ಕೊರಟಗೆರೆ : ತಾಲೂಕಿನ ಹೊಳವನಹಳ್ಳಿ ಹೋಬಳಿಯ ಸುಮಾರು 1800 ವರ್ಷದ ಇತಿಹಾಸವಿರುವ ಶ್ರೀ ನಾಗದೇವರ ವಿಗ್ರಹವಿದ್ದು ಆ ವಿಗ್ರಹವನ್ನು ಆದಿಜಾಂಬವ ಜನಾಂಗದ ಕುಟುಂಬದವರು, ಈ ಒಂದು ವಿಗ್ರಹಕ್ಕೆ ವಸಂತಕಾಲದ ಮೊದಲ ಹಬ್ಬವಾದ ಯುಗಾದಿಯ ನಂತರದ ದಿನದಂದು, ಈ ಜನಾಂಗದವರು ಈ ವಿಗ್ರಹಕ್ಕೆ ಹಿಂದಿನ ಸಂಪ್ರದಾಯದಂತೆ ಕೋಳಿಯನ್ನು ಬಲಿಕೊಟ್ಟು ವಿಗ್ರಹಕ್ಕೆ ಪೂಜೆಯನ್ನು ಮಾಡಿಕೊಂಡು ಬರುತ್ತಿದ್ದಾರೆ. ಕರಿನಾಗ ಎಂದೇ ಜನಪ್ರಿಯವಾಗಿರುವ ತುಮಕೂರು ಜಿಲ್ಲೆ, ಕೊರಟಗೆರೆ ತಾಲ್ಲೂಕಿನ ಹೊಳವನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹರಪ್ಪ …
Read More »Yearly Archives: 2022
ಈ ಬಾರಿ ಬೇಸಿಗೆಯಲ್ಲೂ ಉತ್ತರ ಕರ್ನಾಟಕದ ಕಚೇರಿಗಳ ಸಮಯಲ್ಲಿ ಬದಲಾವಣೆಯಿಲ್ಲ.!
ಬೆಂಗಳೂರು: ಬೇಸಿಗೆ ಸಂದರ್ಭದಲ್ಲಿ ಉತ್ತರ ಕರ್ನಾಟಕದಲ್ಲಿ ಬಿಸಿಲ ಝಳದ ಹೆಚ್ಚಳದ ಕಾರಣ, ಕಚೇರಿ ಸಮಯದಲ್ಲಿ ಬದಲಾವಣೆ ಮಾಡಲಾಗುತ್ತಿತ್ತು. ಆದ್ರೇ ಈ ಬಾರಿ ಸುಡು ಬಿಸಿಲಿನಲ್ಲಿಯೂ ರೈತರ ಪರವಾಗಿ ಸಿಎಂ ಬಸವರಾಜ ಬೊಮ್ಮಾಯಿ ( CM Basavaraj Bommai ), ಕಚೇರಿ ಸಮಯದಲ್ಲಿ ಬದಲಾವಣೆ ಮಾಡದೇ, ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದಾರೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ …
Read More »ಐಪಿಎಲ್ ಪಂದ್ಯದ ವೇಳೆ ಮೈದಾನದಲ್ಲೇ ಚುಂಬಿಸಿದ ಜೋಡಿ:
ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ನ 2022 ರ ಆವೃತ್ತಿಯು ನಡೆಯುತ್ತಿದ್ದು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಂದ್ಯ ವೀಕ್ಷಿಸಿದ್ದಾರೆ. ಐಪಿಎಲ್ ಟೂರ್ನಿಯ 10 ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕಾದಾಡಿದೆ. 172 ರನ್ ಗುರಿ ಬೆನ್ನಟ್ಟುತ್ತಿರುವಾಗ ಅಪರೂಪದ ಘಟನೆಯೊಂದು ನಡೆದಿದೆ. ಮೊಹಮ್ಮದ್ ಶಮಿ, ರಶೀದ್ ಖಾನ್ ಮತ್ತು ಲಾಕ್ ಫರ್ಗುಸನ್ ಅವರಂತಹವರು ಡೆಲ್ಲಿ ಬ್ಯಾಟರ್ ಗಳಿಗೆ ಕಡಿವಾಣ ಹಾಕುವಲ್ಲಿ ನಿರತಾಗಿದ್ದರು, …
Read More »ಮಳೆ ಸುರಿದ ಪರಿಣಾಮ ದ್ರಾಕ್ಷಿ ಬೆಳೆಗಾರರಿಗೆ ಲಕ್ಷಾಂತರ ರೂಪಾಯಿ ನಷ್ಟ
ಅಥಣಿ(ಬೆಳಗಾವಿ): ತಾಲೂಕಿನಾದ್ಯಂತ ಇಂದು ಸಂಜೆ ಅಕಾಲಿಕ ಮಳೆ ಸುರಿದ ಪರಿಣಾಮ ದ್ರಾಕ್ಷಿ ಬೆಳೆಗಾರರಿಗೆ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ತಾಲೂಕಿನ ಅಡಹಳ್ಳಿ, ಕೋಹಳ್ಳಿ, ಐಗಳಿ, ಕೋತನಟ್ಟಿ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿಪರೀತ ಗಾಳಿ ಸಮೇತ ಮಳೆಯಾಗಿದ್ದು, ಒಣದ್ರಾಕ್ಷಿ ನೀರಿನಲ್ಲಿ ನೆನೆದು ಭಾರಿ ಹಾನಿ ಸಂಭವಿಸಿದೆ. ನವೆಂಬರ್- ಅಕ್ಟೋಬರ್ ತಿಂಗಳಿನಲ್ಲಿ ದ್ರಾಕ್ಷಿ ಬೆಳೆಗಾರರಿಗೆ ಅಕಾಲಿಕ ಮಳೆಯಿಂದ ಭಾರಿ ನಷ್ಟ ಸಂಭವಿಸಿತ್ತು. ಇದೀಗ ಮತ್ತೊಮ್ಮೆ ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದೆ. ಅದರಲ್ಲಿ ಅಳಿದು ಉಳಿದ ದ್ರಾಕ್ಷಿಯನ್ನು …
Read More »ಬೆಳಗಾವಿ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಹತ್ಯೆ
ಬೆಳಗಾವಿ: ಮಾರಕಾಸ್ತ್ರಗಳಿಂದ ಹಲ್ಲೆಗೈದು ಯುವಕನನ್ನು ಹತ್ಯೆಗೈದಿರುವ ಘಟನೆ ಬೆಳಗಾವಿ ತಾಲೂಕಿನ ರಣಕುಂಡೆ ಗ್ರಾಮದಲ್ಲಿ ತಡರಾತ್ರಿ ನಡೆದಿದೆ. ನಾಗೇಶ್ ಪಾಟೀಲ್ (30) ಮೃತ ಯುವಕ. ಹಳೆಯ ವೈಷಮ್ಯದ ಕಾರಣಕ್ಕೆ ಕೃತ್ಯ ಎಸಗಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ತಡರಾತ್ರಿ ಯುವಕನ ಮನೆಗೆ ನುಗ್ಗಿರುವ ದುಷ್ಕರ್ಮಿಗಳ ತಂಡ ಹಲ್ಲೆ ಮಾಡಿದ್ದಾರೆ. ಬಳಿಕ ಯುವಕನನ್ನು ಎಳೆದೊಯ್ದು ಮಾರಕಾಸ್ತ್ರಗಳಿಂದ ಹತ್ಯೆಗೈಯಲಾಗಿದೆ. ಶವವನ್ನು ಮನೆಯ ಬಳಿ ಎಸೆದು ಹಂತಕರು ಪರಾರಿಯಾಗಿದ್ದಾರೆ. ಬೆಳಗಾವಿ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, …
Read More »ಜೈನ್ ಮಂದಿರ ಜೀರ್ಣೋದ್ಧಾರ ವಿಚಾರಕ್ಕೆ ಗಲಾಟೆ
ಬೆಳಗಾವಿ: ತಾಲೂಕಿನ ಮಚ್ಛೆ ಗ್ರಾಮದಲ್ಲಿ ಪುರಾತನ ಕಾಲದ ಜೈನ ಮಂದಿರ. ಜೈನ ಮಂದಿರದ ಜೀರ್ಣೋದ್ಧಾರ ವಿಚಾರಕ್ಕೆ ಜೈನ ಸಮುದಾಯದ ಎರಡು ಪಂಗಡಗಳ ಮಧ್ಯೆ ಗಲಾಟೆ ಉಂಟಾಗಿದೆ. ಜೈನ ಮಂದಿರದಲ್ಲಿರುವ ಜಿನಬಿಂಬ ಉತ್ತಾಪನೆ ಮಾಡುವ ವೇಳೆ ಎರಡು ಪಂಗಡಗಳ ಸದಸ್ಯರ ಮಧ್ಯೆ ಘರ್ಷಣೆ ನಡೆದಿದ್ದು, ಮಂದಿರದಲ್ಲಿದ್ದ ಮೂರ್ತಿ ಆವರಣಕ್ಕೆ ಬಂದಿದೆ. ಮಚ್ಛೆ ಗ್ರಾಮದ 1008 ಭಗವಾನ್ ಮಹಾವೀರ ದಿಗಂಬರ ಜೈನ ಮಂದಿರ ಜೀರ್ಣೊದ್ಧಾರ ವಿಚಾರಕ್ಕೆ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದಿದೆ. ತೀರ್ಪಿನಂತೆ …
Read More »ಯಂತ್ರದ ಬೆಲ್ಟ್ಗೆ ವೇಲ್ ಸಿಲುಕಿ ಯುವತಿ ಸಾವು: ಕಾರ್ಖಾನೆ ಮಾಲೀಕನ ವಿರುದ್ಧ ಪ್ರಕರಣ
ಬೆಂಗಳೂರು: ಫ್ಯಾಕ್ಟರಿಯಲ್ಲಿ ಕೆಲಸ ಮಾಡುವ ವೇಳೆ ನಡೆದ ಯಡವಟ್ಟಿಗೆ ಯುವತಿ ಬಲಿಯಾದ ಘಟನೆ ಚಂದ್ರಾಲೇಔಟ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ಸಂಜೆ ನಡೆದಿದೆ. ನಾಯಂಡಹಳ್ಳಿಯ ಜೆಡ್ ಎಸ್ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಸಂಜೆ 5.15ರ ಸುಮಾರಿಗೆ ದುರಂತ ಸಂಭವಿಸಿದೆ. ಶಾಜಿಯಾ (28) ಮೃತ ಯುವತಿ. ಯಂತ್ರವನ್ನು ಸ್ವಿಚ್ ಆಫ್ ಮಾಡುವಾಗ ಯಂತ್ರದ ಬೆಲ್ಟ್ಗೆ ತಾನು ಧರಿಸಿದ್ದ ವೇಲ್ ಸಿಲುಕಿ ಯಂತ್ರದ ಮೇಲೆ ಬಿದ್ದಿದ್ದಾರೆ. ಈ ವೇಳೆ ತಲೆಗೆ ತೀವ್ರವಾದ ಪೆಟ್ಟಾಗಿದೆ. ಆಸ್ಪತ್ರೆಗೆ ಸಾಗಿಸುವ …
Read More »ಪಂಜಾಬ್ ಕಿಂಗ್ಸ್ ತಂಡವು ಚೆನ್ನೈ ಸೂಪರ್ ವಿರುದ್ಧ ಅಮೋಘ ಜಯ,ಚೆನ್ನೈಗೆ ಸತತ 3ನೇ ಸೋಲು
ಮುಂಬೈ: ಲಿಯಾಮ್ ಲಿವಿಂಗ್ಸ್ಟೋನ್ ಆಕರ್ಷಕ ಆಲ್ರೌಂಡ್ ಪ್ರದರ್ಶನದ ಫಲವಾಗಿ ಪಂಜಾಬ್ ಕಿಂಗ್ಸ್ ತಂಡವು ಚೆನ್ನೈ ಸೂಪರ್ ವಿರುದ್ಧ ಅಮೋಘ ಜಯ ದಾಖಲಿಸಿತು. ಇಲ್ಲಿನ ಬ್ರಬೋರ್ನ್ ಕ್ರೀಡಾಂಗಣದಲ್ಲಿ ಐಪಿಎಲ್ ಟೂರ್ನಿಯ ಭಾನುವಾರದ ಪಂದ್ಯದಲ್ಲಿ ರವೀಂದ್ರ ಜಡೇಜಾ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ಹಾಗು ಮಯಾಂಕ್ ಅಗರ್ವಾಲ್ ನೇತೃತ್ವದ ಪಂಜಾಬ್ ಕಿಂಗ್ಸ್ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಪಂಜಾಬ್ ತಂಡ ಚೆನ್ನೈಗೆ 54 ರನ್ಗಳ ಸೋಲುಣಿಸಿತು.
Read More »ಇ-ಶ್ರಮ್ ಕಾರ್ಡ್ ಹೊಂದಿದ ಕಾರ್ಮಿಕರಿಗೆ ಗುಡ್ ನ್ಯೂಸ್: ಸಿಗಲಿದೆ ಹಲವು ಸೌಲಭ್ಯ
ನವದೆಹಲಿ: ಅಸಂಘಟಿತ ವರ್ಗದ ಜನರಿಗೆ ಇ-ಶ್ರಮ್ ಕಾರ್ಡ್ ಮೂಲಕ ಸರ್ಕಾರ ಸಾಕಷ್ಟು ಸಹಾಯ ಮಾಡುತ್ತಿದೆ, ಇ-ಶ್ರಮ್ ಕಾರ್ಡ್ ಯೋಜನೆಗೆ ಸಂಬಂಧಿಸಿದ ಜನರ ಖಾತೆಗಳಿಗೆ ಮುಂದಿನ ಕಂತು 500 ರೂ.ಗಳನ್ನು ಸರ್ಕಾರ ಮತ್ತೊಮ್ಮೆ ಕಳುಹಿಸಲಿದೆ. ಕಂತಿನ ಹೊರತಾಗಿ ಫಲಾನುಭವಿಗಳು ಹಲವು ಸವಲತ್ತುಗಳನ್ನು ಪಡೆಯುತ್ತಿದ್ದಾರೆ. ಈ ಯೋಜನೆಯ ಪ್ರಕಾರ, ಅನೇಕ ಪ್ರಯೋಜನಗಳನ್ನು ಜನರಿಗೆ ನೀಡಲಾಗುತ್ತಿದೆ. ಕೆಲ ಯೋಜನೆಗಳಲ್ಲಿ ಉದ್ಯೋಗ, ವಿಮೆಯಂತಹ ಸೌಲಭ್ಯಗಳನ್ನು ನೀಡಿದರೆ ಮತ್ತೊಂದೆಡೆ ಕೆಲವು ಯೋಜನೆಗಳಲ್ಲಿ ಜನರಿಗೆ ಆರ್ಥಿಕ ನೆರವು ನೀಡಲಾಗುತ್ತದೆ. …
Read More »ಬಳ್ಳಾರಿಯ ಗುಡ್ಡವೊಂದರಲ್ಲಿ ಪತ್ತೆಯಾಗಿದ್ದ ತಲೆಬುರುಡೆಯ ನಿಗೂಢ ಪ್ರಕರಣ ಭೇದಿಸಿದ ಪೊಲೀಸರು!
ಬಳ್ಳಾರಿ: ಮಾರ್ಚ್ 19 ರಂದು ಕಂಪ್ಲಿ ತಾಲೂಕಿನ ವಿಠ್ಠಲಾಪುರದ ಗುಡ್ಡದಲ್ಲಿ ಪತ್ತೆಯಾಗಿದ್ದ ಅನಾಮಧೇಯ ವ್ಯಕ್ತಿಯ ತಲೆಬುರುಡೆ ಪ್ರಕರಣವನ್ನು ಬಳ್ಳಾರಿ ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಲೆ ಬುರುಡೆ, ಶರ್ಟ್ ಆಧಾರದ ಮೇಲೆ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಮಾರ್ಚ್ 19 ರಂದು ಕಂಪ್ಲಿ ತಾಲೂಕಿನ ವಿಠ್ಠಲಾಪುರದ ಗುಡ್ಡದಲ್ಲಿ ಕೊಲೆ ನಡೆದಿತ್ತು. ಜೇರ್ವಗಿ ತಾಲೂಕಿನ ಬಳ್ಳಂಡುಗಿ ತಾಲೂಕಿನ ಅಮರೇಶ ಕೊಲೆಯಾಗಿದ್ದ ವ್ಯಕ್ತಿ. ಅಮರೇಶ ಕೊಪ್ಪಳ ಜಿಲ್ಲೆ ಗಂಗಾವತಿ ಪಟ್ಟಣದ ಇಂದಿರಾ ಪ್ಲಾಂಟ್ನಲ್ಲಿ ಹಮಾಲಿ ಕೆಲಸ …
Read More »