ಬೆಂಗಳೂರು: ಲಾರಿಗಳಲ್ಲಿ ಡೀಸೆಲ್ ಕದಿಯುತ್ತಿದ್ದ ಕಳ್ಳರ ಮೇಲೆ ಬೆಳ್ಳಂಬೆಳಗ್ಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ಸಮೀಪದ ಜಿಗಣಿ ಕೈಗಾರಿಕಾ ಪ್ರದೇಶದ ಕೆಇಬಿ ಸರ್ಕಲ್ ಬಳಿ ನಡೆದಿದೆ. ಭಾನುವಾರ ಬೆಳಗ್ಗಿನ ಜಾವ ಪೊಲೀಸರು ಡೀಸೆಲ್ ಕದಿಯಲು ಬಂದಿದ್ದ ಬಳ್ಳಾರಿ ಮೂಲದ ವ್ಯಕ್ತಿ ಶ್ರೀನಿವಾಸ್ ಕಾಲಿಗೆ ಗುಂಡು ಹೊಡೆದಿದ್ದಾರೆ. ಮತ್ತೋರ್ವ ಸಹಚರ ಕಲಬುರಗಿ ಮೂಲದ ಚಾಲಕ ಮಲ್ಲನಗೌಡನನ್ನು ಬಂಧಿಸಿದ್ದಾರೆ. ಭಾನುವಾರ ಮುಂಜಾನೆ 5 ಗಂಟೆ ಸುಮಾರಿಗೆ ಜಿಗಣಿ ಠಾಣೆ ಇನ್ಸ್ಪೆಕ್ಟರ್ …
Read More »Yearly Archives: 2022
ಜಯಪುರದಲ್ಲಿ ‘ದಿ ಕಾಶ್ಮೀರ್ ಫೈಲ್ಸ್’ ಉಚಿತ ಪ್ರದರ್ಶನ ಘೋಷಿಸಿದ ಶಾಸಕ ಯತ್ನಾಳ್; ಎಂದಿನಿಂದ? ಇಲ್ಲಿದೆ ಮಾಹಿತಿ
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ವಿಜಯಪುರದಲ್ಲಿ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ಉಚಿತ ಪ್ರದರ್ಶನಕ್ಕೆ ವ್ಯವಸ್ಥೆ ಮಾಡುವುದಾಗಿ ಘೋಷಿಸಿದ್ದಾರೆ. ಈ ಹಿಂದೆ ಕೂಡ ಕೆಲವು ಚಿತ್ರಗಳಿಗೆ ಯತ್ನಾಳ್ ಉಚಿತ ಪ್ರದರ್ಶನ ಏರ್ಪಡಿಸಿದ್ದರು. ಚಿತ್ರವನ್ನು ವಿಧಾನಸಭೆ ಸಚಿವಾಲಯದಿಂದ ರಾಜ್ಯದ ಶಾಸಕರು ಹಾಗೂ ಸಚಿವರ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ. ಈ ನಡುವೆ ಮಾಜಿ ಸಚಿವ, ಹಾಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ವಿಜಯಪುರದಲ್ಲಿ ಚಿತ್ರದ ಉಚಿತ ಪ್ರದರ್ಶನ …
Read More »ಇನ್ಮುಂದೆ ವಾಹನ ನೋಂದಣಿ ಮತ್ತಷ್ಟು ದುಬಾರಿ.!
ಕೇಂದ್ರ ಸರ್ಕಾರವು ವಾಹನ ಗುಜರಿ ನೀತಿಯಡಿಯಲ್ಲಿ ವಾಹನ ಮರುನೋಂದಣಿ ಹಾಗೂ ಫಿಟ್ನೆಸ್ ಟೆಸ್ಟ್ ಶುಲ್ಕವನ್ನು ಹೆಚ್ಚಿಸಿದ್ದು, ಇದರಿಂದಾಗಿ ಮಾಲೀಕರು ತಮ್ಮ ಹಳೆಯ ವಾಹನಗಳನ್ನು ಗುಜರಿಗೆ ಹಾಕುವ ನಿರ್ಧಾರ ತೆಗೆದುಕೊಳ್ಳಬಹುದು ಎಂದು ನಿರೀಕ್ಷಿಸಲಾಗಿದೆ.ದೇಶದ ಹಳೆಯ ವಾಹನಗಳ ನೋಂದಣಿ (vehicle registration) ಮುಂದಿನ ತಿಂಗಳಿಂದ ಮತ್ತಷ್ಟು ದುಬಾರಿಯಾಗಲಿದೆ. ವಾಹನ ಗುಜುರಿ ನೀತಿ (vehicle scrappage policy) ಅಡಿಯಲ್ಲಿ 15 ವರ್ಷಕ್ಕಿಂತ ಹಳೆಯದಾದ ವಾಹನಗಳ ಮರು-ನೋಂದಣಿಯನ್ನು 8 ಪಟ್ಟು ಹೆಚ್ಚಿಸಲಾಗಿದೆ. ಈ ಹೊಸ ದರವು …
Read More »ಜೇಮ್ಸ್’ ಬಿಡುಗಡೆಗೆ ಕೌಂಟ್ಡೌನ್ ವಿದೇಶದಲ್ಲೂ ಕಾರ್ ರ್ಯಾಲಿ ಮಾಡಿ, ಪಟಾಕಿ ಹೊಡೆಯಲಿರುವ ಫ್ಯಾನ್ಸ್
ಮಾ.17ರಂದು ಭಾರತ ಮಾತ್ರವಲ್ಲದೇ ಇತರೆ ಅನೇಕ ದೇಶಗಳಲ್ಲೂ ‘ಜೇಮ್ಸ್’ ಸಿನಿಮಾ ಬಿಡುಗಡೆ ಆಗುತ್ತಿದೆ. ಈ ಬಗ್ಗೆ ವಿತರಕ ಕಿರಣ್ ನೀಡಿದ ಮಾಹಿತಿ ಇಲ್ಲಿದೆ..‘ಪವರ್ ಸ್ಟಾರ್’ ಪುನೀತ್ ರಾಜ್ಕುಮಾರ್ (Puneeth Rajkumar) ನಟನೆಯ ‘ಜೇಮ್ಸ್’ ಸಿನಿಮಾದ ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಈ ಚಿತ್ರವನ್ನು ಅಭಿಮಾನಿಗಳು (Puneeth Rajkumar Fans) ಕಣ್ತುಂಬಿಕೊಳ್ಳಲು ಎರಡೇ ದಿನ ಬಾಕಿ ಇದೆ. ಕರ್ನಾಟಕದಲ್ಲಿ ಮಾತ್ರವಲ್ಲದೇ ವಿಶ್ವಾದ್ಯಂತ ‘ಜೇಮ್ಸ್’ ಚಿತ್ರವನ್ನು ಬಿಡುಗಡೆ ಮಾಡಲಾಗುತ್ತಿದೆ. ಕೆನಡಾದಲ್ಲಿ ನೆಲೆಸಿರುವ ಕನ್ನಡಿಗ ಕಿರಣ್ ಅವರು ವಿದೇಶದಲ್ಲಿ ವಿತರಣೆಯ …
Read More »12-14 ವರ್ಷಗಳವರೆಗೆ COVID-19 ಲಸಿಕೆ, ಇಲ್ಲಿದೆ ನೋಂದಾಣಿ ಬಗ್ಗೆ ಮಾಹಿತಿ
ಮಕ್ಕಳು ಮತ್ತು ವೃದ್ಧರ ಪೋಷಕರು ಲಸಿಕೆ ಹಾಕಿಸಿಕೊಳ್ಳುವಂತೆ ಆರೋಗ್ಯ ಸಚಿವರು ಮನವಿ ಮಾಡಿದರು. ಕೋವಿಡ್-19 ಲಸಿಕೆಗೆ ಮತ್ತು ಮುನ್ನೆಚ್ಚರಿಕೆ ಡೋಸ್ ಗಳಿಗಾಗಿ ನೀವು ಹೇಗೆ ನೋಂದಾಯಿಸಿಕೊಳ್ಳಬಹುದು ಎಂಬುದು ಇಲ್ಲಿದೆ: 1. ಮೊದಲಿಗೆ, ಲಿಂಕ್ ಬಳಸಿ ಕೋ-ವಿನ್ ಪೋರ್ಟಲ್ ಅನ್ನು www.cowin.gov.in 2. ನಂತರ ಕೋವಿಡ್-19 ಲಸಿಕೆಗೆ ನೋಂದಾಯಿಸಲು ‘ರಿಜಿಸ್ಟರ್/ಸೈನ್ ಇನ್’ ಟ್ಯಾಬ್ ಮೇಲೆ 3. ನೀವು ಈಗಾಗಲೇ ಪೋರ್ಟಲ್ ನಲ್ಲಿ ನೋಂದಾಯಿತ ಸದಸ್ಯರಾಗಿದ್ದರೆ, ಹೊಸ ಖಾತೆಯನ್ನು ರಚಿಸಲು ನಿಮ್ಮ ರುಜುವಾತುಗಳನ್ನು …
Read More »ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳ ಕುರಿತು ಹೈಕೋರ್ಟ್ ನಿಂದ ಮಹತ್ವದ ಆದೇಶ
ಬೆಂಗಳೂರು: ಕರ್ನಾಟಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳ (ನೇಮಕಾತಿ ಮೀಸಲಾತಿ ಇತ್ಯಾದಿ) ಅಡಿಯಲ್ಲಿ ನೀಡಲಾದ ಜಾತಿ ಪ್ರಮಾಣಪತ್ರ ಮತ್ತು ಆದಾಯ ಪ್ರಮಾಣಪತ್ರ ( caste certificate and income certificate ) (ಕೆನೆಪದರ ಪ್ರಮಾಣಪತ್ರ) ಎರಡು ವಿಭಿನ್ನ ಮತ್ತು ವಿಭಿನ್ನ ಪ್ರಮಾಣಪತ್ರಗಳಾಗಿವೆ. ಎರಡನ್ನೂ ಒಂದೇ ರೀತಿ ಪರಿಗಣಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ( Karnataka High Court ) ಹೇಳಿದೆ. ಆಯ್ಕೆ ಪ್ರಾಧಿಕಾರ …
Read More »ರಾಜ್ಯದ ‘ಪೌರ ಕಾರ್ಮಿಕ’ರಿಗೆ ಗುಡ್ ನ್ಯೂಸ್: ಶೀಘ್ರವೇ ಖಾಯಂಗೊಳಿಸುವ ಬಗ್ಗೆ ಸರ್ಕಾರ ನಿರ್ಧಾರ – ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹಲವು ವರ್ಷಗಳಿಂದ ಪೌರಕಾರ್ಮಿಕರು ( Civic Workers ) ಖಾಯಂ ನಿರೀಕ್ಷೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಇವರನ್ನು ಖಾಯಂ ಮಾಡುವ ಬಗ್ಗೆ ರಾಜ್ಯ ಸರ್ಕಾರ ಶೀಘ್ರವೇ ಸೂಕ್ತ ನಿರ್ಧಾರವನ್ನು ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದ್ದಾರೆ. ಇಂದು ವಿಧಾನಸಭೆಯಲ್ಲಿ ಶೂನ್ಯ ವೇಳೆಯಲ್ಲಿ ವಿಪಕ್ಷ ನಾಯಕ ಸಿದ್ಧರಾಮಯ್ಯ ಹಾಗೂ ಶಾಸಕ ಪಿ ರಾಜೀವ್ ಮಾಡಿದ ಪ್ರಸ್ತಾಪಕಕ್ಕೆ ಉತ್ತರ …
Read More »ಅದಾನಿ, ಅಂಬಾನಿ ನನ್ನ ದೊಡ್ಡಪ್ಪ ಚಿಕ್ಕಪ್ಪ ಅಲ್ಲ, ವಾದ್ರಾ ತಪ್ಪು ಮಾಡಿದ್ರೆ ಆತನೂ ಮಣ್ಣು ತಿನ್ನುತ್ತಾನೆ: ರಮೇಶ್ ಕುಮಾರ್
ಬೆಂಗಳೂರು: ಅದಾನಿ, ಅಂಬಾನಿ ನನ್ನ ದೊಡ್ಡಪ್ಪ ಚಿಕ್ಕಪ್ಪ ಅಲ್ಲ. ಉಳಿದವರು ನಮ್ಮ ಸೋದರ ಮಾವನ ಮಕ್ಕಳು ಅಲ್ಲವೆಂದು ಮಾಜಿ ಸ್ಪೀಕರ್, ಶಾಸಕ ರಮೇಶ್ ಕುಮಾರ್ ವಾಗ್ದಾಳಿ ನಡೆಸಿದರು. ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆ ವೇಳೆ ಮಾತನಾಡುತ್ತಾ, ದೇಶದ ಗಂಟು ತಿಂದವರು ಯಾರೇ ಆದರೂ ಅವರು ದೇಶದ್ರೋಹಿಗಳು. ರಾಬರ್ಟ್ ವಾದ್ರಾ ಮಾಡಿದರೆ ಆತನೂ ಮಣ್ಣು ತಿನ್ನುತ್ತಾನೆ. ನಾನೇನು ವಕಾಲತ್ತು ಹಾಕಿದ್ದೀನಾ ಎಂದು ಪ್ರಶ್ನಿಸಿದರು. ಅದಾನಿ, ಅಂಬಾನಿ ಆಸ್ತಿ ಹೆಚ್ಚಳ ವಿಚಾರವಾಗಿ ಮಾತನಾಡುತ್ತಾ, ರಾಜ್ಯ …
Read More »ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿರ್ಬಂಧ: ನಾಳೆ ಹೈಕೋರ್ಟ್ನಿಂದ ಅಂತಿಮ ತೀರ್ಪು
ಬೆಂಗಳೂರು: ರಾಜ್ಯದ ಕೆಲ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಿ ಬರದಂತೆ ಮುಸ್ಲಿಂ ವಿದ್ಯಾರ್ಥಿನಿಯರನ್ನು ನಿರ್ಬಂಧಿಸಿರುವ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ಸಂಬಂಧ ಹೈಕೋರ್ಟ್ ನಾಳೆ ತೀರ್ಪು ಪ್ರಕಟಿಸಲಿದೆ. ತರಗತಿಗೆ ಹಿಜಾಬ್ ಧರಿಸಿ ಬಾರದಂತೆ ನಿರ್ಬಂಧಿಸಿರುವ ಕ್ರಮ ಪ್ರಶ್ನಿಸಿ ಉಡುಪಿಯ ಸರ್ಕಾರಿ ಮಹಿಳಾ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿ ರೇಷಮ್ ಸೇರಿದಂತೆ ಇತರೆ ವಿದ್ಯಾರ್ಥಿನಿಯರು ಹಾಗೂ ಅವರ ಪೋಷಕರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗಳ ವಿಚಾರಣೆಯನ್ನು ಫೆಬ್ರವರಿ 25ರಂದು ಪೂರ್ಣಗೊಳಿಸಿದ್ದ ಹೈಕೋರ್ಟ್ ತ್ರಿಸದಸ್ಯ ಪೀಠ …
Read More »ಸಾರಿಗೆ ಬಸ್ ಪಲ್ಟಿಯಾಗಿ 20 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ಲಕ್ಷ್ಮೇಶ್ವರ(ಗದಗ): ಸಾರಿಗೆ ಸಂಸ್ಥೆಯ ಬಸ್ ಪಲ್ಟಿಯಾಗಿ 20 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ತಾಲೂಕಿನ ಗೋನಾಳ ಗ್ರಾಮದ ಬಳಿ ಸೋಮವಾರ ನಡೆದಿದೆ. ಗದಗ ಹಾವೇರಿ ಮಾರ್ಗದಲ್ಲಿ ಸಂಚಾರಿಸುತ್ತಿದ್ದ ಬಸ್ ಚಾಲಕನ ನಿಯಂತ್ರಣದ ತಪ್ಪಿ, ಈ ದುರ್ಘಟನೆ ಸಂಭವಿಸಿದೆ. ಬಸ್ನಲ್ಲಿ ಸುಮಾರು ೫೦ ಜನರ ಪ್ರಯಾಣಿಕರಿದ್ದರು. ಅವರಲ್ಲಿ ೨೦ಕ್ಕೂ ಹೆಚ್ಚು ಜನರು ಗಾಯಾಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಸಮೀಪದ ಲಕ್ಷೇಶ್ವರ ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಲಕ್ಷ್ಮೇಶ್ವರ ಠಾಣಾ ಪೊಲೀಸರು …
Read More »