Breaking News

Yearly Archives: 2022

A.C.B. ಬಲೆಗೆ ಬಿದ್ದ ಆಯುಷ್ ಅಧಿಕಾರಿ ಜೈಲಿಗೆ

ಧಾರವಾಡ: ಆರ್‌ ಎಂ ಪಿ ವೈದ್ಯನಿಂದ ಹಣ ಪಡೆಯುವಾಗ ಎಸಿಬಿ ಬಲೆಗೆ ಬಿದ್ದ ಆಯುಷ್ ಅಧಿಕಾರಿ ಜೈಲು ಪಾಲಾಗಿದ್ದಾರೆ. ಆರ್‍ಜಿ ಮೇತ್ರಿ ಎಸಿಬಿ ಬಲೆಗೆ ಬಿದ್ದವರು. ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ಆರ್‍ಎಂಪಿ ವೈದ್ಯ ಹರಿಶ್ಚಂದ್ರ ನಾರಾಯಣಪುರಗೆ ಈ ಆಯುಷ್ ಅಧಿಕಾರಿ 20 ಸಾವಿರ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂಬ ಆರೋಪ ವ್ಯಕ್ತವಾಗಿದೆ.  ಆಸ್ಪತ್ರೆ ನಡೆಸಲು ಯಾವುದೇ ಸಮಸ್ಯೆ ಮಾಡುವುದಿಲ್ಲ ಎಂದು ಹೇಳಿದ್ದ ವೈದ್ಯ ಅಧಿಕಾರಿ ಮೇತ್ರಿ, ಮುಂಗಡವಾಗಿ 10 ಸಾವಿರ ರೂ. …

Read More »

ಉಕ್ರೇನ್ ಬಂಕರ್‌ನಲ್ಲಿ ಮಗುವಿಗೆ ಜನ್ಮ ನೀಡಿದ ತಾಯಿ

ಕೀವ್: ಉಕ್ರೇನ್ ಮೇಲೆ ರಷ್ಯಾ ದಾಳಿ ಮಾಡಿದ್ದು, ವಿಶ್ವದಾದ್ಯಂತ ಭಯದ ವಾತಾವರಣ ನಿರ್ಮಾಣವಾಗಿದೆ. ಮನೆಯನ್ನು ಕಳೆದುಕೊಂಡು ಇರಲು ಜಾಗ ವಿಲ್ಲದೆ ಪರದಾಡುತ್ತಿದ್ದಾರೆ. ಈ ಮಧ್ಯೆ ಮಹಿಳೆಯೊಬ್ಬರು ಬಂಕರ್‌ನಲ್ಲಿ ಮಗುವಿಗೆ ಜನ್ಮವನ್ನು ನೀಡುವ ಮೂಲಕವಾಗಿ ಸುದ್ದಿಯಾಗಿದ್ದಾರೆ. 23 ವರ್ಷದ ಅಮೀದ್ ಚವ್ಸ್ ರಷ್ಯಾ ದಾಳಿಗೆ ಹೆದರಿ ಮೆಟ್ರೋ ಸ್ಟೇಶನ್ ಸಿಟಿ ಬಳಿ ಇರುವ ಬಂಕರ್‌ನಲ್ಲಿ ಅಡಗಿ ಕುಳಿತಿದ್ದರು. ಈ ವೇಳೆ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಮಹಿಳೆಯ ಕಿರುಚಾಟವನ್ನು ಕೇಳಿ ಉಕ್ರೇನ್ ಪೊಲೀಸರು …

Read More »

ಉಕ್ರೇನ್‍ನಲ್ಲಿ ಬೆಳಗಾವಿ ಯೋಧನ ಪುತ್ರಿ – ಮಗಳನ್ನು ರಕ್ಷಿಸುವಂತೆ ಪ್ರಧಾನಿ ಕೋರಿದ ಸೈನಿಕ

ಬೆಳಗಾವಿ: ಉಕ್ರೇನ್‌ನಲ್ಲಿ ಬೆಳಗಾವಿ ಯೋಧರೊಬ್ಬರ ಪುತ್ರಿ ಸಿಲುಕಿಕೊಂಡು ಪರದಾಡುತ್ತಿದ್ದು, ಸಂಪರ್ಕಕ್ಕೆ ಸಿಗುತ್ತಿಲ್ಲ. ಹೀಗಾಗಿ ಮಗಳನ್ನ ರಕ್ಷಿಸುವಂತೆ ಪ್ರಧಾನಿ ಮೋದಿಗೆ ಯೋಧ ಮನವಿ ಮಾಡಿಕೊಂಡಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ ಫಾಲ್ಸ್‌ನ ನಿವಾಸಿ ರಜೀಯಾ ಬಾಗಿ ಉಕ್ರೇನ್‍ನಲ್ಲಿ ಎಂಬಿಬಿಎಸ್ ದ್ವೀತಿಯ ವರ್ಷದ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಉಕ್ರೇನಿನಲ್ಲಿ ಸಿಲುಕಿರುವ ಮಗಳನ್ನು ರಕ್ಷಿಸುವಂತೆ ಪ್ರಧಾನಿಗೆ ಸೈನಿಕ ಮನವಿ ಮಾಡಿದ್ದಾರೆ.ವಿದ್ಯಾರ್ಥಿನಿ ರಜೀಯಾ ಮಾತನಾಡಿ, ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ನಮ್ಮನ್ನು ಆದಷ್ಟು ಬೇಗ ಸ್ಥಳಾಂತರ ಮಾಡಬೇಕು. ಉಕ್ರೇನ್ …

Read More »

ತಿಲಕವಿಟ್ಟು ದ್ವಾರಕಾಧೀಶ ದೇಗುಲಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ

ಗಾಂಧಿನಗರ: ಹಣೆಗೆ ತಿಲಕವಿಟ್ಟು ಕಾಂಗ್ರೆಸ್ ಮುಖಂಡ ರಾಹುಲ್ ಅವರು ಗುಜರಾತ್‍ನ ದ್ವಾರಕಾಧೀಶದ ಶ್ರೀಕೃಷ್ಣ ದೇವಾಲಯಕ್ಕೆ ಭೇಟಿ ನೀಡಿದರು. ರಾಹುಲ್‍ಗಾಂಧಿ ಅವರು ಮಧ್ಯಾಹ್ನ ಸುಮಾರಿಗೆ ವಿಶೇಷ ವಿಮಾನದ ಮೂಲಕ ಗಾಂಧಿ ಜಾಮ್ ನಗರಕ್ಕೆ ಬಂದ ಅವರನ್ನು ಗುಜರಾತ್ ಕಾಂಗ್ರೆಸ್ ಅಧ್ಯಕ್ಷ ಜಗದೀಶ್ ಠಾಕೂರ್, ಮಾಜಿ ರಾಜ್ಯಾಧ್ಯಕ್ಷ ಅಮಿತ್ ಚಾವ್ಡಾ ಮತ್ತು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುಖರಾಮ್ ರಥ್ವಾ ಸೇರಿದಂತೆ ಪಕ್ಷದ ಹಲವಾರು ಹಿರಿಯ ನಾಯಕರು ಸ್ವಾಗತಿಸಿದರು. ನಂತರ ಅವರು ದ್ವಾರಕಾಧೀಶದ ಶ್ರೀಕೃಷ್ಣ …

Read More »

ಅಕ್ರಮದಲ್ಲಿ ಸಚಿವರು, ಶಾಸಕರ ಪಾತ್ರದ ಬಗ್ಗೆ ತನಿಖೆಯಾಗಲಿ: ಎಎಪಿ

ಬೆಂಗಳೂರು: ಎಸಿಬಿ ಪತ್ತೆ ಮಾಡಿರುವ ಬಿಬಿಎಂಪಿಯ ಅಕ್ರಮಗಳಲ್ಲಿ ಪ್ರಭಾವಿ ಸಚಿವರು ಹಾಗೂ ಬೆಂಗಳೂರಿನ ಶಾಸಕರುಗಳ ಪಾತ್ರ ಮಹತ್ವದ್ದಾಗಿದೆ. ಇಲ್ಲಿ ಕೇವಲ ಅಧಿಕಾರಿಗಳನ್ನು ಬಲಿಪಶು ಮಾಡುವ ಹುನ್ನಾರ ನಡೆಯುತ್ತಿದೆ ಎಂದು ಆಮ್ ಆದ್ಮಿ ಪಾರ್ಟಿಯ ಬೆಂಗಳೂರು ಉಪಾಧ್ಯಕ್ಷ ಬಿ.ಟಿ.ನಾಗಣ್ಣ ಕಿಡಿಕಾರಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಬಿ.ಟಿ.ನಾಗಣ್ಣ ಅವರು, ಎಸಿಬಿ ಅಧಿಕಾರಿಗಳು ಏಕಕಾಲದಲ್ಲಿ 27 ಕಚೇರಿಗಳ ಮೇಲೆ ದಾಳಿ ಮಾಡಿ, ಸುಮಾರು 300 ಕೋಟಿ ರೂ. ಗಿಂತಲೂ ಹೆಚ್ಚಿನ ಮೊತ್ತದ ಹಲವು ಅಕ್ರಮಗಳನ್ನು ಬಯಲು ಮಾಡಿರುವುದು …

Read More »

ಸಾಮಾನ್ಯ ಅಭಿಮಾನಿಯಂತೆ ಸಾಲಿನಲ್ಲಿ ಪುನೀತ್ ಸಮಾಧಿಗೆ ಭೇಟಿ ನೀಡಿದ ತಮಿಳು ನಟ ವಿಜಯ್

ಬೆಂಗಳೂರು: ಸ್ಯಾಂಡಲ್‍ವುಡ್ ನಟ ದಿ. ಪುನೀತ್ ರಾಜ್‍ಕುಮಾರ್ ಅವರನ್ನು ಕಳೆದುಕೊಂಡು ಹಲವು ದಿನಗಳೆ ಕಳೆದಿದೆ. ಅವರ ಸಮಾಧಿ ವೀಕ್ಷಣೆಗೆ ಇನ್ನೂ ಸಾವಿರಾರು ಅಭಿಮಾನಿಗಳು, ಕಲಾವಿದರು ಬರುತ್ತಲೆ ಇದ್ದಾರೆ. ಇದೀಗ ಅಪ್ಪು ಸಮಾಧಿಗೆ ತಮಿಳು ನಟ  ದಳಪತಿ ವಿಜಯ್ ಭೇಟಿ ನಿಡಿದ್ದಾರೆ. ಅಪ್ಪು ಕುಟುಂಬ ಸದಸ್ಯರಿಗೆ ಹೇಳದೆ ಆಗಮಿಸಿದ ವಿಜಯ್ ಅವರು ಸಾಮಾನ್ಯ ಅಭಿಮಾನಿಯಂತೆ ಸಾಲಿನಲ್ಲಿ ಬಂದು ಅಪ್ಪು ಸ್ಮಾರಕ ದರ್ಶನ ಮಾಡಿದ್ದಾರೆ. ಯಾರಿಗೂ ಸಣ್ಣ ಸುಳಿವು ಕೊಡದಂತೆ ಬಂದು ಭೇಟಿ ನೀಡಿ  ನಮನ …

Read More »

ನಟ ಚೇತನ್ ಗೆ ರಿಲೀಫ್; ಜಾಮೀನು ಮಂಜೂರು

ಬೆಂಗಳೂರು; ನ್ಯಾಯಾಂಗ ಬಂಧನದಲ್ಲಿದ್ದ ಆ ದಿನಗಳು ಖ್ಯಾತಿಯ ನಟ ಚೇತನ್ ಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿ ಕೋರ್ಟ್ ಆದೇಶ ನೀಡಿದೆ. ಜಡ್ಜ್ ವಿರುದ್ಧ ಆಕ್ಷೇಪಾರ್ಹ ಟ್ವೀಟ್ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿದ್ದ ನಟ ಚೇತನ್ ಅವರಿಗೆ ಫೆ.23ರಂದು 8ನೇ ಎಸಿಎಂಎಂ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿತ್ತು.   ನಟ ಚೇತನ್ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಇದೀಗ 32ನೇ ಎಸಿಎಂಎಂ ನ್ಯಾಯಾಲಯ ಚೇತನ್ ಅವರಿಗೆ ಷರತ್ತು …

Read More »

50 ಅಡಿ ಆಳದ ಬಾವಿಗೆ ಬಿದ್ದಿದ್ದ ಚಿರತೆ ರಕ್ಷಣೆ.! ವಿಡಿಯೋ ವೈರಲ್

ಕಾಡು ಪ್ರಾಣಿಗಳು ನಾಗರೀಕ ಸಮಾಜದೊಳಗೆ ಆಕಸ್ಮಿಕವಾಗಿ ಬಂದು ಸಿಲುಕಿಕೊಂಡು ಪರದಾಡುವ ಉದಾಹರಣೆಗಳು ಆಗಾಗ್ಗೆ ನಡೆಯುತ್ತಿರುತ್ತವೆ. Wildlife SOS & the Forest Department performed a rescue operation to save a drowning leopard from a 50-feet-deep open well in #Maharashtra. A trap cage was lowered to safely extricate the leopard. After ensuring he had sustained no injuries, …

Read More »

ಇಂದು ಉಕ್ರೇನ್ ನಿಂದ 480 ಭಾರತೀಯರ ಏರ್ ಲಿಫ್ಟ್

ಕೀವ್: ಉಕ್ರೇನ್ ಮೇಲೆ ರಷ್ಯಾ ದಾಳಿ ಮೂರನೇ ದಿನವೂ ಮುಂದುವರೆದಿದ್ದು, ಈ ನಡುವೆ ಉಕ್ರೇನ್ ನಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಭಾರತೀಯರ ರಕ್ಷಣಾ ಕಾರ್ಯಾಚರಣೆಗೆ ಕೇಂದ್ರ ಸರ್ಕಾರ ಮುಂದಾಗಿದೆ. ಇಂದು ರಾತ್ರಿಯಿಂದ ಭಾರತೀಯರನ್ನು ಮರಳಿ ತಾಯ್ನಾಡಿಗೆ ಕರೆತರಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಇಂದು 480 ಭಾರತೀಯರ ಏರ್ ಲಿಫ್ಟ್ ಮಾಡಲಾಗುತ್ತಿದೆ ಇಂದು ರಾತ್ರಿ ರೊಮಾನಿಯಾದ ಬುಕಾರೆಸ್ಟ್ ಗೆ ಎರಡು ವಿಮಾನಗಳು ತೆರಳಲಿದ್ದು, ಮತ್ತೊಂದು ವಿಮಾನ ಹಂಗೇರಿಯಾದ ಬುಡಾಪೆಸ್ಟ್ ಗೆ ತೆರಳಲಿದೆ.   ಒಟ್ಟು …

Read More »

ನಾಳೆಯಿಂದ ಬೆಳಗಾವಿಯಲ್ಲಿ ಭಾರತ-ಜಪಾನ್‌ ಮಹತ್ವದ ಜಂಟಿ ಸೇನಾಭ್ಯಾಸ

ಹೊಸದಿಲ್ಲಿ: ಕರ್ನಾಟಕದ ಬೆಳಗಾವಿಯಲ್ಲಿ ಫೆ.27ರಿಂದ ಮಾ. 10ರ ವರೆಗೆ ಭಾರತ ಮತ್ತು ಜಪಾನ್‌ ವಾರ್ಷಿಕ ಜಂಟಿ ಸೇನಾಭ್ಯಾಸ ನಡೆಸಲಿವೆ. ವಿವಿಧ ದೇಶಗಳೊಂದಿಗೆ ಭಾರತ ಸೇನಾ ತರಬೇತಿ ಅಭ್ಯಾಸವನ್ನು ನಡೆಸುತ್ತಾ ಬಂದಿದ್ದು ಅದರಂತೆ ಈ ಬಾರಿ ಜಪಾನ್‌ ಜತೆಗೂಡಿ ಸೇನಾಭ್ಯಾಸ ನಡೆಸಲಿದೆ. ಸದ್ಯದ ಜಾಗತಿಕ ಸನ್ನಿವೇಶದಲ್ಲಿ ಉಭಯ ದೇಶಗಳು ಭದ್ರತಾ ಸವಾಲುಗಳನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ಈ ಜಂಟಿ ಸೇನಾಭ್ಯಾಸ ಮಹತ್ವದ್ದು ಎಂದು ರಕ್ಷಣಾ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ಶುಕ್ರವಾರ ಜಪಾನ್‌ ಸೇನೆ ಬೆಳಗಾವಿಗೆ …

Read More »