ರಿಯಾಲಿಟಿ ಶೋಬಿಗ್ ಬಾಸ್9ನೇ ಆವೃತ್ತಿಯ ಮನೆಗೆ ಯಾರೆಲ್ಲಾ ಬರ್ತಿದ್ದಾರೆ ಎಂಬ ಕುತೂಹಲಕ್ಕೆ ಬಹುತೇಕ ತೆರೆ ಬಿದ್ದಿದೆ. ಕಿಚ್ಚ ಸುದೀಪ್ ನಡೆಸಿಕೊಡುವ ಬಿಗ್ ಬಾಸ್ ರಿಯಾಲಿಟಿ ಶೋ ಸೆಪ್ಟೆಂಬರ್ 24ರಂದು ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗಲಿದೆ. ಬಿಗ್ ಬಾಸ್ ಮನೆಗೆ ಯಾರೆಲ್ಲಾ ಬರ್ತಾರೆ ಎಂಬ ಕುತೂಹಲ ಮುಂದುವರಿದಿದ್ದು ಮೂಲಗಳ ಪ್ರಕಾರ ಯಾರೆಲ್ಲಾ ಬರುತ್ತಿದ್ದಾರೆ ಎಂಬ ಮಾಹಿತಿಗಳು ಹೊರಗೆ ಬರುತ್ತಿವೆ. ಬಿಗ್ ಬಾಸ್ ಓಟಿಟಿಯಲ್ಲಿ ವಿಜೇತ ನಾಲ್ವರು ಸ್ಪರ್ಧಿಗಳು ಸೇರಿದಂತೆ ಇನ್ನೂ ಹೊಸಬರು ಹಾಗೂ …
Read More »Yearly Archives: 2022
ಸರ್ಕಾರದ ಗೋಮಾಳ, ಕಾಣೆ,ಬಾಣೆ ಜಮೀನುಗಳಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಸಿಹಿಸುದ್ದಿ!
ಬೆಂಗಳೂರು : ಸರ್ಕಾರಕ್ಕೆ ಸೇರಿದ ಗೋಮಾಳ ಜಮೀನಿನಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಕಂದಾಯ ಸಚಿವ ಆರ್. ಅಶೋಕ್ ಸಿಹಿಸುದ್ದಿನೀಡಿದ್ದು, ಶೀಘ್ರವೇ ಜಮೀನು ಸಕ್ರಮಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ವಿಧಾನಪರಿಷತ್ ನಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವರು, ಸರ್ಕಾರಕ್ಕೆ ಸೇರಿದ ಗೋಮಾಳ, ಗಾಯರಾಣ, ಹುಲ್ಲು ಬನ್ನಿ, ಸೊಪ್ಪಿನ ಬೆಟ್ಟ ಸೇರಿದಂತೆ ಕಾಣೆ, ಬಾಣೆ, ಕಮ್ಮಿ ಜಾಗದಲ್ಲಿ ಸಾಗುವಳಿ ಮಾಡುತ್ತಿರುವವರಿಗೆ ಜಮೀನುಗಳನ್ನು ಸಕ್ರಮ ಮಾಡುವ ಸಂಬಂಧ ನೀತಿ ರೂಪಿಸಲು …
Read More »ದಿಢೀರ್ ಕಾಣಿಸಿಕೊಂಡ ವಿಚಿತ್ರ ಕೀಟಕ್ಕೆ ಬೆಚ್ಚಿಬಿದ್ದ ಗದಗ ರೈತರು!
ಗದಗ, ಸೆಪ್ಟೆಂಬರ್ 21 : ತಾಲೂಕಿನ ಡಂಬಳ ಗ್ರಾಮದ ವ್ಯಕ್ತಿಯೊಬ್ಬರ ಮೇಲೆ ಕಂಬಳಿ ಹುಳು ಆಕಾರದ ವಿಚಿತ್ರ ಕೀಟವೊಂದು ಹರಿದಾಡಿದ ಪರಿಣಾಮ ಆ ವ್ಯಕ್ತಿ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದಾರೆ. ತಮ್ಮ ಜಮೀನು ಕೆಲಸಕ್ಕೆ ಹೋಗಿದ್ದ ಸಿದ್ದಲಿಂಗಪ್ಪ ಕುರ್ತಕೋಟಿ ಮೈ ಮೇಲೆ ಈ ಹುಳು ಹರಿದಾಡಿದೆ. ಹಾಗಾಗಿ ಸಿದ್ದಲಿಂಗಪ್ಪ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದರು. ಸದ್ಯ ಗುಣಮುಖರಾಗಿರುವ ಸಿದ್ದಲಿಂಗಪ್ಪ ಮನೆಯಲ್ಲಿದ್ದಾರೆ. ಅದೇ ಮಾದರಿಗೆ ಹುಳವೊಂದರ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ಹುಳು …
Read More »ಅರ್ಜಿದಾರರಿಗೆ ಬರೋಬ್ಬರಿ 5 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್
ಬೆಂಗಳೂರು: ರಾಜ್ಯ ಮಾಹಿತಿ ಹಕ್ಕು ಆಯೋಗದ ಅಧ್ಯಕ್ಷರು ಮತ್ತು ಸದಸ್ಯರ ನೇಮಕಾತಿ ಪ್ರಶ್ನಿಸಿ ಕ್ಷುಲ್ಲಕ ಅರ್ಜಿ ಸಲ್ಲಿಸಿದ್ದ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ಮೂಲದ ವ್ಯಕ್ತಿಯೊಬ್ಬರಿಗೆ ಹೈಕೋರ್ಟ್ ಬರೋಬ್ಬರಿ 5 ಲಕ್ಷ ರೂ. ದಂಡ ಹಾಕಿದೆ. ಅರ್ಜಿದಾರರು ಸತ್ಯಾಂಶವನ್ನು ಬಚ್ಚಿಟ್ಟು, ನ್ಯಾಯಾಲಯದ ಅಮೂಲ್ಯ ಸಮಯವನ್ನು ಹಾಳುವ ಮಾಡಿದ್ದಲ್ಲದೆ, ನ್ಯಾಯಾಂಗದ ಘನತೆಗೆ ಧಕ್ಕೆ ತರುವ ಪ್ರಯತ್ನ ಮಾಡಿದ್ದಾರೆ. ಇದನ್ನು ಸರ್ವತಃ ಸಹಿಸಲು ಸಾಧ್ಯವಿಲ್ಲ. ಇಂತಹ ಪ್ರಯತ್ನಗಳನ್ನು ನಿರ್ದಾಕ್ಷಿಣ್ಯವಾಗಿ ಮತ್ತು ಕಠೀಣಾತಿ ಕಠಿಣ ರೀತಿಯಲ್ಲಿ …
Read More »ಮೂಡಲಗಿ, ಕುಲಗೋಡ, ಖಾನಟ್ಟಿ ಹಾಗೂ ಬೆಟಗೇರಿಗೆ ಹೊಸ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯಗಳು ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ*
*ಮೂಡಲಗಿ*: ಅರಭಾವಿ ವಿಧಾನಸಭಾ ಕ್ಷೇತ್ರಕ್ಕೆ 2022-23 ನೇ ಸಾಲಿನಲ್ಲಿ 4 ಹೊಸ ಸರ್ಕಾರಿ ಪದವಿ ಪೂರ್ವ ಕಾಲೇಜುಗಳು ಮಂಜೂರು ಆಗಿವೆ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಮೂಡಲಗಿ ತಾಲೂಕಿನ ಮೂಡಲಗಿ, ಕುಲಗೋಡ, ಖಾನಟ್ಟಿ ಮತ್ತು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮಗಳಿಗೆ ವಿದ್ಯಾರ್ಥಿಗಳ ಅನುಕೂಲಕ್ಕೋಸ್ಕರ ಹೊಸ ಪದವಿ ಪೂರ್ವ ಕಾಲೇಜುಗಳನ್ನು ಮಂಜೂರು ಮಾಡಿಸಲಾಗಿದೆ. ಇದರಿಂದ ಮೂಡಲಗಿ ವಲಯದಲ್ಲಿ ಕಾಲೇಜುಗಳ ಸಂಖ್ಯೆ 9ಕ್ಕೇರಿದೆ …
Read More »ಬೆಳಗಾವಿಯಲ್ಲಿ ಮಕ್ಕಳ ಸುರಕ್ಷತೆ ಅರಿವು ಕಾರ್ಯಕ್ರಮ 2022 ಆಯೋಜನೆ
ಬೆಳಗಾವಿಯಲ್ಲಿ ನಗರ ಪೊಲೀಸ್ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಮಕ್ಕಳ ಸುರಕ್ಷತೆ ಅರಿವು ಕಾರ್ಯಕ್ರಮ 2022ನ್ನು ಆಯೋಜಿಸಲಾಗಿತ್ತು. ಹೌದು ಇಂದು ಬುಧವರಾ ಬೆಳಗಾವಿ ನಗರದ ಜೀರಗೆ ಸಭಾ ಭವನದಲ್ಲಿ ಬೆಳಗಾವಿ ನಗರಪೊಲೀಸ್ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಮಲ್ಲ ಸುರಕ್ಷತೆ ಅರಿವು ಕಾರ್ಯಕ್ರಮ 2022ನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತರಾದ ಡಾ. ಎಂ.ಬಿ ಬೋರಲಿಂಗಯ್ಯ, ಡಿಡಿಪಿಐ ಬಸವರಾಜ್ ನಲವತ್ವಾಡ್, ಆರ್ಟಿಓ ಶಿವಾನಂದ ಮಗದುಮ್, ಪಾಲಿಕೆ ಆಯುಕ್ತರಾದ …
Read More »ಕಂದಾಯ ಇಲಾಖೆಯ ದಾಖಲೆಗಳನ್ನು ತಿದ್ದಿದರೆ ಅಧಿಕಾರಿಗಳ ಮೇಲೆ ಕ್ರಿಮಿನಲ್ ಕೇಸ್: ಕಾರಜೋಳ
ಬೆಂಗಳೂರು: ಕಂದಾಯ ಇಲಾಖೆಯ ಕಾಗದ ಪತ್ರಗಳಲ್ಲಿ ಹೆಸರನ್ನು ಬದಲಾವಣೆ ಮಾಡಿದರೆ ಅವರು ಅಪರಾಧಿಗಳಾಗುತ್ತಾರೆ. ಮಾಡಿ ಕೊಟ್ಟವರು ಅಪರಾಧಿಗಳಾಗುತ್ತಾರೆ. ಇಬ್ಬರ ಮೇಲೆಯೂ ಕ್ರಮ ತೆಗೆದುಕೊಳ್ಳುತ್ತೇವೆ. ಅಧಿಕಾರಿಗಳನ್ನು ಅಮಾನತು ಮಾಡಿ, ಅವರ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸುತ್ತೇವೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ. ವಿಧಾನಸಭೆಯಲ್ಲಿ ಶೂನ್ಯ ವೇಳೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಯಾದಗಿರಿ ಜಿಲ್ಲೆಯ ಕೊಡೆಕಲ್ ಗ್ರಾಮದಲ್ಲಿ ಸರ್ವೇ ನಂಬರ್ 72ರಲ್ಲಿ 15 ಎಕರೆ 10 ಗುಂಟೆ ಜಮೀನನ್ನು …
Read More »ಭೋಜ್ ಪುರಿ ನಟಿಯ ಎಂಎಂಎಸ್ ಲೀಕ್?: ಆಕ್ರೋಶಗೊಂಡು ಮೌನ ಮುರಿದ ನಟಿ
ಮುಂಬಯಿ: ಭೋಜ್ ಪುರಿ ನಟಿ ಅಕ್ಷರ ಸಿಂಗ್ ತನ್ನ ನಟನೆ ಹಾಗೂ ಗಾಯನದಿಂದ ಖ್ಯಾತಿಗಳಿಸಿದವರು. ಬಿಗ್ ಬಾಸ್ ಓಟಿಟಿಯಲ್ಲಿ ಭಾಗವಹಿಸಿದ ಬಳಿಕ ಅವರ ಜನಪ್ರಿಯತೆ ಹೆಚ್ಚಾಗಿದೆ. ಭೋಜ್ ಪುರಿ ಸಿನಿಮಾರಂಗದಲ್ಲಿ ‘ಪವನ್ ರಾಜ’ ‘ದಿಲ್ ವಾಲಾʼ ʼಸತ್ಯʼ ಇತ್ಯಾದಿ ಸಿನಿಮಾದಲ್ಲಿ ನಟಿಸಿರುವ ಅಕ್ಷರ ‘ರಾಕೆಟ್ ಜವಾನಿʼ ʼಜಾ ತೋ ರಹೇ ಹೋ ಮುಝೆ ಚೋಡ್ ಕರ್ ತುಮ್ʼ ಮುಂತಾದ ಹಾಡುಗಳನ್ನು ಹಾಡಿ, ಹಾಟ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಹಾಡುಗಳು ಯೂಟ್ಯೂಬ್ …
Read More »ಭಾರತ್ ಜೋಡೋ ಯಾತ್ರಿಗಳ ಸಮಿತಿಗೆ ದೇಶಪಾಂಡೆ ಅಧ್ಯಕ್ಷ
ಬೆಂಗಳೂರು: ರಾಹುಲ್ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರಿಗಳ ರಾಜ್ಯ ಸಮಿತಿ ಅಧ್ಯಕ್ಷರಾಗಿ ಮಾಜಿ ಸಚಿವ ಆರ್.ವಿ.ದೇಶಪಾಂಡೆ ಅವರನ್ನು ನೇಮಿಸಲಾಗಿದೆ. ದೇಶಪಾಂಡೆ ಅವರಿಗೆ ಹೊಣೆಗಾರಿಕೆ ನೀಡದ ಬಗ್ಗೆ ಪಕ್ಷದ ವಲಯದಲ್ಲಿ ಅಸಮಾಧಾನ ಉಂಟಾಗಿದ್ದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಂದ ಈ ನೇಮಕಾತಿ ಆದೇಶ ಹೊರಬಿದ್ದಿದೆ. ದೇಶಪಾಂಡೆ ಅವರ ನೇತೃತ್ವದಲ್ಲಿ 22 ಮಂದಿ ಶಾಸಕರು, ಮಾಜಿ ಶಾಸಕರು, ಕೆಪಿಸಿಸಿ ಪದಾಧಿಕಾರಿಗಳನ್ನು ಸಮಿತಿಗೆ ನೇಮಿಸಲಾಗಿದೆ. ಭಾರತ್ ಜೋಡೋ ಯಾತ್ರೆ ಹಿನ್ನೆಲೆಯಲ್ಲಿ ರಚಿಸಲಾಗಿದ್ದ ಸಮಿತಿಗಳಲ್ಲಿ …
Read More »ಬಾಲಿವುಡ್ ನ ಖ್ಯಾತ ಹಾಸ್ಯನಟ ರಾಜು ಶ್ರೀವಾಸ್ತವ್ ವಿಧಿವಶ
ನವದೆಹಲಿ : ಬಾಲಿವುಡ್ ಹಾಸ್ಯನಟ ರಾಜು ಶ್ರೀವಾಸ್ತವ ಅವರು ಬುಧವಾರ ದೆಹಲಿಯ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಅವರಿಗೆ 58 ವರ್ಷ ವಯಸ್ಸಾಗಿತ್ತು. ಜಿಮ್ನಲ್ಲಿ ವ್ಯಾಯಾಮ ಮಾಡುವ ವೇಳೆ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದ ರಾಜು ಅವರನ್ನು ಆಗಸ್ಟ್ 10 ರಂದು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು ಆದರೆ ಬುಧವಾರ ಚಿಕಿತ್ಸೆಗೆ ಸ್ಪಂದಿಸದೆ ನಿಧನ ಹೊಂದಿದ್ದಾರೆ ಎಂದು ಕುಟುಂಬದ ಮೂಲಗಳು ಮಾಧ್ಯಮಗಳಿಗೆ ದೃಢಪಡಿಸಿದೆ. ಡಿಸೆಂಬರ್ 25, 1963 …
Read More »