Breaking News

Yearly Archives: 2022

ಮೋದಿ ತಮ್ಮ ಮನೆಗೆ ಕೆಲಸ ಮಾಡ್ತೀಲ್ಲ, ದೇಶದ ಸುರಕ್ಷತೆಗಾಗಿ ಕೆಲಸ ಮಾಡುತ್ತಿದ್ದಾರೆ:ಶಶಿಕಲಾ ಜೊಲ್ಲೆ

ಕೊಪ್ಪಳ: ಮಸೀದಿ, ಮಂದಿರಗಳಲ್ಲಿ ಧ್ವನಿ ವರ್ಧಕ ಬಳಕೆ ವಿಚಾರ, ಇದು ಇವತ್ತಿನ ವಿಷಯ ಅಲ್ಲ. ಬಹಳ ದಿನಗಳ ಹಿಂದೆ ಸುಪ್ರೀಂ ಕೋರ್ಟ್ ಆದೇಶ ಇದೆ. ಇಷ್ಟೇ ಪ್ರಮಾಣದ ಧ್ವನಿ ವರ್ದಕ ಬಳಸಲು ಆದೇಶವಿದೆ. ಆದರೆ ಅದು ಸರಿಯಾಗಿ ಫಾಲೋ ಆಪ್ ಆಗುತ್ತಿಲ್ಲ ಎಂದು ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು. ಕೊಪ್ಪಳದಲ್ಲಿ ಬಿಜೆಪಿ 42 ನೆಯ ಸಂಸ್ಥಾಪನಾ ದಿನಾಚರಣೆಯಲ್ಲಿ ಪಾಲ್ಗೊಂಡ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಎಲ್ಲ ಧಾರ್ಮಿಕ ಸಂಸ್ಥೆಗಳಿಗೆ ನಿಯಮಗಳಿವೆ. …

Read More »

ಕಳೆದಿದ್ದ ಚಿನ್ನಾಭರಣಗಳ ಸೂಟ್ ಕೇಸ್​ ವಾರಸುದಾರರಿಗೆ ತಲುಪಿಸಿದ ಹೋಮ್ ಗಾರ್ಡ್..

ಬೆಂಗಳೂರು : ಪ್ರಯಾಣಿಕರೊಬ್ಬರು ರೈಲ್ವೆ ನಿಲ್ದಾಣದಲ್ಲಿ ಕಳೆದುಕೊಂಡಿದ್ದ ಸುಮಾರು 20 ಲಕ್ಷ ಮೌಲ್ಯದ ಚಿನ್ನಾಭರಣಗಳಿದ್ದ ಸೂಟ್ ಕೇಸ್ ಪತ್ತೆಹಚ್ಚಿ ಹಿಂದಿರುಗಿಸುವ ಮೂಲಕ ಗೃಹ ರಕ್ಷಕ ದಳದ ಸಿಬ್ಬಂದಿಯೊಬ್ಬರು ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಗೃಹ ರಕ್ಷಕ ದಳದ ಸಿಬ್ಬಂದಿ ಅವರ ಗುರುರಾಜ್​ ಪ್ರಾಮಾಣಿಕತೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರಶಂಸೆ ವ್ಯಕ್ತವಾಗ್ತಿದೆ. ರಮೇಶ್ ಚಂದ್ ಎಂಬುವವರು ನಿನ್ನೆ ರಾತ್ರಿ 9:30ಕ್ಕೆ ಕೆಎಸ್ಆರ್ ರೈಲ್ವೆ ನಿಲ್ದಾಣದಲ್ಲಿ ಸುಮಾರು 20 ಲಕ್ಷ ಮೌಲ್ಯದ ಚಿನ್ನಾಭರಣಗಳಿದ್ದ ಸೂಟ್ ಕೇಸ್ಅನ್ನು ಕಳೆದುಕೊಂಡಿದ್ದರು. …

Read More »

ಸರ್ಕಾರಿ ಶಾಲೆ ಎದುರು ವಾಮಾಚಾರ ಮಾಡಿರುವ ಕುರಿತು ಗ್ರಾಮಸ್ಥರ ಆತಂಕ

ಬಾಗಲಕೋಟೆ: ಸರ್ಕಾರಿ ಪ್ರಾಥಮಿಕ ಶಾಲೆಗೆ ವಾಮಾಚಾರ ಮಾಡಿರುವ ಘಟನೆ ಇಳಕಲ್​ ತಾಲೂಕಿನ ಗೋನಾಳ ಎಸ್​ಬಿ ಗ್ರಾಮದಲ್ಲಿ ನಡೆದಿದೆ. ಇದರಿಂದ ಮಕ್ಕಳು, ಗ್ರಾಮಸ್ಥರು ಭಯಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಗೇಟ್ ಎದುರು ಎರಡು ಗೊಂಬೆ ಇರಿಸಿ, ಕುಂಕುಮ ಎರಚಿ, ನಿಂಬೆ ಹಣ್ಣುಗಳನ್ನಿಟ್ಟು ವಾಮಾಚಾರ ಮಾಡಲಾಗಿದೆ. ಈ ಬಗ್ಗೆ ಬೆಳಗಿನ ಜಾವ ಗ್ರಾಮದ ಜನತೆ ನೋಡಿ ಆತಂಕ ವ್ಯಕ್ತಪಡಿಸಿ, ಶಿಕ್ಷಕರು, ಎಸ್​ಡಿಎಂಸಿ ಅಧ್ಯಕ್ಷರು ಹಾಗೂ ಸದಸ್ಯರ ಗಮನಕ್ಕೆ ತಂದಿದ್ದಾರೆ.ವಾಮಾಚಾರಕ್ಕೆ ಬಳಸಿದ ವಸ್ತುಗಳನ್ನು …

Read More »

1995 ರಲ್ಲಿ ಜನತಾ ಸರಕಾರ ತದ್ದಂತೆ 2023 ರಲ್ಲೂ ಸರ್ಕಾರ ತರೋಣ ಎಂದ ಸಿಎಂ ಇಬ್ರಾಹಿಂ

ಮೈಸೂರು: ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಮಕ್ಕಳು ಇನ್ನೂ ಬದುಕಿದ್ದಾರೆ. ಸ್ವಸ್ಥ ಸಮಾಜ ಕಟ್ಟುತ್ತೇವೆ ಎಂದು ಸಿಎಂ ಇಬ್ರಾಹಿಂ ಹೇಳಿದ್ದಾರೆ. ಮೈಸೂರಿನ ಕಲಾಮಂದಿರದಲ್ಲಿ ಸರ್ವ ಜನಾಂಗದ ಶಾಂತಿಯ ತೋಟ ಸಮಾರಂಭದಲ್ಲಿ ಭಾಷಣ ಮಾಡಿದ ಅವರು, ಹೆಣ್ಣು ಮಕ್ಕಳು ತಲೆ ಮೇಲೆ ಬಟ್ಟೆ ಹಾಕಲು ಇವರು ವಿರೋಧಿಸುತ್ತಾರೆ. ಮೈಸೂರಿನ ಮಹಾರಾಜರು ಹೆಣ್ಣು ಮಕ್ಕಳು ಸ್ಕೂಲ್ ಗೆ ಹೋಗುವ ಗಾಡಿಗೆ ಪರದೆ ಹಾಕಿಸುತ್ತಿದ್ದರು. ಇದನ್ನು ಇವರು ಮರೆತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಹುಚ್ಚು ಮುಂಡೇವು …

Read More »

ಮುಸ್ಕಾನ್‍ಳನ್ನು ಅಲ್‍ಖೈದಾ ಮುಖ್ಯಸ್ಥ ಬೆಂಬಲಿಸಿರುವುದು ಆತಂಕಕಾರಿ: ಮುತಾಲಿಕ್

ಧಾರವಾಡ: ಇವತ್ತು ದೇಶಕ್ಕೆ ಆಫಘಾನಿಸ್ತಾನದ ವಿಡಿಯೋ ಪ್ರಸಾರವಾಗಿದೆ. ಇದು ದೇಶದ ಜನರಿಗೆ ಆತಂಕ ತಂದಿದೆ, ಇದು ಅಪಾಯಕಾರಿ ಬೆಳವಣಿಗೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದರು. ಧಾರವಾಡದಲ್ಲಿ ಮಾತನಾಡಿದ ಅವರು, ಅಲ್ ಖೈದಾ ಮುಖ್ಯಸ್ಥ ಮಂಡ್ಯದ ಮುಸ್ಕಾನ್‍ಳನ್ನು ಬೆಂಬಲಿಸಿದ್ದಾನೆ. ಇದು ನಿಜಕ್ಕೂ ಆತಂಕಕಾರಿ ಬೆಳವಣಿಗೆ ಎಂದರು. ಶಾಲೆಯಲ್ಲಿ ಹಿಜಬ್ ಬ್ಯಾನ್ ಮಾಡಿದ್ದನ್ನು ವಿರೋಧಿಸಿದ್ದು ಅಚ್ಚರಿ ತಂದಿದೆ. ಹಿಜಬ್ ವಿಚಾರ ಅಂತರಾಷ್ಟ್ರೀಯ ಮಟ್ಟಕ್ಕೆ ಹೋಗಿದೆ ಎಂದ ಅವರು, ಉಗ್ರ ಸಂಘಟನೆಗಳು …

Read More »

ಸವದತ್ತಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ದ್ವಿತೀಯ ದರ್ಜೆ ಸಹಾಯಕ ಎಸಿಬಿ ಬಲೆಗೆ ಬಿದ್ದಿದ್ದಾನೆ.

ಅಂಕಪಟ್ಟಿಯಲ್ಲಿ ಹೆಸರು ತಿದ್ದುಪಡಿಗೆ 1200 ರೂ. ಲಂಚ ಕೇಳಿ, 1000 ರೂ ಪಡೆಯುವಾಗ ಸವದತ್ತಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ದ್ವಿತೀಯ ದರ್ಜೆ ಸಹಾಯಕ ಎಸಿಬಿ ಬಲೆಗೆ ಬಿದ್ದಿದ್ದಾನೆ. ತಂದೆ ಮಹಾದೇವಗೌಡ ಪಾಟೀಲ (ಸಾ: ಮನೆಂ: 186 ಕುಟರನಟ್ಟ ಪೋಸ್ಟ: ಹಿರೇಬೂದನೂರ ತಾ: ಸವದತ್ತಿ) ಎಸಿಬಿ ಪೊಲೀಸ್ ಠಾಣೆಗೆ ಹಾಜರಾಗಿ ತಮ್ಮ ಹಾಗೂ ತಮ್ಮ ಸ್ನೇಹಿತ ಮಹಾಂತೇಶ ಚಂದ್ರಪ್ಪ ಬೂತನವರ ಇಬ್ಬರ ಎಸ್.ಎಸ್.ಎಲ್.ಸಿ ಅಂಕಪಟ್ಟಿಯಲ್ಲಿ ನಮೂದಿದ್ದ ಹೆಸರುಗಳನ್ನು ತಿದ್ದುಪಡಿ ಮಾಡಿ ಸರಿಪಡಿಸಿ …

Read More »

ಕೂಡ್ಲೇ ಗೃಹ ಸಚಿವ ಸ್ಥಾನಕ್ಕೆ ಆರಗ ರಾಜೀನಾಮೆ ಕೊಟ್ಹೋಗಲಿ :ವಾಟಾಳ್

ಬೆಂಗಳೂರು : ಕರ್ನಾಟಕದಲ್ಲಿ ಏನಾಗುತ್ತಿದೆ ಎಂಬುದೇ ಅರ್ಥವಾಗುತ್ತಿಲ್ಲ. ಗುಪ್ತಚರ ಇಲಾಖೆ ಸಂಪೂರ್ಣ ವಿಫಲವಾಗಿದೆ. ಕೂಡಲೇ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಒತ್ತಾಯಿಸಿದ್ದಾರೆ. ವಿಧಾನಸೌಧದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಿನ್ನೆ ಒಬ್ಬ ಯುವಕನ ಹತ್ಯೆಯಾಗಿದೆ. ಅದರ ಹೇಳಿಕೆ ಬಗ್ಗೆ ಗೃಹ ಸಚಿವರು ಗುಪ್ತಚರ ಇಲಾಖೆ ವರದಿ ಪಡೆದಿಲ್ಲ. ಗುಪ್ತಚರ ಇಲಾಖೆ ಸಂಪೂರ್ಣ ವಿಫಲವಾಗಿದೆ …

Read More »

ಹೊರಟ್ಟಿ ಸೇರ್ಪಡೆಗೂ ಮೊದಲೇ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟ

ಹುಬ್ಬಳ್ಳಿ: ಬಿಜೆಪಿ ಸೇರುವುದಾಗಿ ಘೋಷಣೆ ಮಾಡಿದ ಸಭಾಪತಿ ಬಸವರಾಜ್ ಹೊರಟ್ಟಿಗೆ ಶಾಕ್ ಆಗಿದೆ. ಜೆಡಿಎಸ್ ಬಿಟ್ಟು ಬಿಜೆಪಿಗೆ ಹೊರಟಿದ್ದ ಹೊರಟ್ಟಿಗೆ ಆರಂಭಿಕ ಆಘಾತ ಉಂಟಾಗಿದೆ. ಹೊರಟ್ಟಿ ಅತ್ತ ಬಿಜೆಪಿ ಸೇರ್ಪಡೆ ಘೋಷಣೆ ಮಾಡುತ್ತಿದ್ದಂತೆ ಬಿಜೆಪಿಯಲ್ಲಿ ತೀವ್ರ ಅಸಮಾಧಾನ ಸ್ಫೋಟವಾಗಿದೆ. ಯಾರ ಮಾತು ನಂಬಲೇ ಬೇಡಿ ನನಗೆ ಮತ ನೀಡಿ. ಹೊರಟ್ಟಿಗೆ ಬಿಜೆಪಿಗೆ ಸೇರಲು ಯಾವ ಅರ್ಹತೆ ಇಲ್ಲ. ಅವರು ಈ ಬಾರಿ ಸೋಲಿನ ಭಯದಿಂದ ಬಿಜೆಪಿಗೆ ಬರುತ್ತಿದ್ದಾರೆ. ಇದಕ್ಕೆ ನಾನು ಸೇರಿದಂತೆ …

Read More »

ಮಂತ್ರಿ ಆಗ್ಲಿ, ಎಂಎಲ್‍ಎ ಆಗ್ಲಿ, ನಮ್ಮ ತಾತನ ಆಸ್ತಿಯಲ್ಲ; ಮುರುಗೇಶ್ ನಿರಾಣಿ

ಬೆಳಗಾವಿ: ಸಂಪುಟದಿಂದ ಮುರುಗೇಶ್ ನಿರಾಣಿ ಅವರನ್ನ ಕೈಬಿಡ್ತಾರೆ ಎಂಬ ಪ್ರಶ್ನೆಗೆ ಖಾರವಾಗಿಯೇ ಪ್ರತಿಕ್ರಿಯೆ ನೀಡಿದ ಸಚಿವ ಮುರುಗೇಶ್ ನಿರಾಣಿ , ಮಂತ್ರಿ ಆಗ್ಲಿ, ಎಂಎಲ್‍ಎ ಆಗ್ಲಿ ನಮ್ಮ ತಾತನ ಆಸ್ತಿಯಲ್ಲ ಎಂದು ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ಮುಖ್ಯಮಂತ್ರಿ ಪರಮಾಧಿಕಾರವಾಗಿದ್ದು, ನಮ್ಮ ರಾಜ್ಯದ ನಾಯಕರು, ರಾಷ್ಟ್ರೀಯ ವರಿಷ್ಠರು ಸೇರಿ ಮುಂದಿನ ದಿನಗಳಲ್ಲಿ ನಿರ್ಧಾರ ಮಾಡುತ್ತಾರೆ. ಮಂತ್ರಿ ಆಗಲಿ, ಎಂಎಲ್‍ಎ ಆಗಲಿ, ಇದು ನಮ್ಮ ತಾತ ಆಸ್ತಿಯಲ್ಲ. ನಾನು …

Read More »

ಶೀಘ್ರವೇ ನಂದಿನಿ ಹಾಲಿನ ದರ ಏರಿಕೆಯಾಗುವ ಸಾಧ್ಯತೆ;

ಬೆಂಗಳೂರು: ಇಂಧನ ದರ ಏರಿಕೆ, ಖಾದ್ಯ ತೈಲ ದರ ಏರಿಕೆ ಒತ್ತಡದಲ್ಲಿರುವ ಗ್ರಾಹಕರಿಗೆ ಮತ್ತೊಂದು ಶಾಕ್ ಎದುರಾಗಿದೆ. ಶೀಘ್ರವೇ ನಂದಿನಿ ಹಾಲಿನ ದರ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಹಾಲಿನ ದರ ಏರಿಸಲು 1 ತಿಂಗಳಿಂದ ನಿರಂತರ ಸರ್ಕಸ್ ಮಾಡಲಾಗುತ್ತಿದೆ. ಈಗಾಗಲೇ KERC ವಿದ್ಯುತ್ ದರ ಏರಿಕೆಗೆ ಅಸ್ತು ಎಂದಿದೆ. ಹೀಗಾಗಿ ಈಗ ಹಾಲಿನ ದರ ಏರಿಸಲು ಹಾಲು ಒಕ್ಕೂಟಗಳು ಪಟ್ಟು ಹಿಡಿದಿವೆ. ವಿದ್ಯುತ್ ದರದಂತೆ ಹಾಲಿನ ದರವನ್ನೂ ಏರಿಸಲು …

Read More »