Breaking News

Yearly Archives: 2022

ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಪ್ರಶಸ್ತಿ ಪ್ರಕಟ; ಐವರಿಗೆ ಗೌರವ ಪ್ರಶಸ್ತಿ

ಬೆಂಗಳೂರು: ಕರ್ನಾಟಕ ಶಿಲ್ಪಕಲಾ ಅಕಾಡೆಮಿಯು 2021ನೇ ಸಾಲಿನ ಗೌರವ ಪ್ರಶಸ್ತಿ ಹಾಗೂ 17ನೇ ವಾರ್ಷಿಕ ಶಿಲ್ಪಕಲಾ ಪ್ರದರ್ಶನ ಬಹುಮಾನಕ್ಕೆ ಆಯ್ಕೆಯಾದ ಕಲಾವಿದರ ಹೆಸರನ್ನು ಪ್ರಕಟಿಸಿದೆ. ಬಾಗಲಕೋಟೆಯ ಹಿರಿಯ ಕಲಾವಿದ ನಾಗಲಿಂಗಪ್ಪ ಗಂಗಪ್ಪ ಗಂಗೂರ (ಸಂಪ್ರದಾಯ ಶಿಲ್ಪ), ಉಡುಪಿಯ ರತ್ನಾಕರ ಎಸ್‌. ಗುಡಿಗಾರ್‌ (ಸಂಪ್ರದಾಯ ಶಿಲ್ಪ), ಬಳ್ಳಾರಿಯ ಪಿ. ಮುನಿರತ್ನಾಚಾರಿ (ಸಂಪ್ರದಾಯ ಶಿಲ್ಪ), ಕಲಬುರಗಿಯ ಮಾನಯ್ಯ ನಾ. ಬಡಿಗೇರ (ಎರಕ ಶಿಲ್ಪ) ಹಾಗೂ ಬೆಂಗಳೂರಿನ ಬಿ.ಸಿ. ಶಿವಕುಮಾರ್‌ (ಸಮಕಾಲೀನ ಶಿಲ್ಪ) ಅವರು …

Read More »

ರಾಜಕೀಯದಲ್ಲಿ ಇರದಿದ್ರೆ.ಬಿಜೆಪಿಯವರ ನಾಲಿಗೆ ಸೀಳುತ್ತಿದ್ದೆ: ಮಮತಾ ಬ್ಯಾನರ್ಜಿ

ಕೋಲ್ಕತಾ: ಪ್ರತಿಯೊಬ್ಬರನ್ನು ಕಳ್ಳರು ಎಂಬಂತೆ ಬಿಂಬಿಸುತ್ತಿರುವ ಭಾರತೀಯ ಜನತಾ ಪಕ್ಷದ ವಿರುದ್ಧ ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ (ಆಗಸ್ಟ್ 29) ವಾಗ್ದಾಳಿ ನಡೆಸಿದ್ದು, ಒಂದು ವೇಳೆ ರಾಜಕೀಯದಲ್ಲಿ ಇಲ್ಲದಿರುತ್ತಿದ್ದರೆ, ಬಿಜೆಪಿಯವರ ನಾಲಿಗೆ ಸೀಳಿ ಬಿಡುತ್ತಿದ್ದೆ ಎಂದು ಹೇಳಿದ್ದಾರೆ. ತೃಣಮೂಲ ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ಘಟಕದ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಮಮತಾ ಬ್ಯಾನರ್ಜಿ, ಕೇಸರಿ ಪಕ್ಷವನ್ನು ವಿರೋಧಿಸುತ್ತಿರುವ ರಾಜಕೀಯ ಪಕ್ಷಗಳನ್ನು ಮತ್ತು ಚುನಾಯಿತ ರಾಜ್ಯ ಸರ್ಕಾರವನ್ನು ಕಿತ್ತೊಗೆಯಲು ಕೇಂದ್ರ ತನಿಖಾ …

Read More »

ಈದ್ಗಾ ಮೈದಾನದಲ್ಲಿ ಗಣೇಶ; ಚುನಾವಣೆಗಾಗಿಯೇ ಎಂದು ಒಪ್ಪುವುದಿಲ್ಲ: ಜೋಶಿ

ಹುಬ್ಬಳ್ಳಿ: ”ಚುನಾವಣೆ ಬಂದಾಗ ಸಾಕಷ್ಟು ವಿಚಾರಗಳು ಮುನ್ನೆಲೆಗೆ ಬರುತ್ತವೆ. ಹೋರಾಟಗಳು ಕೂಡ ಹೆಚ್ಚಾಗುತ್ತವೆ. ಈ ನಿಟ್ಟಿನಲ್ಲಿ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ವಿಚಾರ ಇರಬಹುದೇನೋ ಗೊತ್ತಿಲ್ಲ. ಆದರೆ ಇದು ಚುನಾವಣೆಗಾಗಿಯೇ ಎದ್ದಿದೆ ಎಂದು ನಾನು ಒಪ್ಪುವುದಿಲ್ಲ” ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಹಾಗೂ ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.   ಸೋಮವಾರ ಇಲ್ಲಿನ ಭವಾನಿ ನಗರದ ಅವರ ನಿವಾಸಕ್ಕೆ ಭೇಟಿ ನೀಡಿದ ಪಾಲಿಕೆ ಮೇಯರ್ ಹಾಗೂ ಸದಸ್ಯರ ಸಭೆ …

Read More »

ಚಿರತೆ ಹಿಡಿಯುವಲ್ಲಿ ಸರ್ಕಾರ ಯಾವುದೇ ರೀತಿ ವಿಫಲ ಆಗಿಲ್ಲ: ಈರಣ್ಣ ಕಡಾಡಿ

ಬೆಳಗಾವಿಯಲ್ಲಿ ಚಿರತೆ ಪತ್ತೆಗೆ 25ನೇ ದಿನದ ಕಾರ್ಯಾಚರಣೆ ನಡೆಯುತ್ತಿರುವ ಹಿನ್ನೆಲೆ ಗಾಲ್ಫ್ ಕ್ಲಬ್‍ಗೆ ರಾಜ್ಯಸಭೆ ಸದಸ್ಯ ಈರಣ್ಣ ಕಡಾಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.   ಅರಣ್ಯಾಧಿಕಾರಿಗಳ ಜತೆಗೆ ಚಿರತೆ ಕಾರ್ಯಾಚರಣೆ ಬಗ್ಗೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಚರ್ಚೆ ನಡೆಸಿದರು. ಕಾರ್ಯಾಚರಣೆ ಬಗ್ಗೆ ಸಂಪೂರ್ಣ ವಿವರವನ್ನು ಪಡೆದ ಬಳಿಕ ಗಾಲ್ಫ್ ಕ್ಲಬ್‍ನಲ್ಲಿ ರೌಂಡ್ಸ್ ಹೊಡೆದ ಈರಣ್ಣ ಕಡಾಡಿ ಬೋನ್, ಕ್ಯಾಮರಾ ಇಟ್ಟ ಸ್ಥಳಗಳನ್ನು ಪರಿಶೀಲನೆ ನಡೆಸಿದರು.ನಂತರ ಮಾಧ್ಯಮಗಳ ಜೊತೆಗೆ …

Read More »

ಬೆಳಗಾವಿ ನಗರದಲ್ಲಿ ಅದ್ಧೂರಿ ಸಂಗೊಳ್ಳಿ ರಾಯಣ್ಣಾ ಶೋಭಾಯಾತ್ರೆ

ಬೆಳಗಾವಿ ನಗರದಲ್ಲಿ ಕರುನಾಡ ವಿಜಸೇನೆ ಜಿಲ್ಲಾ ಘಟಕ ಬೆಳಗಾವಿ ಜಿಲ್ಲೆ ಹಾಗೂ ರಾಯಣ್ಣನ ಅಭಿಮಾನಿ ಬಳಗದ ವತಿಯಿಂದ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣನ ಅದ್ಧೂರಿ ಉತ್ಸವವನ್ನು ಹಮ್ಮಿಕೊಳ್ಳಲಾಗಿತ್ತು. ಹೌದು ಕರುನಾಡ ವಿಜಯಸೇನೆ ಜಿಲ್ಲಾ ಘಟಕ ಬೆಳಗಾವಿ ಹಾಗೂ ರಾಯಣ್ಣನ ಅಭಿಮಾನಿ ಬಳಗದ ವತಿಯಿಂದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಅದ್ಧೂರಿ ಉತ್ಸವವನ್ನು ಹಮ್ಮಿಕೊಳ್ಳಲಾಗಿತ್ತು. ರಾಯಣ್ಣ ಉತ್ಸವ ಪ್ರಯುಕ್ತ ಬೃಹತ್ ಶೋಭಾಯಾತ್ರೆಯನ್ನೂ ಕೂಡ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಟ್ರ್ಯಾಕ್ಟರ್‍ನಲ್ಲಿ ಬೃಹತ್ ರಾಯಣ್ಣನ ಮೂರ್ತಿಯನ್ನು …

Read More »

ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬಹಿರ್ದೆಸೆಗೆ ತೆರಳಿದ್ದ ಮಹಿಳೆ ಕೊಲೆ

ಬಾಗಲಕೋಟೆ: ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಮಹಿಳೆಯನ್ನು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಬೀಳಗಿ ತಾಲೂಕಿನ ರಬಕವಿ ಗ್ರಾಮದ ಹೊರವಲಯದಲ್ಲಿ‌ ನಡೆದಿದೆ. ಸಂಗೀತಾ ಹರಿಜನ (36) ಕೊಲೆಯಾದವರು. ಕಳೆದ ರಾತ್ರಿ 9 ಗಂಟೆಗೆ ಬಹಿರ್ದೆಸೆಗೆ ಹೋಗಿದ್ದಾಗ ಘಟನೆ ನಡೆದಿದೆ. ತಲೆ ಮತ್ತು ಕುತ್ತಿಗೆಗೆ ದುಷ್ಕರ್ಮಿಗಳು ಹಲ್ಲೆ ಮಾಡಿದ್ದಾರೆ. ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಆರೋಪಿಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಎಸ್​ಪಿ …

Read More »

ಪ್ರಮುಖ ನಗರಗಳಲ್ಲಿ 5G ಸೇವೆ ಪ್ರಾರಂಭಿಸಲು ನಿರ್ಧರಿಸಲಾಗಿದೆ ಎಂದ ಅಂಬಾನಿ

ಮುಂಬೈ(ಮಹಾರಾಷ್ಟ್ರ): ದೇಶದಲ್ಲಿ ಈಗಾಗಲೇ 5G ತರಂಗಾಂತರ ಹರಾಜು ಪ್ರಕ್ರಿಯೆ ಪೂರ್ಣಗೊಂಡಿದೆ. ಮುಖೇಶ್ ಅಂಬಾನಿ ಒಡೆತನದ ಜಿಯೋ ಸಂಸ್ಥೆ 7,864 ಕೋಟಿ ರೂಪಾಯಿ ವ್ಯಯಿಸಿ ಹೆಚ್ಚಿನ ಸ್ಪೆಕ್ಟ್ರಮ್‌ ಖರೀದಿಸಿದೆ. ಇದರ ಬೆನ್ನಲ್ಲೇ ಇಂದು ಅಂಬಾನಿ ಮಹತ್ವದ ಘೋಷಣೆ ಮಾಡಿದ್ದಾರೆ. ರಿಲಯನ್ಸ್​ ಇಂಡಸ್ಟ್ರೀಸ್​​ನ 45ನೇ ವಾರ್ಷಿಕ ಸಭೆಯ ಉದ್ದೇಶಿಸಿ ಮಾತನಾಡಿರುವ ಮುಖೇಶ್ ಅಂಬಾನಿ, ಗ್ರಾಹಕರಿಗೆ ದೀಪಾವಳಿ ಗಿಫ್ಟ್​ ನೀಡಿದ್ದಾರೆ. ವಿಶ್ವದ ಅತ್ಯಂತ ವೇಗದ 5ಜಿ ರೋಲ್​​ಔಟ್‌ಗೆ ಸಿದ್ಧಗೊಂಡಿದೆ. ದೀಪಾವಳಿ ಹೊತ್ತಿಗೆ ದೆಹಲಿ, ಮುಂಬೈ, ಚೆನ್ನೈ …

Read More »

ಶಿವಮೂರ್ತಿ ಶರಣರು, ಚಿತ್ರದುರ್ಗದಿಂದ ಮಹಾರಾಷ್ಟ್ರಕ್ಕೆ ತೆರಳುತ್ತಿದ್ದ ವೇಳೆ ಹಾವೇರಿ ಜಿಲ್ಲೆಯ ಬಂಕಾಪುರ ಹೆದ್ದಾರಿಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರು: ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಸಂಬಂಧ ಪೋಕ್ಸೋ ಕಾಯಿದೆಯಡಿ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರನ್ನು ಪೊಲೀಸರು ಬಂಧಿಸಿದ್ದಾರೆ. ಶಿವಮೂರ್ತಿ ಶರಣರು, ಚಿತ್ರದುರ್ಗದಿಂದ ಮಹಾರಾಷ್ಟ್ರಕ್ಕೆ ತೆರಳುತ್ತಿದ್ದ ವೇಳೆ ಹಾವೇರಿ ಜಿಲ್ಲೆಯ ಬಂಕಾಪುರ ಹೆದ್ದಾರಿಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಲಕಿಯ ಆರೋಪದ ಹಿನ್ನೆಲೆಯಲ್ಲಿ ಎಫ್ ಐ ಆರ್ ದಾಖಲಾಗಿತ್ತು, ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಸ್ವಾಮೀಜಿಯನ್ನ ಬಂಧಿಸಿ ಚಿತ್ರದುರ್ಗಕ್ಕೆ ಕರೆದೊಯ್ದಿದ್ದಾರೆ. ಶ್ರೀಮಠದ ಪೀಠಾಧ್ಯಕ್ಷರದ ಶ್ರೀ ಡಾ.ಶಿವಮೂರ್ತಿ ಮುರುಘಾ ಶರಣರ …

Read More »

ಹಿಂದೂ-ಮುಸ್ಲಿಮ್ ಐಕ್ಯತೆಗೆ ಸಾಕ್ಷಿ: ಕೋಮು, ಧಾರ್ಮಿಕ ಸೌಹಾರ್ದತೆಗೆ ಗದಗ ಜಿಲ್ಲೆಯ ಈ ಗ್ರಾಮಸ್ಥರು ಮಾದರಿ!

ಗದಗ: ರಾಜ್ಯದ ವಿವಿಧೆಡೆ ಕೋಮುಗಲಭೆಗಳು ನಡೆಯುತ್ತಿರುವ ಹೊತ್ತಿನಲ್ಲಿ ಇಲ್ಲಿ ಹಿಂದೂ-ಮುಸ್ಲಿಮರು ಒಂದೆಡೆ ಸೇರಿ ಗಣೇಶ ಹಬ್ಬವನ್ನು ಅದ್ಧೂರಿಯಾಗಿ ಆಚರಿಸುತ್ತಾರೆ. ಗದಗ ಪಟ್ಟಣದಿಂದ 5 ಕಿಲೋ ಮೀಟರ್ ದೂರದಲ್ಲಿರುವ ಕಳಸಾಪುರ ಕಳೆದ ಎಂಟು ವರ್ಷಗಳಿಂದ ಕೋಮು ಮತ್ತು ಧಾರ್ಮಿಕ ಸೌಹಾರ್ದತೆಗೆ ಮಾದರಿಯಾಗಿದೆ.   ವಿಶಿಷ್ಟ ಆಚರಣೆಯನ್ನು ವೀಕ್ಷಿಸಲು ಸುತ್ತಮುತ್ತಲಿನ ಗ್ರಾಮಗಳು ಮತ್ತು ಗದಗ ಪಟ್ಟಣದ ಜನರು ಈ ಗ್ರಾಮಕ್ಕೆ ಭೇಟಿ ನೀಡುತ್ತಾರೆ. ಕಳಸಾಪುರ ಗಣೇಶನನ್ನು ಈಗ ‘ಕೋಮು ಸೌಹಾರ್ದ ಗಣೇಶ’ ಎಂದು ಕರೆಯುತ್ತಾರೆ. …

Read More »

ಮಾಧ್ಯಮಗಳಲ್ಲಿ ಮುರುಘಾ ಶ್ರೀಗಳ ಬಂಧನದ ಕುರಿತು ಮಾಹಿತಿ ಬರುತ್ತಿವೆ. ಬಂಧನವಾಗಿದ್ದರೆ ನನಗೆ ಮಾಹಿತಿ ದೊರೆಯುತ್ತಿತ್ತು.:

ಹುಬ್ಬಳ್ಳಿ: ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ದಾಖಲಾಗಿರುವ ಪೊಕ್ಸೊ ಪ್ರಕರಣದ ಅಡಿಯಲ್ಲಿ ಎಲ್ಲ ಆಯಾಮಗಳಲ್ಲೂ ತನಿಖೆ ನಡೆಯುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರಿಂದಲೂ ಒತ್ತಡ ಬಂದಿಲ್ಲ ಎಂದು ಅಪರಾಧ ಮತ್ತು ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಹೇಳಿದರು.   ಸೋಮವಾರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಪ್ರಕರಣಕ್ಕೆ ಸಂಬಂಧಿಸಿದಂತೆ ಮಕ್ಕಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಅವರ ಪೋಷಕರನ್ನು ಸಹ ಸಂಪರ್ಕಿಸಿದ್ದು, ಮಾಹಿತಿಯನ್ನು ಸಂಗ್ರಹಿಸಲು ಮುಂದಾಗಿದ್ದೇವೆ. ಪೊಕ್ಸೊ …

Read More »