Breaking News

Yearly Archives: 2022

ಬೆಳಗಾವಿಯಲ್ಲಿ 75 ಮೀ ಉದ್ದದ ಧ್ವಜ ಹಿಡಿದು 7.5 ಕಿ.ಮಿ ಪಾದಯಾತ್ರೆ

ಆಜಾದಿಕಾ ಅಮೃತಮಹೋತ್ಸವ ಪ್ರಯುಕ್ತ ದಾಲ್ಮಿಯಾ ಭಾರತ್ ಫೌಂಡೇಶನ್ ದೀಕ್ಷಾ ಬೆಳಗಾವಿ ವತಿಯಿಂದ 7.5 ಕಿಮಿ ಪಾದಯಾತ್ರೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ 75 ಮೀಟರ್ ಉದ್ದದ ರಾಷ್ಟ್ರಧ್ವಜದೊಂದಿಗೆ 7.5 ಕಿ.ಮಿ ಕಾಲ್ನಡಿಗೆಯನ್ನು ಹಮ್ಮಿಕೊಳ್ಳಲಾಗಿತ್ತು.ಈ ವೇಳೆ ಕಾಲ್ನಡಿಗೆಯಲ್ಲಿ 75 ಜನ ಭಾಗಿಯಾಗಿದ್ದರು. ಇಂದು ಮುಂಜಾನೆ 7:50ಕ್ಕೆ 75 ಜನ ಕೈಯ್ಯಲ್ಲಿ 75 ಮೀ ರಾಷ್ಟ್ರಧ್ವಜವನ್ನು ಹಿಡಿದು ಮಾನವ ಸರಪಳಿಯನ್ನು ರಚಿಸಿ ಕಣಬರ್ಗಿಯ ಸಿದ್ದೇಶ್ವರ ದೇವಸ್ಥಾನಕ್ಕೆ ತಲುಪಿದರು

Read More »

ಮೂರು ದಿನಗಳಿಂದ ವ್ಯಾಪಕ ಮಳೆ ಹಾನಿಯನ್ನು ಪರಿಶೀಲಿಸಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಕಳೆದ ಮೂರು ದಿನಗಳಿಂದ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಮಳೆಯ ನಡುವೆಯೂ ನಗರದ ವಿವಿಧ ಪ್ರದೇಶಗಳಲ್ಲಿ ಮಿಂಚಿನ ಸಂಚಾರ ಕೈಗೊಂಡು ಹಾನಿಯನ್ನು ಪರಿಶೀಲಿಸಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು, ನೀರು ನುಗ್ಗಿದ ಮನೆಗಳಿಗೆ 24 ಗಂಟೆಗಳಲ್ಲಿ ತಲಾ ಹತ್ತು ಸಾವಿರ ರೂಪಾಯಿ ಪರಿಹಾರವನ್ನು ನೀಡಲಾಗುವುದು ಎಂದು ತಿಳಿಸಿದರು. ಯಳ್ಳೂರ ರಸ್ತೆಯ ಕೇಶವ ನಗರ, ಭಾರತ ನಗರ, ಅನಗೋಳದ ರಘುನಾಥ ಪೇಟ ಮತ್ತಿತರ ಕಡೆಗಳಲ್ಲಿ ಸಂಚರಿಸಿದ ಅವರು, ಯಾವುದೇ ಕಾರಕ್ಕೂ ಪರಿಹಾರ …

Read More »

ಬೆಳಗಾವಿ ಸ್ಮಾರ್ಟಸಿಟಿ ಪಟ್ಟಿಗೆ ಸೇರಿದ ನಂತರ ಇದರ ಚಿತ್ರಣವೇ ಬದಲ: ಆಕ್ರೋಶಗೊಂಡ ಜನ

ಬೆಳಗಾವಿ ಸ್ಮಾರ್ಟಸಿಟಿ ಪಟ್ಟಿಗೆ ಸೇರಿದ ನಂತರ ಇದರ ಚಿತ್ರಣವೇ ಬದಲಾಗುತ್ತದೆ ಎಂದು ಜನ ಬಯಸಿದ್ದರು. ಆದರೆ ಜನರ ಬಯಕೆ ಹುಸಿಯಾಗಿದೆ. ಕುಂದಾನಗರಿಯ ಹಳೆ ಗಾಂಧಿ ನಗರ ಲಕ್ಷ್ಮೀ ಗಲ್ಲಿ ಅವ್ಯವಸ್ಥೆಯ ಆಗರವಾಗಿದೆ. ಇದರಿಂದ ಆಕ್ರೋಶಗೊಂಡಿರುವ ಇಲ್ಲಿನ ನಿವಾಸಿಗಳು ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ರಸ್ತೆಯಲ್ಲಿ ನಿಂತಿರುವ ದೊಡ್ಡ ಪ್ರಮಾಣದ ನೀರು..ಕಟ್ ಆಗಿ ಜೋತಾಡುತ್ತಿರುವ ವಿದ್ಯುತ್ ತಂತಿ…ರಸ್ತೆ ಪಕ್ಕ ಪಾರ್ಕಿಂಗ್ ಮಾಡಿರುವ ಲಾರಿ..ನೀರಿನಲ್ಲಿಯೇ ನಿಂತು ಪ್ರತಿಭಟನೆ ಮಾಡುತ್ತಿರುವ ನಿವಾಸಿಗಳು..ಹೌದು ನೀವು …

Read More »

ಹೆಣ ಕಂಡ್ರೆ ಓಡೋಡಿ ಬರೋ ಶೋಭಾ ಕರಂದ್ಲಾಜೆ ಸಮಸ್ಯೆಗಳಿಗೆ ಬಾಯಿ ಬಿಡಲ್ಲ ಯಾಕೆ?

ಬೆಂಗಳೂರು: ಸಂಸದೆ ಶೋಭಾ ಕರಂದ್ಲಾಜೆ (Shobha Karandlaje) ವಿರುದ್ಧ ಕಾಂಗ್ರೆಸ್​ ಟ್ವೀಟ್​ ಮಾಡಿ ಕಿಡಿಕಾರಿದ್ದಾರೆ. ರೈತ ವಿರೋಧಿ ಬಿಜೆಪಿ ಸರ್ಕಾರ ರೈತರಿಗೆ ಮೇಲಿಂದ ಮೇಲೆ ಅನ್ಯಾಯವೆಸಗುತ್ತಿದೆ ಎಂದು ಕಾಂಗ್ರೆಸ್ (Congress) ಆಕ್ರೋಶ ವ್ಯಕ್ತಪಡಿಸಿದೆ. ಪತ್ರಿಕೆಯೊಂದರ ‘ರೈತರಿಗೂ ಬಡ್ಡಿ ಬರೆ’ ಎಂಬ ವರದಿಯ ತುಣುಕೊಂದನ್ನು ಟ್ವೀಟ್ (Tweet) ಮಾಡಿರುವ ಕಾಂಗ್ರೆಸ್, ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಹೆಣ ಕಂಡರೆ ಓಡೋಡಿ ಬರ್ತಾರೆ, ಸಮಸ್ಯೆ ಕೇಳಲ್ಲ ಯಾಕೆ? ‘ರೈತ ವಿರೋಧಿ ಬಿಜೆಪಿ ಸರ್ಕಾರ ರೈತರಿಗೆ …

Read More »

ಅನೈತಿಕ ಸಂಬಂಧಕ್ಕೆ ಅಡ್ಡಿ ಬಂದ ತಮ್ಮನಿಗೆ ಮುಹೂರ್ತ, ಸುಪಾರಿ ಕೊಟ್ಟು ಕೊಲ್ಲಿಸಿದ ಅಕ್ಕಂದಿರು!

ಕಲಬುರಗಿ: ರಕ್ಷಾ ಬಂಧನ (Raksha Bandhan) ಇನ್ನೇನು ಹತ್ತಿರದಲ್ಲೇ ಇದೆ. ರಕ್ಷಾ ಬಂಧನ ಅಂದರೆ ಸಹೋದರ (Brother), ಸಹೋದರಿಯರ (Sister) ಬಾಂಧವ್ಯವನ್ನು (Relationship) ಸಾರುವ ಹಬ್ಬ (Festival) ಇದು. ಸಹೋದರಿ ತನ್ನ ಸಹೋದರನಿಗೆ ರಾಖಿ (Rakhi) ಕಟ್ಟಿ, ಶುಭವಾಗಲಿ ಅಂತ ಹಾರೈಸುತ್ತಾಳೆ. ರಾಖಿ ಕಟ್ಟಿಸಿಕೊಂಡ ಸಹೋದರ ನಿನ್ನ ರಕ್ಷಣೆ ಮಾಡುತ್ತೇನೆ ಅಂತ ವಾಗ್ದಾನ ಮಾಡುತ್ತಾನೆ. ಆದರೆ ಕಲಬುರಗಿಯಲ್ಲಿ (Kalaburagi) ಇಂತಹ ಪವಿತ್ರವಾದ ಅಕ್ಕ, ತಮ್ಮನ ಸಂಬಂಧಕ್ಕೆ ಮಹಿಳೆಯರಿಬ್ಬರು ಮಸಿ ಎರಚಿದ್ದಾರೆ. ತನ್ನ ತಮ್ಮನನ್ನೇ …

Read More »

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಲಯ 2ರ ಬಿಲ್​​ ಕಲೆಕ್ಟರ್ ವೆಂಕಟೇಶ ದಾಸರ್​ ಎಸಿಬಿ ಬಲೆಗೆ

ಧಾರವಾಡ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ (Hubli-Dharwad Municipal Corporation ) ವಲಯ 2ರ ಬಿಲ್​​ ಕಲೆಕ್ಟರ್ ವೆಂಕಟೇಶ ದಾಸರ್​ ಎಸಿಬಿ ಬಲೆಗೆ ಬಿದ್ದಿದ್ದಾರೆ. ಪಹಣಿ ನೀಡಲು ಬಾರ್ & ರೆಸ್ಟೋರೆಂಟ್ ಒಂದರಲ್ಲಿ ಗುರುರಾಜ ಗಾಳಿ ಎಂಬುವರಿಂದ 6,000 ರೂ. ಲಂಚ ಸ್ವೀಕರಿಸುತ್ತಿದ್ದರು. ಈ ವೇಳೆ ಎಸಿಬಿ ಡಿವೈಎಸ್​ಪಿ ಮಹಾಂತೇಶ್ವರ ಜಿದ್ದಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ವೆಂಕಟೇಶ ದಾಸರ್ ಅವರನ್ನು ವಶಕ್ಕೆ ಪಡೆದಿದ್ದಾರೆ. ಇಬ್ಬರು IPS​ ಅಧಿಕಾರಿಗಳ ವರ್ಗಾವಣೆ ಬೆಂಗಳೂರು: ಸರ್ಕಾರ ಇಬ್ಬರು IPS​ ಅಧಿಕಾರಿಗಳನ್ನು …

Read More »

ಹುಬ್ಬಳ್ಳಿಯ ಬಿವಿಬಿ ಕಾಲೇಜ್​ ಕ್ಯಾಂಪಸ್‌ನಲ್ಲಿ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಅವರ ಕಾರು ಅಪಘಾತವಾಗಿದೆ.

ಹುಬ್ಬಳ್ಳಿ: ಹುಬ್ಬಳ್ಳಿಯ (Hubli) ಬಿವಿಬಿ (BVB) ಕಾಲೇಜ್​ ಕ್ಯಾಂಪಸ್‌ನಲ್ಲಿ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ( Basavaraj Horatti ) ಅವರ ಕಾರು ಅಪಘಾತವಾಗಿದೆ. ಬೈಕ್ ಸವಾರ ಕೆಂಚಪ್ಪಗೆ ಗಂಭೀರ ಗಾಯವಾಗಿದ್ದು, ಕಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳು ಕೆಂಚಪ್ಪ ಸವದತ್ತಿ ‌ಮೂಲದ ಜೆಸಿಬಿ ಆಪರೇಟರ್ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಉತ್ತರ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಸವರಾಜ ಹೊರಟ್ಟಿ ಅವರು ಹುಬ್ಬಳ್ಳಿಯ ಬಿವಿಬಿ ಕಾಲೇಜ ಕ್ಯಾಂಪಸ್‌ನಲ್ಲಿ ಕಾರ್ಯಕ್ರಮವೊಂದು …

Read More »

ಕರ್ನಾಟಕದಲ್ಲಿ ಮಳೆಯಿಂದ 1 ವಾರದಲ್ಲಿ 34 ಜನ ಸಾವು; ಈ ರಾಜ್ಯಗಳಲ್ಲಿ ಹೈ ಅಲರ್ಟ್​ ಘೋಷಣೆ

ಬೆಂಗಳೂರು: ಕರ್ನಾಟಕದಲ್ಲಿ ಇನ್ನೂ ಮಳೆಯ ಆರ್ಭಟ (Rainfall) ಮುಂದುವರೆದಿದೆ. ರಾಜ್ಯಾದ್ಯಂತ ಕಳೆದೊಂದು ವಾರದಲ್ಲಿ ಮಳೆಯಿಂದ ಮೃತಪಟ್ಟವರ ಸಂಖ್ಯೆ 34ಕ್ಕೆ ಏರಿಕೆಯಾಗಿದೆ. ಕರ್ನಾಟಕದ (Karnataka Rain) ಹಲವು ಜಿಲ್ಲೆಗಳಲ್ಲಿ ಇಂದು ಕೂಡ ಆರೆಂಜ್ ಅಲರ್ಟ್ (Orange Alert) ಘೋಷಿಸಲಾಗಿದೆ. ನೆರೆಯ ರಾಜ್ಯಗಳಲ್ಲೂ ವರುಣನ ಅಬ್ಬರ ಮುಂದುವರೆದಿದ್ದು, ಮುಂದಿನ ಕೆಲವು ದಿನಗಳವರೆಗೆ ಮಹಾರಾಷ್ಟ್ರ, ಕೇರಳ, ಒಡಿಶಾ ಸೇರಿದಂತೆ ಹಲವೆಡೆ ಭಾರೀ ಮಳೆಯಾಗಲಿದೆ. ಆ. 1ರಿಂದ ರಾಜ್ಯದ ವಿವಿಧೆಡೆ ಮಳೆ ಚುರುಕುಗೊಂಡ ಬಳಿಕ ಶನಿವಾರದವರೆಗೆಮಳೆಸಂಬಂಧಿ …

Read More »

ಕೆ.ಎಸ್. ಈಶ್ವರಪ್ಪ, ರಮೇಶ್ ಜಾರಕಿಹೊಳಿ, ಲಕ್ಷ್ಮಣ ಸವದಿ, ಸಿ.ಪಿ. ಯೋಗೇಶ್ವರ್ ಸಂಪುಟ ಸೇರ್ಪಡೆಸಾಧ್ಯತೆ: ಬೊಮ್ಮಾಯಿ

ಬೆಂಗಳೂರು : ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಿಜೆಪಿಯ ಹಿರಿಯ ನಾಯಕರೊಂದಿಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದ್ದು, ಆಗಸ್ಟ್ ಅಂತ್ಯಕ್ಕೆ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಹೇಳಲಾಗುತ್ತಿದೆ.     ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ನಿರ್ಧರಿಸಿದ್ದು, ಈ ಬಗ್ಗೆ ಈಗಾಗಲೇ ಬಿಜೆಪಿ ಹೈಕಮಾಂಡ್ ಜೊತೆಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದ್ದು, ಖಾಲಿ ಇರುವ ಒಟ್ಟು 5 ಸಚಿವ …

Read More »

15ರ ಬಳಿಕ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ: ಶಿವರಾಜ ತಂಗಡಗಿ

ಹುಲಗಿ (ಕೊಪ್ಪಳ): ‘ಆಗಸ್ಟ್‌ 15ರ ಬಳಿಕ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗಲಿದ್ದಾರೆ. ನಾನು ನುಡಿದ ಭವಿಷ್ಯ ನಿಜವಾಗಲಿದೆ’ ಎಂದು ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಶಿವರಾಜ ತಂಗಡಗಿ ಹೇಳಿದರು. ಹುಲಗಿಯಲ್ಲಿ ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಬಸವರಾಜ ಬೊಮ್ಮಾಯಿ ಅಧಿಕಾರ ವಹಿಸಿಕೊಂಡ ಬಳಿಕ ರಾಜ್ಯಕ್ಕೆ ಹೊಸ ಮುಖ್ಯಮಂತ್ರಿ ಬರುತ್ತಾರೆ ಎಂದು ಹಿಂದೆ ಹೇಳಿದ್ದೆ. ಆ ಕಾಲ ಈಗ ಸನ್ನಿಹಿತವಾಗಿದೆ’ ಎಂದರು. ‘ಸಿದ್ದರಾಮಯ್ಯ ಅವರ 75ನೇ ಜನ್ಮದಿನದ ಕಾರ್ಯಕ್ರಮದ ಬಳಿಕ ಕಾಂಗ್ರೆಸ್‌ ಮೂರು …

Read More »