ದಾವಣಗೆರೆ (ಜ.6) : ಕನ್ನಡ ಮಧುರ ಹಾಗೂ ಕನ್ನಡ ಮಾನವೀಯ ನೆಲೆಯುಳ್ಳ ಭಾಷೆ. ನಮ್ಮಲ್ಲಿ ಇಚ್ಛಾಶಕ್ತಿ ಇದ್ದರೆ ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರವನ್ನು ಕನ್ನಡದಲ್ಲಿ ಹೇಳಲು ಸಾಧ್ಯ ಎಂದು ಹಿರಿಯ ಸಾಹಿತಿ ಡಾ.ದೊಡ್ಡರಂಗೇಗೌಡ ತಿಳಿಸಿದರು. ಹಾವೇರಿ(Haveri)ಯಲ್ಲಿ ಆರಂಭವಾಗಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ(Kannada Sahitya sammelana)ದ ಸರ್ವಾಧ್ಯಕ್ಷತೆ ವಹಿಸಿಕೊಳ್ಳಲಿದ್ದು, ಹಾವೇರಿಗೆ ಹೋಗುವ ಮಾರ್ಗದಲ್ಲಿ ದಾವಣಗೆರೆಯ ಕುವೆಂಪು ಕನ್ನಡ ಭವನ(Kuvempu kannada Bhavana)ಕ್ಕೆ ಗುರುವಾರ ಆಗಮಿಸಿ ಜಿಲ್ಲಾ ಕನ್ನಡ …
Read More »Daily Archives: ಜನವರಿ 6, 2023
2ಡಿ ಮೀಸಲು ತಿರಸ್ಕರಿಸಿದ ಪಂಚಮಸಾಲಿಗಳು, 2ಎಗೆ ಪಟ್ಟು: ಸರ್ಕಾರಕ್ಕೆ 24 ಗಂಟೆಗಳ ಗಡುವು
ಬೆಳಗಾವಿ (ಜ.06): ರಾಜ್ಯ ಸರ್ಕಾರ ಇತ್ತೀಚೆಗೆ ಘೋಷಿಸಿದ್ದ 2ಡಿ ಮೀಸಲಾತಿಯನ್ನು ಪಂಚಮಸಾಲಿ ಸಮುದಾಯ ತಿರಸ್ಕರಿಸಿದ್ದು, 2ಎ ಮೀಸಲಾತಿಗಾಗಿ ಮತ್ತೆ ಪಟ್ಟು ಹಿಡಿದಿದೆ. 2ಎ ಮೀಸಲಾತಿ ಘೋಷಿಸಲು ಸರ್ಕಾರಕ್ಕೆ 24 ಗಂಟೆಗಳ ಗಡುವನ್ನೂ ನೀಡಿರುವ ಸಮುದಾಯ, ಇಲ್ಲವಾದಲ್ಲಿ ಜ.13ರಂದು ಮುಖ್ಯಮಂತ್ರಿ ಬೊಮ್ಮಾಯಿ ಅವರ ಹಾವೇರಿಯ ಮನೆ ಮುಂದೆ ಪ್ರತಿಭಟನೆ ನಡೆಸುವ ಎಚ್ಚರಿಕೆಯನ್ನೂ ನೀಡಿದೆ. ನಗರದ ಗಾಂಧಿಭವನದಲ್ಲಿ ಗುರುವಾರ 2ಡಿ ಪಂಚಮಸಾಲಿಗಳ ಹೋರಾಟಕ್ಕೆ ಸಿಕ್ಕ ನ್ಯಾಯವೋ? ಅನ್ಯಾಯವೋ? ಎಂಬ ಕುರಿತು ಚರ್ಚಿಸಲು ಕರೆಯಲಾಗಿದ್ದ …
Read More »ಸತ್ತ ಕುರಿ ನೇತು ಹಾಕಿ ರೈತನ ಪ್ರತಿಭಟನೆ
ಹೊಸನಗರ : ಪಶುವೈದ್ಯ ಸಿಬ್ಬಂದಿಯ ಕಾರ್ಯವೈಖರಿ ಖಂಡಿಸಿ ರೈತರೊಬ್ಬರು ಬುಧವಾರ ಸತ್ತ ಕುರಿಯನ್ನು ಆಸ್ಪತ್ರೆ ಕಟ್ಟಡದ ತೊಲೆಗೆ ಕಟ್ಟಿ ವಿನೂತನವಾಗಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಅಷ್ಟರಲ್ಲೇ ಹೊಟ್ಟೆ ಉಬ್ಬರಿಸಿ ಒಂದು ಕುರಿ ಮೃತಪಟ್ಟಿತು. ಮರಣೋತ್ತರ ಪರೀಕ್ಷೆಗಾಗಿ ಮಧ್ಯಾಹ್ನ 3.30ಕ್ಕೆ ಸತ್ತ ಕುರಿಯನ್ನು ರೈತ ಆಸ್ಪತ್ರೆಗೆ ತಂದರು. ಆದರೆ ಅಷ್ಟರೊಳಗೆ ಪಶುವೈದ್ಯ ಸಿಬ್ಬಂದಿ ಆಸ್ಪತ್ರೆಗೆ ಬೀಗ ಹಾಕಿ ಹೋಗಿದ್ದರು. ಇದರಿಂದ ಆಕ್ರೋಶಗೊಂಡ ಅವರು ಜನಪ್ರತಿನಿಧಿಗಳು, ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ …
Read More »ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದವನ ಪಟ್ಟಣ ಪಂಚಾಯಿತಿ ಸದಸ್ಯತ್ವ ವಜಾ
ಸಾರ್ವಜನಿಕರೊಬ್ಬರಿಗೆ ಅನುಕೂಲ ಮಾಡಿಕೊಡುವ ಸಲುವಾಗಿ ಲಂಚ ಪಡೆಯುವ ವೇಳೆ ಲೋಕಾಯುಕ್ತ ಪೊಲೀಸರಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದವನು ಈಗ ತನ್ನ ಪಟ್ಟಣ ಪಂಚಾಯಿತಿ ಸದಸ್ಯತ್ವ ಕಳೆದುಕೊಂಡಿದ್ದಾನೆ. ಇಂತಹದೊಂದು ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಕಾರ್ಗಲ್ ನಲ್ಲಿ ನಡೆದಿದೆ. ಪ್ರಕರಣದ ವಿವರ: ಕಾರ್ಗಲ್ ಪಟ್ಟಣ ಪಂಚಾಯಿತಿ ಸದಸ್ಯ ಕೆ.ಸಿ. ಹರೀಶ್ ಎಂಬಾತ ಅಹ್ಮದ್ ಅಬ್ದುಲ್ ಎಂಬವರಿಗೆ ಮಾಂಸ ಮಾರಾಟ ನಡೆಸಲು ಪರವಾನಿಗೆ ಕೊಡಿಸುತ್ತೇನೆ ಎಂದು ಹೇಳಿ ಐವತ್ತು ಸಾವಿರ …
Read More »ಕಂಡದ್ದಕ್ಕೆ ಜೋತು ಬೀಳುವುದು ಮನಸ್ಸಿನ ಗುಣ
ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಹಿಂದೆ ಒಂದು ಕಾರ್ಯಕ್ರಮದಲ್ಲಿ ನೀಡಿದ ಪ್ರವಚನದಲ್ಲಿ ಮನಸ್ಸನ್ನು ಹ, ಒಂದು ಉತ್ತಮ ಜೀವನ ನಡೆಸಲು ಮನಸ್ಸು ಯಾವುದಕ್ಕೆ ಸೋಲಬಾರದು ಎಂಬುದರ ಕುರಿತು ಜೀವನಕ್ಕೆ ಒಂದು ಸಂದೇಶವನ್ನು ನೀಡಿದ್ದಾರೆ. ಈ ಜಗದಲ್ಲಿ ನಾವೆಲ್ಲರೂ ಸೋಲುವವರಾಗಿಬಿಟ್ಟಿದ್ದೀವಿ. ಈಗ ಎಲ್ಲೆಡೆ ಲಂಚ, ದುಡಿದಾಗ ಲಕ್ಷ ರೂಪಾಯಿ ಬರುತ್ತದೆ, ಅದು ಮಹತ್ವದ್ದಲ್ಲ. ಆದರೆ 10ರೂ.ಗೆ ಕೈ ಒಡ್ಡುತ್ತೀವಲ್ಲ ಏನಿದು? ಸೋಲು, ಎಲ್ಲಾ ಇದ್ದು ಮನಸ್ಸು ಅಲ್ಲಿ ಸೋಲುತ್ತದೆ. ಇದೇ ಜೀವನದ ವೈಶಿಷ್ಟ್ಯ. …
Read More »ನೀಲಿ ಡ್ರಮ್ನಲ್ಲಿ ಮಹಿಳೆ ಶವ ಪತ್ತೆ ಪ್ರಕರಣ: ಪೋಸ್ಟ್ ಮಾರ್ಟಮ್ ವರದಿಯಲ್ಲಿ ಏನಿದೆ?
ಯಶವಂತಪುರ ರೈಲ್ವೇ ನಿಲ್ದಾಣದ ನೀಲಿ ಡ್ರಮ್ ನಲ್ಲಿ ಮಹಿಳೆ ಶವ ಪತ್ತೆ ಪ್ರಕರಣ – ವೇಲ್ ನಿಂದ ಕುತ್ತಿಗೆ ಬಿಗಿದು ಮಹಿಳೆ ಕೊಲೆ – ಮರಣೋತ್ತರ ಪರೀಕ್ಷೆಯಲ್ಲಿ ಬಹಿರಂಗ. ನೀಲಿ ಡ್ರಮ್ ನಲ್ಲಿ ಮಹಿಳೆ ಶವ ಪತ್ತೆ ಪ್ರಕರಣ: ವೇಲ್ ನಿಂದ ಮಹಿಳೆ ಕುತ್ತಿಗೆ ಬಿಗಿದು ಕೊಲೆ ಬೆಂಗಳೂರು: ಯಶವಂತಪುರ ರೈಲ್ವೇ ನಿಲ್ದಾಣದಲ್ಲಿ ನೀಲಿ ಡ್ರಮ್ ನಲ್ಲಿ ಅಪರಿಚಿತ ಮಹಿಳೆ ಶವ ದೊರೆತ ಪ್ರಕರಣ ಸಂಬಂಧ ತನಿಖೆ …
Read More »ಸಿದ್ದರಾಮಯ್ಯ- ರಮೇಶ ಜಾರಕಿಹೊಳಿ ರಹಸ್ಯ ಸಭೆ: ಮೂಲ ಗೂಡಿಗೆ ಮರಳಲಿದ್ದಾರಾ ಪ್ರಭಾವಿ ಮುಖಂಡ?
ಬೆಂಗಳೂರು, : ರಾಜ್ಯ ರಾಜಕಾರಣವು ಹೊಸದೊಂದು ಸಂಚಲನಕ್ಕೆ ಅಣಿಯಾಗುತ್ತಿದೆ ಎಂಬ ಮಾತುಗಳು ಓಡಾಡುತ್ತಿವೆ. ಬೆಳಗಾವಿಯ ಪ್ರಭಾವಿ ರಾಜಕಾರಣಿ ರಮೇಶ ಜಾರಕಿಹೊಳಿ ತಮ್ಮ ಗುರು ಸಿದ್ದರಾಮಯ್ಯನವರನ್ನು ರಹಸ್ಯವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ ಎಂಬ ವರದಿಗಳು. ಆದರೆ, ಅವರಿಬ್ಬರ ನಡುವೆ ನಡೆದ ಮಾತುಕತೆಗಳೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಮೂಲದ ಪ್ರಕಾರ, ರಮೇಶ ಜಾರಕಿಹೊಳಿ ಅವರು ಬಿಜೆಪಿಯ ನಾಯಕರೊಂದಿಗೆ ಮುನಿಸಿಕೊಂಡಿದ್ದಾರೆ. ಚುನಾವಣೆಗೆ ನಾಲ್ಕೈದು ತಿಂಗಳು ಬಾಕಿ ಇರುವಾಗ ತಮಗೆ ಸಚಿವ ಸ್ಥಾನ ನೀಡಬೇಕೆಂದು …
Read More »2D ಮೀಸಲಾತಿ ತಿರಸ್ಕಾರ: ಸಿಎಂ ಬೊಮ್ಮಾಯಿಗೆ 24 ಗಂಟೆಗಳ ಅಂತಿಮ ಗಡುವು ನೀಡಿದ ಯತ್ನಾಳ್
ಬೆಳಗಾವಿ: ರಾಜ್ಯ ಬಿಜೆಪಿ ಸರ್ಕಾರ ನೀಡಿರುವ 2D ಮೀಸಲಾತಿಯನ್ನು ತಿರಸ್ಕರಿಸಿರುವ ಪಂಚಮಸಾಲಿ ಸಮುದಾಯದ ನಾಯಕರು ತಮಗೆ 2A ಮೀಸಲಾತಿಯೇ ಬೇಕು ಎಂದು ಮತ್ತೊಮ್ಮೆ ಪಟ್ಟು ಹಿಡಿದಿದ್ದಾರೆ. ಈ ಹಿನ್ನೆಲೆ ಗುರುವಾರ ನಡೆದ ಸಮುದಾಯದ ನಾಯಕರ ಮಹತ್ವದ ಸಭೆ ನಡೆಸಿ ಚರ್ಚಿಸಿದರು. 2ಅ ಮೀಸಲಾತಿ ನೀಡುವ ವಿಚಾರವಾಗಿ ಮಾತನಾಡಿದ ಬಿಜೆಪಿ ನಾಯಕ ಬಸವನಗೌಡ ಪಾಟೀಲ್ ಯತ್ನಾಳ್, ತಮ್ಮ ಸರ್ಕಾರದ ವಿರುದ್ಧವೇ ಕಿಡಿಕಾರಿದ್ದಾರೆ. ‘ಬಸವರಾಜ ಬೊಮ್ಮಾಯಿಯವರು ಸಿಎಂ ಆದಾಗಿನಿಂದ ಈವರೆಗೂ ಹಾದಿ ತಪ್ಪಿಸುವ …
Read More »*ಭಟ್ಕಳ ಪೊಲೀಸ್ ಠಾಣೆಗೆ ಬಾಂಬ್ ಬೆದರಿಕೆ ಹಾಕಿದ್ದ ಆರೋಪಿ ಬಂಧನ*
ಭಟ್ಕಳ: ಭಟ್ಕಳ ಪೊಲೀಸ್ ಠಾಣೆಗೆ ಬಾಂಬ್ ಹಾಕುವುದಾಗಿ ಪತ್ರ ಬರೆದು ಬೆದರಿಕೆ ಹಾಕಿದ್ದ ಆರೋಪಿ ಹನುಮಂತಪ್ಪ ಎಂಬಾತನನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಹನುಮಂತಪ್ಪ ಠಾಣೆಯಲ್ಲಿ ಬಾಂಬ್ ಸ್ಫೋಟ ನಡೆಸುವುದಾಗಿ ಪತ್ರದ ಮೂಲಕ ಬೆದರಿಕೆ ಹಾಕಿದ್ದ. ತನ್ನ ಹೆಸರು ಹಾಗೂ ವಿಳಾಸವನ್ನು ಬರೆಯದೆ ಪೋಸ್ಟ್ ಕಾರ್ಡ್ ನ ಮುಖಪುಟದಲ್ಲಿ ಅರ್ಧ ಚಂದ್ರಾಕೃತಿ ಮತ್ತು ನಕ್ಷತ್ರ ಚಿಹ್ನೆ, ಅದರ ಕೆಳಗೆ 786 ಮತ್ತು ಉರ್ದು ಅಕ್ಷರಗಳನ್ನು ಬರೆದು ಅದರ ಕೆಳಗೆ ಭಟ್ಕಳ …
Read More »