18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಲ್ಲಿ ಕೋವಿಡ್ ನಿರ್ವಹಣೆಗಾಗಿ ಪರಿಷ್ಕೃತ ಮಾರ್ಗಸೂಚಿಗಳನ್ನು ಕೇಂದ್ರವು ಗುರುವಾರ ಬಿಡುಗಡೆ ಮಾಡಿದೆ. ಒಮಿಕ್ರಾನ್ ರೂಪಾಂತರಕ್ಕೆ ಮುಖ್ಯವಾಗಿ ಕಾರಣವಾದ ಪ್ರಸ್ತುತ ಉಲ್ಬಣವನ್ನು ಗಮನದಲ್ಲಿಟ್ಟುಕೊಂಡು ಹಿಂದಿನ ಮಾರ್ಗದರ್ಶಿ ಸೂತ್ರಗಳನ್ನು ತಜ್ಞರ ಗುಂಪು ಪರಿಶೀಲಿಸಿದೆ. ಹೊಸ ಮಾರ್ಗಸೂಚಿಗಳ ಪ್ರಕಾರ, ಸ್ಟೀರಾಯ್ಡ್ಗಳನ್ನು ಬಳಸಿದರೆ, ಕ್ಲಿನಿಕಲ್ ಸುಧಾರಣೆಗೆ ಒಳಪಟ್ಟು 10-14 ದಿನಗಳಲ್ಲಿ ಅವುಗಳನ್ನು ಮೊಟಕುಗೊಳಿಸಬೇಕು. ಕೋವಿಡ್ ನಂತರದ ಆರೈಕೆಗೆ ಕೇಂದ್ರವು ಹೆಚ್ಚಿನ ಒತ್ತು ನೀಡಿದೆ. ಐದು ವರ್ಷ ಮತ್ತು ಅದಕ್ಕಿಂತ …
Read More »Yearly Archives: 2022
ಗರ್ಭಿಣಿ ಅರಣ್ಯಾಧಿಕಾರಿ ಮೇಲೆ ದಂಪತಿಗಳಿಂದ ಥಳಿತ.
ಮಹಾರಾಷ್ಟ್ರ: ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿ ಗರ್ಭಿಣಿ ಅರಣ್ಯ ರಕ್ಷಕಿಯನ್ನು ಮಾಜಿ ಸರಪಂಚ್ ಮತ್ತು ಅವರ ಪತ್ನಿ ಕೂದಲು ಹಿಡಿದು ನೆಲಕ್ಕೆ ತಳ್ಳಿ ಎಳೆದಾಡಿದ್ದರು. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಎಲ್ಲೆಡೆ ಇದಕ್ಕೆ ವಿರೋಧ ವ್ಯಕ್ತವಾಗುತ್ತಿದೆ. ಇದನ್ನು ಭಾರತೀಯ ಅರಣ್ಯ ಸೇವಾ ಸಂಘವು ಅಮಾನುಷ ದಾಳಿಯನ್ನು ಖಂಡಿಸಿದೆ ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಬಲವಾದ ನೀತಿಯನ್ನು ಒತ್ತಾಯಿಸಿದೆ. ಈ ಬಗ್ಗೆ ಟ್ವಿಟ್ಟರ್ನಲ್ಲಿ IFS ಅಸೋಸಿಯೇಷನ್ ಬರೆದುಕೊಂಡಿದೆ, ‘ಮಹಾರಾಷ್ಟ್ರದಲ್ಲಿ ಸರ್ಕಾರಿ ಕೆಲಸ …
Read More »ಬಡ ಮುಸ್ಲಿಂ ಯುವತಿಯೋರ್ವಳು ರಾಜ್ಯ ಪೊಲೀಸ್ ಇಲಾಖೆಯ ಸಬ್ ಇನ್ಸ್ಪೆಕ್ಟರ್ ಹುದ್ದೆಗೆ ಪರೀಕ್ಷೆ ಬರೆದು 39 ನೇ ರ್ಯಾಂಕ್ ನಲ್ಲಿ ಆಯ್ಕೆ
ಕಡಬ, ಜ.20. ಗ್ರಾಮೀಣ ಭಾಗದ ಬಡ ಮುಸ್ಲಿಂ ಯುವತಿಯೋರ್ವಳು ರಾಜ್ಯ ಪೊಲೀಸ್ ಇಲಾಖೆಯ ಸಬ್ ಇನ್ಸ್ಪೆಕ್ಟರ್ ಹುದ್ದೆಗೆ ಪರೀಕ್ಷೆ ಬರೆದು 39 ನೇ ರ್ಯಾಂಕ್ ನಲ್ಲಿ ಆಯ್ಕೆಯಾಗಿದ್ದಾರೆ. ಕುಂತೂರು ಸಮೀಪದ ಕೋಚಕಟ್ಟೆ ನಿವಾಸಿ ಎ.ಕೆ. ಇಸ್ಮಾಯಿಲ್ ಹಾಗೂ ಝುಬೈದಾ ಹೆಂತಾರು ದಂಪತಿಯ ನಾಲ್ವರು ಪುತ್ರಿಯರ ಪೈಕಿ ಕೊನೆಯವಳಾದ ಬದ್ರುನಿಶಾ ಇದೀಗ ಪಿಎಸ್ಐ ಆಗಿ ಆಯ್ಕೆಯಾಗಿದ್ದು, ಗ್ರಾಮೀಣ ಭಾಗದಲ್ಲಿ ಕಲಿತು ತನ್ನ ಸಹೋದರಿಯರಂತೆಯೇ ಉದ್ಯೋಗ ಗಿಟ್ಟಿಸೊಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ತನ್ನ ಪ್ರಾಥಮಿಕ ಶಿಕ್ಷಣವನ್ನು ಸರಕಾರಿ …
Read More »ವಿಶ್ವದಾಖಲೆ ಬರೆದ ಹುಬ್ಬಳ್ಳಿ ಹುಡುಗಿ
ಹುಬ್ಬಳ್ಳಿ: ಸಾಮಾನ್ಯವಾಗಿ ದೊಡ್ಡ – ದೊಡ್ಡ ಬಾರ್ಗಳಲ್ಲಿ ಬಾರ್ಟೆಂಡರ್ಗಳನ್ನು ನೀವು ನೋಡಿರ್ತೀರಾ. ಅದರಲ್ಲಿ ಬಾರ್ಟೆಂಡರ್ಗಳು ಬಾಟಲಿ ತಿರುಗಿಸುವುದನ್ನು ನೋಡಿಯೇ ಹೌ ಹಾರಿರುತ್ತೇವೆ. ಅಂಥದ್ದರಲ್ಲಿ ಇಲ್ಲೋರ್ವ ಯುವತಿ ಗ್ರಾಮೀಣ ಪ್ರದೇಶದಿಂದ ಬಂದು ಬಾರ್ಟೆಂಡರ್ನಲ್ಲಿ ಇದೀಗ ವಿಶ್ವ ದಾಖಲೆ ಬರೆದಿದ್ದಾರೆ. ವಿಶ್ವದಾಖಲೆ ಬರೆದ ಹಳ್ಳಿ ಹುಡುಗಿಹೌದು. ಹೀಗೆ ಗಿರ ಗಿರ ಎಂದು ಬಾಟಲಿಗಳಲ್ಲಿ ತಿರುಗಿಸುತ್ತ ನೋಡುಗರನ್ನು ಅಚ್ಚರಿಗೆ ಒಳಪಡಿಸುವ ಇವರು ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಬೆಟದೂರು ಗ್ರಾಮದ ಕವಿತಾ ಮೇದಾರ. ಹೀಗೆ ಇವರ …
Read More »ಶನಿವಾರ ಶಿವಸೇನೆ ಕಾರ್ಯಕರ್ತರು ಬೆಳಗಾವಿಗೆ ಮುತ್ತಿಗೆ ಹಾಕುತ್ತಾರೆ ಎಂದು ಮರಾಠಿ ಮಾದ್ಯಮಗಳು ಸುದ್ದಿ ಮಾಡಿವೆ.
ಬೆಳಗಾವಿ-ಗಡಿನಾಡಿನಲ್ಲಿ ಶಿವಸೇನೆಯ ಪುಂಡಾಟಿಕೆ ಮತ್ತೆ ಶುರುವಾಗಿದೆ.ಶನಿವಾರ ಶಿವಸೇನೆ ಕಾರ್ಯಕರ್ತರು ಬೆಳಗಾವಿಗೆ ಮುತ್ತಿಗೆ ಹಾಕಲು ನಿರ್ದರಿಸಿದ್ದಾರೆ. ಬೆಳಗಾವಿ,ಬೆಂಗಳೂರಿನಲ್ಲಿ ಶಿವಸೇನೆ ಮತ್ತು ಎಂಈಎಸ್ ಕಾರ್ಯಕರ್ತರ ಮೇಲೆ ಹಾಕಿರುವ ರಾಜದ್ರೋಹದ ಕೇಸ್ ವಾಪಸ್ ಪಡೆಯುವಂತೆ ಆಗ್ರಹಿಸಿ ಶನಿವಾರ ದಿ.22 ರಂದು ಶಿವಸೇನೆ ಕಾರ್ಯಕರ್ತರು ಕೊಲ್ಹಾಪೂರದಿಂದ ಬೆಳಗಾವಿಯವರೆಗೆ ಪಾದಯಾತ್ರೆ ನಡೆಸಿ ಬೆಳಗಾವಿಗೆ ಮುತ್ತಿಗೆ ಹಾಕುತ್ತಾರೆ ಎಂದು ಮರಾಠಿ ಮಾದ್ಯಮಗಳು ಸುದ್ದಿ ಮಾಡಿವೆ. ನಿರಂತರವಾಗಿ ಕಾಲು ಕೆದರಿ ಜಗಳಕ್ಕೆ ನಿಂತಿರುವ ಕೊಲ್ಹಾಪೂರದ ಶಿವಸೇನೆ ಮುಖಂಡ ವಿಜಯ ದೇವಣೆ …
Read More »ವಿವಾದಗಳಿಂದಲೇ ಸುದ್ದಿಯಾಗಿರುವ ಮಲಪ್ರಭಾ ಸಕ್ಕರೆ ಕಾರ್ಖಾನೆ,ಸಂಬಂಧವೇ ಇಲ್ಲದ ನೂರಾರು ಜನರ ಹೆಸರಿನಲ್ಲಿ Bank ಸಾಲ
ಬೆಳಗಾವಿ (ಜನವರಿ. 20)- ರಾಜ್ಯದಲ್ಲಿ ಕೊರೊನಾ, ಓಮಿಕ್ರಾನ್ ಹಾವಳಿ ಹೆಚ್ಚಾಗಿದ್ದು ಸರಕಾರ ವಿಕ್ ಎಂಡ್ ಲಾಕ್ ಡೌನ್ ಸೇರಿ ಅನೇಕ ನಿರ್ಬಂಧಗಳನ್ನು ಹೇರಿದೆ. ಇದರಿಂದ ದುಡಿಯುವ ವರ್ಗಕ್ಕೆ ದೊಡ್ಡ ಪೆಟ್ಟು ಬಿದ್ದು ದಿನ ನಿತ್ಯ ಹೊಟ್ಟೆ ತುಂಬಿಸಿಕೊಳ್ಳುವುದು ಕಷ್ಟಕರವಾಗಿದೆ. ಇಂತಹ ಸಂದರ್ಭದಲ್ಲಿ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ (Malaprabha Sahakari Sugar Factory) ಯಡವಟ್ಟು ಮಾಡಿದ್ದು, ಬಡವರಿಗೆ ಸಂಕಷ್ಟಕ್ಕೆ ತಳ್ಳಿದೆ. ಎಂ ಕೆ ಹುಬ್ಬಳ್ಳಿ ಪಟ್ಟಣದ ನೂರಾರು ಬಡವರ ಹೆಸರಿನಲ್ಲಿ …
Read More »ಇಂದು ರಾತ್ರಿಯಿಂದ ಮತ್ತೆ ವೀಕೆಂಡ್ ಕರ್ಫ್ಯೂ ಜಾರಿ ಬಗ್ಗೆ ಸಿಎಂ ಮಹತ್ವದ ಸಭೆ, ಮಧ್ಯಾಹ್ನದ ವೇಳೆ ಹೊಸ ರೂಲ್ಸ್ ಸಾಧ್ಯತೆ
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಮಧ್ಯಾಹ್ನ 1 ಗಂಟೆಗೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಹತ್ವದ ಸಭೆ ನಡೆಯಲಿದೆ. ಸಚಿವರು, ಅಧಿಕಾರಿಗಳು, ತಜ್ಞರೊಂದಿಗೆ ಮುಖ್ಯಮಂತ್ರಿಗಳು ಸಮಾಲೋಚನೆ ನಡೆಸಲಿದ್ದಾರೆ. ಕೊರೋನಾ ನಿಯಂತ್ರಣಕ್ಕೆ ಕೈಗೊಳ್ಳಬೇಕಿರುವ ಕ್ರಮಗಳ ಕುರಿತಾಗಿ ಸಭೆಯಲ್ಲಿ ಚರ್ಚೆ ನಡೆಯಲಿದ್ದು, ನೈಟ್ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ. ಮಧ್ಯಾಹ್ನದ ವೇಳೆಗೆ ಹೊಸ ಮಾರ್ಗಸೂಚಿ ಜಾರಿಯಾಗುವ ಸಾಧ್ಯತೆಯಿದೆ. ವೀಕೆಂಡ್ ಕರ್ಫ್ಯೂ ಕೈಬಿಡಬೇಕೆಂಬ ಒತ್ತಾಯ ತೀವ್ರವಾಗಿರುವ ಹಿನ್ನೆಲೆಯಲ್ಲಿ ಇಂದಿನ …
Read More »ಕಳ್ಳ ಸಹೋದರರ ಸೆರೆ: ಐದು ಬೈಕ್ ಜಪ್ತಿ
ಕಲಬುರಗಿ: ನಗರದಲ್ಲಿ ಹಾಡು ಹಗಲೇ ಬೈಕ್ಗಳ ಕಳ್ಳತನದಲ್ಲಿ ತೊಡಗಿಸಿ ಕೊಂಡಿದ್ದ ಇಬ್ಬರು ಸಹೋದರರನ್ನು ಉತ್ತರ ಉಪವಿಭಾಗದ ಚೌಕ್ ಠಾಣೆ ಪೊಲೀಸರು ಬಂಧಿಸಿ, 3.5 ಲಕ್ಷ ರೂ. ಮೌಲ್ಯದ ಐದು ಬೈಕ್ಗಳನ್ನು ಜಪ್ತಿ ಮಾಡಿದ್ದಾರೆ. ಕಾಳಗಿ ತಾಲೂಕಿನ ಕೊರವಾರ ಗ್ರಾಮದ ವಿಕಾಸ ಹೊಸಮನಿ, ರಾಮಚಂದ್ರ ಹೊಸಮನಿ ಬಂಧಿತ ಸಹೋದರರು. ಬುಧವಾರ ಬೆಳಗ್ಗೆ ತಾಜ್ಸುಲ್ತಾಪುರ ರಸ್ತೆಯಲ್ಲಿ ನಂಬರ್ ಪ್ಲೇಟ್ ಇಲ್ಲದ ಬೈಕ್ನಲ್ಲಿ ತೆರಳುತ್ತಿದ್ದಾಗ ಗಸ್ತಿನಲ್ಲಿದ್ದ ಪೊಲೀಸರು ತಡೆದು ವಿಚಾರಣೆ ನಡೆಸಿದಾಗ ಈ ಕಳ್ಳರು …
Read More »ಕಳ್ಳರು ಅಂಗಡಿಗಳಿಗೆ ನುಗ್ಗಿ ಕಳ್ಳತನ ಮಾಡಿ ಪರಾರಿಯಾಗಿರುವ ಘಟನೆ ಸಿಸಿ ಕ್ಯಾಮೆರಾದಲ್ಲಿ ಸೆರೆ
ಕಲಬುರಗಿ: ಜಿಲ್ಲೆಯ ಚಿಂಚೋಳಿ ಪಟ್ಟಣದಲ್ಲಿ ಇಂದು ಗುರುವಾರ ಬೆಳಗಿನ ಜಾವ ಕಳ್ಳರು ಅಂಗಡಿಗಳಿಗೆ ನುಗ್ಗಿ ಕಳ್ಳತನ ಮಾಡಿ ಪರಾರಿಯಾಗಿರುವ ಘಟನೆ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಚಿಂಚೋಳಿ ಮತ್ತು ತಾಂತ್ರಿಕ ಮುಖ್ಯರಸ್ತೆಯಲ್ಲಿರುವ ಎಂಆರ್ ಎಫ್ ಟೈರ್ಸ್ ಮತ್ತು ಮಾನಸ ಸಿಮೆಂಟ್ ಅಂಗಡಿಗೆ ನುಗ್ಗಿದ ಕಳ್ಳರು ಕ್ಯಾಶ್ ಕೌಂಟರ್ ಅನ್ನು ಒಡೆದು ಹಣ ದೋಚಿ ಪರಾರಿಯಾಗಿದ್ದಾರೆ. ಕಂಪನಿಯ ಅಂಗಡಿಗೆ ನುಗ್ಗಿದ ಕಳ್ಳರು ಶೆಟರ್ ಕೀಲಿ ಮುರಿದು ಒಳಗೆ ನುಗ್ಗಿದ ಕಳ್ಳರು ಟೈರ್ ಮತ್ತು ಟ್ಯೂಬುಗಳನ್ನು …
Read More »ಬಾಗಲಕೋಟೆ :ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಭಾರಿ ಸ್ಪೋಟಕ ವಶ
ಬಾಗಲಕೋಟೆ : ಜಿಲ್ಲೆಯ ವಿವಿಧೆಡೆ ಕಲ್ಲು ಗಣಿಗಾರಿಕೆಗೆ ಪೂರೈಸಲು ಬಳಸುವ ಭಾರಿ ಸ್ಪೋಟಕ ವಸ್ತುಗಳನ್ನು ತಾಲೂಕಿನ ಹೊನ್ನಾಕಟ್ಟಿಯ ತೋಟದ ಮನೆಯ ಶೆಡ್ ವೊಂದರಲ್ಲಿ ಸಂಗ್ರಹಿಸಿಟ್ಟಿದ್ದು, ಗುರುವಾರ ಪೊಲೀಸರು ಹಠಾತ್ ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ. ತಾಲೂಕಿನ ಸಂಗಮ ಕ್ರಾಸ್ ಬಳಿಯ ಹೊನ್ನಾಕಟ್ಟಿ ಗ್ರಾಮದ ಗುರುನಾಥ ಹಾದಿಮನಿ ಎಂಬುವವರ ತೋಟದ ಮನೆಯ ಶೆಡ್ನಲ್ಲಿ ಈ ಭಾರಿ ಸ್ಪೋಟಕ ವಸ್ತುಗಳು ಪತ್ತೆಯಾಗಿದ್ದು, ಮಂಜುನಾಥ ಕಂಕಣಮೇಲಿ, ವಿಜಯ ನಾರಾ ಎಂಬುವವರು ಈ ಅಕ್ರಮ ಸ್ಟೋಟಕ ವಸ್ತುಗಳನ್ನು …
Read More »