Breaking News

Yearly Archives: 2022

ಹೃದಯಾಘಾತದಿಂದ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ವೈಸ್ ಚೇರ್ಮನ್ ವಿಕ್ರಮ್ ಕಿರ್ಲೋಸ್ಕರ್ ನಿಧನ

ಬೆಂಗಳೂರು: ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ವೈಸ್ ಚೇರ್ಮನ್ ವಿಕ್ರಮ್ ಕಿರ್ಲೋಸ್ಕರ್(64) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ವಿಕ್ರಮ್ ಕಿರ್ಲೋಸ್ಕರ್ ಭಾರತದ ವಾಹನೋದ್ಯಮದ ದಿಗ್ಗಜರಲ್ಲಿ ಒಬ್ಬರು. ವಿಕ್ರಮ್ ಕಿರ್ಲೋಸ್ಕರ್ ಅವರು ತೀವ್ರ ಹೃದಯಾಘಾತದಿಂದ ಬಳಲುತ್ತಿದ್ದರು.   ಟೊಯೊಟಾ ಇಂಡಿಯಾ ತನ್ನ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ ಗಳಲ್ಲಿ ನಿಧನದ ಸುದ್ದಿಯನ್ನು ದೃಢಪಡಿಸಿದೆ. ನವೆಂಬರ್ 29, 2022 ರಂದು ಟೊಯೊಟಾ ಕಿರ್ಲೋಸ್ಕರ್ ಮೋಟಾರ್‌ನ ಉಪಾಧ್ಯಕ್ಷರಾದ ಶ್ರೀ ವಿಕ್ರಮ್ ಎಸ್.ಕಿರ್ಲೋಸ್ಕರ್ ಅವರ ಅಕಾಲಿಕ ನಿಧನವನ್ನು ತಿಳಿಸಲು ನಾವು ತುಂಬಾ …

Read More »

ಮೀಸಲು ಎಡವಟ್ಟು ಇಕ್ಕಟ್ಟು: ಶಿಕ್ಷಕರ ತಾತ್ಕಾಲಿಕ ಆಯ್ಕೆಪಟ್ಟಿಗೆ ಆಕಾಂಕ್ಷಿಗಳಿಂದ ಭಾರಿ ಆಕ್ರೋಶ

ಇಟಿ, ಸಿಇಟಿಗಳನ್ನು ಎದುರಿಸಿ ಎಲ್ಲ ಅರ್ಹತೆಗಳೊಂದಿಗೆ ಅಯ್ಕೆಪಟ್ಟಿಯಲ್ಲಿ ಅವಕಾಶ ಪಡೆದಿದ್ದರೂ, ಮೀಸಲಾತಿ ಅನ್ವಯಿಸುವ ವಿಚಾರದಲ್ಲಿ ಉಂಟಾಗಿರುವ ಗೊಂದಲದಿಂದಾಗಿ ಅವಕಾಶ ಕೈತಪುಪತ್ತಿದೆ ಎಂದು ಪದವೀಧರ ಪ್ರಾಥಮಿಕ ಶಾಲಾ ಶಿಕಕ್ಷರ ಹುದ್ದೆಯ ಸಾವಿರಾರು ಆಕಾಂಕ್ಷಿಗಳು ಇಲಾಖೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕಲ್ಯಾಣ ಕರ್ನಾಟಕ ಹಾಗೂ ಮಹಿಳಾ ‘ಮೀಸಲಾತಿ’ ನೀಡುವಲ್ಲಿ ಉಂಟಾಗಿರುವ ಎಡವಟ್ಟು ಇದಕ್ಕೆ ಕಾರಣವೆಂದು ದೂರಿದ್ದಾರೆ. ಈ ಗೊಂದಲವನ್ನು ಸರಿಪಡಿಸುವಂತೆ ಭಾವಿ ಶಿಕ್ಷಕರ ವಲಯದಿಂದ ಒತ್ತಾಯ ಕೇಳಿಬಂದಿದೆ. ಶಿಕ್ಷಕರ ನೇಮಕಾತಿ ಸಂಬಂಧ …

Read More »

ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿದ C.M. ಬೊಮ್ಮಾಯಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕೇಂದ್ರ ಜವಳಿ ವಾಣಿಜ್ಯ ಮತ್ತು ಕೈಗಾರಿಕೆ ಗ್ರಾಹಕ ವ್ಯವಹಾರಗಳ ಸಚಿವಾಲಯ ಹಾಗೂ ಆಹಾರ ಮತ್ತು ಸಾರ್ವಜನಿಕ ವಿತರಣೆ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿದರು. ಈ ವೇಳೆ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರ ಜೊತೆಗೆ ರಾಜ್ಯದ ವಿವಿಧ ಅಭಿವೃದ್ಧಿ ಯೋಜನೆಗೆಳ ಬಗ್ಗೆ ಮುಖ್ಯಮಂತ್ರಿಗಳು ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯದ ಬೃಹತ್ ಮತ್ತು ಮಧ್ಯಮ ನೀರಾವರಿ, ಜಲಸಂಪನ್ಮೂಲ ಸಚಿವರಾದ …

Read More »

ಇಡೀ ರಾಜ್ಯದಲ್ಲಿಯೇ ಗೋಕಾಕ್ ಮಾದರಿ ಕ್ಷೇತ್ರವನ್ನಾಗಿ ಮಾಡುವೆ: ರಮೇಶ ಜಾರಕಿಹೊಳಿ

ಗೋಕಾಕ್ ತಾಲೂಕಿನಲ್ಲಿ ಅಂಕಲಗಿ ಮತ್ತು ಅಕ್ಕತಂಗೇರಹಾಳ ಗ್ರಾಮಗಳಲ್ಲಿ ವಿವಿಧ ಕಾಮಗಾರಿಗಳಿಗೆ ಶಾಸಕ ರಮೇಶ ಜಾರಕಿಹೊಳಿ ಭೂಮಿ ಪೂಜೆ ನೆರವೇರಿಸಿದರು. ನಗರೋತ್ತಾನ ಯೋಜನೆಯಡಿ 5 ಕೋಟಿ ರೂಪಾಯಿ ಮತ್ತು 15ನೇ ಹಣಕಾಸಿನ ಯೋಜನೆಯಡಿ 2.5 ಕೋಟಿ ರೂಪಾಯಿ ವೆಚ್ಛದಲ್ಲಿ ರಸ್ತೆ ನಿರ್ಮಾಣ ಸೇರಿ ಇನ್ನಿತರ ಕಾಮಗಾರಿಗಳಿಗೆ ಶಾಸಕ ರಮೇಶ ಜಾರಕಿಹೊಳಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು 20ಕ್ಕೂ ಹೆಚ್ಚು ವರ್ಷಗಳ ಕಾಲ ತಮ್ಮ ಸೇವೆ ಮಾಡಲು ನನಗೆ ಅವಕಾಶ ಮಾಡಿಕೊಟ್ಟಿದ್ದಿರಿ. …

Read More »

ಕಾಂಗ್ರೆಸ್‌ ದಲ್ಲಿ ಎಷ್ಟು ಜನ ರೌಡಿಶೀಟರ್ ಇದ್ದಾರೆ ಎಂದು ಕಾಂಗ್ರೆಸ್‌ ಲೆಕ್ಕ ಹಾಕಲಿ:C.M.

ನವದೆಹಲಿ: ತಮ್ಮ ಪಕ್ಷದಲ್ಲಿ ಎಷ್ಟು ಜನ ರೌಡಿಶೀಟರ್ ಇದ್ದಾರೆ ಎಂದು ಕಾಂಗ್ರೆಸ್‌ ಲೆಕ್ಕ ಹಾಕಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದರು. ಸೈಲೆಂಟ್ ಸುನೀಲ್ ಜೊತೆಗೆ ಬಿಜೆಪಿ ನಾಯಕರು ವೇದಿಕೆ ಹಂಚಿಕೊಂಡ‌ ವಿಚಾರದ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಅವರು ಪ್ರತಿಕ್ರಿಯೆ ನೀಡಿದರು.   ಪಕ್ಷದ ಅಧ್ಯಕ್ಷ ಜೆ.ಪಿ ನಡ್ಡಾ ಅವರ ಸಮಯ ಕೇಳಿದ್ದು, ನಾಳೆ ಸಮಯ ದೊರೆಯುವ ವಿಶ್ವಾಸವಿದೆ ಎಂದರು. ಕೇಂದ್ರ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್, ಭೂಪೇಂದ್ರ …

Read More »

ನಾಳೆ ಗಡಿ ವಿವಾದ ವಿಚಾರಣೆ ಸಮರ್ಥ ವಾದ ನಡೆಸುವ ಭರವಸೆ: ಬೊಮ್ಮಾಯಿ

ನವದೆಹಲಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಪ್ರಕರಣ ಇದೇ 30 ರಂದು ವಿಚಾರಣೆಗೆ ಬರಲಿದ್ದು, ಈ ಕುರಿತು ಹಿರಿಯ ವಕೀಲ ಮುಕುಲ್ ರೋಹಟಗಿ ಅವರು ಕರ್ನಾಟಕದ ಪರವಾಗಿ ಸಮರ್ಥವಾಗಿ ವಾದ ಮಾಡುವ ಭರವಸೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.   ನವದೆಹಲಿಯಲ್ಲಿ ಹಿರಿಯ ವಕೀಲ ಮುಕುಲ್ ರೋಹಟಗಿ ಅವರನ್ನು ಮಂಗಳವಾರ ಭೇಟಿಯಾದ ಬಳಿಕ ಮಾಧ್ಯಮಗಳಿಗೆ ಅವರು ಪ್ರತಿಕ್ರಿಯೆ ನೀಡಿದರು. ಮುಕುಲ್ ರೋಹಟಗಿ ಹಿರಿಯ ವಕೀಲರಾಗಿದ್ದು, ಕರ್ನಾಟಕ ಮತ್ತು ಮಹಾರಾಷ್ಟ್ರ …

Read More »

ಬೊಮ್ಮಾಯಿ ಸಾಹೇಬರೇ ನಮ್ಮನ್ನು ಕರ್ನಾಟಕಕ್ಕೆ ಸೇರಿಸಿಕೊಳ್ಳಿ..:ಜತ್ ತಾಲ್ಲೂಕು ಕನ್ನಡ ಹೋರಾಟ ಸಮಿತಿ

ಮೊದಲ ಬಾರಿಗೆ ಸಿಎಂ ಬೊಮ್ಮಾಯಿ ಅವರು ನಮ್ಮ ಪರವಾಗಿ ಮಾತನಾಡಿದ್ದಾರೆ. ಹೀಗಾಗಿ ಕರ್ನಾಟಕ ಮುಖ್ಯಮಂತ್ರಿಗಳ ಹೇಳಿಕೆ ಸ್ವಾಗತಿಸುತ್ತೇವೆ ಎಂದು ಜತ್ ತಾಲ್ಲೂಕು ಕನ್ನಡ ಹೋರಾಟ ಸಮಿತಿಯ ಸೋಮಲಿಂಗ್ ಚೌಧರಿ, ಗೌಡೇಶ ಮಾಡಳ್ಳಿ ಹೇಳಿಕೆ ನೀಡಿದ್ದಾರೆ. ಮಂಗಳವಾರ ಬೆಳಗಾವಿಯ ಖಾಸಗಿ ಹೊಟೇಲ್‍ನಲ್ಲಿ ಮಹಾರಾಷ್ಟ್ರದ ಜತ್ ಕನ್ನಡಿಗರು ಕರ್ನಾಟಕ ನವ ನಿರ್ಮಾಣ ಸೇನೆ ರಾಜ್ಯಾಧ್ಯಕ್ಷ ಭೀಮಾಶಂಕರ ಪಾಟೀಲ್ ನೇತೃತ್ವದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. 50 ವರ್ಷ ಆಯ್ತು ಮಹಾರಾಷ್ಟ್ರ ಸರ್ಕಾರ, ಜನಪ್ರತಿನಿಧಿಗಳು ಬರೀ …

Read More »

ನಾಗರಹಾವು ಕಚ್ಚಿದರಿಂದ ಸಾವನಪ್ಪಿದ ಸದಲಗಾ ಪಟ್ಟಣದ ರೈತ

ಚಿಕ್ಕೋಡಿ ತಾಲೂಕಿನ ಸದಲಗಾ ಪಟ್ಟಣದ ರೈತ ಹೊನ್ನಪ್ಪ ಮಹಾದೇವ ಗಾವಡೆ(45) ಹೊಲದಲ್ಲಿ ಕೆಲಸ ಮಾಡುವ ಸಂಧರ್ಭದಲ್ಲಿ ನಾಗರಹಾವು ಕಚ್ಚಿದರಿಂದ ಸಾವನಪ್ಪಿದ ಘಟನೆ ನಡೆದಿದೆ.ಹೊನ್ನಪ್ಪ ಅವರಿಗೆ ನಾಗರಹಾವು ಕಚ್ಚಿರುವ ಸುದ್ದಿ ತಿಳಿದಾಕ್ಷಣ ಉಪಚಾರಕ್ಕಾಗಿ ಸಂಬಂಧಿಕರು ಚಿಕ್ಕೋಡಿ ಸರಕಾರಿ ಆಸ್ಪತ್ರೆಯಲ್ಲಿ ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದರು. ಮೃತರಿಗೆ ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರಿದ್ದಾರೆ.

Read More »

ಶ್ರೀನಗರದಲ್ಲಿ ಆಶ್ರಯ ಮನೆಗಳ ಸರ್ವೇ ಮಾಡಲು ಬಂದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಜನರು

ಬೆಳಗಾವಿಯ ಶ್ರೀನಗರದಲ್ಲಿ ಆಶ್ರಯ ಮನೆಗಳ ಸರ್ವೇ ಮಾಡಲು ಬಂದ ಅಧಿಕಾರಿಗಳ ವಿರುದ್ಧ ಜೋಪಡಿಪಟ್ಟಿಯಲ್ಲಿ ವಾಸಿಸುವ ಜನರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೌದು ಮಂಗಳವಾರ ಶ್ರೀನಗರದ ಆಶ್ರಯ ಮನೆಗಳ ಸರ್ವೇ ಮಾಡಲು ಅಧಿಕಾರಿಗಳು ಆಗಮಿಸಿದ್ದರು. ಈ ವೇಳೆ ಆಶ್ರಯ ಮನೆಗಳಲ್ಲಿ ವಾಸಿಸುವ ಜನರ ಪರಿಶೀಲನೆ ನಡೆಸುತ್ತಿದ್ದರು. ಈ ವೇಳೆ ಜೋಪಡಿಪಟ್ಟಿಯ ನಿವಾಸಿಗಳು ಸರಿಯಾಗಿ ಸರ್ವೇ ಮಾಡುವಂತೆ ಅಧಿಕಾರಿಗಳಿಗೆ ಒತ್ತಾಯಿಸಿದರು. ಇದೇ ವೇಳೆ ನಮ್ಮ  ಜೊತೆಗೆ ಮಾತನಾಡಿದ ಇಲ್ಲಿನ ನಿವಾಸಿ ಮಲ್ಲೇಶ ಹೆಳವರ …

Read More »

ಗಡಿ ವಿವಾದ ಸಂಬಂಧ ಸುಪ್ರೀಂಕೋರ್ಟನಲ್ಲಿ ಅಂತಿಮ ವಿಚಾರಣೆ ನಿಪ್ಪಾಣಿಯಲ್ಲಿ ಹೈ ಅಲರ್ಟ ಸಭೆ

ಇದೇ 30ರಂದು ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ಸಂಬಂಧ ಸುಪ್ರೀಂಕೋರ್ಟನಲ್ಲಿ ಅಂತಿಮ ವಿಚಾರಣೆ ನಡೆಯಲಿದೆ. ಹೀಗಾಗಿ ಇಂದು ಗಡಿ ತಾಲೂಕು ನಿಪ್ಪಾಣಿಯಲ್ಲಿ ಎಡಿಜಿಪಿ ಅಲೋಕ ಕುಮಾರ ನೇತೃತ್ವದಲ್ಲಿ ಹೈ ಅರ್ಲಟ್ ಸಭೆ ನಡೆಯಿತು. ನಿಪ್ಪಾಣಿ ನಗರದ ಪ್ರವಾಸಿ ಮಂದಿರದಲ್ಲಿ ಎಡಿಜಿಪಿ ಅಲೋಕ್‍ಕುಮಾರ್ ನಡೆಸಿದ ಹೈವೋಲ್ಟೇಜ್ ಸಭೆಯಲ್ಲಿ ರಾಜ್ಯದ ಬೀದರ, ಕಲಬುರಗಿ, ವಿಜಯಪುರ, ಬೆಳಗಾವಿ ಜಿಲ್ಲೆಯ ಜಿಲ್ಲಾ ಪೆÇಲೀಸ್ ವರಿμÁ್ಠದಿಕಾರಿಗಳು ಭಾಗಿಯಾಗಿದ್ದರು. ಅದೇ ರೀತಿ ಮಹಾರಾಷ್ಟ್ರ ರಾಜ್ಯದ ಕೊಲ್ಹಾಪುರ, ಸಾಂಗಲಿ, ಸಾತಾರಾ, …

Read More »