ಬೆಂಗಳೂರು : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ 108 ಪೊಲೀಸ್ ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿ ಆದೇಶಿಸಲಾಗಿದೆ. ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಲಾಗಿದೆ. 108 ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತಂತೆ ಡೈರಕ್ಟರ್ ಜನರಲ್ ಮತ್ತು ಇನ್ಸ್ ಪೆಕ್ಟರ್ ಜನರಲ್ ಆಫ್ ಪೊಲೀಸ್ ಆದೇಶ ಹೊರಡಿಸಿದೆ.
Read More »Yearly Archives: 2022
ಕಾಸು ಕೊಟ್ಟರೆ ಪ್ರಾಯೋಗಿಕ ಪರೀಕ್ಷೆ ಪಾಸ್..
ದಾವಣಗೆರೆ: ಪಿಎಸ್ಐ ನೇಮಕಾತಿ ಹಗರಣದ ನಂತರ ಭ್ರಷ್ಟಾಚಾರದ ವಾಸನೆ ಇದೀಗ ಐಟಿಐ ಪರೀಕ್ಷೆಗಳತ್ತಲೂ ಹರಡಿದೆ. ಮೂರು ಸಾವಿರ ರೂ. ಕೈಗಿಟ್ಟರೆ ಸಲೀಸಾಗಿ ನಕಲು ಮಾಡಬಹುದು! ಪ್ರಯೋಗಾಲಯದಲ್ಲಿ ಪರೀಕ್ಷಾ ಮೇಲ್ವಿಚಾರಕರ ಎದುರು ಯಂತ್ರಗಳ ದುರಸ್ತಿ ಹಾಗೂ ಜೋಡಣೆ ಮಾಡುವುದು ನಿಯಮ. ಆದರೆ, ಹೊರಗಿನಿಂದ ರೆಡಿ ಮಾಡಿಸಿಕೊಂಡು ಬಂದವರಿಗೂ ಅಂಕಗಳು ಗ್ಯಾರಂಟಿ! ದಾವಣಗೆರೆ ಜಿಲ್ಲೆಯ ಮಾಯಕೊಂಡದ ಸರ್ಕಾರಿ ಐಟಿಐ ಕಾಲೇಜಿನಲ್ಲಿ ಪರೀಕ್ಷಾ ಅಕ್ರಮ ನಡೆದಿರುವ ಆರೋಪ ಕೇಳಿಬಂದಿದೆ. ಐಟಿಐ ಫಿಟ್ಟರ್ ವಿಭಾಗದ ಎರಡನೇ ವರ್ಷದ …
Read More »ಉದ್ದ ತೋಳಿನ ಶರ್ಟ್ ಧರಿಸಿ ಬಂದ ಪರೀಕ್ಷಾರ್ಥಿಗಳಿಗೆ ಕೆಪಿಟಿಸಿಎಲ್ ನೀಡಿತು ಶಾಕ್! ಬಟ್ಟೆ ಕಟ್ ಕಟ್
ಕೊಪ್ಪಳ: ರಾಜ್ಯಾದ್ಯಂತ ಇಂದು ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆ ನಡೆಯುತ್ತಿದೆ. ಕೊಪ್ಪಳದಲ್ಲಿ ಪರೀಕ್ಷೆ ಬರೆಯಲು ತುಂಬು ತೋಳಿನ ಅಂಗಿ ಹಾಕಿಕೊಂಡು ಬಂದವರಿಗೆ ಪರೀಕ್ಷಾ ಸಿಬ್ಬಂದಿ ತೋಳು ಕತ್ತರಿಸುವ ಮೂಲಕ ಶಾಕ್ ನೀಡಿದ್ದಾರೆ. ಪಿಎಸ್ಐ ನೇಮಕಾತಿಯಲ್ಲಿನ ಅಕ್ರಮದಿಂದಾಗಿ ಇತರ ನೇಮಕಾತಿ ಪರೀಕ್ಷೆಗಳಿಗೆ ಕಟ್ಟುನಿಟ್ಟಿನ ಕಟ್ಟಳೆ ವಿಧಿಸಲಾಗಿದೆ. ಇಂದು ನಡೆಯುತ್ತಿರುವ ಪರೀಕ್ಷೆಗೆ ತುಂಬು ತೋಳಿನ ಅಂಗಿ ಹಾಕಿ ಬಂದವರನ್ನು ಪರೀಕ್ಷಾ ಕೇಂದ್ರದ ಒಳಗೆ ಬಿಟ್ಟಿಲ್ಲ. ಬೇರೆ ಶರ್ಟ್ ಧರಿಸಿ ಬರುವಂತೆ …
Read More »ಬಿಗ್ಬಾಸ್ ಕನ್ನಡ OTTಗೆ ಚಾಲನೆ: ಇಲ್ಲಿದೆ 16 ಸ್ಪರ್ಧಿಗಳ ಪಟ್ಟಿ
ಬೆಂಗಳೂರು: ಬಿಗ್ಬಾಸ್ ಕನ್ನಡ ಮೊದಲ ಒಟಿಟಿ ಆವೃತ್ತಿಗೆ ಅದ್ದೂರಿ ಚಾಲನೆ ಸಿಕ್ಕಿದೆ. ಮೊದಲ ಸ್ಪರ್ಧಿಯಾಗಿ ಆರ್ಯವರ್ಧನ್ ಗುರೂಜಿ ಸೇರಿ 16 ಮಂದಿ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಹೀಗಾಗಿ, ಸೀಸನ್ 9ಕ್ಕೂ ಮುನ್ನ ಪ್ರೇಕ್ಷಕರಿಗೆ ಒಟಿಟಿ ಆವೃತ್ತಿ ಮನರಂಜನೆಯ ಬುತ್ತಿ ಹೊತ್ತು ತರಲಿದೆ. ಕನ್ನಡದ ಸೂಪರ್ ಸ್ಟಾರ್ ಕಿಚ್ಚ ಸುದೀಪ್ ಎಂದಿನಂತೆ ತಮ್ಮ ವಿಶಿಷ್ಟ ಶೈಲಿಯ ಮೂಲಕ ಕಾರ್ಯಕ್ರಮವನ್ನು ನಡೆಸಿಕೊಡುತ್ತಿದ್ದಾರೆ. ಬಿಗ್ಬಾಸ್ ಒಟಿಟಿ ಸ್ಪರ್ಧಿಗಳು ಯಾರ್ಯಾರು? 1 ಆರ್ಯ ವರ್ಧನ್ ಗುರೂಜಿ …
Read More »ಭಾರತದ ನೂತನ ಉಪರಾಷ್ಟ್ರಪತಿಯಾಗಿ ‘ಜಗದೀಪ್ ಧನಕರ್’ ಆಯ್ಕೆ
ನವದೆಹಲಿ : ಭಾರತದ ನೂತನ ಉಪರಾಷ್ಟ್ರಪತಿಯಾಗಿ ಎನ್ಡಿಎ ಅಭ್ಯರ್ಥಿ ಜಗದೀಪ್ ಧನಕರ್ ಆಯ್ಕೆಯಾಗಿದ್ದಾರೆ. ಪ್ರಸ್ತುತ ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿರುವ ಧನಕರ್, ಪ್ರತಿಪಕ್ಷಗಳ ಅಭ್ಯರ್ಥಿ ಮಾರ್ಗರೆಟ್ ಆಳ್ವಾ ಅವ್ರನ್ನ ಮಣಿಸಿ, ಉಪರಾಷ್ಟ್ರಪತಿ ಗದ್ದುಗೆ ಏರಿದ್ದಾರೆ. ಅಂದ್ಹಾಗೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ತೃಣಮೂಲ ಕಾಂಗ್ರೆಸ್ ಶ್ರೀಮತಿ ಆಳ್ವಾ ಅವ್ರ ಹೆಸರನ್ನ ನಿರ್ಧರಿಸುವಾಗ ಸಮಾಲೋಚನೆಗಳ ಕೊರತೆಯಿದೆ ಎಂದು ಆರೋಪಿಸಿ, ಮತದಾನದಿಂದ ದೂರ ಉಳಿದಿತ್ತು. ಈ ಮೂಲಕ ಪ್ರತಿಪಕ್ಷಗಳ ಒಗ್ಗಟ್ಟಿನಲ್ಲಿ ಬಿರುಕುಗಳು …
Read More »ಗದಗ: ಹೊಟ್ಟೆಯೊಳಗೆ ಬೆಳೆದ ಬೃಹತ್ ಗಡ್ಡೆ, ವೃದ್ಧನ ನರಕಯಾತನೆ
ಗದಗ : ವೃದ್ಧರೊಬ್ಬರ ಹೊಟ್ಟೆಯಲ್ಲಿ ಗಡ್ಡೆ ಬೆಳೆದು ಅವರು ನಡೆಯಲಾರದ ಪರಿಸ್ಥಿತಿಯಲ್ಲಿದ್ದಾರೆ. ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್ ಬುಲ್ಡೋಜರ್ ನಗರ ನಿವಾಸಿ ಹನುಮಂತಪ್ಪ (69) ತಮ್ಮ ಹೊಟ್ಟೆಯಲ್ಲಿರುವ ಈ ಗಡ್ಡೆಯಿಂದಾಗಿ ನಿತ್ಯ ನರಕಯಾತನೆ ಅನುಭವಿಸುತ್ತಿದ್ದಾರೆ. ಅಲೆಮಾರಿ ಜನಾಂಗದವರಾದ ಇವರು ಕಳೆದ ಹಲವು ವರ್ಷಗಳಿಂದ ಈ ರೋಗಕ್ಕೆ ತುತ್ತಾಗಿದ್ದಾರೆ. ಗಡ್ಡೆ ದೊಡ್ಡದಾಗಿ ಹೊಟ್ಟೆಯೊಳಗಿನಿಂದ ಜೋತು ಬಿದ್ದಿದೆ. ಯಾವುದೇ ನೋವು ಇಲ್ಲದಿದ್ದರೂ ಓಡಾಡಲು ಇವರಿಗೆ ಕಷ್ಟವಾಗುತ್ತಿದೆ. ಸದ್ಯ ಪತ್ನಿಯೇ ಇವರಿಗೆ ಆಧಾರ. ದುಡಿದು ಸಾಕಲು …
Read More »ರಾಜ್ಯದ ಸಂಸದರಿಗೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಕೈ ತಪ್ಪುವ ಸಾಧ್ಯತೆ ,
ಬೆಂಗಳೂರು: 2024 ರ ಲೋಕಸಭಾ ಚುನಾವಣೆಯ ವೇಳೆಗೆ ಬಿಜೆಪಿಯಲ್ಲಿ ಭಾರಿ ಬದಲಾವಣೆಯಾಗಲಿದ್ದು ಕಾರ್ಯತಂತ್ರ ನಡೆಯುತ್ತಿದೆ. ಹಿರಿಯ ಸಂಸದರಿಗೆ ಟಿಕೆಟ್ ನೀಡುವುದು ಬಹುತೇಕ ಅನುಮಾನ. ಹೊಸ ಮುಖಗಳಿಗೆ ಈಗಾಗಲೇ ಸದ್ದಿಲ್ಲದೇ ಶೋಧ ಶುರುವಾಗಿದೆ. 70-75 ವರ್ಷ ದಾಟಿದ ಸಂಸದರಿಗೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕೊಕ್ ನೀಡುವುದು ಖಚಿತವಾಗಿದ್ದು, ಯುವಕರತ್ತ ಕೇಸರಿ ಪಕ್ಷದ ಹೈಕಮಾಂಡ್ ಮನಸ್ಸು ಮಾಡಿದೆ. ಮೂಲಗಳ ಪ್ರಕಾರ, ಆರರಿಂದ ಏಳು ಲೋಕಸಭಾ ಕ್ಷೇತ್ರದ ಹಾಲಿ ಎಂಪಿಗಳನ್ನು ಕೈ ಬಿಡುವ ಸಾಧ್ಯತೆ …
Read More »2023ರ ವಿಧಾನಸಭೆ ಚುನಾವಣೆಗೆ ತಾಲೀಮು
ಬೆಂಗಳೂರು: ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗಲೇ ರಾಜ್ಯ ರಾಜಕಾರಣದಲ್ಲಿ ಚಟುವಟಿಕೆಗಳು ಗರಿಗೆದರಿವೆ. ಜೆಡಿಎಸ್ ಜನತಾ ಜಲಧಾರೆ ಸಮಾವೇಶದ ಮೂಲಕ ಈಗಾಗಲೇ ಚುನಾವಣಾ ರಣಕಹಳೆ ಮೊಳಗಿಸಿದೆ. ದಾವಣಗೆರೆಯಲ್ಲಿ ಸಿದ್ದರಾಮೋತ್ಸವ ಆಚರಿಸುವ ಮೂಲಕ ಕಾಂಗ್ರೆಸ್ ಶಕ್ತಿ ಪ್ರದರ್ಶನ ನಡೆಸಿದೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಕರ್ನಾಟಕ ಭೇಟಿ ಚುನಾವಣಾ ಸಿದ್ಧತೆಗೆ ಮುನ್ನುಡಿ ಎಂದೇ ಅರ್ಥೈಸಬಹುದು. ಬಿಜೆಪಿ ಸರ್ಕಾರಕ್ಕೆ ಮೂರು ವರ್ಷ ಹಾಗೂ ಸಿಎಂ …
Read More »ಬಿಜೆಪಿ ಶಾಸಕರಿಗೆ ಗೌನ್ ಉಡುಗೊರೆ- ಶಾಸಕ ಸತೀಶ್ ಜಾರಕಿಹೊಳಿ
ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪಮೇಯರ್ ಚುನಾವಣೆ ನಡೆಯದ ಹಿನ್ನೆಲೆಯಲ್ಲಿ ಅನಧಿಕೃತವಾಗಿ ಮೇಯರ್, ಉಪಮೇರ್ ಆಗಿರುವ ಸ್ಥಳೀಯ ಬಿಜೆಪಿ ಶಾಸಕರಿಗೆ ಆ.9 ರಂದು ಕಾಂಗ್ರೆಸ್ ನಿಂದ ಗೌನ್ ಉಡುಗರೆ ನೀಡಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. : ಇಂದು ಶನಿವಾರ ಕಾಂಗ್ರೆಸ್ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ ರವರು, ವಿಧಾನ ಸಭೆಯ ಚುನಾವಣೆ ಮುಗಿಯುವವರೆಗೂ ಮೇಯರ್, ಉಪಮೇಯರ್ ಆಯ್ಕೆಯಾಗುವುದಿಲ್ಲ. ಈಗಾಗಲೇ ಅನಧಿಕೃತವಾಗಿ ಬೆಳಗಾವಿಯ …
Read More »ಬಿಗ್ಬಾಸ್ ಕನ್ನಡ ಒಟಿಟಿ ಸೀಸನ್-1 ಇಂದು ಆರಂಭ ಮೊದಲ ಸ್ಪರ್ಧಿಯಾಗಿ ಆರ್ಯವರ್ಧನ್ ಗುರೂಜಿ
ಬಹುನಿರೀಕ್ಷಿತ ಬಿಗ್ಬಾಸ್ ಕನ್ನಡ ಒಟಿಟಿ ಸೀಸನ್-1 ಇಂದು ಆರಂಭವಾಗಿದ್ದು ಮೊದಲ ಸ್ಪರ್ಧಿಯಾಗಿ ಆರ್ಯವರ್ಧನ್ ಗುರೂಜಿ ಬಿಗ್ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಸಾಕಷ್ಟು ಕಾಂಟ್ರವರ್ಸಿ ಜೊತೆ ತಮ್ಮ ಜೋತಿಷ್ಯದ ಮೂಲಕ ಚಿರಪರಿಚಿತರಾದ ಆರ್ಯವರ್ಧನ್ ಗುರೂಜಿ ಈಗ ಬಿಗ್ಬಾಸ್ ಕನ್ನಡ ಒಟಿಟಿ ಸೀಸನ್-1ರ ಮೊದಲ ಸ್ಪರ್ಧಿಯಾಗಿದ್ದಾರೆ. ಇನ್ನೂಆರ್ಯವರ್ಧನ್ ಗುರೂಜಿಯನ್ನಸ್ಟೇಜ್ ಮೇಲೆ ಬರಮಾಡಿಕೊಂಡ ಅಭಿನಯ ಚಕ್ರವರ್ತಿ ಸುದೀಪ್ ಅವರು, ಆರ್ಯವರ್ಧನ್ ಜೊತೆ ಕೆಲಕಾಲ ಮಾತನಾಡಿದರು. ಈ ವೇಳೆ ಮಾತನಾಡೋದಕ್ಕೆ ತುಂಬಾ ಚಡಪಡಿಸುತ್ತಿದ್ದ ಆರ್ಯವರ್ಧನ್ …
Read More »