾಮದ ಅಭಿವೃದ್ಧಿಗೆ ಈಗಾಗಲೇ ಕಹಾಮಾ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸರ್ಕಾರದಿಂದ ನಾನಾ ಯೋಜನೆಗಳಲ್ಲಿ ಅನುದಾನ ನೀಡಿ ಅಭಿವೃಧಿ ಪಡಿಸುತ್ತಿದ್ದಾರೆ. ಈಂತಹ ಶಾಸಕರು ಪಡೆದಿರುವುದು ಪುಣ್ಯ ಎಂದು ಸುಣಧೋಳಿ ಜಡಿಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಶ್ರೀ ಶಿವಾನಂದ ಸ್ವಾಮೀಜಿಗಳು ಹೇಳಿದರು. ಅವರು ತಾಲೂಕಿನ ಸುಣಧೋಳಿ ಗ್ರಾಮದಲ್ಲಿ ಸುಣಧೋಳಿಕ್ರಾಸ್ದಿಂದ ಸುಣಧೋಳಿ ಗ್ರಾಮದವರಿಗೆ ಸುಮಾರು ಮೂರು ಕಿ.ಮಿ ರಸ್ತೆಯನ್ನು ಲೋಕೊಪಯೋಗಿ ಇಲಾಖೆಯ ೪.೮೦ ಕೋಟಿ ರೂಪಾಯಿ …
Read More »Yearly Archives: 2022
ಹುಕ್ಕೇರಿ ಬಳಿ ಅಪರಿಚಿತ ವಾಹನ ಡಿಕ್ಕಿ: ಇಬ್ಬರು ಯುವಕರ ಸಾವು
ಬೆಳಗಾವಿ ಜಿಲ್ಲೆ): ಹುಕ್ಕೇರಿ ಸಮೀಪದ ಹೊಳೆಮ್ಮನ ಗುಡಿ ಹಳ್ಳದ ಹತ್ತಿರ ಸೋಮವಾರ ಸಂಜೆ ಅಪರಿಚಿತ ವಾಹನ ಡಿಕ್ಕಿ ಹೊಡೆದು, ಬೈಕ್ ಮೇಲೆ ಹೊರಟಿದ್ದ ಇಬ್ಬರು ಯುವಕರು ಮೃತಪಟ್ಟಿದ್ದಾರೆ. ಸವದತ್ತಿ ತಾಲ್ಲೂಕಿನ ಚಚಡಿ ಗ್ರಾಮದ ಮಲ್ಲನಗೌಡ ಯಲ್ಲನಗೌಡ ಪಾಟೀಲ (22) ಹಾಗೂ ಸಿದ್ಧಾರೂಢ ವೀರಭದ್ರ ಕರೋಶಿ (24) ಮೃತಪಟ್ಟವರು. ಭಾರಿ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೊಬ್ಬರನ್ನು ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ರಕ್ತಸ್ರಾವ ಆಗಿದ್ದರಿಂದ ಅವರು …
Read More »ದಸರಾ ಕವಿಗೋಷ್ಠಿ ಆಹ್ವಾನ ಪತ್ರಿಕೆಯಲ್ಲಿ ನಿಧನರಾದವರ ಹೆಸರು, ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ
ಮೈಸೂರು: ನಾಡಹಬ್ಬ ದಸರಾದ ಪ್ರಧಾನ ಕವಿಗೋಷ್ಠಿಯ ಆಹ್ವಾನ ಪತ್ರಿಕೆಯಲ್ಲಿ ನಿಧನರಾದವರ ಹೆಸರನ್ನು ಪ್ರಕಟಿಸಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಎಡವಟ್ಟು ಮಾಡಿಕೊಂಡಿದೆ. ಪ್ರಧಾನ ಕವಿಗೋಷ್ಟಿಯಲ್ಲಿ ರಾಜಕೀಯ ಮುಖಂಡರು ಭಾಗವಹಿಸಲಿದ್ದು, ನಿಧನರಾದ ಆಕಾಶವಾಣಿ ನಿಲಯ ನಿರ್ದೇಶಕ ಜಿ.ಕೆ ರವೀಂದ್ರ ಕುಮಾರ್ ಅವರ ಹೆಸರು ಆಹ್ವಾನ ಪತ್ರಿಕೆಯಲ್ಲಿದೆ. ಅಕ್ಟೋಬರ್ 3 ರಂದು ಮೈಸೂರು ವಿಶ್ವವಿದ್ಯಾಲಯದ ಮಾನಸ ಗಂಗೋತ್ರಿ ಸೆನೆಟ್ ಸಭಾಂಗಣದಲ್ಲಿ ಬೆಳಗ್ಗೆ 10.30ಕ್ಕೆ ಕವಿಗೋಷ್ಠಿ ನಡೆಯಲಿದೆ. ಒಟ್ಟು 37 ಮಂದಿ ಕವಿಗೋಷ್ಠಿಯಲ್ಲಿ ಭಾಗವಹಿಸಲಿದ್ದಾರೆ. …
Read More »ಬಾಗಲಕೋಟೆ: ಸಚಿವ ಮುರುಗೇಶ ನಿರಾಣಿ ಮನೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ
ಬಾಗಲಕೋಟೆ: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮಂಗಳವಾರ ಮುಧೋಳದಲ್ಲಿ ಸಚಿವ ಮುರುಗೇಶ ನಿರಾಣಿಯವರ ನಿವಾಸಕ್ಕೆ ಭೇಟಿ ನೀಡುವ ಮೂಲಕ ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದ್ದಾರೆ. ಮಾಜಿ ಸಚಿವ ಆರ್.ಬಿ. ತಿಮ್ಮಾಪುರ ಅವರ ಜನ್ಮ ದಿನ ಕಾರ್ಯಕ್ರಮಕ್ಕೆ ಬಂದಿದ್ದ ಅವರು ನಿರಾಣಿ ಅವರ ನಿವಾಸದ ಬಳಿ ಇರುವ ಹೆಲಿಪ್ಯಾಡ್ ನಲ್ಲಿ ಇಳಿದಿದ್ದರು. ಕಾರ್ಯಕ್ರಮಕ್ಕೆ ತೆರಳುವ ಮುನ್ನ ನಿರಾಣಿ ಮನೆಗೆ ಹೋದರು. ಇದಕ್ಕೂ ಮುನ್ನ ಜಮಖಂಡಿಯಲ್ಲಿ ನಡೆದ ಸಿದ್ದು ನ್ಯಾಮಗೌಡರ …
Read More »ಅಜ್ಜನ ಜೊತೆ ಈಜು ಕಲಿಯಲು ಹೋಗಿದ್ದ ಬಾಲಕ ಬಾವಿಯಲ್ಲಿ ಮುಳುಗಿ ಸಾವು
ಬೆಳಗಾವಿ : ಅಜ್ಜನ ಜೊತೆ ಈಜು ಕಲಿಯಲು ಹೋಗಿದ್ದ ಬಾಲಕ ಬಾವಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಸವದತ್ತಿ ತಾಲೂಕಿನ ಚಚಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಪೇಟೆಬಸವಣ್ಣ ಓಣಿಯ ಸಿದ್ಧಾರೂಢ ಮಂಜುನಾಥ ಗಾಣಗಿ (8) ಮೃತ ಬಾಲಕ. ಇಂದು ಬೆಳಗಿನ ಜಾವ ಅಜ್ಜನ ಜೊತೆಗೆ ಈಜು ಕಲಿಯಲು ಸಿದ್ಧಾರೂಢ ಹೋಗಿದ್ದನು. ಈ ವೇಳೆ, ಬೆನ್ನಿಗೆ ಪ್ಲಾಸ್ಟಿಕ್ ಡಬ್ಬಿ ಕಟ್ಟಿಕೊಂಡು ಬಾಲಕ ನೀರಿಗೆ ಇಳಿದಿದ್ದನು. ಆದರೆ, ಬಾವಿಯಲ್ಲಿ ಈಜುವಾಗಲೇ ಡಬ್ಬಿ ಕಳಚಿದ್ದರಿಂದ …
Read More »ಯುವ ದಸರಾ 2022: ನೋಡುಗರ ಗಮನ ಸೆಳೆದ ರಾಜ್ಯ ಮಟ್ಟದ ದೇಹದಾರ್ಢ್ಯ ಸ್ಪರ್ಧೆ
ಶಿವಮೊಗ್ಗ: ಯುವ ದಸರಾ ಹಿನ್ನೆಲೆ ನಗರದ ಕುವೆಂಪು ರಂಗಮಂದಿರದಲ್ಲಿ ರಾಜ್ಯ ಮಟ್ಟದ ದೇಹದಾರ್ಢ್ಯ ಸ್ಪರ್ಧೆ ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ ರಾಜ್ಯದ ಬೇರೆ ಬೇರೆ ಜಿಲ್ಲೆಗಳ 134ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗವಹಿಸಿದ್ದರು. ಸ್ಪರ್ಧೆಯನ್ನು ಐದು ವಿಭಾಗದಲ್ಲಿ ವಿಂಗಡಿಸಲಾಗಿತ್ತು. ಯುವಕರು ತಮ್ಮ ಕಟ್ಟು ಮಸ್ತಾದ ದೇಹ ಪ್ರದರ್ಶಿಸುವ ಮೂಲಕ ಎಲ್ಲರ ಗಮನ ಸೆಳೆದರು. ಸ್ಪರ್ಧೆಯ ತೀರ್ಪುಗಾರರಾಗಿ ರಾಜ್ಯ ಬಾಡಿ ಬಿಲ್ಡಿಂಗ್ ಅಸೋಸಿಯೇಷನ್ ಸದಸ್ಯರು ಭಾಗವಹಿಸಿದ್ದರು.
Read More »ಹಾವೇರಿಯಲ್ಲಿ ನವರಾತ್ರಿ ವೈಭವ..ಒಂಬತ್ತು ದಿನಗಳಲ್ಲಿಯೂ ವಿಶೇಷಾಲಂಕಾರ
ದೇಶದೆಲ್ಲೆಡೆ ಶರನ್ನವರಾತ್ರಿಯ ಸಂಭ್ರಮ ಆರಂಭವಾಗಿದೆ. ನವರಾತ್ರಿ ಬಂದರೆ ಸಾಕು ಹಾವೇರಿಯ ನವದುರ್ಗೆಯರ ದೇವಸ್ಥಾನದಲ್ಲಿ ಸಂಭ್ರಮ ಮನೆ ಮಾಡುತ್ತೆ. ದೇವಸ್ಥಾನಕ್ಕೆ ದೇವಸ್ಥಾನವೇ ಪುಷ್ಪಾಲಂಕಾರದಲ್ಲಿ ಕಂಗೊಳಿಸುತ್ತದೆ. ಈ ದೇವಸ್ಥಾನದ ಒಂದೇ ಗರ್ಭಗುಡಿಯಲ್ಲಿ ಒಂಬತ್ತು ದುರ್ಗೆಯರು ಸ್ಥಾಪನೆಯಾಗಿರುವುದು ವಿಶೇಷ. ನವರಾತ್ರಿಯ ಈ ದಿನಗಳಲ್ಲಿ ನಿತ್ಯ ಒಂದೊಂದು ದುರ್ಗಾ ಮಾತೆಗೆ ವಿಶೇಷ ಅಲಂಕಾರ ಮಾಡಿ ಪೂಜೆ ಸಲ್ಲಿಸಲಾಗುತ್ತದೆ. ಮೊದಲ ದಿನ ಶೈಲಪುತ್ರಿ, ಎರಡನೇಯ ದಿನ ಬ್ರಹ್ಮಚಾರಿಣೀ, ಮೂರನೇಯ ದಿನ ಚಂದ್ರಘಂಟಾ, ನಾಲ್ಕನೇಯ ದಿನ ಕೂಷ್ಮಾಂಡಾ, ಐದನೇಯ …
Read More »ಹಿಂದೂ-ಮುಸ್ಲಿಂರನ್ನು ಬೇರೆ ಮಾಡೋ ಕೆಲಸ ಎಸ್ ಡಿಪಿಐ- ಪಿಎಫ್ಐ ಮಾಡುತ್ತಿದ್ದವು: ಈಶ್ವರಪ್ಪ
ಶಿವಮೊಗ್ಗ: ರಾಷ್ಟ್ರದ್ರೋಹಿ ಚಟುವಟಿಕೆ ಮಾಡಿದ ಪಿಎಫ್ ಐ ಮತ್ತು ಎಸ್ ಡಿಪಿಐ ನಾಯಕರ ಬಂಧನ ಮಾಡಿರುವ ಕೇಂದ್ರ ಸರ್ಕಾರದ ಕ್ರಮವನ್ನು ನಾನು ಸ್ವಾಗತಿಸುತ್ತೇನೆ ಎಂದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು. ದೇಶಕ್ಕೆ ಸ್ವಾತಂತ್ರ್ಯ ಬಂದಿದ್ದು ಹಿಂದೂ – ಮುಸ್ಲಿಂ- ಕ್ರೈಸ್ತರು ಒಟ್ಟಾಗಿ ಬಾಳಲು. ಎಸ್ ಡಿಪಿಐ ಮತ್ತು ಪಿಎಫ್ಐ ಹಿಂದೂ-ಮುಸ್ಲಿಂರನ್ನು ಬೇರೆ ಬೇರೆ ಮಾಡು ಕೆಲಸ ಮಾಡುತ್ತಿದ್ದರು. ಗೋಹತ್ಯೆ ಜೊತೆಗೆ ಹಿಂದೂ ಸಂಸ್ಕೃತಿಗೆ ಅವಮಾನ ಮಾಡುವ ಕೆಲಸ ಮಾಡುತ್ತಿದ್ದರು. …
Read More »ಕಂದಾಯ ಭವನದ ಮೇಲೆ ಉಪಲೋಕಾಯುಕ್ತರ ದಿಢೀರ್ ದಾಳಿ
ಬೆಂಗಳೂರು: ಸಾರ್ವಜನಿಕರ ದೂರು ಹಿನ್ನೆಲೆಯಲ್ಲಿ ಕಂದಾಯ ಭವನದ ಮೇಲೆ ಉಪಲೋಕಾಯುಕ್ತರು ದಿಢೀರ್ ದಾಳಿ ನಡೆಸಿರುವ ಘಟನೆ ನಡೆದಿದೆ. ಉಪಲೋಕಾಯುಕ್ತ ನ್ಯಾ.ಫಣೀಂದ್ರ ನೇತೃತ್ವದಲ್ಲಿ ಅಧಿಕಾರಿಗಳು ಕಂದಾಯ ಭವನದ ಮೇಲೆ ಏಕಾಏಕಿ ದಾಳಿ ನಡೆಸಿದ್ದಾರೆ. ಸಾರ್ವಜನಿಕರಿಂದ ವ್ಯಾಪಕವಾಗಿ ದೂರು ಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ. ಕಂದಾಯ ಭವನದ ವಿರುದ್ಧ ಹಲವಾರು ದೂರುಗಳು ಬಂದಿದ್ದವು. ಈ ನಿಟ್ಟಿನಲ್ಲಿ ದಾಳಿ ನಡೆಸಿ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ
Read More »ಲೋಕಾಯುಕ್ತ ಇದ್ದಿದ್ರೆ ಸಿದ್ದರಾಮಯ್ಯ ಜೈಲಿಗೆ ಹೋಗ್ತಿದ್ರು: BJP ರಾಜ್ಯಾಧ್ಯಕ್ಷರ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು
ಬಾಗಲಕೋಟೆ: ಲೋಕಾಯುಕ್ತ ಇದ್ದಿದ್ರೆ ಸಿದ್ದರಾಮಯ್ಯ ಜೈಲಿಗೆ ಹೋಗ್ತಿದ್ರು ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಹೇಳಿಕೆಗೆ ತಿರುಗೇಟು ನೀಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಕಟೀಲ್ ಒಬ್ಬ ವಿದೂಷಕ, ಅವರಿಗೆ ಮೆಚ್ಯೂರಿಟಿ ಇಲ್ಲ ಎಂದು ಕಿಡಿಕಾರಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಸರ್ಕಾರದ ವಿರುದ್ಧ ನಾವು 40% ಕಮಿಷನ್ ಆರೋಪ ಮಾಡಿದ ಮೇಲೆ ಬಿಜೆಪಿಯವರು ಈಗ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರ ನಡೆದಿತ್ತು ಎಂದು ಸಮರ್ಥಿಸಿಕೊಳ್ಳುತ್ತಿದ್ದಾರೆ. ನಮ್ಮ ಸರ್ಕಾರ ಹೋಗಿ ಎಷ್ಟು …
Read More »