Breaking News

Yearly Archives: 2022

ಶಿವಮೊಗ್ಗ: ವೇಗವಾಗಿ ಬಂದ ಟಿಪ್ಪರ್ ಕಾರಿಗೆ ಡಿಕ್ಕಿ! ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು

ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ತಾಲೂಕಿನ ಮಾಚೇನಹಳ್ಳಿ ಕೈಗಾರಿಕಾ ಪ್ರದೇಶ ಬಳಿ ಭೀಕರ ಅಪಘಾತ (Accident) ನಡೆದಿದೆ. ವೇಗವಾಗಿ ಬಂದ ಟಿಪ್ಪರ್ ಡಿವೈಡರ್​ಗೆ ಗುದ್ದಿ ಕಾರಿಗೆ (Car) ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಷಣ್ಣುಗ್ (39) ಮತ್ತು ರಾಮಚಂದ್ರ (40) ಎಂಬುವವರು ಭೀಕರ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾರೆ. ವೇಗವಾಗಿ ಬಂದ ಚಾಲಕನ ಎಡವಟ್ಟಿನಿಂದ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಘಟನೆ ಬಳಿಕ ಟಿಪ್ಪರ್ ಗಾಡಿಯನ್ನು ಸ್ಥಳದಲ್ಲೇ ಬಿಟ್ಟು ಚಾಲಕ …

Read More »

ಡ್ರೋಣ್​ಗಳಲ್ಲಿ ಮೂಡಿದ ಭಾರತ.. ರೋಮಾಂಚನಕಾರಿ ವಿಡಿಯೋ..!

ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ದೇಶಾದ್ಯಂತ ನಿನ್ನೆ 73ನೇ ಗಣರಾಜ್ಯೋತ್ಸವದ ಸಂಭ್ರಮ ಮನೆಮಾಡಿತ್ತು. ಗಣತಂತ್ರದ ಸಂಭ್ರಮದಲ್ಲಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ದೆಹಲಿಯ ರಾಷ್ಟ್ರಪತಿ ಭವನದ ಬಾನಂಗಳದಲ್ಲಿ ನೂರಾರು ಡ್ರೋಣ್​ಗಳು ಭಾರತ ಧ್ವಜ ಸೇರಿ ವಿವಿಧ ರಚನೆಗಳನ್ನು ಮೂಡಿಸಿದವು. ಆಕರ್ಷಕ ಬಣ್ಣಗಳಲ್ಲಿ ಮೂಡಿಸಿದ ಚಿತ್ತಾರಗಳು ಗಣತಂತ್ರದ ಸಂಭ್ರಮಕ್ಕೆ ಮತ್ತಷ್ಟು ಮೆರಗು ತಂದವು. ಇನ್ನು ಈ ಎಲ್ಲ ಡ್ರೋಣ್​ಗಳು ಭಾರತದಲ್ಲೇ ನಿರ್ಮಿತವಾದವು ಅನ್ನೋದು ವಿಶೇಷವಾಗಿತ್ತು. ಸದ್ಯ ಡ್ರೋಣ್​​ಗಳ ಮನಮೋಹಕ ದೃಶ್ಯಗಳು ಸೋಶಿಯಲ್ ಮೀಡಿಯಾದಲ್ಲಿ …

Read More »

ಕಾಂಗ್ರೆಸ್​ ಹೈಕಮಾಂಡ್​​ನಿಂದ ಬಿಗ್​ ಶಾಕ್; ಸಿಎಂ ಇಬ್ರಾಹಿಂ ನಿರೀಕ್ಷೆ ನೀರುಪಾಲು..!

ಬೆಂಗಳೂರು: ಕಾಂಗ್ರೆಸ್‌ ಹಿರಿಯ ನಾಯಕ ಎಸ್‌.ಆರ್ ಪಾಟೀಲ್‌ ಅವರ ನಿವೃತ್ತಿಯಿಂದ ತೆರವಾದ ಪರಿಷತ್‌ ವಿಪಕ್ಷ ನಾಯಕ ಸ್ಥಾನಕ್ಕೆ, ಬಿ.ಕೆ ಹರಿಪ್ರಸಾದ್‌ ನೇಮಕವಾಗಿದೆ. ಇದರ ಜತೆಗೆ, ಎಂ ನಾರಾಯಣಸ್ವಾಮಿ ಅವರ ನಿವೃತ್ತಿಯಿಂದ ತೆರವಾದ ವಿಧಾನ ಪರಿಷತ್‌ನ ಮುಖ್ಯ ಸಚೇತಕ ಸ್ಥಾನಕ್ಕೆ ಪ್ರಕಾಶ್‌ ಸಿಂಗ್‌ ರಾಠೋಡ್‌ ಅವರನ್ನು ಆಯ್ಕೆ ಮಾಡಲಾಗಿದೆ. ಕೆ. ಗೋವಿಂದ ರಾಜ್‌ ಅವರನ್ನು ವಿಧಾನ ಪರಿಷತ್‌ನ ಉಪ ನಾಯಕನಾಗಿ ಆಯ್ಕೆ ಮಾಡಿ ಸೋನಿಯಾ ಗಾಂಧಿ ಆದೇಶ ಹೊರಡಿಸಿದ್ದಾರೆ. ಅಚ್ಚರಿ ಎಂದ್ರೆ, …

Read More »

‘ಕೇಸರಿ’ ಮನೆಯಲ್ಲಿ ಮುಂದುವರಿದ ಉಸ್ತುವಾರಿ ಫೈಟ್ -ಕೊನೆಗೂ ಮೌನ ಮುರಿದ ಆರ್​​.ಅಶೋಕ್

ಬೆಂಗಳೂರು: ಜಿಲ್ಲಾ ಉಸ್ತುವಾರಿ ಪಟ್ಟಿ ಕೇಸರಿ ಮನೆಯಲ್ಲಿ ಅಸಮಾಧಾನದ ಹೊಗೆಯಾಡುವಂತೆ ಮಾಡಿದೆ. ಲಿಸ್ಟ್ ರಿಲೀಸ್‌ ಆಗಿ ಮೂರು ದಿನ ಕಳೆದ್ರೂ ಸಂಪುಟ ಸಹೋದ್ಯೋಗಿಗಳ ಬೇಸರ ಮಾತ್ರ ಕಡಿಮೆಯಾಗಿಲ್ಲ. ಕೆಲವರು ಪರೋಕ್ಷವಾಗೇ ತಮ್ಮ ಇಂಗಿತ ಹೊರಹಾಕ್ತಿದ್ರೆ, ಇನ್ನೂ ಕೆಲವರು ಬೇಸರವನ್ನ ನುಂಗಿಕೊಂಡು ಕೊಟ್ಟಿರೋ ಜಿಲ್ಲೆಯಲ್ಲಿ ಕೆಲಸವನ್ನ ಆರಂಭಿಸಿದ್ದಾರೆ. ಉಸ್ತುವಾರಿ ಬಗ್ಗೆ ಕೊನೆಗೂ ಮಾತನಾಡಿದ ‘ಸಾಮ್ರಾಟ್’ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರನ್ನ ನೇಮಿಸಲಾಗಿದ್ದು, ಕೆಲ ಜಿಲ್ಲೆಗಳಲ್ಲಿ ಕೇಸರಿ ಹೈ ಕಮಾಂಡ್ ಅದಲು-ಬದಲು …

Read More »

ಇತಿಹಾಸದಲ್ಲಿ ಮೊದಲ ಬಾರಿಗೆ ಭಾರತೀಯ ತ್ರಿವರ್ಣ ಧ್ವಜವನ್ನು ಶ್ರೀನಗರದ ಪ್ರಸಿದ್ಧ ಲಾಲ್ ಚೌಕ್ ಪ್ರದೇಶದ ಗಡಿಯಾರ ಗೋಪುರದ ಮೇಲೆ ಹಾರಿಸಲಾಯಿತು.

ಶ್ರೀನಗರ: 73ನೇ ಗಣರಾಜ್ಯೋತ್ಸವದ ಅಂಗವಾಗಿ ಇತಿಹಾಸದಲ್ಲಿ ಮೊದಲ ಬಾರಿಗೆ ಭಾರತೀಯ ತ್ರಿವರ್ಣ ಧ್ವಜವನ್ನು ಶ್ರೀನಗರದ ಪ್ರಸಿದ್ಧ ಲಾಲ್ ಚೌಕ್ ಪ್ರದೇಶದ ಗಡಿಯಾರ ಗೋಪುರದ ಮೇಲೆ ಹಾರಿಸಲಾಯಿತು. ಭಾರತದ ಸ್ವಾತಂತ್ರ್ಯದ ನಂತರ ಗಡಿಯಾರ ಗೋಪುರದ ಮೇಲೆ ರಾಷ್ಟ್ರಧ್ವಜವನ್ನು ಹಾರಿಸಿರುವುದು ಇದೇ ಮೊದಲು ಭಾರತದ 73 ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಇಬ್ಬರು ಸ್ಥಳೀಯ ಕಾರ್ಯಕರ್ತರಾದ ಸಾಜಿದ್ ಯೂಸುಫ್ ಶಾ ಮತ್ತು ಸಾಹಿಲ್ ಬಶೀರ್ ಅವರು ಸ್ಥಳೀಯರು ಎನ್‌ಜಿಒ ಮತ್ತು ಆಡಳಿತದೊಂದಿಗೆ ಲಾಲ್ ಚೌಕ್ ಪ್ರದೇಶದಲ್ಲಿ …

Read More »

ಪತ್ನಿಯ ಐಶಾರಾಮಿ ಜೀವನಕ್ಕೆ ಬೇಸತ್ತು ಪತಿ ನೇಣಿಗೆ ಶರಣಾಗಿರುವ ಘಟನೆ

ಬೆಂಗಳೂರು: ದುಬಾರಿ ಬೆಲೆಯ ಬಟ್ಟೆ ಖರೀದಿ ಸೇರಿದಂತೆ ಪತ್ನಿಯ ಐಶಾರಾಮಿ ಜೀವನಕ್ಕೆ ಬೇಸತ್ತು ಪತಿ ನೇಣಿಗೆ ಶರಣಾಗಿರುವ ಘಟನೆ ಬಸವೇಶ್ವರನಗರ ಠಾಣಾ ವ್ಯಾಪ್ತಿಯ ಮಂಜುನಾಥ ನಗರದಲ್ಲಿ ನಡೆದಿದೆ. ಮೆಕಾನಿಕ್‌ ಕೆಲಸ ಮಾಡುತ್ತಿದ್ದ ಚಾಂದ್‌ಪಾಷಾ (31) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಕೌಟುಂಬಿಕ ಕಲಹ ದಿಂದ ಮೊದಲ ಪತ್ನಿಯಿಂದ ದೂರವಾಗಿದ್ದರು. ಆ ಹಿನ್ನೆಲೆ ಚಾಂದ್‌ ಪಾಷಾ ಕಳೆದ 4 ತಿಂಗಳ ಹಿಂದಷ್ಟೇ ಉಸ್ಮಾ (26) ಎಂಬಾಕೆಯನ್ನು ಮದುವೆಯಾಗಿದ್ದ. ಚಾಂದ್‌ ಪಾಷಾ ಪತ್ನಿ ಉಸ್ಮಾಗೆ ಐಷಾರಾಮಿ …

Read More »

5 ಸಾವಿರ ಎಕರೆ ಜಮೀನು ವಶಕ್ಕೆ ಪಡೆದುಕೊಂಡು ಕೈಗಾರಿಕಾ ವಲಯ

ಕಲಬುರಗಿ: ಹಿಂದುಳಿದ ಭಾಗವಾದ ಕಲಬುರಗಿ ಜಿಲ್ಲೆಯಲ್ಲಿ ಕೈಗಾರಿಕೆಗಳನ್ನು ಆಕರ್ಷಿಸಲು ಸೇಡಂ ರಸ್ತೆಯಲ್ಲಿರುವ ವಿಮಾನ ನಿಲ್ದಾಣಕ್ಕೆ ಹೊಂದಿಕೊಂಡಂತೆ 5 ಸಾವಿರ ಎಕರೆ ಜಮೀನು ವಶಕ್ಕೆ ಪಡೆದುಕೊಂಡು ಬೇರೆ ಬೇರೆ ಉದ್ಯಮಗಳನ್ನು ಆರಂಭಿಸುವ ಹಾಗೂ ‌ಕೈಗಾರಿಕಾ ವಲಯವನ್ನಾಗಿ ಪರಿವರ್ತಿಸುವ ಚಿಂತನೆ ಇದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ‌ನಿರಾಣಿ ಪ್ರಕಟಿಸಿದರು. ಇಲ್ಲಿನ ಪೊಲೀಸ್ ಪರೇಡ್ ಮೈದಾನದಲ್ಲಿ ಬುಧವಾರ 73ನೇ ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಿ …

Read More »

ಮೃತಪಟ್ಟ ಮಹಿಳೆಯೊಬ್ಬರ ಅಂಗಾಂಗಳನ್ನು ದಾನ ಮಾಡಿ ಜೀವನದ ಸಾರ್ಥಕತೆ

ಮಣಿಪಾಲ: ದಾವಣಗೆರೆ ಬಳಿ ಸಂಭವಿಸಿದ ರಸ್ತೆ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫ‌ಲಕಾರಿಯಾಗದೆ ಮೃತಪಟ್ಟ ಮಹಿಳೆಯೊಬ್ಬರ ಅಂಗಾಂಗಳನ್ನು ದಾನ ಮಾಡಿ ಜೀವನದ ಸಾರ್ಥಕತೆ ಮೆರೆದಿದ್ದಾರೆ. ದಾವಣಗೆರೆ ಬಳಿ ಗುಡಾಲು ಗ್ರಾಮದ ಗುಮ್ಮನೂರು ರಸ್ತೆಯಲ್ಲಿ ಜ.22ರ ಸಂಜೆ ಅಪಘಾತ ಸಂಭವಿಸಿತ್ತು. ನಂಜುಂಡಪ್ಪ ಎಚ್‌.ಎನ್‌. ಅವರ ಪತ್ನಿ ಇಂದ್ರಮ್ಮ ಬಿ.ಎಂ. (57) ಗಂಭೀರ ಗಾಯಗೊಂಡಿದ್ದು, ಜ. 23ರಂದು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರ ಗಂಭೀರ ಪ್ರಯತ್ನದ ಹೊರತಾಗಿಯೂ ಚೇತರಿಸಿಕೊಳ್ಳದ …

Read More »

ಪ್ರಶಸ್ತಿಗಾಗಿ ಕೆಲಸ ಮಾಡಲಿಲ್ಲ

ಮಂಗಳೂರು : ಛಲವೊಂದಿದ್ದರೆ ಎನನ್ನೂ ಸಾಧಿಸಬಹುದು ಎಂಬುದಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಮೈ ಮಹಾಲಿಂಗ ನಾಯ್ಕ ಅವರೇ ಸಾಕ್ಷಿ. ಬೋಳುಗುಡ್ಡೆಯಲ್ಲಿ ಸುರಂಗ ನಿರ್ಮಿಸಿ, ನೀರು ಹರಿಸಿ ಬಂಗಾರ ಬೆಳೆದ ಭಗೀರಥ. ಶಾಲೆ, ಕಾಲೇಜುಗಳಿಗೆ ಹೋಗದಿದ್ದರೂ, ನೀರನೆಮ್ಮದಿಯನ್ನು ಕಂಡು ಪ್ರಗತಿಪರ ಕೃಷಿಕರೆನಿಸಿಕೊಂಡವರು. ಮಹಾಲಿಂಗ ನಾಯ್ಕರ ಸಾಧನೆ ಮನ್ನಿಸಿ ಅವರನ್ನು ಭಾರತ ಸರ್ಕಾರದ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿ ಅರಸಿ ಬಂದಿದೆ. ‘ದೇಶದ ದೊಡ್ಡ ಪ್ರಶಸ್ತಿ ಬಂದಿರುವುದು ನಮಗೆ ಖುಷಿ ಕೊಟ್ಟಿದೆ. …

Read More »

ರಾಷ್ಟ್ರ ಧ್ವಜವನ್ನು ಉಲ್ಟಾ ಹಾರಿಸಿ, ಸಲ್ಯೂಟ್ ಮಾಡಿದ ಸಚಿವ; ರಾಜೀನಾಮೆಗೆ ಪಟ್ಟು ಹಿಡಿದ ಬಿಜೆಪಿ

ಕೇರಳ : ಸಿಪಿಐ ನೇತೃತ್ವದ ಎಲ್‌ಡಿಎಫ್‌ನ ಮಿತ್ರಪಕ್ಷವಾದ ಇಂಡಿಯನ್ ನ್ಯಾಷನಲ್ ಲೀಗ್ (ಐಎನ್‌ಎಲ್) ನ ನಾಮನಿರ್ದೇಶಿತ ಶಾಸಕರಾದ ದೇವರಕೋವಿಲ್ ಜಿಲ್ಲಾ ಕೇಂದ್ರದಲ್ಲಿ ನಡೆದ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿದ್ದರು. ವಿಶೇಷವೆಂದರೆ, ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಸಚಿವರು, ಜನಪ್ರತಿನಿಧಿಗಳು, ಪೊಲೀಸ್ ಅಧಿಕಾರಿಗಳು ಮತ್ತು ಇತರ ಗಣ್ಯರು ಸೇರಿದಂತೆ ಯಾರೂ ರಾಷ್ಟ್ರಧ್ವಜವನ್ನು ಉಲ್ಟಾ ಹಾರಿಸಿದ್ದನ್ನು ಗಮನಿಸಲಿಲ್ಲ. ಧ್ವಜಾರೋಹಣ ನೆರವೇರಿಸಿದ ಬಳಿಕ ಸಚಿವರು ತಲೆಕೆಳಗಾಗಿದ್ದ ರಾಷ್ಟ್ರಧ್ವಜಕ್ಕೆ ವಂದನೆ ಸಲ್ಲಿಸಿ ನಂತರ ತಮ್ಮ ಭಾಷಣಕ್ಕೆ ಮುಂದಾದರು. ಇದರ …

Read More »