ಚಿಕ್ಕೋಡಿ: ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನರ ಬದುಕಿನಲ್ಲಿ ಮತ್ತೆ ಬೆಳಕು ತರುವ ದೃಷ್ಟಿಯಿಂದ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೆ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಘೋಷಿಸಿದ್ದಾರೆ. ಕಾಂಗ್ರೆಸ್ ಪಕ್ಷ ಇಂದು ಆರಂಭಿಸಿದ ಪ್ರಜಾಧ್ವನಿ ಯಾತ್ರೆ ನಿಮಿತ್ತ ಚಿಕ್ಕೋಡಿಯಲ್ಲಿ ಬುಧವಾರ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ಇದೊಂದು ಐತಿಹಾಸಿಕ ದಿನ. ಕಾಂಗ್ರೆಸ್ ಪಕ್ಷ ರಾಜ್ಯದ …
Read More »Daily Archives: ಜನವರಿ 11, 2023
ಆರೋಗ್ಯ ತಪಾಸಣೆ ಶಿಬಿರ ಇಂದು
ಅಥಣಿ: ಕೆಎಲ್ಇ ಸಂಸ್ಥೆಯ ಎಸ್ಎಂಎಸ್ ಮಹಾವಿದ್ಯಾಲಯದಲ್ಲಿ ಜ. 11ರಂದು ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಎಸ್ಎಂಎಸ್ ಮಹಾವಿದ್ಯಾಲ ಯದ ಸ್ಥಾನಿಕ ಆಡಳಿತ ಮಂಡಳಿಯ ಅಧ್ಯಕ್ಷ ಡಾ.ಮಲ್ಲಿಕಾರ್ಜುನ ಹಂಜಿ ತಿಳಿಸಿದರು. ಇಲ್ಲಿನ ಎಸ್ಎಂಎಸ್ ಮಹಾವಿದ್ಯಾಲಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರದ ಕರಪತ್ರ ಬಿಡುಗಡೆಗೊಳಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಎಲ್ಇ ಸಂಸ್ಥೆಯ ಕಾರ್ಯಧ್ಯಕ್ಷ ಡಾ.ಪ್ರಭಾಕರ ಕೋರೆ ಅವರ ಜನ್ಮ ದಿನದ ಅಮೃತ ಮಹೋತ್ಸವದ ಅಂಗವಾಗಿ ಕೆಎಲ್ಇ ವಿಶ್ವವಿದ್ಯಾಲಯ, ಜವಾಹರಲಾಲ್ …
Read More »ವೈಜ್ಞಾನಿಕ ಮನೋಭಾವ ಮೂಡಿಸಿ’
ಗೋಕಾಕ: ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಮೂಡಿಸಿ ಅವರನ್ನು ವಿಜ್ಞಾನಿಗಳಾಗುವಂತೆ ಪ್ರೇರೇಪಿಸಬೇಕು ಎಂದು ಮಯೂರ ಆಂಗ್ಲ ಮಾಧ್ಯಮ ಶಾಲೆ ಉಪಾಧ್ಯಕ್ಷೆ ಸಂಧ್ಯಾ ಲಖನ್ ಜಾರಕಿಹೊಳಿ ಹೇಳಿದರು. ನಗರದ ಮಯೂರ ಶಾಲೆಯಲ್ಲಿ ಮಂಗಳವಾರ ವಾರ್ಷಿ ಸ್ನೇಹ ಸಮ್ಮೇಳನ ನಿಮಿತ್ತ ಆಯೋಜಿಸಿದ್ದ ವಿಜ್ಞಾನ ವಸ್ತು ಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ವೈಜ್ಞಾನಿಕ ಯುಗದಲ್ಲಿ ವಿಜ್ಞಾನ ಹೆಚ್ಚಿನ ಮಹತ್ವ ಪಡೆದಿದೆ. ವಿದ್ಯಾರ್ಥಿಗಳು ವಿಜ್ಞಾನಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಪ್ರತಿಯೊಬ್ಬರಲ್ಲೂ ಪ್ರತಿಭೆ ಹುದುಗಿದ್ದು ಅದನ್ನು ಗುರುರಿಸಿ …
Read More »ಗ್ರಾಮೀಣ ಪ್ರದೇಶಕ್ಕೆ ಅಧಿಕ ಬಜೆಟ್ ಹಂಚಿಕೆ ಮಾಡಲಾಗುತ್ತಾ?
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1, 2023ರಂದು 2023-2024ನೇ ಹಣಕಾಸು ವರ್ಷದ ಕೇಂದ್ರ ಬಜೆಟ್ ಅನ್ನು ಮಂಡನೆ ಮಾಡಲಿದ್ದಾರೆ. ಈ ವರ್ಷದ ಬಜೆಟ್ 2024ರ ಲೋಕಸಭೆ ಚುನಾವಣೆಗೂ ಮುನ್ನ ಬರುತ್ತಿದೆ. ಅದರಿಂದಾಗಿ ಬಜೆಟ್ ನಿರೀಕ್ಷೆ ಹೆಚ್ಚೇ ಇದೆ. ಸರ್ಕಾರವು ಚುನಾವಣಾ ನೆಲೆಯಲ್ಲಾದರೂ ಗ್ರಾಮೀಣ ಪ್ರದೇಶದ ಬೆಳವಣಿಗೆ ಹೆಚ್ಚಿನ ಬಜೆಟ್ ಹಂಚಿಕೆ ಮಾಡಬಹುದು ಎಂಬ ನಿರೀಕ್ಷೆಗಳಿದೆ. ಮಧ್ಯಮ ವರ್ಗದ ಮಾಸಿಕ ವೇತನ ಪಡೆಯುವ ವರ್ಗವು ಸರ್ಕಾರವು ಆದಾಯ ತೆರಿಗೆ …
Read More »ಪ್ರಜಾಧ್ವನಿ’ ಕಾಂಗ್ರೆಸ್ ಬಸ್ ಯಾತ್ರೆಗೆ ಚಾಲನೆ; ರಾಜ್ಯದಲ್ಲಿ ಬದಲಾವಣೆಗೆ ನಾಂದಿ ಹಾಡಿದ್ದೇವೆ ಎಂದ ಡಿ.ಕೆ.ಶಿವಕುಮಾರ್
ಬೆಳಗಾವಿ: ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ವಿಪಕ್ಷ ಕಾಂಗ್ರೆಸ್ ಬಸ್ ಯಾತ್ರೆ ಆರಭವಾಗಿದೆ. ಗಡಿ ಜಿಲ್ಲೆ ಬೆಳಗಾವಿಯ ವೀರಸೌಧದಿಂದ ಕಾಂಗ್ರೆಸ್ ಪ್ರಜಾಧ್ವನಿ ಬಸ್ ಯಾತ್ರೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಚಾಲನೆ ನಿಡಿದರು. ಬೆಳಗಾವಿಯ ವೀರಸೌಧದ ಬಳಿ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಬಳಿಕ ಪ್ರಜಾಧ್ವನಿ ಬಸ್ ಯಾತ್ರೆಗೆ ಚಾಲನೆ ನೀಡಲಯಿತು. ಈ ವೇಳೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ …
Read More »ನಾನು ಬಿಜೆಪಿ ಕಾರ್ಯಕರ್ತ, ವರ್ಗಾವಣೆ ದಂಧೆ ನಿಜ ಎಂದು ಒಪ್ಪಿಕೊಂಡಿದ್ದ ಸ್ಯಾಂಟ್ರೋ ರವಿ
ಮೈಸೂರು: ಕುಖ್ಯಾತ ಕ್ರಿಮಿನಲ್, ರಾಜಕಾರಣಿಗಳು, ಅಧಿಕಾರಿಗಳ ಅಪ್ತ ಸಖನೆಂದು ಗುರುತಿಸಿಕೊಂಡಿರುವ ಮೈಸೂರಿನ ಕೆ.ಎಸ್. ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿ (Santro Ravi Case) ತಾನೇ ಸ್ವತಃ ಈ ವಿಚಾರಗಳನ್ನು ಒಪ್ಪಿಕೊಂಡಿದ್ದಾನೆ. ತಾನೊಬ್ಬ ಬಿಜೆಪಿ ಕಾರ್ಯಕರ್ತ, ಪೊಲೀಸ್ ಅಧಿಕಾರಿಗಳು ಮತ್ತು ಸರ್ಕಾರಿ ನೌಕರರ ವರ್ಗಾವಣೆ ಮಾಡಿಸಿದ್ದು ನಿಜ. ವೇಶ್ಯಾವಾಟಿಕೆ ದಂಧೆಯ ಆರೋಪವಿರುವುದು ನಿಜ ಎಂದೆಲ್ಲ ಲಿಖಿತವಾಗಿ ಒಪ್ಪಿಕೊಂಡಿದ್ದಾನೆ. ೨೦೨೨ರ ಜನವರಿ ೨೨ರಂದು ಪ್ರಕರಣವೊಂದು ದಾಖಲಾದಾಗ ಬೆಂಗಳೂರಿನ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಸ್ವತಃ …
Read More »ಫೆ.17 ರಂದು ರಾಜ್ಯ ಬಜೆಟ್ ಮಂಡನೆ : ಜನಪ್ರಿಯ ಯೋಜನೆಗಳ ಘೋಷಣೆ ಸಾಧ್ಯತೆ
ಹುಬ್ಬಳ್ಳಿ : ರಾಜ್ಯ ಬಜೆಟ್ ಮಂಡನೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಫೆಬ್ರವರಿ 17 ರಂದು ರಾಜ್ಯ ಬಜೆಟ್ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಮುಂದಿನ ತಿಂಗಳ 3 ನೇ ವಾರ ಬಜೆಟ್ ಮಂಡಿಸಲಾಗುವುದು. ಈಗಾಗಲೇ ಬಜೆಟ್ ಹಿನ್ನೆಲೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ಆರಂಭಿಸಲಾಗಿದೆ ಎಂದು ಹೇಳಿದ್ದಾರೆ. ಏಪ್ರಿಲ್,ಮೇ ತಿಂಗಳಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆ ಹಿನ್ನೆಲೆಯಲ್ಲಿ ಈ ಬಾರಿ …
Read More »ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಯಾರು? ಇಲ್ಲಿದೆ ಕುತೂಹಲಕರ ಮಾಹಿತಿ
ಬೆಂಗಳೂರು, ಜನವರಿ 11: ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇವೆ. ಈಗಾಗಲೇ ರಾಜಕೀಯ ಪಕ್ಷಗಳು ಅಭ್ಯರ್ಥಿಗಳ ಪಟ್ಟಿಯನ್ನು ತಯಾರಿಸುವಲ್ಲಿ ನಿರತವಾಗಿವೆ. ಜೆಡಿಎಸ್ 93 ಅಭ್ಯರ್ಥಿಗಳನ್ನು ಘೋಷಿಸಿದೆ. ಸಂಕ್ರಾಂತಿ ಸಮಯದಲ್ಲಿ ಕಾಂಗ್ರೆಸ್ ತನ್ನ ಮೊದಲ ಪಟ್ಟಿಯನ್ನು ಹೊರತರಲು ಸಿದ್ದತೆ ಮಾಡಿಕೊಂಡಿದೆ. ಆಡಳಿತಾರೂಢ ಬಿಜೆಪಿ ಪಕ್ಷ ಫೆಬ್ರವರಿ ಅಂತ್ಯದಲ್ಲಿ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಬಹುದು. ಆ ಹೊತ್ತಿಗೆ ಕೇಂದ್ರ ಮತ್ತು ರಾಜ್ಯ ಬಜೆಟ್ಗಳು ಹೊರಬಂದಿರುತ್ತವೆ. ಈ ಹಿನ್ನೆಲೆಯಲ್ಲಿ ಬಿಜೆಪಿಯ …
Read More »ಫೆ. 17ರಂದು ರಾಜ್ಯ ಬಜೆಟ್: ಸಿಎಂ ಬೊಮ್ಮಾಯಿ
ಹುಬ್ಬಳ್ಳಿ: ಫೆ. 17ರಂದು ರಾಜ್ಯದ 2023-24ನೇ ಸಾಲಿನ ಆಯವ್ಯಯ ಮಂಡನೆ ಮಾಡುತ್ತೇನೆ. ಉತ್ತರ ಕರ್ನಾಟಕಕ್ಕೆ ಕೊಡುಗೆ ಏನೆಂಬುದನ್ನು ಕಾಯ್ದು ನೋಡಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ಸುದ್ದಿಗಾರೊಂದಿಗೆ ಮಾತನಾಡಿ, ರಾಜ್ಯ ಆಯವ್ಯಯ ಮಂಡನೆಗೆ ಸಿದ್ಧತೆ ನಡೆದಿದೆ. ಉತ್ತರ ಕರ್ನಾಟಕಕ್ಕೆ ವಿಶೇಷ ಕೊಡುಗೆಯನ್ನು ಬಜೆಟ್ನಲ್ಲೇ ಘೋಷಿಸಲಾಗುವುದು. ಜ.16ರಂದು ಪಕ್ಷದ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳುತ್ತಿದ್ದೇನೆ. ಈ ಸಭೆಯಲ್ಲಿ ಸಂಪುಟ ವಿಸ್ತರಣೆ ಕುರಿತು ಚರ್ಚಿಸುವುದಿಲ್ಲ ಎಂದರು.
Read More »ಗ್ರಾಮಗಳಿಗೆ ಶ್ಮಶಾನ ಜಾಗ: ವರದಿ ಸಲ್ಲಿಸಲು ಸಮಯ ಕೇಳಿದ ಸರ್ಕಾರ
ಬೆಂಗಳೂರು: ರಾಜ್ಯದ ಎಲ್ಲಾ ಗ್ರಾಮಗಳಲ್ಲಿ ಶವ ಸಂಸ್ಕಾರಕ್ಕೆ ಶ್ಮಶಾನ ಜಾಗ ಒದಗಿಸಿರುವ ಬಗ್ಗೆ ಸಮಗ್ರ ವರದಿ ಸಲ್ಲಿಸಲು 30 ದಿನಗಳ ಕಾಲಾವಕಾಶ ನೀಡುವಂತೆ ಸರ್ಕಾರ ಹೈಕೋರ್ಟ್ಗೆ ಮನವಿ ಮಾಡಿದೆ. ರಾಜ್ಯದ ಎಲ್ಲಾ ಗ್ರಾಮಗಳು ಮತ್ತು ಪಟ್ಟಣ ಪ್ರದೇಶಗಳಿಗೆ ಶವಸಂಸ್ಕಾರಕ್ಕೆ ಶ್ಮಶಾನ ಜಾಗ ಒದಗಿಸುವಂತೆ 2019ರ ಆಗಸ್ಟ್ 20ರಂದು ಹೈಕೋರ್ಟ್ ನೀಡಿದ್ದ ಆದೇಶ ಸರ್ಕಾರ ಪಾಲಿಸಿಲ್ಲ ಎಂದು ದೂರಿ ಬೆಂಗಳೂರು ನಿವಾಸಿ ಮಹಮ್ಮದ್ ಇಕ್ಬಾಲ್ ಎಂಬುವರು ಸಲ್ಲಿಸಿರುವ ಸಿವಿಲ್ ನ್ಯಾಯಾಂಗ ನಿಂದನೆ …
Read More »