Breaking News

Yearly Archives: 2022

ಕರ್ನಾಟಕದಲ್ಲಿ ಮಹಾರಾಷ್ಟ್ರ ಸಚಿವರು ಹೋಗುವುದನ್ನು ಯಾರೂ ತಡೆಯಲು ಸಾಧ್ಯವಿಲ್ಲ: ರಾವತ್

ಬೆಳಗಾವಿ: ಬೆಂಗಳೂರು ಹಾಗೂ ಬೆಳಗಾವಿಯಲ್ಲಿ ಮಹಾರಾಷ್ಟ್ರ ಭವನ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವತು ಮೊದಲು ಜಾಗ ನೀಡಲಿ ಎಂದು ರಾಜ್ಯಸಭಾ ಸದಸ್ಯ, ಶಿವಸೇನೆ ವಕ್ತಾರ ಸಂಜಯ ರಾವತ್ ತಿರುಗೇಟು ನೀಡಿದರು. ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ 10 ಕೋಟಿ ರೂಪಾಯಿ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಘೋಷಣೆ ಮಾಡಿದ ಬೆನ್ನಲ್ಲೇ ಶಿವಸೇನೆ ವಕ್ತಾರ ಸಂಜಯ್ ರಾವತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.   ಮುಂಬೈನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …

Read More »

ಇಂದಿನ ರೌಡಿಗಳೇ ಮುಂದಿನ ಬಿಜೆಪಿ ನಾಯಕರು: ಕಾಂಗ್ರೆಸ್ ಟ್ವೀಟ್

ಬೆಂಗಳೂರು : ರೌಡಿ ಶೀಟರ್ ಗಳಲ್ಲಿ ಹೆಸರಿಸಲಾಗಿದ್ದ ಹಲವರು ಬಿಜೆಪಿ ಸೇರ್ಪಡೆಯಾಗಿರುವ ವಿಚಾರಕ್ಕೆ ಸಂಬಂಧಿಸಿ ಕಾಂಗ್ರೆಸ್ ಬಿಜೆಪಿ ವಿರುದ್ಧ ಹೋರಾಟಕ್ಕೆ ಹೊಸ ಅಸ್ತ್ರವನ್ನಾಗಿ ಮಾಡಿದ್ದು, ಸರಣಿ ಟ್ವೀಟ್ ಗಳ ಮೂಲಕ ಆಕ್ರೋಶ ಹೊರ ಹಾಕಿ ಪ್ರಶ್ನೆಗಳ ಮಳೆ ಸುರಿಸಿದೆ.   ”ಕೋಮು ರಾಜಕಾರಣ ಸಾಲದು ಎಂಬಂತೆ ರೌಡಿ ರಾಜಕೀಯ ಮಾಡಲು ಹೊರಟಿದೆ ಬಿಜೆಪಿ.ರಾಮಾರಾಜ್ಯದ ಹೆಸರು ಹೇಳುತ್ತಿದ್ದ ಬಿಜೆಪಿ ನಾಯಕರು ರೌಡಿರಾಜ್ಯ ಮಾಡಲು ಹೊರಟಿದ್ದಾರೆ.ಅಪ್ಪು ಎಂಬ ರೌಡಿ ಮೇಲಿದ್ದ ರೌಡಿ ಶೀಟ್ ತೆಗೆಸಿ …

Read More »

ನೈರುತ್ಯ ರೈಲ್ವೆ:₹4,447 ಕೋಟಿ ಆದಾಯ

ಹುಬ್ಬಳ್ಳಿ: ನೈರುತ್ಯ ರೈಲ್ವೆ ಏಪ್ರಿಲ್‌-ನವೆಂಬರ್‌ ಅವಧಿಯಲ್ಲಿ ₹ 4,447.62 ಕೋಟಿ ಆದಾಯ ಗಳಿಸಿದೆ. ಕಳೆದ ವರ್ಷದ ಇದೇ ಅವಧಿಯಲ್ಲಿ ₹ 3,400.83 ಕೋಟಿ ಆದಾಯ ಬಂದಿತ್ತು. ಆದಾಯದಲ್ಲಿ ಶೇ 30.78ರಷ್ಟು ಏರಿಕೆಯಾಗಿದೆ ಎಂದು ಪ್ರಧಾನ ವ್ಯವಸ್ಥಾಪಕ ಸಂಜೀವ್ ಕಿಶೋರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.   ಪ್ರಯಾಣಿಕರಿಂದ ಬರುವ ಆದಾಯದಲ್ಲಿ ಕಳೆದ ವರ್ಷಕ್ಕಿಂತ ಶೇ 95.57ರಷ್ಟು ಹೆಚ್ಚಳವಾಗಿದೆ. ₹ 1813.58 ಕೋಟಿ ಆದಾಯ ಬಂದಿದೆ. ಹಿಂದಿನ ವರ್ಷ ₹ 927.31 ಕೋಟಿ ಆದಾಯವಿತ್ತು. ಟಿಕೆಟ್‌ …

Read More »

ಬೆಳಗಾವಿಗೆ ಹೋಗಿಯೇ ತೀರುತ್ತೇವೆ: ಸಿಎಂಗೆ ‘ಮಹಾ’ಸಚಿವರ ಸವಾಲ

ಬೆಳಗಾವಿ: ‘ಡಿಸೆಂಬರ್‌ 6ಕ್ಕೆ ಬೆಳಗಾವಿಗೆ ಹೋಗಿಯೇ ತೀರುತ್ತೇವೆ. ಕರ್ನಾಟಕದ ಮುಖ್ಯಮಂತ್ರಿ ಹೇಳಿಕೆಗೆ ಪ್ರತ್ಯುತ್ತರ ನೀಡಲೆಂದೇ ಹೋಗುತ್ತೇವೆ. ನಮ್ಮನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ’ ಎಂದು ಮಹಾರಾಷ್ಟ್ರದ ಗಡಿ ಉಸ್ತುವಾರಿ ಸಚಿವರಾದ ಚಂದ್ರಕಾಂತ ಪಾಟೀಲ ಹಾಗೂ ಶಂಭುರಾಜ್ ದೇಸಾಯಿ ಸವಾಲು ಹಾಕಿದ್ದಾರೆ. ಮುಂಬೈನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಚಂದ್ರಕಾಂತ ಪಾಟೀಲ, ‘ಗಡಿ ವಿವಾದದ ಕಾರಣ ತ್ವೇಷಮಯ ವಾತಾವರಣವಿದೆ. ಈಗ ಬರಬೇಡಿ ಎಂದು ಕರ್ನಾಟಕದ ಮುಖ್ಯ ಕಾರ್ಯದರ್ಶಿ ಮಹಾರಾಷ್ಟ್ರ ಸರ್ಕಾರಕ್ಕೆ ಪತ್ರ ರವಾನಿಸಿದ್ದಾರೆ. ನಾನು …

Read More »

ಖಾನಾ ಪುರ ಸಾರ್ವಜನಿಕ ಆಸ್ಪತ್ರೆಯ ಸ್ಥಿತಿ ನೋಡಿ ಹೇಗಿದೆ?

ಖಾನಾಪೂರ ಸಾರ್ವಜನಿಕ ಆಸ್ಪತ್ರೆಯ ಹಿರಿಯ ಫೀಜಿಷನ್ ಡಾಕ್ಟರ್ ಸರಳಾ ತಿಪ್ಪನ್ನವರ (ಎಮ್ ಡಿ ಜನರಲ್ ಮೆಡಿಸಿನ್ ) ಅವರು ಕಳೆದ ಒಂದೂವರೆ ವರ್ಷದಿಂದ ಬೆಳಗಾವಿಯ ಬಿಮ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದು ಮೂಲ ಆಸ್ಪತ್ರೆಯಲ್ಲಿ ರೋಗಿಗಳಿಗೆ ಬಹು ಅನಾನುಕೂಲ ಉಂಟಾಗುತ್ತಿದ್ದು ಇದರಲ್ಲಿ ವಿಶೇಷ ಏನೆಂದರೆ ಅವರು ದಿ16/6/2021 ರಂದು ಕರ್ತವ್ಯಕ್ಕೆ ವರದಿ ಮಾಡಿಕೊಂಡಿರುತ್ತಾರೆ ಮತ್ತೆ ಅದೇ ವಾರದಲ್ಲಿ ಅಂದರೆ ಒಂದೇ ದಿನದಲ್ಲಿ ದಿನಾಂಕ 17/6/2021ರಂದು ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ಅವರನ್ನು ನಿಯೋಜನೆ ಮೇರೆಗೆ …

Read More »

ಮಹಾರಾಷ್ಟ್ರ ಬಿಟ್ಟು ಕರ್ನಾಟಕ ಸೇರುವ ನಿರ್ಧಾರ ತೆಗೆದುಕೊಂಡಿದ್ದಾರೆ. ಅಕ್ಕಲಕೋಟತಾಲೂಕಿನ ಜನ

ಕರ್ನಾಟಕ ಮಹಾರಾಷ್ಟ್ರ ಗಡಿ ಕ್ಯಾತೆ ವಿಚಾರಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಬಿಟ್ಟು ಕರ್ನಾಟಕ ಸೇರುವ ನಿರ್ಧಾರವನ್ನು ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆ ಅಕ್ಕಲಕೋಟತಾಲೂಕಿನ ಜನರು ತೆಗೆದುಕೊಂಡಿದ್ದಾರೆ ಕನ್ನಡಿಗರೇ ಹೆಚ್ಚು ವಾಸ ಮಾಡುತ್ತಿರೋ ಅಕ್ಕಲಕೋಟ್ ತಾಲೂಕಿನ 44 ಕ್ಕೂ ಆಧಿಕ ಗ್ರಾಮಗಳ ಜನರಿಂದ ಕರ್ನಾಟಕ ಸೇರಲು ಗ್ರಾಮಗಳ ಮಂಡಲಗಳಲ್ಲಿ ಕರ್ನಾಟಕ ಸೇರಲು ಠರಾವು ಪಾಸ್ ಮಾಡಿದ್ದಾರೆ. ಮಹಾರಾಷ್ಟ್ರದ ಗಡಿ ಭಾಗದಲ್ಲಿರೋ ಕನ್ನಡಿರು ಮಹಾರಾಷ್ಟ್ರದಿಂದ ನಮಗೆ ಅನ್ಯಾಯವಾಗಿದೆ ಎಂದು ಆರೋಪಿಸಿದ್ದಾರೆ. ಕನ್ನಡಿಗರು ಇರೋ ಭಾಗದಲ್ಲಿ ಮಹರಾಷ್ಟ್ರ …

Read More »

ವಿದ್ಯಾರ್ಥಿಗಳಿಗೆ ಸೈಕ್ಲಿಂಗ್ ಸ್ಪರ್ಧೆ ಸ್ಪೂರ್ತಿದಾಯಕ

ಗ್ರಾಮಿಣ ಭಾಗದ ವಿದ್ಯಾರ್ಥಿಗಳಿಗೆ ಸೈಕ್ಲಿಂಗ್ ಸ್ಪರ್ಧೆ ಆಯೋಜನೆ ಸ್ಪೂರ್ತಿ ದಾಯಕವಾಗಿದೆ ಎಂದು ಹುಕ್ಕೇರಿ ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ ದಂಡಿನ ಅಭಿಪ್ರಾಯ ಪಟ್ಟರು. ಬೆಳಗಾವಿ ನಂದಿನಿ ಹಾಲು ಉತ್ಪಾದನಾ ಘಟಕ ಮತ್ತು ಜಿಲ್ಲಾ ಸೈಕ್ಲಿಂಗ್ ಅಸೋಸಿಯೇಷನ್ ಹಾಗೂ ಹುಕ್ಕೇರಿ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಿದ ಕೆ ಎಮ್ ಎಫ್ ನಂದಿನಿ ಸೈಕ್ಲಿಂಗ್ ಸ್ಫರ್ದೆಯನ್ನು ಮಾಜಿ ಜಿಲ್ಲಾ ಪಂಚಾಯತ ಪನವ ಕತ್ತಿ ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಮಾದ್ಯಮಗಳೊಂದಿಗೆ ಮಾತನಾಡಿದ ಬಿ …

Read More »

ರೋಟರಿ ವತಿಯಿಂದ ಮಹಿಳೆಯರ ಕಾರ ರ‍್ಯಾಲಿ

ಇಂದು ಬೆಳಗಾವಿಗೆ ಆಗಮಿಸಿದ ರೋಟರಿ ಡಿಸ್ಟ್ರಿಕ್ಟ್ ೩೧೩೧ ಅಖಿಲ ಭಾರತ ಕಾರ್ ರ್ಯಾಲಿಯನ್ನು ಬೆಳಗಾವಿ ರೋಟರಿ ಪರಿವಾರದ ವತಿಯಿಂದ ಬರಮಾಡಿಕೊಳ್ಳಲಾಯಿತು.ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಬಳಿ ಡಿಸ್ಟ್ರಿಕ್ಟ್‌ ಗವರ್ನರ್ ರೋಟೇರಿಯನ್ ವೆಂಕಟೇಶ ದೇಶಪಾಂಡೆ ಮತ್ತು ರೋಟರಿ ಸದಸ್ಯರು ಸ್ವಾಗತಿಸಿದರು. ಈ ಕಾರ್ ರ್ಯಾಲಿ ನೇತ್ರತ್ವವನ್ನು ಡಾ.ಅನಿಲ ಪರಮಾರ,ಪಿ.ಡಿ.ಜಿ ದೀಪಕ ಪುರೋಹಿತ, ಪಿ.ಡಿ.ಜಿ ರಶ್ಮಿ ಕುಲಕರ್ಣಿ ಅವರು ವಹಿಸಿದ್ದರು. ಒಟ್ಟು ೨೬ ಕಾರುಗಳು ೮೮ ಮಹಿಳೆಯರು ಪಾಲ್ಗೊಂಡಿರುವ ರ್ಯಾಲಿ ಮೂಲಕ ಹೆಣ್ಣುಮಕ್ಕಳ …

Read More »

ರಾಜ್ಯ ಆರ್ಥಿಕವಾಗಿ ದಿವಾಳಿಯಾಗಿದೆ ಜನವರಿಯಲ್ಲಿ ಚುನಾವಣೆ ನಡೆಯುವುದು ಉತ್ತಮ: C.M.ಇಬ್ರಾಹಿಂ

ರಾಜ್ಯ ಆರ್ಥಿಕವಾಗಿ ದಿವಾಳಿಯಾಗಿದೆ. ಮೇ ತಿಂಗಳಿನವರೆಗೆ ಸರ್ಕಾರವನ್ನು ದುಡಿಕೊಂಡು ಹೋಗುವುದು ಸರಿಯಲ್ಲ. ಜನವರಿಯಲ್ಲಿ ರಾಜ್ಯದ ಚುನಾವಣೆ ನಡೆಯಬೇಕು. ಇದು ಉತ್ತಮ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಮ್.ಇಬ್ರಾಹಿಂ ಹೇಳಿದರು. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಜೆಡಿಎಸ್ ನಾಯಕರ ಚಿಂತನ – ಮಂಥನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಪಕ್ಷ ಸಂಘಟನೆ ಹಾಗೂ ಪಂಚರತ್ನ ಕಾರ್ಯಕ್ರಮದ ರೂಪರೇಷೆ ಸಿದ್ದತೆ ಬಗ್ಗೆ ಚರ್ಚೆ ನಡೆಸಲಿದ್ದೇವೆ. ಜನೇವರಿ ತಿಂಗಳಲ್ಲಿ ಪಂಚ ರತ್ನ ಕಾರ್ಯಕ್ರಮ ಮುಂಬೈ ಕರ್ನಾಟಕ, ಕಲ್ಯಾಣ …

Read More »

ಇಂದಿನ ಶ್ರೇಷ್ಠ ಫೌಂಡೇಶನ್ ವತಿಯಿಂದ ಹಮ್ಮಿ ಕೊಂಡಿದ್ದ ಅನ್ನ ಸಂತರ್ಪಣೆ ಕಾರ್ಯಕ್ರಮ ಸವದತ್ತಿಯ ಕೊರಕೊಪ್ಪ ಗ್ರಾಮದಲ್ಲಿ

ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲೂಕಿನ ಕೊರಕೊಪ್ಪ ಗ್ರಾಮದಲ್ಲಿ ಲಕ್ಷ್ಮೀದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ …

Read More »