Breaking News

Yearly Archives: 2022

ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಶ್ರೀಗಳಿಂದ ಅರ್ಜಿ ಸಲ್ಲಿಕೆ

ಚಿತ್ರದುರ್ಗ: ಡಾ| ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪೋಕ್ಸೋ ಕಾಯ್ದೆಯಡಿ ದಾಖಲಾಗಿರುವ ದೂರಿನ ವಿಚಾರಣೆ ಚುರುಕುಗೊಂಡಿದ್ದು, ಮತ್ತೊಂದೆಡೆ ನಿರೀಕ್ಷಣಾ ಜಾಮೀನು ಕೋರಿ ಶ್ರೀಗಳು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಮುರುಘಾ ಮಠ ಹಾಗೂ ಶ್ರೀಗಳ ಪರ ವಕೀಲರು ಚಿತ್ರದುರ್ಗದ 2ನೇ ಸೆಷನ್ಸ್‌ ಕೋರ್ಟ್‌ಗೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಅರ್ಜಿ ಸ್ವೀಕರಿಸಿದ ನ್ಯಾಯಾಲಯ ವಿಚಾರಣೆಯನ್ನು ಸೆ. 1ಕ್ಕೆ ಮುಂದೂಡಿದೆ. ಈ ನಡುವೆ ಶ್ರೀಗಳ ವಿರುದ್ಧ ದೂರು ನೀಡಿದ್ದ ಬಾಲಕಿಯರನ್ನು ಮಠಕ್ಕೆ …

Read More »

ಲೈಂಗಿಕ ಕಿರುಕುಳ ಆರೋಪ ಹಿನ್ನಲೆ ಆಕ್ರೋಶ ಮುರುಘಾ ಶ್ರೀಗಳ ಪ್ರತಿಮೆ ಧ್ವಂಸ

ಚಿತ್ರದುರ್ಗದ ಮುರುಘಾ ಶರಣರ (Murugha Shri) ವಿರುದ್ಧ ಲೈಂಗಿಕ ಕಿರುಕುಳ ಆರೋಪ ಹಿನ್ನಲೆ ಆಕ್ರೋಶ ಹೆಚ್ಚಾಗಿದೆ. ಮುರುಘಾ ಶ್ರೀ ಬಂಧನ (Arrest) ಆಗದ ಹಿನ್ನಲೆ ಪ್ರತಿಭಟನೆಗಳು (Protest) ನಡೆಯುತ್ತಿದೆ. ಹೊಳಲ್ಕೆರೆ ತಾಲ್ಲೂಕಿನ ಮಲ್ಲಾಡಿ ಹಳ್ಳಿಯಲ್ಲಿ ಡಾ. ಶಿವಮೂರ್ತಿ ಶರಣರ ಪ್ರತಿಮೆ ಧ್ವಂಸ (Statue Collapse) ಮಾಡಲಾಗಿದೆ. ಮುರುಘಾ ಶರಣರ ಭಾವಚಿತ್ರಕ್ಕೆ ಬೆಂಕಿ (Fire) ಹಾಕಿ ಆಕ್ರೋಶ ವ್ಯಕ್ತಪಡಿಸಲಾಗ್ತಿದೆ. ಹಲವು ಸಂಘಟನೆಗಳು ಮುರುಘಾ ಶ್ರೀಗಳ ವಿರುದ್ಧ ಕಿಡಿಕಾರಿದೆ. ಇದರ ನಡುವೆ ಮುರುಘಾಶ್ರೀಗಳಿಗೆ …

Read More »

ಗಣೇಶ ಹಬ್ಬದ ಹಿನ್ನೆಲೆ KSRTC ಬಸ್‌ ಮೂರೇ ದಿನಕ್ಕೆ 22 ಸಾವಿರ ಸೀಟ್ ಬುಕ್ಕಿಂಗ್

ಬೆಂಗಳೂರು: ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ಸುಗಳಿಗೆ ಡಿಮ್ಯಾಂಡ್ ಹೆಚ್ಚಾಗಿದೆ. ಬೆಂಗಳೂರಿನಿಂದ ಸಾವಿರಾರು ಜನರು ತಮ್ಮ-ತಮ್ಮ ಊರಿನತ್ತ ಮುಖ ಮಾಡಿದ್ದು, ಎಲ್ಲ ಬಸ್‌ಗಳು ಫುಲ್ ರಶ್ ಆಗಿ ಪ್ರಯಾಣಿಸುತ್ತಿವೆ. ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ಈಗಾಗಲೇ ಟಿಕೆಟ್ ಬುಕ್ಕಿಂಗ್ ಹೆಚ್ಚಾಗಿದ್ದು, ಆದಾಯವೂ ಹರಿದುಬರುತ್ತಿದೆ. ಇಂದಿನಿಂದಲೇ ಬುಕ್ಕಿಂಗ್ ಹೌಸ್‌ಫುಲ್ ಆಗಿದ್ದು, ಸ್ಥಳದಲ್ಲೇ ಟಿಕೆಟ್ ಖರೀದಿಸಿ ಹೋಗುವವರು ನಿಂತುಕೊಂಡೇ ಪ್ರಯಾಣಿಸಬೇಕಿದೆ. ಸದ್ಯ ಮೂರು ದಿನಗಳ ಕಾಲ ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ಬಾರೀ ಬೇಡಿಕೆ ಹೆಚ್ಚಿದೆ. 22 ಸಾವಿರ …

Read More »

ರಸ್ತೆಅಗೆದು ಗ್ರಾಮಗಳಿಗೆ ಸಂಚಾರ ಬಂದ್ ಮಾಡಿದ್ದ ಬಿಜೆಪಿ ಮುಖಂಡನ ವಿರುದ್ಧ ಸಾರ್ವಜನಿಕರ ಆಕ್ರೋಶ

ಚಿಕ್ಕೋಡಿ: ತನ್ನ ಜಮೀನಿನಲ್ಲಿ ಕಾಲುವೆ ನೀರು ಬರುತ್ತಿದೆ ಎನ್ನುವ ಕಾರಣಕ್ಕೆ ರಸ್ತೆಯನ್ನು ಅಗೆದು ಎರಡು ಗ್ರಾಮಗಳಿಗೆ ಸಂಚಾರ ಬಂದ್ ಮಾಡಿದ್ದ ಬಿಜೆಪಿ ಮುಖಂಡನೋರ್ವನ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಶೇಗುಣಶಿ – ಯಬರಟ್ಟಿ ರಸ್ತೆಯ ಪಕ್ಕದ ತನ್ನ ಗದ್ದೆಯಲ್ಲಿ ನೀರು ನಿಲ್ಲುತ್ತೆ ಎನ್ನುವ ಕಾರಣಕ್ಕೆ ಬಿಜೆಪಿ ಮುಖಂಡ ಹಾಗೂ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ತಮ್ಮಣ್ಣ ತೇಲಿ ಎಂಬಾತ ಸರ್ಕಾರದ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ರಸ್ತೆಯನ್ನೆ …

Read More »

ಮಣ್ಣಿನಲ್ಲಿ ಅರಳಿದ ಅಪ್ಪುಗೆ ಭಾರೀ ಬೇಡಿಕೆ

ಪ್ರತಿ ವರ್ಷ ಗಣೇಶ ಚತುರ್ಥಿ (Ganesh Chaturthi) ಹಬ್ಬ ಬಂತು ಎಂದರೆ ನಾನಾ ರೀತಿಯ ಗಣಪನ ಮೂರ್ತಿ ಅನಾವರಣಗೊಳ್ಳುತ್ತದೆ. ಗಣಪನ ಮೂರ್ತಿಗೂ ಚಿತ್ರರಂಗಕ್ಕೂ ಒಂದು ನಂಟು ಇದೆ. ಕೆಲವರು ಗಣೇಶನಿಗೆ ಚಿತ್ರರಂಗದ ಟಚ್ ನೀಡುತ್ತಾರೆ. ಸಿನಿಮಾದ ಥೀಮ್ ಇಟ್ಟುಕೊಂಡು ಗಣೇಶನ ವಿಗ್ರಹ ರೆಡಿ ಆದ ಉದಾಹರಣೆ ಸಾಕಷ್ಟಿದೆ. ಈ ಬಾರಿ ಮತ್ತೆ ಗಣೇಶ ಚತುರ್ಥಿ ಬಂದಿದೆ. ಆ ಪ್ರಯುಕ್ತ ಎಲ್ಲ ಕಡೆಗಳಲ್ಲಿ ವಿಘ್ನ ವಿನಾಶಕನ ಮೂರ್ತಿ ರೆಡಿ ಆಗುತ್ತಿದೆ. ಈ ಬಾರಿ ಪುನೀತ್ ರಾಜ್​ಕುಮಾರ್ (Puneeth …

Read More »

ಮುಂಬೈನ ಈ ಶ್ರೀಮಂತ ಗಣೇಶನಿಗೆ 316 ಕೋಟಿ ರೂ. ವಿಮೆ!

ಗಣೇಶೋತ್ಸವಕ್ಕೆ ಇಡೀ ದೇಶದಲ್ಲೇ ಮುಂಬೈ ಹೆಚ್ಚು ಖ್ಯಾತಿ ಪಡೆದಿದೆ. ಇಲ್ಲಿನ ಗಣೇಶ ಶ್ರೀಮಂತ ಕೂಡ. ಅಂತಹ ಶ್ರೀಮಂತ ಗಣೇಶನಿಗೆ ಈ ಬಾರಿ 316.40 ಕೋಟಿ ರೂ. ವಿಮೆ ಮಾಡಿಸಲಾಗಿದೆ. ಮುಂಬೈನ ಗಣೇಶ ಮಂಡಲ್‌ ನ ಗಣೇಶನಿಗೆ ಈ ಬಾರಿ ಗಣೇಶ ಚತುರ್ಥಿ ವೇಳೆ 316.40 ಕೋಟಿ ರೂ. ವಿಮೆ ಮಾಡಿಸಲಾಗಿದೆ. ಇದರಲ್ಲಿ 31.97 ಕೋಟಿ ರೂ. ಚಿನ್ನ, ಬೆಳ್ಳಿ ಹಾಗೂ ಇನ್ನಿತರ ವಸ್ತುಗಳು ಸೇರಿದ್ದರೆ, 263 ಕೋಟಿ ರೂ. ವೈಯಕ್ತಿಕ …

Read More »

ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ : ಸೆ. 6ಕ್ಕೆ `ವೇತನ ಆಯೋಗ’ ಘೋಷಣೆ ಸಾಧ್ಯತೆ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಬಸವರಾಜ ಬೊಮ್ಮಾಯಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯಸ ರ್ಕಾರಿ ವೇತನ ಆಯೋಗವನ್ನು ಸೆ. 6 ರಂದು ಘೋಷಣೆ ಮಾಡುವ ಸಾಧ್ಯತೆಗಳಿವೆ. ಸೆ.6 ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಸರ್ವೋತ್ತಮ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ. ಈ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ಅವರು ರಾಜ್ಯ ಸರ್ಕಾರಿ ನೌಕರರಿಗೆ ವೇತನ ಆಯೋಗ ಘೋಷಣೆ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.   …

Read More »

ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್‌ ಕಡ್ಡಾಯ: ಆರೋಗ್ಯ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳು ಏರಿಕೆಯಾಗುತ್ತಿರುವ ಕಾರಣದಿಂದ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್‌ ಕಡ್ಡಾಯಗೊಳಿಸಿ ಆರೋಗ್ಯ ಇಲಾಖೆ ಸೋಮವಾರ ಸುತ್ತೋಲೆ ಹೊರಡಿಸಿದೆ. ಹೋಟೆಲ್‌, ಕ್ಲಬ್‌, ರೆಸ್ಟೋರೆಂಟ್‌, ಪಬ್‌, ಬಾರ್‌ಗಳಲ್ಲಿ ಆಹಾರ ಸೇವನೆಯ ಸಮಯವನ್ನು ಹೊರತುಪಡಿಸಿದ ಅವಧಿಯಲ್ಲಿ ಮಾಸ್ಕ್‌ ಧರಿಸುವುದು ಕಡ್ಡಾಯ. ಶಿಕ್ಷಣ ಸಂಸ್ಥೆಗಳಲ್ಲಿ ಐದು ವರ್ಷಕ್ಕಿಂತ ಮೇಲಿನ ಮಕ್ಕಳು ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.  

Read More »

ಬಿಡಿಎ ನಿವೇಶನ ಹಂಚಿಕೆಯಲ್ಲಿ ಅಕ್ರಮ: ಬಿಜೆಪಿ ಭ್ರಷ್ಟೋತ್ಸವ ಎಂದ ಕಾಂಗ್ರೆಸ್‌

ಬೆಂಗಳೂರು: ಬಿಡಿಎ ನಿವೇಶನ ಹಂಚಿಕೆಯಲ್ಲಿ ಅಕ್ರಮ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಹರಿಹಾಯ್ದಿದೆ. ಈ ವಿಚಾರವಾಗಿ ‘ಪ್ರಜಾವಾಣಿ’ ವರದಿಯನ್ನು ಟ್ವೀಟ್‌ ಮಾಡಿರುವ ಕೆಪಿಸಿಸಿ, ಬಿಜೆಪಿ ಭ್ರಷ್ಟೋತ್ಸವಕ್ಕೆ ಸುಪ್ರೀಂ ಕೋರ್ಟ್ ಕೂಡ ‘ಛೀಮಾರಿ’ ಹಾಕಿ ಗೌರವಿಸಿದೆ ಎಂದು ವ್ಯಂಗ್ಯವಾಡಿದೆ.   ಈ ವಿಚಾರವಾಗಿ ‘ಪ್ರಜಾವಾಣಿ’ ವರದಿಯನ್ನು ಟ್ವೀಟ್‌ ಮಾಡಿರುವ ಕೆಪಿಸಿಸಿ, ಬಿಜೆಪಿ ಭ್ರಷ್ಟೋತ್ಸವಕ್ಕೆ ಸುಪ್ರೀಂ ಕೋರ್ಟ್ ಕೂಡ ‘ಛೀಮಾರಿ’ ಹಾಕಿ ಗೌರವಿಸಿದೆ ಎಂದು ವ್ಯಂಗ್ಯವಾಡಿದೆ. ನಿವೇಶನ ಹಂಚಿಕೆಯಲ್ಲೂ …

Read More »

ಅಮಿತ್ ಶಾ ಮನೆ ಬಳಿ ಪ್ರತಿಭಟನೆ ಮಾಡಲು ಹೋಗಿದ್ದೆ. ಎನ್ನುತ್ತಲೇ ಕರ್ನಾಟಕ ಪೊಲೀಸರ ವಿರುದ್ಧ ಕಿಡಿಕಾರಿದ ನವ್ಯಶ್ರೀ!

ದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮನೆ ಮುಂದೆ ಮೌನ ಪ್ರತಿಭಟನೆ ನಡೆಸಲು ಮುಂದಾದ ಚನ್ನಪಟ್ಟಣ ಮೂಲದ ಕಾಂಗ್ರೆಸ್​ ಮುಖಂಡೆ ನವ್ಯಶ್ರೀ ರಾವ್​ಗೆ ಅವಕಾಶ ಸಿಕ್ಕಿಲ್ಲ. ಈ ಕುರಿತು ಸುದ್ದಿಗಾರರೊಂದಿಗೆ ನವ್ಯಶ್ರೀ ಅಸಮಾಧಾನ ಹೊರಹಾಕಿದ್ದಾರೆ.   ‘ಶುಕ್ರವಾರ ಸಂಜೆ ದೆಹಲಿಗೆ ಬಂದ್ವಿ. ಶನಿವಾರ ಅಮಿತ್​ ಶಾ ಅವರ ಮನೆ ಮುಂದೆ ಪ್ರತಿಭಟನೆ ನಡೆಸಬೇಕು ಎಂದು ಹೋದ್ವಿ. ಅಮಿತ್​ ಶಾ ಅವರು ಮನೆಯಲ್ಲಿದ್ದರೂ ನಮಗೆ ಅವಕಾಶ ಸಿಗಲಿಲ್ಲ. ಆ.15 ರಂದು …

Read More »