Breaking News

Yearly Archives: 2022

ಪ್ರಭಾಸ್​ ಜತೆ ‘ರಾಧೆ ಶ್ಯಾಮ್​’ ಚಿತ್ರತಂಡ ಸೇರಿದ ಶಿವಣ್ಣ;

ಇನ್ನೇನು ಕೆಲವೇ ದಿನಗಳಲ್ಲಿ ‘ರಾಧೆ ಶ್ಯಾಮ್​’ (Radhe Shyam Movie) ಸಿನಿಮಾ ಬಿಡುಗಡೆ ಆಗಲಿದೆ. ಬಹುಭಾಷಾ ನಟಿ ಪೂಜಾ ಹೆಗ್ಡೆ ಹಾಗೂ ಪ್ಯಾನ್​ ಇಂಡಿಯಾ ಸ್ಟಾರ್​ ಪ್ರಭಾಸ್​ (Prabhas) ಅಭಿನಯದ ಈ ಬಹುನಿರೀಕ್ಷಿತ ಸಿನಿಮಾ ಬಗ್ಗೆ ಸಿಕ್ಕಾಪಟ್ಟೆ ಹೈಪ್​ ಸೃಷ್ಟಿ ಆಗಿದೆ. ಆ ನಿರೀಕ್ಷೆಯನ್ನು ಇನ್ನಷ್ಟು ಹೆಚ್ಚಿಸುವಂತಹ ಹೊಸ ಸುದ್ದಿ ಈಗ ಹೊರಬಿದ್ದಿದೆ. ಮೂಲ ತೆಲುಗಿನ ಈ ಚಿತ್ರತಂಡಕ್ಕೆ ಈಗ ಶಿವರಾಜ್​ಕುಮಾರ್​ (Shivarajkumar) ಕೂಡ ಜೊತೆಯಾಗಿದ್ದಾರೆ. ಇದು ಗಾಸಿಪ್​ ಅಲ್ಲವೇ ಅಲ್ಲ. ‘ರಾಧೆ ಶ್ಯಾಮ್​’ ಸಿನಿಮಾದ ನಿರ್ಮಾಪಕರು ಸ್ವತಃ …

Read More »

ಕುಡಿದ ಮತ್ತಿನಲ್ಲಿ ಸೀರೆಯಿಂದ ಕುತ್ತಿಗೆ ಬಿಗಿದು ಪತ್ನಿ ಹತ್ಯೆ, ಸೂಸೈಡ್ ನಾಟಕವಾಡಿ ಜೈಲು ಸೇರಿದ ಪತಿ

ಚಿಕ್ಕೋಡಿ: ಕಂಠ ಪೂರ್ತಿ ಕುಡಿದು ಬಂದ ಗಂಡನಿಂದಲೇ ಪತ್ನಿಯ ಕೊಲೆ(Murder) ಆಗಿರುವ ಘಟನೆ ಬೆಳಗಾವಿ ಜಿಲ್ಲೆ ರಾಯಭಾಗ ತಾಲೂಕಿನ ನಿಡಗುಂದಿಯಲ್ಲಿ ನಡೆದಿದೆ. ಆತ ಎಂದಿನಂತೆ ಕಂಠ ಪೂರ್ತಿ ಎಣ್ಣೆ ಕುಡಿದು ಮನೆಗೆ ಬಂದಿದ್ದ ಕುಡಿದು ಬಂದು ತಾನಾಯ್ತು ತನ್ನ ನಶೆ ಗುಂಗಾಯ್ತು ಅಂತ ಸುಮ್ಮನೆ ಮಲಗಿದ್ರೆ ಆ ಸಂಸಾರದಲ್ಲಿ ಬೆಳಗ್ಗೆ ಎಲ್ಲವೂ ಸರಿಯಾಗಿಯೇ ಇರ್ತಿತ್ತು. ಆದ್ರೆ ನಶೆಮಾಡಿದ ತಪ್ಪಿಗೆ ಒಂದು ಜೀವವೇ ಬಲಿಯಾಗಿದೆ. ಪ್ರತಾಪ್ ಅಲಿಯಾಸ್ ಪ್ರದೀಪ್ ಕಾಂಬಳೆ ಹೆಂಡತಿಯನ್ನು ಕೊಂದ ಆರೋಪಿ. …

Read More »

ಮಣಿಪುರದಲ್ಲಿ ಇಂದು ಮೊದಲ ಹಂತದ ಮತದಾನ

ಇಂದು ಬೆಳಗ್ಗೆ 7ರಿಂದ 4ಗಂಟೆಯವರೆಗೆ ಮಣಿಪುರದ 38 ವಿಧಾನಸಭಾ ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ನಡೆಯಲಿದೆ. 28 ವಿಧಾನ ಕ್ಷೇತ್ರಗಳಲ್ಲಿ ಕಣಿವೆ ಜಿಲ್ಲೆಗಳಾದ 29 ಇಂಫಾಲ್ ಪೂರ್ವ, ಇಂಫಾಲ್ ಪಶ್ಚಿಮ ಮತ್ತು ಬಿಷ್ಣುಪುರವಾಗಿದ್ದರೆ, ಉಳಿದ 9 ಕ್ಷೇತ್ರಗಳು ಚರ್ಚಂಡ್‍ಪುರ, ಕಾಂಗ್‍ಪೋಕ್ಪಿ ಮತ್ತು ಫರ್ಜಾಲ್ ಪ್ರದೇಶದಲ್ಲಿದೆ. ಮಣಿಪುರದ ವಿಧಾನಸಭೆ ಚುನಾವಣೆಯೂ 2ಹಂತದಲ್ಲಿ ನಡೆಯಲಿದೆ. ಬೆಳಗ್ಗೆ 7 ಗಂಟೆಯಿಂದ ನಡೆಯುವ ಮತದಾನ ಸಂಜೆ 4ಗಂಟೆಗೆ ಕೊನೆಗೊಳ್ಳಲಿದೆ. ಮೊದಲ ಹಂತದಲ್ಲಿ 15 ಮಹಿಳೆಯರು ಸೇರಿದಂತೆ …

Read More »

ಗಲಭೆಯಿಂದ ಶಾಂತಗೊಂಡ ಬಳಿಕ ಶಿವಮೊಗ್ಗದಲ್ಲಿ ಇಂದಿನಿಂದ ಶಾಲಾ-ಕಾಲೇಜುಗಳು ಪುನಾರಂಭ

ಶಿವಮೊಗ್ಗ: ಗಲಭೆಯಿಂದ ಶಾಂತಗೊಂಡ ಬಳಿಕ ಶಿವಮೊಗ್ಗದಲ್ಲಿ ಇಂದಿನಿಂದ ಶಾಲಾ-ಕಾಲೇಜುಗಳು ಪುನಾರಂಭಗೊಳ್ಳಲಿದೆ. ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ ಸಂಬಂಧ ನಿಷೇಧಾಜ್ಞೆ ಹೇರಿ ನಗರ ವ್ಯಾಪ್ತಿಯ ಸ್ಕೂಲ್-ಕಾಲೇಜು ಬಂದ್ ಮಾಡಲಾಗಿತ್ತು. ಆದರೆ ಇದೀಗ ಮಾರ್ಚ್ 4ರವರೆಗೆ 144 ಸೆಕ್ಷನ್ ಜಾರಿಯಲ್ಲಿರಲಿದೆ. ಅದರಂತೆ ಬೆಳಗ್ಗೆ 6 ರಿಂದ ಸಂಜೆ 7 ರವರೆಗೆ ವ್ಯಾಪಾರ ವಹಿವಾಟಿಗೆ ಅವಕಾಶ ಹಾಗೂ ಸಂಜೆ 7 ರಿಂದ ಬೆಳಗ್ಗೆ 6ರವರೆಗೆ ತುರ್ತು ಸೇವೆಗಳಿಗೆ ಮಾತ್ರ ಅವಕಾಶ ನೀಡಿ ಶಿವಮೊಗ್ಗ ಜಿಲ್ಲಾಧಿಕಾರಿ …

Read More »

ಜೇಮ್ಸ್ ಅಬ್ಬರ ಶುರು – ಭಾರತ ಸೇರಿದಂತೆ ಒಟ್ಟು 15 ದೇಶಗಳಲ್ಲಿ ರಿಲೀಸ್‌

ಯುವರತ್ನ ಪುನೀತ್ ರಾಜ್‍ಕುಮಾರ್ ನಟನೆಯ ಕೊನೆಯ ಸಿನಿಮಾ ಜೇಮ್ಸ್. ಈ ಸಿನಿಮಾ ನೋಡುವುದಕ್ಕೆ ಕನ್ನಡಿಗರಿಗೆ ಮಾತ್ರವಲ್ಲ, ದೇಶ-ವಿದೇಶಗಳಲ್ಲಿರುವ ಜನರಿಗೂ ಬಹಳ ಕುತೂಹಲವಿದೆ.‘ಜೇಮ್ಸ್’ ಅಬ್ಬರ ದೇಶ ವಿದೇಶದಲ್ಲಿ ಶುರುವಾಗಿದ್ದು, ಅಪ್ಪು ಕೊನೆಯ ಸಿನಿಮಾವನ್ನು ನೋಡಲು ಎಲ್ಲರೂ ಕಾಯುತ್ತಿದ್ದಾರೆ. ಈ ಸಿನಿಮಾವನ್ನು ಅಪ್ಪು ಹುಟ್ಟಿದ ದಿನ ಮಾರ್ಚ್ 17 ರಂದು ರಿಲೀಸ್ ಮಾಡುವುದಾಗಿ ಚಿತ್ರತಂಡ ಘೋಷಣೆ ಮಾಡಿದೆ. ಅಲ್ಲದೆ ಕನ್ನಡಿಗರಿಗೆ ಚಿತ್ರತಂಡ ಮತ್ತೊಂದು ಖುಷಿ ವಿಚಾರವನ್ನು ಕೊಟ್ಟಿದೆ. ಈ ಸಿನಿಮಾ ಜರ್ಮನಿ, ನೆದಲ್ರ್ಯಾಂಡ್ಸ್, ಆಸ್ಟ್ರೇಲಿಯಾ, …

Read More »

ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ- ಇಂದು ಬಿಡದಿಯಿಂದ ಮತ್ತೆ ಆರಂಭ

ಬೆಂಗಳೂರು: ಮೇಕೆದಾಟು ಆಣೆಕಟ್ಟು ಯೋಜನೆ ಕಾಮಗಾರಿಗೆ ಒತ್ತಾಯಿಸಿ ನೀರಿಗಾಗಿ ನಡಿಗೆ ಹೆಸರಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿರುವ ಎರಡನೇ ಹಂತದ ಪಾದಯಾತ್ರೆಗೆ ಇಂದು 2ನೇ ದಿನ. ಇಂದು ಬೆಳಗ್ಗೆ ಬಿಡದಿಯಿಂದ ಪಾದಯಾತ್ರೆ ಶುರುವಾಗಲಿದೆ. ನಿನ್ನೆಯಷ್ಟೇ ಕನಕಪುರ ಸರ್ಕಲ್‍ನಲ್ಲಿ ನಗಾರಿ ಬಾರಿಸುವ ಮೂಲಕ ಪಾದಯಾತ್ರೆಗೆ ಉಸ್ತುವಾರಿ ಸುರ್ಜೆವಾಲಾ, ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಮತ್ತಿತರ ಮುಖಂಡರು ಚಾಲನೆ ನೀಡಿದ್ರು. ನಟ ನೆನಪಿರಲಿ ಪ್ರೇಮ್, ಸಾಧುಕೋಕಿಲಾ ಕೂಡ ಪಾಲ್ಗೊಂಡಿದ್ರು.ರಾಮನಗರದಿಂದ ಹೊರಟ ಪಾದಯಾತ್ರೆ ಸದ್ಯ ಬಿಡದಿ ತಲುಪಿದೆ. ಮತ್ತೊಂದೆಡೆ ಬೆಂಗಳೂರಲ್ಲಿ …

Read More »

ಗೋಕಾಕ ಮುಪ್ಪಯ್ಯನ ಮಠದಲ್ಲಿ ಪಲ್ಸ್ ಪೊಲೀಯೋ ಕಾರ್ಯಕ್ರಮಕ್ಕೆ : ರಾಚೋಟಿ ಶ್ರೀಗಳಿಂದ ಚಾಲನೆ

ಗೋಕಾಕ : ನಗರದ ಸೋಮವಾರ ಪೇಟೆಯ ಅಂಗನವಾಡಿ ಕೇಂದ್ರ ಸಂಖ್ಯೆ 176 ಮತ್ತು 177 ರ ಮಕ್ಕಳಿಗೆ ರವಿವಾರದಂದು ಶ್ರೀ ಮುಪ್ಪಯ್ಯನವರ ಹಿರೇಮಠದಲ್ಲಿ ಪೂಜ್ಯ ಶ್ರೀ ರಾಚೋಟಿದೇವರು ಪೋಲಿಯೋ ಹನಿ ನೀಡುವ ಮೂಲಕ ಫಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ನಿರ್ಮಲಾ ಸುಭಂಜಿ, ಲಕ್ಷ್ಮೀ ದೇಶನೂರ, ಮುಖಂಡರಾದ ಮಲ್ಲಿಕಾರ್ಜುನ ಹೊಸಪೇಠ, ಧರೀಶ ಕಲಘಾಣ, ಬಸವರಾಜ ಶೇಗುಣಸಿ, ಸೋಮಶೇಖರ ಮಗದುಮ್ಮ, ಬಸವರಾಜ ದೇಶನೂರ, ಗಣೇಶ ಕರೋಶಿ, …

Read More »

ಗೆಹ್ರೈಯಾನ್’ ಸಕ್ಸಸ್ ಸೆಲೆಬ್ರೇಟ್ ಮಾಡಲು ಬೆಂಗಳೂರಿಗೆ ಬರ್ತಿದ್ದಾರೆ ದೀಪಿಕಾ!

ಮುಂಬೈ: ಕನ್ನಡದ ಬೆಡಗಿ, ಬಾಲಿವುಡ್ ಸೂಪರ್ ಸ್ಟಾರ್ ದೀಪಿಕಾ ಪಡುಕೋಣೆ ತಮ್ಮ ‘ಗೆಹ್ರೈಯಾನ್’ ಸಿನಿಮಾ ಸಕ್ಸಸ್‍ನನ್ನು ಕುಟುಂಬದ ಜೊತೆ ಆಚರಿಸಲು ಬೆಂಗಳೂರಿಗೆ ಬರುತ್ತಿದ್ದಾರೆ. ‘ಗೆಹ್ರೈಯಾನ್’ ಸಿನಿಮಾವನ್ನು ‘ಶಕುನ್ ಬಾತ್ರಾ’ ನಿರ್ದೇಶಿಸಿದ್ದು, ಈ ಸಿನಿಮಾದಲ್ಲಿ ಸಿದ್ಧಾಂತ್ ಚತುರ್ವೇದಿ, ಅನನ್ಯ ಪಾಂಡೆ ಮತ್ತು ಧೈರ್ಯ ಕರ್ವಾ ನಟಿಸಿದ್ದರು. ಅಲ್ಲೆದೆ ಈ ಸಿನಿಮಾದಲ್ಲಿ ದೀಪಿಕಾ ಭಿನ್ನ ಪಾತ್ರವನ್ನು ನಿರ್ವಹಿಸಿದ್ದು, ಪ್ರೇಕ್ಷಕರು ಯಾವ ರೀತಿ ತನ್ನನ್ನು ಒಪ್ಪಿಕೊಳ್ಳುತ್ತಾರೆ ಎಂಬ ಕುತೂಹಲ ಅವರಲ್ಲಿಯೂ ಇತ್ತು. ಇದೇ ತಿಂಗಳು ‘ಗೆಹ್ರೈಯಾನ್’ …

Read More »

ನಾಲ್ಕು ವರ್ಷದಿಂದ ಕೂತಲ್ಲೇ ಕೂತಿದ್ದಾರೆ. ಹೀಗಾಗಿ ಪಾದಯಾತ್ರೆ ಮಾಡುತ್ತಿದ್ದಾರೆ :ಲಕ್ಷ್ಮಣ ಸವದಿ

ಕೊಪ್ಪಳ: ಕಾಂಗ್ರೆಸ್‍ನವರಿಗೆ ಕೆಲಸದ ಕೊರತೆ ಇದೆ, ಹಾಗಾಗಿ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಲಕ್ಷ್ಮಣ ಸವದಿ ವ್ಯಂಗ್ಯವಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ ಶಿವಕುಮಾರ್ ಅವರು ನೀರಾವರಿ ಮಂತ್ರಿಯಾಗಿದ್ದಾಗ ಕೆಲಸ ಮಾಡಲಿಲ್ಲ. ಈಗ ಪಾದಯಾತ್ರೆ ನಡೆಸುತ್ತಿದ್ದಾರೆ ಎಂದು ಕಿಡಿಕಾರಿದ ಅವರು, ಮಹಾದಾಯಿ ವಿಚಾರದ ಬಗ್ಗೆ ಕಾಂಗ್ರೆಸ್‍ನವರು ನಮಗೆ ಹೇಳುವ ಅವಶ್ಯಕತೆಯಿಲ್ಲ. ಮಹಾದಾಯಿ ನಮ್ಮ ಬದ್ಧತೆಯಾಗಿದೆ. ಅದಕ್ಕಾಗಿ ನಾವು ಮಹಾದಾಯಿ ಕೆಲಸ ಮಾಡೇ ಮಾಡುತ್ತೇವೆ ಎಂದರು. ಕಾಂಗ್ರೆಸ್‍ನವರಿಗೆ ಸ್ವಲ್ಪ ಬಿಪಿ, ಶುಗರ್ …

Read More »

ವೈಶ್ಯ ವಾಟಿಕೆಯಲ್ಲಿ ಸಿಕ್ಕ ಮೂವರು ಇವರೇ

ಬೆಳಗಾವಿ: ಜಿಲ್ಲೆಯ ನಿಪ್ಪಾಣಿ ನಗರದ ಹೊರವಲಯದ ಲಾಡ್ಜ್ ಒಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮೂವರನ್ನು ಬಂಧಿಸಿದ್ದಾರೆ. ಸಂಜಯ ಭೈರಪ್ಪ ಮಾಳಿ, ಅರುಣ್ ಜೈಪಾಲ ಶೇಕಣ್ಣವರ್, ಖಂಡೋಬಾ ಚವ್ಹಾಣ ಬಂಧಿತ ಆರೋಪಿಗಳು. ಖಚಿತ ಮಾಹಿತಿ ಮೇರೆಗೆ ನಿಪ್ಪಾಣಿ ಸಿಪಿಐ ಸಂಗಮೇಶ ಶಿವಯೋಗಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಮೂವರನ್ನು ಬಂಧಿಸಿ 5 ಜನ ಮಹಿಳೆಯರನ್ನ ಮಹಿಳಾ ಸಾಂತ್ವಾನ ಕೇಂದ್ರಕ್ಕೆ ರವಾನಿಸಲಾಗಿದೆ.  ಆರೋಪಿಗಳನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕಾರ್ಯಾಚರಣೆಯಲ್ಲಿ ನಗರ ಠಾಣೆಯ …

Read More »