ನವದೆಹಲಿ: ರಾಷ್ಟ್ರೀಯ ಭದ್ರತಾ ಸಲಹೆಗಾರ(ಎನ್ ಎಸ್ ಎ) ಅಜಿತ್ ದೋವಲ್ ನಿವಾಸದಲ್ಲಿ ಭದ್ರತಾ ಲೋಪ ಘಟನೆ ನಡೆದಿದ್ದು, ವ್ಯಕ್ತಿಯೊಬ್ಬ ಬುಧವಾರ (ಫೆ.16) ದೋವಲ್ ನಿವಾಸದೊಳಕ್ಕೆ ಪ್ರವೇಶಿಸಲು ಯತ್ನಿಸಿರುವುದಾಗಿ ವರದಿ ತಿಳಿಸಿದೆ. ಮನೆ ಪ್ರವೇಶಿಸಲು ಯತ್ನಿಸಿದ ವ್ಯಕ್ತಿಯನ್ನು ಭದ್ರತಾ ಸಿಬಂದಿಗಳು ತಡೆದಿದ್ದು, ಈತನನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿರುವುದಾಗಿ ವರದಿ ವಿವರಿಸಿದೆ. ಮೂಲಗಳ ಪ್ರಕಾರ, ದೋವಲ್ ನಿವಾಸದೊಳಕ್ಕೆ ಪ್ರವೇಶಿಸಿದ ವ್ಯಕ್ತಿ ತನ್ನ ದೇಹದೊಳಗೆ ಚಿಪ್ ಇದ್ದು, ಇದನ್ನು ಬಾಹ್ಯವಾಗಿ ನಿಯಂತ್ರಿಸಲಾಗುತ್ತಿದೆ ಎಂದು ಹೇಳಿದ್ದ. …
Read More »Yearly Archives: 2022
ಬಾವಿಯಲ್ಲಿ ಬಿದ್ದು ವಿದ್ಯಾರ್ಥಿನಿ ಸಾವು – ತಾಯಿ ವಿರುದ್ಧವೇ ತಂದೆಯಿಂದ ಕೊಲೆ ಆರೋಪ
ಚಿಕ್ಕಬಳ್ಳಾಪುರ: ಬಾವಿಯಲ್ಲಿ ಬಿದ್ದು 4ನೇ ತರಗತಿಯ 10 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ಶಾಮರಾವ್ ಹೊಸಪೇಟೆ ಗ್ರಾಮದಲ್ಲಿ ನಡೆದಿದೆ. ರುಷ್ಮಿತಾ ಮೃತ ಮಗು. ನಿನ್ನೆ ಸಂಜೆ ಶಾಲೆಯಿಂದ ಬಂದ ರುಷ್ಮಿತಾ ಮನೆಯ ಪಕ್ಕದಲ್ಲೇ ಕೂಗಳತೆ ದೂರದ ಜಮೀನು ಬಳಿ ತೆರಳಿದ್ದು, ಜಮೀನಿನಲ್ಲಿರುವ ಬಾವಿಯಲ್ಲಿ ಬಿದ್ದಿದ್ದಾಳೆ. ರುಷ್ಮಿತಾ ಕಾಣಿಸುತ್ತಿಲ್ಲ ಎಂದು ಹುಡುಕಾಡಿದಾಗ ಬಾವಿಯ ಬಳಿ ಬಾಲಕಿಯ ಚಪ್ಪಲಿಯೊಂದು ಪತ್ತೆಯಾಗಿದ್ದು, ಬಾವಿಯಲ್ಲಿ ಶೋಧ ನಡೆಸಿದಾಗ ರುಷ್ಮಿತಾಳ ಮೃತದೇಹ ಪತ್ತೆಯಾಗಿದೆ.ಅಗ್ನಿಶಾಮಕ ದಳ …
Read More »ಮುಸ್ಲಿಂ ಯುವತಿಯರಿಗೆ ಹಿಜಬ್ ಧರಿಸಲು ಮುಸ್ಲಿಂ ಸಂಘಟನೆ ದಾರುಲ್ ಉಲೂಮ್ ದಿಯೋಬಂದ್ ಪ್ರೇರಣೆ ನೀಡುತ್ತಿದೆ
ನವದೆಹಲಿ: ಮುಸ್ಲಿಂ ಯುವತಿಯರಿಗೆ ಹಿಜಬ್ ಧರಿಸಲು ಮುಸ್ಲಿಂ ಸಂಘಟನೆ ದಾರುಲ್ ಉಲೂಮ್ ದಿಯೋಬಂದ್ ಪ್ರೇರಣೆ ನೀಡುತ್ತಿದೆ ಎಂದು ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗ(ಎನ್ಸಿಪಿಸಿಆರ್)ದ ಅಧ್ಯಕ್ಷ ಪ್ರಿಯಾಂಕ್ ಕನುಂಗೋ ಹೇಳಿದ್ದಾರೆ. ಈ ಮೂಲಕ ಹಿಜಬ್ ಗಲಬೆ ಹೊಸ ತಿರುವು ಪಡೆದುಕೊಂಡಿದೆ. ಎನ್ಸಿಪಿಸಿಆರ್ ತಮ್ಮ ವೆಬ್ಸೈಟ್ನಲ್ಲಿ ಮಕ್ಕಳ ಹಕ್ಕನ್ನು ಉಲ್ಲಂಘಿಸುವ ಫತ್ವಾ ವಿಷಯನ್ನು ಉಲ್ಲೇಖಿಸಿದ್ದಕ್ಕೆ ನೋಟಿಸ್ ಕಳುಹಿಸಲಾಗಿದೆ ಎಂದು ಕನುಂಗೋ ತಿಳಿಸಿದ್ದಾರೆ. ಹಿಜಬ್ ಅನುಮತಿಸದ ಶಾಲೆಗಳಿಂದ ಮುಸ್ಲಿಂ ಹುಡುಗಿಯರನ್ನು ಹೊರ ಹಾಕಬೇಕು ಹಾಗೂ …
Read More »ಇಂದು ಸಂಜೆಯಿಂದ ಲಘು ವಾಹನಗಳ ಸಂಚಾರಕ್ಕೆ ಪೀಣ್ಯ ಫ್ಲೈಓವರ್ ಮುಕ್ತ
ಬೆಂಗಳೂರು: ನಗರದಿಂದ ಹಲವು ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಫ್ಲೈಓವರ್ ಕಾಮಗಾರಿ ಪೂರ್ಣಗೊಂಡಿದೆ. ಇಂದು ಸಂಜೆ 6 ಗಂಟೆಯಿಂದ ಲಘುವಾಹನಗಳ ಸಂಚಾರಕ್ಕೆ ಫ್ಲೈಓವರ್ ಮುಕ್ತಾವಾಗಲಿದೆ. ತಿಂಗಳ ಹಿಂದೆ ಕಾಮಗಾರಿಗಾಗಿ ಬಂದ್ ಮಾಡಲಾಗಿದ್ದ ಪೀಣ್ಯ ಫ್ಲೈಓವರ್ ಕಾಮಗಾರಿ ಪೂರ್ಣಗೊಂಡಿದ್ದು ಇಂದಿನಿಂದ ಕಾರು, ಬೈಕ್, ಆಟೋ ಸೇರಿದಂತೆ ಲೈಟ್ ವೇಟ್ ವಾಹನ ಸಂಚಾರಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಅನುಮತಿ ನೀಡಿದೆ. ಇಂದು ಸಂಜೆಯಿಂದ ಸಂಚಾರಕ್ಕೆ ಅನುವು ಮಾಡಿಕೊಡುವುದಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸಂಚಾರ ವಿಭಾಗದ …
Read More »ಲಕ್ಷಾಂತರ ಜನರ ಮನಗೆದ್ದ ಕಡಲೆಕಾಯಿ ವ್ಯಾಪಾರಿಯ ಕಚ್ಚಾ ಬಾದಾಮ್ ಹಾಡು ವೈರಲ್ ಆಗಿದ್ದೇಗೆ?
ಪ್ರತಿಭೆಗಳು ಯಾವ ಸಂದರ್ಭದಲ್ಲಿಯೂ ಅನಾವರಣಗೊಳ್ಳಬಹುದು. ಇತ್ತೀಚೆಗೆ ಸಾಮಾಜಿಕ ಜಾಲತಾಣಗಳು ಹೆಚ್ಚು, ಹೆಚ್ಚು ಪ್ರಚಲಿತವಾಗುತ್ತಿರುವ ನಡುವೆಯೇ ನಮಗೆ ರಾನು ಮಂಡಲ್, ಕೇರಳದ ಕೂಲಿ ಕಾರ್ಮಿಕ ಮಮ್ಮಿಕ್ಕಾನ್ ಹೀಗೆ ಹಲವಾರು ಮಂದಿ ಜನಪ್ರಿಯರಾಗಿದ್ದರು, ಇತ್ತೀಚೆಗೆ ಅದಕ್ಕೊಂದು ಹೊಸ ಸೇರ್ಪಡೆ ಕಚ್ಚಾ ಬಾದಾಮ್ ಹಾಡು.! ಕಚ್ಛಾ ಬಾದಾಮ್ (ನೆಲಗಡಲೆ) ಹಾಡು ಹೇಗೆ ಏಕಾಏಕಿ ಲಕ್ಷಾಂತರ ಜನರ ಗಮನ ಸೆಳೆಯಿತು. ಈ ಹಾಡು ಇಷ್ಟೊಂದು ಕುತೂಹಲ ಹುಟ್ಟುಹಾಕಲು ಕಾರಣವೇನು? ಎಂಬ ಸಂಕ್ತಿಪ್ತ ನೋಟ ಇಲ್ಲಿದೆ. ನಿಮ್ಮ ಊಹೆಯಂತೆ …
Read More »ಕೋರ್ಟ್ ತೀರ್ಪು ಬರುವರೆಗೂ ಕಾಯುತ್ತೇವೆ: ಉಡುಪಿಯಲ್ಲಿ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರು
ಉಡುಪಿ: ಕೆಲವು ಶಾಲಾ ಕಾಲೇಜುಗಳಲ್ಲಿ ನಡೆಯುತ್ತಿರುವ ಹಿಜಾಬ್ ವಿವಾದ ಉಡಪಿಯಲ್ಲಿ ಇನ್ನೂ ಮುಂದುವರಿದಿದ್ದು, ಇಲ್ಲಿನ ಕಾಲೇಜೊಂದರಲ್ಲಿ ಕೋರ್ಟ್ ಮಧ್ಯಂತರ ಆದೇಶದ ಹೊರತಾಗಿಯೂ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರಿಗೆ ಕಾಲೇಜಿಗೆ ಆಗಮಿಸಿದ್ದಾರೆ. ‘ಕೋರ್ಟ್ ಆದೇಶದ ಪ್ರಕಾರ ಮಕ್ಕಳಿಗೆ ಹಿಜಾಬ್ ಧರಿಸಲು ಅವಕಾಶ ಇರಲಿಲ್ಲ. ಇದನ್ನು ವಿದ್ಯಾರ್ಥಿನಿಗಳಿಗೆ ಮನವರಿಕೆ ಮಾಡಿದ್ದೇವೆ. ಕೋರ್ಟ್ ತೀರ್ಪು ಬರುವವರೆಗೆ ಕಾಯುತ್ತೇವೆಂದು ವಿದ್ಯಾರ್ಥಿನಿಯರು ತಿಳಿಸಿದ್ದಾರೆ. ಒಟ್ಟು 2326 ವಿದ್ಯಾರ್ಥಿನಿಯರಿದ್ದು 196 ಮಂದಿ ಮುಸ್ಲಿಂರಿದ್ದಾರೆ. ಸದ್ಯ 40 ಮಂದಿ ಮಾತ್ರ …
Read More »ಪೊಲೀಸ್ ಬಿಗಿ ಬಂದೋಬಸ್ತಿಯ ನಡುವೆ ಕಾಲೇಜು ಪ್ರಾರಂಭ: ಸಮವಸ್ತ್ರ ಧರಿಸಿದವರಿಗೆ ಮಾತ್ರ ಪ್ರವೇಶ
ರಬಕವಿ-ಬನಹಟ್ಟಿ : ಹಿಜಾಬ್ ಹಾಗೂ ಕೇಸರಿ ಶಾಲು ಪ್ರಕರಣದ ಹಿನ್ನಲೆಯಲ್ಲಿ ಬನಹಟ್ಟಿಯಲ್ಲಿ ಕಳೆದ ಒಂದು ವಾರದಿಂದ ಬಂದ್ ಆಗಿದ್ದು, ಕಾಲೇಜು ಇಂದು ಬುಧವಾರ ಪೊಲೀಸ್ ಬಿಗಿ ಭದ್ರತೆಯ ನಡುವೆ ಪ್ರಾರಂಭವಾಗಿದ್ದು, ಸಮವಸ್ತ್ರ ಧರಿಸಿದವರಿಗೆ ಮಾತ್ರ ಪ್ರವೇಶ ನೀಡಲಾಯಿತು. ತಾಲೂಕಿನಲ್ಲಿ ನಡೆದ ಅಹಿತಕರ ಘಟನೆ ಮತ್ತೇ ಸಂಭವಿಸಬಾರದು ಎಂದು ಪೊಲೀಸ್ ಇಲಾಖೆ ಹಾಗೂ ತಾಲೂಕು ಆಡಳಿತ ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಂಡಿದ್ದು ಸೂಕ್ಷ್ಮ ಶಾಲಾ, ಕಾಲೇಜು ಪ್ರದೇಶಗಳಲ್ಲಿ ಅಗತ್ಯ ಬಂದುಬಸ್ತಿಯನ್ನು ನಿಯೋಜನೆ …
Read More »ನಾಯಿಯ ನಿಷ್ಠೆ ಇಬ್ರಾಹಿಂಗೆ ಇದೆಯಾ?ಭ್ರಷ್ಟಾಚಾರ ಬೆತ್ತಲುಗೊಳಿಸುತ್ತೇನೆ : ಉಗ್ರಪ್ಪ ಕಿಡಿ
ಬೆಂಗಳೂರು : ನಾಯಿಗೆ ಇರುವ ನಿಷ್ಠೆ ಇಬ್ರಾಹಿಂಗೆ ಇದೆಯಾ ? ಇವರ ಭ್ರಷ್ಟಾಚಾರವನ್ನ ಬೆತ್ತಲುಗೊಳಿಸುತ್ತೇನೆ, ಎಲ್ಲೇ ಬೇಕಾದರೂ ಆಹ್ವಾನ ನೀಡಲಿ ಬಹಿರಂಗ ಚರ್ಚೆಗೆ ಸಿದ್ಧನಾಗಿದ್ದೇನೆ ಎಂದು ಮಾಜಿ ಸಂಸದ,ಕಾಂಗ್ರೆಸ್ ಹಿರಿಯ ನಾಯಕ ವಿ.ಎಸ್ ಉಗ್ರಪ್ಪ ಅವರು ಪರಿಷತ್ ಸದಸ್ಯ ಸಿ.ಎಂ ಇಬ್ರಾಹಿಂ ಮೇಲೆ ಬುಧವಾರ ಕಿಡಿ ಕಾರಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ನಾನು ವಾಲ್ಮೀಕಿ ವಂಶದಲ್ಲಿ ಹುಟ್ಟಿದವನು. ನಾನು ಎಂದೂ ಸಂಸ್ಕಾರ ಹೀನಾನಾಗಿ ಮಾತನ್ನಾಡಿಲ್ಲಇಬ್ರಾಹಿಂ ಹಳೆಯ ಸ್ನೇಹಿತರು, ನನ್ನನ್ನ ಕಕ್ಷಿದಾರನೆಂದು ಒಪ್ಪಿಕೊಂಡಿದ್ದಾರೆ. …
Read More »ಗಣಿ ಬಾಧಿತ ಪ್ರದೇಶ ಅಭಿವೃದ್ಧಿ ಯೋಜನೆ: ಸುಪ್ರೀಂಕೋರ್ಟ್ ಅನುಮತಿ ಸಿಕ್ಕಿಲ್ಲ
ವಿಧಾನಪರಿಷತ್ತು: ಗಣಿ ಬಾಧಿತ ಬಳ್ಳಾರಿ, ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ 24 ಸಾವಿರ ಕೋಟಿ ರೂ. ಮೊತ್ತದ “ಗಣಿಗಾರಿಕೆಯ ಪ್ರಭಾವಕ್ಕೆ ಒಳಗಾದ ವಲಯಗಳ ಸಮಗ್ರ ಪರಿಸರ ಯೋಜನೆ’ಯ ಅನುಷ್ಠಾನದ ಅನುಮತಿಗಾಗಿ ಎಂಟು ಬಾರಿ ಸುಪ್ರೀಂಕೋರ್ಟ್ ಕದ ತಟ್ಟಲಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಹಾಲಪ್ಪ ಆಚಾರ್ ತಿಳಿಸಿದ್ದಾರೆ. ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್ನ ಕೆ.ಎ ತಿಪ್ಪೇಸ್ವಾಮಿ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸುಪ್ರೀಂಕೋರ್ಟ್ ಆದೇಶದಂತೆ ಗಣಿ ಬಾಧಿತ ಪ್ರದೇಶಗಳ …
Read More »ಮಲಪ್ರಭಾ ಅಚ್ಚಕಟ್ಟು ಪ್ರದೇಶದ ರಸ್ತೆ ದುರಸ್ತಿಗೆ ಕ್ರಮ: ಗೋವಿಂದ ಕಾರಜೋಳ
ವಿಧಾನಸಭೆ : ಮಲಪ್ರಭಾ ಯೋಜನೆಯ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಯಲ್ಲಿ ರಸ್ತೆಗಳ ದುರಸ್ತಿಗಾಗಿ ಕರ್ನಾಟಕ ನೀರಾವರಿ ನಿಗಮದಿಂದ ಅಂದಾಜು ಪಟ್ಟಿ ತಯಾರಿಸಲಾಗುತ್ತಿದ್ದು, ಆದಷ್ಟೂ ಶೀಘ್ರ ಅನುಮತಿ ಕೊಟ್ಟು ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಎಂ. ಕಾರಜೋಳ ತಿಳಿಸಿದ್ದಾರೆ. ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ನ ಮಹಾಂತೇಶ್ ಕೌಜಲಗಿಯವರ ಪ್ರಸ್ತಾಪಕ್ಕೆ ಉತ್ತರಿಸಿದ ಅವರು, ಸವದತ್ತಿ ತಾಲ್ಲೂಕಿನ ಏಣಗಿ-ಹಳೆ ಏಣಗಿ ಮಲ್ಲೂರು-ಜಾಕವೆಲ್ ರಸ್ತೆ, ಬಡ್ಲಿ-ಹಳೇ ಬಡ್ಲಿ, ಸುತಗಟ್ಟಿ-ಹಿಟ್ಟಣಗಿ-ಏಣಗಿ ರಸ್ತೆಗಳ ದುರಸ್ಥಿಗೆ ಕ್ರಮ ಕೈಗೊಳ್ಳಲಾಗಿದೆ.ಏಣಗಿ-ಹಳೆ …
Read More »