ಬೆಂಗಳೂರು: ನನಗೆ ಯಾರೂ ಲಂಚ ಕೊಡಬೇಕಾಗಿಲ್ಲ, ನಾನು ಭ್ರಷ್ಟ ಅಧಿಕಾರಿಯಾಗಲಾರೆ ಎಂಬ ಶೀರ್ಷಿಕೆಯ ನಾಮಫಲಕವನ್ನು ಅಳವಡಿಸಲು ರಾಜ್ಯ ಸರ್ಕಾರ ಆದೇಶ ಮಾಡಿದೆ. ಈ ಮೂಲಕ ಪೇ ಸಿಎಂ ಪೋಸ್ಟರ್ ಕಾಂಗ್ರೆಸ್ ಅಭಿಯಾನಕ್ಕೆ ರಾಜ್ಯ ಸರ್ಕಾರದಿಂದ ಟಕ್ಕರ್ ಕೊಡಲಾಗಿದೆ. ರಾಜ್ಯದ ಎಲ್ಲಾ ಸರ್ಕಾರಿ ಕಛೇರಿಗಳಲ್ಲಿ ಅಳವಡಿಸಲು ಅದೇಶ ಮತ್ತು ಸುತ್ತೋಲೆ ಹೊರಡಿಸಲಾಗಿದೆ. ರಾಜ್ಯ ಸರ್ಕಾರದ ವಿರುದ್ಧ ಸರಣಿ ಭ್ರಷ್ಟಾಚಾರ ಆರೋಪ ಹಿನ್ನಲೆಯಲ್ಲಿ ಮುಖ್ಯ ಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ …
Read More »Yearly Archives: 2022
ವಿಜಯಪುರ: ಮಕ್ಕಳ ಕಳ್ಳರ ವದಂತಿ; ಮಹಿಳೆಯರು ಸೇರಿ ನಾಲ್ವರಿಗೆ ಸಾರ್ವಜನಿಕರಿಂದ ಥಳಿತ
ವಿಜಯಪುರ: ರಾಜ್ಯದಲ್ಲಿ ಮಕ್ಕಳ ಕಳ್ಳರ ಹಾವಳಿಯ ವದಂತಿ ಹಿನ್ನೆಲೆಯಲ್ಲಿ ಶನಿವಾರ ನಗರದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ತಿರುಗುತ್ತಿದ್ದ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರನ್ನು ಹಿಡಿದ ಸಾರ್ವಜನಿಕರು ಧರ್ಮದೇಟು ನೀಡಿದ ಘಟನೆ ನಗರದಲ್ಲಿ ನಡೆದಿದೆ. ನಗರದ ಗ್ಯಾಂಗ್ ಬಾವಡಿ ಪರಿಸರದಲ್ಲಿ ಅಪರಿಚಿತ ಇಬ್ಬರು ಮಹಿಳೆಯರು, ಇಬ್ಬರು ಪುರುಷರು ಉತ್ತರ ಭಾರತದ ಶೈಲಿಯಲ್ಲಿ ಮಾತನಾಡಿದ್ದು, ಅನುಮಾನದ ಬಂದ ಸ್ಥಳೀಯರು, ಮಕ್ಕಳ ಕಳ್ಳರೆಂದು ಶಂಕಿಸಿ, ಸಾರ್ವಜನಿಕರ ಸಹಕಾರದಿಂದ ನಾಲ್ವರನ್ನೂ ಹಿಡಿದು ಥಳಿಸಿದ್ದಾರೆ. ನಗರಕ್ಕೆ ಉತ್ತರ ಭಾರತದಿಂದ …
Read More »ಶಿವಾಜಿ ನಾಡಿನಲ್ಲಿ ಪಾಕಿಸ್ಥಾನ ಜಿಂದಾಬಾದ್ ಕೂಗುವ ಹಕ್ಕು ಯಾರಿಗೂ ಇಲ್ಲ: ಶಿಂಧೆ
ಮುಂಬಯಿ: “ಇದು ಛತ್ರಪತಿ ಶಿವಾಜಿ ಮಹಾರಾಜರ ನಾಡು ಮತ್ತು ಪಾಕಿಸ್ಥಾನ ಜಿಂದಾಬಾದ್ ಎಂದು ಘೋಷಣೆ ಕೂಗುವ ಹಕ್ಕು ಯಾರಿಗೂ ಇಲ್ಲ” ಎಂದು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಗುಡುಗಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ ,ಇದು ದೇಶಭಕ್ತರ ರಾಜ್ಯ. ನಮ್ಮ ಸರಕಾರ ಪುಣೆಯಲ್ಲಿ ನಡೆದ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದೆ ಎಂದು ಹೇಳಿದ್ದಾರೆ. ವಿವಾದಿತ ಇಸ್ಲಾಮಿಕ್ ಸಂಘಟನೆಯ ಪಿಎಫ್ಐ ಮುಖಂಡರ ಮೇಲಿಂದ ದಾಳಿ ಮತ್ತು ಬಂಧನದ ನಂತರ ಪುಣೆಯ ಜಿಲ್ಲಾಧಿಕಾರಿ ಕಚೇರಿಯ ಹೊರಗೆ ಪ್ರತಿಭಟನೆ ನಡೆಸಿದ್ದು, …
Read More »ಕಮಲದ ಸುತ್ತಲಿರುವ ಕೆಸರನ್ನು “ಕೈ” ಯಿಂದ ಸ್ವಚ್ಛಗೊಳಿಸಲು ಸಾಧ್ಯವಿಲ್ಲ: ಕೇಜ್ರಿವಾಲ್
ಅಹಮದಾಬಾದ್ : ನಮ್ಮ ಸರಕಾರ ಅಧಿಕಾರಕ್ಕೆ ಬಂದರೆ ಗುಜರಾತ್ನಲ್ಲಿ 80% ಖಾಸಗಿ ಉದ್ಯೋಗಗಳು ಗುಜರಾತ್ನ ಜನರಿಗೆ ಮೀಸಲಾಗಿರುತ್ತವೆ ಎಂದು ಆಪ್ ಸಂಚಾಲಕ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಭಾನುವಾರ ಘೋಷಿಸಿದ್ದಾರೆ. ಟೌನ್ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಗುಜರಾತ್ನ ಯುವ ಸಮುದಾಯದೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಕೇಜ್ರಿವಾಲ್, ‘ಕಮಲ’ದ ಸುತ್ತ ಸಾಕಷ್ಟು ‘ಕೆಸರು’ ಬಿದ್ದಿದೆ. ಆ ಕೆಸರನ್ನು “ಕೈ” ಯಿಂದ ಸ್ವಚ್ಛಗೊಳಿಸಲು ಸಾಧ್ಯವಿಲ್ಲ, ಅದನ್ನು “ಪೊರಕೆ ” ಯಿಂದ ಸ್ವಚ್ಛಗೊಳಿಸಬೇಕಾಗುತ್ತದೆ …
Read More »ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಾ ಇದ್ದು, ವೈದ್ಯರ ತಂಡ ಆರೈಕೆ ಮಾಡ್ತಿದೆ: ಎಸ್ಎಂಕೆ ಹೆಲ್ತ್ ಬುಲೆಟಿನ್
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ (S.M Krishna) ಅವರು ಸದ್ಯ ಐಸಿಯು (ICU) ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ವೈದ್ಯರ ತಂಡ ಆರೈಕೆ ಮಾಡುತ್ತಿದೆ ಎಂದು ಮಣಿಪಾಲ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಾಗಿದೆ. ಶ್ವಾಸಕೋಶದ (Lungs) ಸೊಂಕಿನಿಂದ ಬಳಲುತ್ತಿರುವ ಎಸ್ಎಂಕೆಗೆ ಡಾ ಸತ್ಯನಾರಾಯಣ್ ಮತ್ತು ಡಾ ಸುನೀಲ್ ಕಾರಂತ್ ರಿಂದ ಚಿಕಿತ್ಸೆ ನೀಡಲಾಗುತ್ತಿದೆ. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಾ ಇದ್ದು ವೈದ್ಯರ ತಂಡ ಆರೈಕೆ ಮಾಡ್ತಾ ಇದೆ. ಶ್ವಾಸಕೋಶದ ಒಳಗಡೆ ಆಕ್ಸಿಜನ್ …
Read More »ಜಾನುವಾರುಗಳಿಗೆ ಚರ್ಮಗಂಟು ರೋಗ ಉಲ್ಬಣ
ಬೆಳಗಾವಿ: ಜಿಲ್ಲೆಯ ಬೆಳಗಾವಿ (Belgavi) ತಾಲೂಕಿನ ಜಾನುವಾರುಗಳಲ್ಲಿ ಚರ್ಮಗಂಟು ರೋಗ (Lumpy Skin Disease) (ಲಂಪಿ ಸ್ಕಿನ್ ಡಿಸೀಜ್)ಸಾಂಕ್ರಾಮಿಕ ಕಾಯಿಲೆ ಕಂಡು ಬಂದಿದ್ದು, ಇದು ಕ್ಯಾಪ್ರಿಸಾಕ್ಸ್ ಎಂಬ ವೈರಾಣುವಿನಿಂದ ಬರುತ್ತದೆ. ದನ, ಎಮ್ಮೆಗಳಲ್ಲಿ ಅದರಲ್ಲೂ ಮಿಶ್ರತಳಿ ರಾಸುಗಳಲ್ಲಿ, ಕರುಗಳಲ್ಲಿ ಅತಿ ಹೆಚ್ಚಾಗಿ ಹಾಗೂ ತೀಕ್ಷ್ಣವಾಗಿ ಕಾಣಿಸಿಕೊಳ್ಳುತ್ತದೆ. ಈ ರೋಗವು ಮುಖ್ಯವಾಗಿ ದನಗಳಿಗೆ ಕಚ್ಚುವ ಕೀಟಗಳಿಂದ (ಸೊಳ್ಳೆ, ನೊಣ, ಉಣ್ಣೆ) ಇತ್ಯಾದಿಗಳಿಂದ ಬಹುಬೇಗ ಹರಡುತ್ತದೆ. ಮಳೆಗಾಲದಲ್ಲಿ (Rainy Season) ಮತ್ತು ನಂತರದ ದಿನಗಳಲ್ಲಿ …
Read More »ಉಮೇಶ್ ಕತ್ತಿ ನಿಧನ ಹಿನ್ನೆಲೆ ಅದ್ದೂರಿ ದಸರಾ ಆಚರಣೆ ಇಲ್ಲ : ಹುಕ್ಕೇರಿ ಹಿರೇಮಠ ಶ್ರೀ
ಚಿಕ್ಕೋಡಿ: ಹುಕ್ಕೇರಿ ಮತಕ್ಷೇತ್ರದ ಶಾಸಕ ಹಾಗೂ ಸಚಿವರಾಗಿದ್ದ ಉಮೇಶ್ ಕತ್ತಿ (Umesh Katthi) ಅವರು ಅಕಾಲಿಕ ನಿಧನರಾದ ಹಿನ್ನೆಲೆ ಹುಕ್ಕೇರಿ ಹಿರೇಮಠದ ದಸರಾ ಉತ್ಸವವನ್ನು ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಹುಕ್ಕೇರಿ ಹಿರೇಮಠದ (Hukkeri Hiremath) ಚಂದ್ರಶೇಖರ್ ಶಿವಾಚಾರ್ಯ ಮಹಾಸ್ವಾಮಿಗಳು (Chandrasekhar Shivacharya Mahaswami) ತಿಳಿಸಿದರು. ಹುಕ್ಕೇರಿ ಹಿರೇಮಠದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಮೈಸೂರು (Mysuru) ನಂತರದಲ್ಲಿ ಹುಕ್ಕೇರಿ ಹಿರೇಮಠ ದಸರಾ ಉತ್ಸವ ಉತ್ತರ ಕರ್ನಾಟಕ (UttarKarnataka) ಭಾಗದಲ್ಲಿ ಹೆಸರಾಗಿದೆ. …
Read More »ದೀನದಯಾಳ ಉಪಾಧ್ಯೆ ಅವರ ಕನಸನ್ನು ನನಸಾಗಿಸಿ : ಸರ್ವೋತ್ತಮ ಜಾರಕಿಹೊಳಿ*
*ಗೋಕಾಕ :* ಬಿಜೆಪಿಯು ಅತ್ಯಂತ ಪ್ರಬಲ ಪಕ್ಷವಾಗಿ ಬೆಳೆಯಲು ಪಂ. ದೀನದಯಾಳ ಉಪಾಧ್ಯೆ ಅವರ ಕೊಡುಗೆ ಅನನ್ಯವಾದದ್ದು, ಪಂ. ದೀನದಯಾಳ ಉಪಾಧ್ಯೆ ಅವರ ತತ್ವಾದರ್ಶಗಳು ಇಂದಿಗೂ ಪ್ರಸ್ತುತವಾಗಿದ್ದು ಅವುಗಳನ್ನು ಯುವಕರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಭಾನುವಾರದಂದು ಅರಭಾವಿ ಬಿಜೆಪಿ ಮಂಡಲ ಇಲ್ಲಿಯ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಆಯೋಜಿಸಿದ್ದ ಪಂ. ದೀನದಯಾಳ ಉಪಾಧ್ಯೆ ಅವರ 106ನೇ ಜನ್ಮದಿನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೇಂದ್ರ …
Read More »ಹಳೆಯ ಮಾದರಿಯಲ್ಲಿ ಎಸ್ಎಸ್ ಎಲ್ ಸಿ ಪರೀಕ್ಷೆ ವಿಧಾನ, ಇನ್ನು ಮುಂದೆ ಬಹು ಆಯ್ಕೆ ಪ್ರಶ್ನೆಗಳು
ಬೆಂಗಳೂರು: ಕರ್ನಾಟಕ ಸರ್ಕಾರವು ಹೊರಡಿಸಿದ ಹೊಸ ಮಾರ್ಗಸೂಚಿಗಳ ಪ್ರಕಾರ, ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಹಿಂದಿನ ಮಾದರಿಗೆ ಮರಳಲಿದೆ. ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಸರಿಯಾಗಿ ಪಾಠಗಳು ನಡೆಯದಿದ್ದುದರಿಂದ ಕಳೆದ ಎರಡು ವರ್ಷ ಬಹು ಆಯ್ಕೆಯ ಪ್ರಶ್ನೆಗಳನ್ನು ನೀಡಲಾಗಿತ್ತು. (MCQ) ಆದರೆ ಈ ವರ್ಷದಿಂದ 10ನೇ ತರಗತಿ ವಿದ್ಯಾರ್ಥಿಗಳು ಹಿಂದಿನ ಮಾದರಿಗೆ ಮರಳಬೇಕಾಗಿದೆ. ಪ್ರಬಂಧ-ಮಾದರಿಯ ಪ್ರಶ್ನೆಗಳಿಗೆ ವಿವರವಾದ ಉತ್ತರಗಳನ್ನು ಇನ್ನು ಮುಂದೆ ನೀಡಬೇಕು. ಪಠ್ಯಕ್ರಮವನ್ನು ಕಡಿತಗೊಳಿಸುವ ನಿರ್ಧಾರವೂ ಹಿಂಪಡೆಯಲಿದ್ದು, ವಿದ್ಯಾರ್ಥಿಗಳು ಸಂಪೂರ್ಣ …
Read More »ಧಾರವಾಡದಿಂದಲೇ ಸ್ಪರ್ಧಿಸುತ್ತಾರಂತೆ ವಿನಯ ಕುಲಕರ್ಣಿ!
ಹುಬ್ಬಳ್ಳಿ :ಜಿಲ್ಲಾ ಪಂಚಾಯಿತಿ ಸದಸ್ಯ ಯೋಗಿಶಗೌಡ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರಿಗೆ ಧಾರವಾಡ ಜಿಲ್ಲೆ ಪ್ರವೇಶ ಮಾಡದಂತೆ ನ್ಯಾಯಾಲಯ ನಿರ್ಬಂಧ ವಿಧಿಸಿದೆ. ಇಂಥ ಸನ್ನಿವೇಶದಲ್ಲಿ, ಎದುರಾಗಲಿರುವ ವಿಧಾನಸಭೆ ಚುನಾವಣೆಗೆ ಧಾರವಾಡ ಕ್ಷೇತ್ರದಿಂದಲೇ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ವಿನಯ ಕುಲಕರ್ಣಿ ನೀಡಿರುವ ಹೇಳಿಕೆ ಸಹಜವಾಗಿ ಜಿಲ್ಲೆಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಧಾರವಾಡ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧಿಸಿರುವುದರಿಂದ ವಿನಯ ಕುಲಕರ್ಣಿ ಬೆಂಗಳೂರಿನಲ್ಲಿಯೇ ವಾಸವಾಗಿದ್ದಾರೆ. ಆದರೆ, ಮೇಲಿಂದ …
Read More »