ಮುಂಬೈ: ಒಂದು ಊರಿದೆ. ಆ ಊರಿನ ಮನೆಗಳಿಗೆ ಬಾಗಿಲೂ ಇಲ್ಲ, ಬೀಗವೂ ಹಾಕುವುದಿಲ್ಲ. ಹೌದು ಬರೋಬ್ಬರಿ 4000 ಮಂದಿ ವಾಸಿಸುತ್ತಿರುವ ಮಹಾರಾಷ್ಟ್ರದ ಶನಿ ಶಿಂಗ್ನಾಪುರದಲ್ಲಿ ಇದುವರೆಗೇ ಯಾವ ಮನೆಗೂ ಬಾಗಿಲೂ ಇಲ್ಲ, ಬೀಗವೂ ಇಲ್ಲ ಎಂದರೆ ಆಶ್ಚರ್ಯವಾದರೂ ಸತ್ಯ. ʼಸಬ್ ಭಗವಾನ್ ಭರೋಸೆ’ ಎಂಬ ಮಾತನ್ನು ಈ ಗ್ರಾಮದ ಜನರು ಅಕ್ಷರಶಃ ಅನುಸರಿಸುತ್ತಿದ್ದಾರೆ. ಏಕೆಂದರೆ ಮಹಾರಾಷ್ಟ್ರದ ಶನಿ ಶಿಂಗ್ನಾಪುರದಲ್ಲಿನ ಮಂದಿ ಹಿಂದೂ ದೇವತೆಯಾದ ಶನಿ (ಶನಿ ಗ್ರಹದ ಅಧಿಪತಿ) ಯಲ್ಲಿ ಅಪಾರ …
Read More »Yearly Archives: 2022
ಶಾಲೆಯಲ್ಲೇ ಶಿಕ್ಷಕಿಯೊಂದಿಗೆ ಸಂಭೋಗ ನಡೆಸಿದ ಪ್ರಾಂಶುಪಾಲ ಅಮಾನತು
ಛತ್ತೀಸ್ಗಢ: ಛತ್ತೀಸ್ಗಢದ ಕಂಕೇರ್ನ ಸರ್ಕಾರಿ ಪ್ರೌಢಶಾಲೆಯ ಪ್ರಾಂಶುಪಾಲ ಶಾಲೆಯಲ್ಲೇ ಶಿಕ್ಷಕಿಯ ಜೊತೆ ಲೈಂಗಿಕ ಕ್ರಿಯೆ ನಡೆಸಿ ಸಿಕ್ಕಿಬಿದ್ದು, ಅಮಾನತುಗೊಂಡಿದ್ದಾನೆ. ಗ್ರಾಮದ ಕೆಲವರು ಕುಟುಕು ಕಾರ್ಯಾಚರಣೆ ನಡೆಸಿ ಶಿಕ್ಷಕನ ಕಾಮಚೇಷ್ಟೆಯನ್ನು ವಿಡಿಯೋ ಮಾಡಿದ್ದಾರೆ. ಪ್ರಾಂಶುಪಾಲ ಮತ್ತು ಮಹಿಳಾ ಸಿಬ್ಬಂದಿಯ ಈ ಕೃತ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಶಾಲೆಯಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂದು ಈ ಹಿಂದೆಯೇ ಕೆಲ ಗ್ರಾಮಸ್ಥರು ಆರೋಪಿಸಿದ್ದರು. ಇದೀಗ ಅವರೇ ವಿಡಿಯೋ ಸೆರೆ ಹಿಡಿದು ಕೃತ್ಯ ಬಯಲು ಮಾಡಿದ್ದಾರೆ. …
Read More »‘ಓವರ್ ಟ್ಯಾಂಕ್’ ಮೇಲೇರಿ ಆತ್ಮಹತ್ಯೆಗೆ ಯತ್ನಿಸಿದ ಇಡೀ ಕುಟುಂಬಸ್ಥರು: ಕೆಳಗಿಳಿಸಲು ಪೊಲೀಸರ ಹರಸಾಹಸ
ಬೆಂಗಳೂರು ಗ್ರಾಮಾಂತರ: ಚಿಂತಾಮಣಿ ಯಿಂದ ಬಂದಂತಹ ಕುಟುಂಬವೊಂದು ಬೆಳ್ಳಂ ಬೆಳಗ್ಗೆಯೇ ಓವರ್ ಟ್ಯಾಂಕ್ ಮೇಲೇರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಗ್ರೀನ್ ವೇ ಲೇ ಔಟ್ ನಲ್ಲಿ ನಡೆದಿದೆ. ನಿವೃತ್ತಿ ಡಿವೈಎಸ್ಪಿ ಕೋನಪ್ಪ ರೆಡ್ಡಿಗೆ ದೊಡ್ಡಬಳ್ಳಾಪುರದ ಗ್ರೀನ್ ವೇ ಲೇ ಔಟ್ ಮಾಡಲು 38 ಲಕ್ಷ ಹಣ ನೀಡಿದ್ದೆ. ಆದರೆ ಕೊಟ್ಟ ಹಣವನ್ನು ಕೇಳಿದರೆ ಕೋನಪ್ಪ ರಡ್ಡಿ ಹಾಗೂ ಅವನ ಮಗ ದೌರ್ಜನ್ಯ ನಡೆಸುತ್ತಿದ್ದಾರೆ …
Read More »ಹುಬ್ಬಳ್ಳಿಯಲ್ಲಿ ಎಚ್ಚೆತ್ತ ಖಾಕಿ : ಪಿಯು ಪರೀಕ್ಷಾ ಕೇಂದ್ರಕ್ಕೆ ಡಾಗ್, ಬಾಂಬ್ ಸ್ಕ್ವಾಡ್ ಭೇಟಿ
ಹುಬ್ಬಳ್ಳಿ : ಕೆಲವು ದಿನಗಳ ಹಿಂದೆಯಷ್ಟೇ ಬೆಂಗಳೂರಿನ ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಕರೆ ಬಂದ ಬೆನ್ನಲ್ಲೇ ಹುಬ್ಬಳ್ಳಿಯಲ್ಲಿ ಖಾಕಿಪಡೆ ಎಚ್ಚೆತ್ತುಕೊಂಡಿದೆ. ನಗರದ ಪಿಯು ಪರೀಕ್ಷಾ ಕೇಂದ್ರಕ್ಕೆ ಡಾಗ್, ಬಾಂಬ್ ಸ್ಕ್ವಾಡ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹುಬ್ಬಳ್ಳಿಯ ಪಿಯು ಪರೀಕ್ಷಾ ಕೇಂದ್ರಕ್ಕೆ ಡಾಗ್, ಬಾಂಬ್ ಸ್ಕ್ವಾಡ್ ಭೇಟಿ..ಜಿಲ್ಲೆಯ ಮಹೇಶ ಪಿಯು ಕಾಲೇಜಿನಲ್ಲಿ ತಪಾಸಣೆ ನಡೆಸಿದ ಬಾಂಬ್ ಸ್ಕ್ವಾಡ್, ಪರೀಕ್ಷಾ ಕೇಂದ್ರದ ಸುತ್ತಮುತ್ತ ಪರಿಶೀಲನೆ ನಡೆಸಿದೆ. ಇನ್ನು ಇದೇ ಕಾಲೇಜಿನಲ್ಲಿ ಹಳೇ …
Read More »“ಹೆಲೋ. ಬ್ಯುಸಿನೆಸ್ ಗೆ ಸಾಲ ಕೊಡುತ್ತೇವೆ”.. ಕಾಲ್ ಮಾಡಿ ಲೋನ್ ಆಮಿಷ ಬಳಿಕ ವಂಚನೆ; ಬಂಧನ
ಬೆಂಗಳೂರು: ಸಾರ್ವಜನಿಕರೇ ಎಚ್ಚರ! ಲೋನ್ ಕೊಡಿಸುವ ನೆಪದಲ್ಲಿ ಸಾರ್ವಜನಿಕರಿಗೆ ಕರೆ ಮಾಡಿ ಮೋಸ ಮಾಡುವ ವ್ಯವಸ್ಥಿತ ಜಾಲ ಸಿಲಿಕಾನ್ ಸಿಟಿಯಲ್ಲಿ ತಲೆ ಎತ್ತಿದ್ದು ಯಾಮಾರಿದರೆ ಮೋಸ ಹೋಗುವುದು ಗ್ಯಾರೆಂಟಿ. ಅಂತಹದ್ದೆ ಖತರ್ನಾಕ್ ವಂಚಕ ಜಾಲದ ಹೆಡೆಮುರಿ ಕಟ್ಟುವಲ್ಲಿ ಈಶಾನ್ಯ ವಿಭಾಗದ ಪೊಲೀಸರು ಯಶಸ್ವಿಯಾಗಿದ್ದಾರೆ. ಲೋನ್ ಕೊಡಿಸುವ ನೆಪದಲ್ಲಿ ಆನ್ಲೈನ್ನಲ್ಲಿ ಕರೆ ಮಾಡಿ ನಂಬಿಸಿ ಸಾರ್ವಜನಿಕರನ್ನು ವಂಚಿಸುತ್ತಿದ್ದ ಜಾಲವನ್ನು ಈಶಾನ್ಯ ವಿಭಾಗದ ಸಿಎನ್ ಎನ್ ಪೊಲೀಸರು ಭೇದಿಸಿದ್ದು ನಾಲ್ವರು ವಂಚಕರನ್ನು ಬಂಧಿಸಿದ್ದಾರೆ. …
Read More »ಬೆಳ್ಳಂಬೆಳಗ್ಗೆ ರಾಮನಗರದಲ್ಲಿ ದುರಂತ: ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರ ಸಾವು, ಮೂವರ ಸ್ಥಿತಿ ಗಂಭೀರ
ರಾಮನಗರ: ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಸ್ಥಳದಲ್ಲೇ ಇಬ್ಬರು ದುರ್ಮರಣಕ್ಕೀಡಾದ ಘಟನೆ ರಾಮನಗರದ ಕುಂಭಾಪುರ ಗೇಟ್ ಬಳಿ ಸೋಮವಾರ ಬೆಳಗ್ಗೆ 6 ಗಂಟೆಗೆ ಸಂಭವಿಸಿದೆ. ಸುಂದ್ರಶ್ (49) ಮತ್ತು ತನ್ಮಯ್ (9) ಮೃತ ದುದೈವಿಗಳು. ಶೀಲ, ಗಾನವಿ, ಸಾನವಿ ಗಂಭೀರ ಗಾಯಗೊಂಡಿದ್ದಾರೆ. ಒಂದೇ ಕುಟುಂಬದ ಐವರು ಬೆಂಗಳೂರಿನಿಂದ ಮಂಡ್ಯ ಜಿಲ್ಲೆ ಮಳವಳ್ಳಿ ಬಳಿಯ ಅಗಸನ ಪುರಕ್ಕೆ ಹಬ್ಬಕ್ಕೆಂದು ಹೋಗಿದ್ದರು. ಹಬ್ಬ ಮುಗಿಸಿಕೊಂಡು ವಾಪಸ್ ಬೆಂಗಳೂರಿಗೆ ಒಮಿನಿ ಕಾರಿನಲ್ಲಿ ತೆರಳುವಾಗ ಮಾರ್ಗಮಧ್ಯೆ …
Read More »ರೈತನ ಮೀಸೆ ತಿರುವಿದ ಸಿಎಂ ಬೊಮ್ಮಾಯಿ..!
ಬಾಗಲಕೋಟೆ : ಕಾರ್ಯಕ್ರಮವೊಂದರಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ರೈತರೊಬ್ಬರ ಮೀಸೆ ತಿರುವಿದ ಫೋಟೊ ಸಾಮಾಜಿಕ ಜಾಲತಾಣಲದಲ್ಲಿ ಸಖತ್ ವೈರಲ್ ಆಗುತ್ತಿದ್ದು, ಜಿಲ್ಲೆ ಮುಧೋಳ ನಗರದಲ್ಲಿ ನಿನ್ನೆ ನಡೆದಿದ್ದ ಕಾರ್ಯಕ್ರಮದಲ್ಲಿ ಫೋಟೋವನ್ನು ಸೆರೆ ಹಿಡಿಯಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ರಾಮಣ್ಣ ಹಿಪ್ಪರಗಿ ಎಂಬ ರೈತನ ಮೀಸೆ ತಿರುವಿ ಹಾಸ್ಯ ಚಟಾಕಿ ಹಾರಿಸಿದ್ದಾರೆ. ರೈತನ ಕೊರೆ ಮೀಸೆಯನ್ನು ತಿರುವಿ ಮಜಾಕ್ ಮಾಡಿದ್ದಾರೆ. ನಿನ್ನೆ ಏತ ನೀರಾವರಿ ಹಾಗೂ ವಿವಿಧ ಅಭಿವೃದ್ಧಿ …
Read More »ಬಿಯರ್ ತರಸಿ ಉಳಿದ ಹಣ ವಾಪಾಸ್ ಕೇಳಿದ್ದಕ್ಕೆ ಹೆಣ ಬೀಳಿಸಿದ ಭೂಪ..!
ಬೆಳಗಾವಿ: ನಗರದ ಸತ್ಯಸಾಯಿ ಕಾಲೋನಿಯಲ್ಲಿ ಏಪ್ರಿಲ್ 17ರಂದು ಕಾಲೋನಿಯ ನಿವಾಸಿ ಮಹಮ್ಮದ್ ದಿಲ್ ಫುಕಾರ್ ಶೇಖ್ (27) ಎಂಬಾತನ್ನನು ಬಿಯರ್ ಬಾಟಲಿಯಿಂದ ಹೊಡೆದು ಹತ್ಯೆ ಮಾಡಿ ದುಷ್ಕರ್ಮಿ ಎಸ್ಕೇಪ್ ಆಗಿದ್ದ. ಸಂಜೆ ಎಂಟು ಗಂಟೆ ಸುಮಾರಿಗೆ ಕಾಲೋನಿಯ ಪಕ್ಕದ ಚರಂಡಿಯ ಮೇಲೆ ಬಿದ್ದಿದ್ದ ಮಹಮ್ಮದ್ ದಿಲ್ ಫುಕಾರ್ ನನ್ನ ತಕ್ಷಣ ಆಸ್ಪತ್ರೆಗೆ ದಾಖಲಿಸುರೋವಾಗ ತೀವ್ರ ರಕ್ತಸ್ರಾವದಿಂದ ಮಹಮ್ಮದ್ ದಿಲ್ ಫುಕಾರ್ ಸಾವನ್ನಪ್ಪಿದ್ದಾನೆ. ಮಹಮ್ಮದ್ ಊರು ಊರು ಅಲೆದು ಸ್ಕ್ರಾಪ್ …
Read More »ಗೋಡ್ಸೆ ಸಿದ್ಧಾಂತವನ್ನು ಮೋದಿ ಬೆಂಬಲಿಸುತ್ತಿದ್ದಾರೆ: ಕೆಟಿಆರ್
ಹೈದರಾಬಾದ್: ಮಹಾತ್ಮ ಗಾಂಧಿ ಅವರನ್ನು ಹತ್ಯೆ ಮಾಡಿರುವ ನಾಥುರಾಮ್ ಗೋಡ್ಸೆ ಅವರ ಸಿದ್ಧಾಂತವನ್ನು ಪ್ರಧಾನಿ ನರೇಂದ್ರ ಮೋದಿ ಅವರು ನೇರವಾಗಿ ಬೆಂಬಲಿಸುತ್ತಿದ್ದಾರೆ ಎಂದು ತೆಲಂಗಾಣ ರಾಷ್ಟ್ರ ಸಮಿತಿ ಕಾರ್ಯಾಧ್ಯಕ್ಷ ಕೆ.ಟಿ. ರಾಮ್ರಾವ್ ಆರೋಪಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋಡ್ಸೆ ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ. ಪ್ರಧಾನಿ ಮೋದಿ ಮೌನವಾಗಿ ಮತ್ತು ನೇರವಾಗಿ ಗೋಡ್ಸೆಯ ಸಿದ್ಧಾಂತವನ್ನು ಪಾಲಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಗುಜರಾತ್ ಶಾಸಕನನ್ನು ಅಸ್ಸಾಂ ಪೊಲೀಸರು ಬಂಧಿಸುವಂತೆ ಮಾಡಿದ ಮೋದಿ ಸರ್ಕಾರಕ್ಕೆ …
Read More »ಪಿಎಸ್ಐ ನೇಮಕಾತಿ ಅಕ್ರಮ ಬೆಳಕಿಗೆ ಬಂದ ಬೆನ್ನಲ್ಲೇ ರಾಜ್ಯದ ಪ್ರತಿಯೊಂದು ನೇಮಕಾತಿಯಲ್ಲೂ ಗೋಲ್ಮಾಲ್
ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮ ಬೆಳಕಿಗೆ ಬಂದ ಬೆನ್ನಲ್ಲೇ ರಾಜ್ಯದ ಪ್ರತಿಯೊಂದು ನೇಮಕಾತಿಯಲ್ಲೂ ಗೋಲ್ಮಾಲ್ ಆಗಿರೋದು ಒಂದರ ಹಿಂದೆ ಒಂದರಂತೆ ಬಹಿರಂಗ ವಾಗುತ್ತಿದೆ. ಪಿಎಸ್ಐ, ಕಾನ್ಸಟೇಬಲ್, ಕೆಪಿಎಸ್ಸಿ ಜೊತೆ ಲೋಕೋಪಯೋಗಿ ಇಲಾಖೆ ನಡೆಸಿದ ಪರೀಕ್ಷೆಯಲ್ಲೂ ಅಕ್ರಮ ಆಗಿದೆ. 2021ರ ಡಿಸೆಂಬರ್ 13ರಲ್ಲಿ ನಡೆದ ಪಿಡಬ್ಲ್ಯೂಡಿ ಇಲಾಖೆಯ ಜೂನಿಯರ್ ಎಂಜಿನಿಯರ್ ಪರೀಕ್ಷೆಯಲ್ಲಿ ಬ್ಲೂಟೂತ್ ಮೂಲಕ ಉತ್ತರ ಬರೆಯಲಾಗಿದೆ. ಕಲಬುರಗಿಯಲ್ಲಿ ಪರೀಕ್ಷಾ ಕೇಂದ್ರದ ಸಮೀಪದ ಹೊಟೇಲ್ವೊಂದರಲ್ಲಿ ಕುಳಿತು ಬ್ಲೂಟೂತ್ ಡಿವೈಸ್ ಮೂಲಕ ಸರಿ ಉತ್ತರ …
Read More »