Breaking News

Daily Archives: ಜನವರಿ 14, 2023

ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಜೀವ ಬೆದರಿಕೆ ಕರೆ

ನಾಗ್ಪುರ: ನಾಗ್ಪುರದ ತನ್ನ ಕಚೇರಿಯಲ್ಲಿ ಲ್ಯಾಂಡ್ಲೈನ್ ಫೋನ್ ಮೂಲಕ ಅಪರಿಚಿತ ವ್ಯಕ್ತಿಗೆ ಕೊಲೆ ಬೆದರಿಕೆ ಬಂದಿದೆ. ನಿತಿನ್ ಗಡ್ಕರಿ ಕಚೇರಿ ನಾಗ್ಪುರ ಪೊಲೀಸರಿಗೆ ದೂರು ನೀಡಿದೆ ಎನ್ನಲಾಗಿದೆ. ಈ ಸುದ್ದಿ ಈಗಷ್ಟೇ ಬಂದಿದೆ ಹೆಚ್ಚಿನ ಮಾಹಿತಿ ಪಡೆದ ತಕ್ಷಣ, ನಾವು ಈ ಪುಟದಲ್ಲಿ ಹೆಚ್ಚಿನ ಮಾಹಿತಿಯನ್ನು ನವೀಕರಣ ಮಾಡುತ್ತೇವೆ, ಸ್ವಲ್ಪ ಸಮಯದ ನಂತರ ಪುನಃ ಈ ಪುಟಕ್ಕೆ ಭೇಟಿ ನೀಡಿ

Read More »

ಕಾಂಗ್ರೆಸ್‌ನ 36 ಹಾಲಿ ಶಾಸಕರಿಗೆ ಟಿಕೆಟ್ ಕೈ ತಪ್ಪುವ ಬಿಸಿ-

ಬೆಂಗಳೂರು, ಜನವರಿ 14: ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇದೆ. ರಾಜ್ಯದ ಮೂರು ಪ್ರಬಲ ಪಕ್ಷಗಳು ಅಭ್ಯರ್ಥಿಗಳ ಪಟ್ಟಿಯನ್ನು ತಯಾರು ಮಾಡುವುದರಲ್ಲಿ ನಿರತವಾಗಿವೆ. ಎಚ್‌ ಡಿ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್‌ ಪಕ್ಷವು ಈಗಾಗಲೇ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬಿಜೆಪಿಯು ಫೆಬ್ರುವರಿಯಲ್ಲಿ ತನ್ನ ಮೊದಲ ಪಟ್ಟಿಯನ್ನು ಸಿದ್ದಪಡಿಸಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕಾಂಗ್ರೆಸ್‌ ಪಕ್ಷವು ಜನವರಿ ಕೊನೆಯ ವಾರದಲ್ಲಿ ಮೊದಲ ಪಟ್ಟಿಯನ್ನು ಸಿದ್ದಪಡಿಸಲಿದೆ. ಇದನ್ನು ಕೆಪಿಸಿಸಿ ಅಧ್ಯಕ್ಷ …

Read More »

ಸಿದ್ದುಗೆ ಎರಡರ ಇಕ್ಕಟ್ಟು: ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಲೇಬೇಕೆಂದು ಆಪ್ತರು ಪಟ್ಟು

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಕ್ಷೇತ್ರದ ಬಗ್ಗೆ ಚರ್ಚೆ ನಡೆದಿರುವ ಬೆನ್ನಲ್ಲೇ ಎರಡು ಕ್ಷೇತ್ರಗಳಲ್ಲಿ ಕಣಕ್ಕಿಳಿಯುವುದು ಸುರಕ್ಷಿತವೇ ಎಂಬ ಚಿಂತನೆಯೂ ಚಾಲ್ತಿ ಪಡೆದಿದೆ.   ಕೋಲಾರದೊಂದಿಗೆ ಬಾದಾಮಿ ಅಥವಾ ವರುಣಾದಿಂದ ಸ್ಪರ್ಧಿಸುವುದು ಸೂಕ್ತ ಎಂದು ಸಿದ್ದು ಆಪ್ತರು ಒತ್ತಡ ಹಾಕುತ್ತಿದ್ದು, ಇದೀಗ ‘ಚೆಂಡು’ ಹೈಕಮಾಂಡ್‌ ಅಂಗಳ ತಲುಪುವ ಲಕ್ಷಣಗಳಿವೆ. ಕೋಲಾರದಲ್ಲಿ ಮಾತ್ರ ಸ್ಪರ್ಧಿಸಿ ಅಪಾಯವನ್ನು ಮೈಮೇಲೆ ಎಳೆದು ಕೊಳ್ಳು ವುದು ಬೇಡ ಎಂಬುದು ಆಪ್ತರ ಸಲಹೆ. ಕೆಪಿಸಿಸಿ ಅಧ್ಯಕ್ಷ …

Read More »

ತಲೆ ಮರೆಸಿಕೊಂಡಿದ್ದ ಆರೋಪಿ ಗುಜರಾತ್‌ನಲ್ಲಿ ಸ್ಯಾಂಟ್ರೊ ರವಿ ಬಂಧನ

ಮೈಸೂರು: ಅತ್ಯಾಚಾರ, ವೇಶ್ಯಾವಾಟಿಕೆ, ಗೂಂಡಾ ಪ್ರಕರಣಗಳ ಆರೋಪಿ ಕೆ.ಎಸ್.ಮಂಜುನಾಥ್‌ ಅಲಿಯಾಸ್ ಸ್ಯಾಂಟ್ರೊ ರವಿಯನ್ನು (51) ಪೊಲೀಸರು ಗುಜರಾತ್‌ನ ಅಹಮದಾಬಾದ್‌ನಲ್ಲಿ ಶುಕ್ರವಾರ ಬಂಧಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಎಡಿಜಿಪಿ ಅಲೋಕ್‌ ಕುಮಾರ್‌, ‘ಪ್ರತಿದಿನ ಸ್ಥಳ ಬದಲಾಯಿಸುತ್ತಿದ್ದ ಆರೋಪಿಯ ಜೊತೆಗೆ ಆತನ ನಿಕಟವರ್ತಿಗಳಾದ ಕೇರಳದ ಶ್ರುತೇಶ್‌ (35) ಮತ್ತು ರಾಮ್‌ಜಿ (45) ಎನ್ನುವವರನ್ನು ಬಂಧಿಸಲಾಗಿದೆ. ಎರಡು ದಿನಗಳ ಹಿಂದೆ ಮೈಸೂರಿನ ಮಧುಸೂದನ ಎಂಬಾತನನ್ನು ಬಂಧಿಸಲಾಗಿತ್ತು’ ಎಂದು ತಿಳಿಸಿದರು. ‘ತಲೆ ಮರೆಸಿಕೊಂಡಿದ್ದ ಆರೋಪಿ ಯು ಕೇರಳ, …

Read More »

ರಾಜ್ಯದಲ್ಲಿ ಒಂದು ಪಕ್ಷ ಅಧಿಕಾರಕ್ಕೆ: ಕೋಡಿಮಠ ಸ್ವಾಮೀಜಿ

ಹೊಸಪೇಟೆ(ವಿಜಯನಗರ): ವಿಧಾನಸಭೆ ಚುನಾವಣೆ ನಂತರ ರಾಜ್ಯದಲ್ಲಿ ಒಂದು ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದು ಕೋಡಿಮಠ ಮಹಾಸಂಸ್ಥಾನದ ಪೀಠಾಧ್ಯಕ್ಷ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದರು. ನಗರದಲ್ಲಿ ಶುಕ್ರವಾರ ಬಿಜೆಪಿ ನಾಯಕಿ ರಾಣಿ ಸಂಯುಕ್ತಾ ಅವರ ಮನೆಗೆ ಭೇಟಿ ನೀಡಿದಾಗ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಯಾವುದೇ ಸಮ್ಮಿಶ್ರ ಸರ್ಕಾರ ಬರುವುದಿಲ್ಲ ಎಂದರು.   ಸಂಕ್ರಾಂತಿ ಫಲ ಹೇಳುವುದಕ್ಕೆ ಒಂದು ದಿನ ಬಾಕಿ ಇದೆ. ಇದು ಕಳೆಯದೇ ಭವಿಷ್ಯ ಹೇಳಲಾಗದು. ಸಂಕ್ರಾಂತಿ, ಯುಗಾದಿ …

Read More »

ಡಾ.ವಿಷ್ಣುವರ್ಧನ್ ಸ್ಮಾರಕ: 13 ವರ್ಷಗಳ ಹೋರಾಟ ಸಾರ್ಥಕ, ಅಭಿಮಾನಿಗಳ ಸಂಭ್ರಮ

ಮೈಸೂರು: ಚಲನಚಿತ್ರ ನಟ ದಿ. ವಿಷ್ಣುವರ್ಧನ್‌ ಅವರ ಸ್ಮಾರಕದ ಉದ್ಘಾಟನೆಗೆ ಮುಹೂರ್ತ ನಿಗದಿಯಾಗಿರುವುದು ಅವರ ಅಭಿಮಾನಿಗಳಲ್ಲಿ ಸಂತಸ ಮೂಡಿಸಿದೆ. ಕಲಿಕೆಯ ತಾಣವಾಗುವ ಮಹತ್ವಾಕಾಂಕ್ಷೆಯೊಂದಿಗೆ ಜಿಲ್ಲೆಯ ಎಚ್‌.ಡಿ.ಕೋಟೆ ರಸ್ತೆಯಲ್ಲಿರುವ ಉದ್ಬೂರು ಬಳಿಯ ಹಾಲಾಳು ಗ್ರಾಮದಲ್ಲಿ ‘ಸಾಹಸ ಸಿಂಹ ದಿ. ಡಾ.ವಿಷ್ಣುವರ್ಧನ್ ಸ್ಮಾರಕ ಭವನ’ ನಿರ್ಮಾಣವಾಗಿದೆ. ಅಂತಿಮ ಹಂತದ ಕಾಮಗಾರಿಗಳು ಪ್ರಗತಿಯಲ್ಲಿವೆ. 2020ರ ಸೆ.15ರಂದು ಸ್ಮಾರಕ ನಿರ್ಮಾಣಕ್ಕೆ ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವರ್ಚುವಲ್‌ ವೇದಿಕೆಯಲ್ಲಿ ಭೂಮಿ ಪೂಜೆ ನೆರವೇರಿಸಿದ್ದರು. ಕರ್ನಾಟಕ ಪೊಲೀಸ್ ವಸತಿ ನಿಗಮವು …

Read More »

ವರ್ಗಾವಣೆ ದಂಧೆ: 2022ರ ಮೊದಲ ವರ್ಗಾವಣೆ ಸಂಭ್ರಮಿಸಿದ್ದ ಸ್ಯಾಂಟ್ರೊ ರವಿ

ಬೆಂಗಳೂರು: ಪರಿಶಿಷ್ಟ ಸಮುದಾಯದ ಮಹಿಳೆ ಮೇಲೆ ಅತ್ಯಾಚಾರವೆಸಗಿ ಹಲ್ಲೆ ಮಾಡಿ ಕೊಲೆ ಬೆದರಿಕೆಯೊಡ್ಡಿದ್ದ ಪ್ರಕರಣದ ಆರೋಪಿ ಕೆ.ಎಸ್‌. ಮಂಜುನಾಥ್ ಅಲಿಯಾಸ್‌ ಸ್ಯಾಂಟ್ರೊ ರವಿ, ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ವರ್ಗಾವಣೆ ದಂಧೆಯಲ್ಲಿ ಭಾಗಿಯಾಗಿದ್ದನೆಂಬ ಆರೋಪ ಕೇಳಿಬಂದಿದೆ.   ಸ್ಯಾಂಟ್ರೊ ರವಿ ವಿರುದ್ಧ ಮೈಸೂರು ವಿಜಯನಗರ ಠಾಣೆಗೆ ಜ. 2ರಂದು ದೂರು ನೀಡಿರುವ ಎರಡನೇ ಪತ್ನಿ, ವಾಟ್ಸ್‌ಆಯಪ್‌ ಸಂದೇಶ ಹಾಗೂ ಸ್ಟೇಟಸ್‌ಗಳನ್ನು ಪುರಾವೆಯಾಗಿ ನೀಡಿದ್ದಾರೆ. ಆರೋಪಿ ರವಿ ತನ್ನ ಸ್ಟೇಟಸ್‌ಗಳಲ್ಲಿ ವರ್ಗಾವಣೆಗೆ ಸಂಬಂಧಪಟ್ಟಂತೆ …

Read More »

ಹುಬ್ಬಳ್ಳಿ-ಧಾರವಾಡಕ್ಕೆ ಎನ್‌ಎಫ್‌ಎಸ್‌ ವಿವಿ ಮಂಜೂರು: ಪ್ರಹ್ಲಾದ ಜೋಷಿ

ಹುಬ್ಬಳ್ಳಿ: ಕರ್ನಾಟಕಕ್ಕೆ ಬಹು ಅತ್ಯಾವಶ್ಯಕ ಎನಿಸಿದ್ದ ರಾಷ್ಟ್ರೀಯ ವಿಧಿವಿಜ್ಞಾನ ಶಾಸ್ತ್ರದ ವಿಶ್ವವಿದ್ಯಾಲಯದ ಕ್ಯಾಂಪಸ್‌ (National Forensic Science University) ಅನ್ನು ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಸ್ಥಾಪಿಸಲು ಕೇಂದ್ರ ಸರಕಾರ ಮಂಜೂರಾತಿ ನೀಡಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಷಿ ತಿಳಿಸಿದ್ದಾರೆ.   ಕೇಂದ್ರ ಗೃಹ ಇಲಾಖೆಯಿಂದ ಮಂಜೂರಾತಿ ಪ್ರತಿ ರಾಜ್ಯ ಸರಕಾರಕ್ಕೆ ಬಂದಿದ್ದು, ಒಂದು ಪ್ರತಿ ನನಗೂ ತಲುಪಿದೆ. ಕಳೆದ 2-3 ತಿಂಗಳ ಹಿಂದೆ ಕೇಂದ್ರ ಗೃಹ ಸಚಿವರಿಗೆ …

Read More »

ಹಲವು ಅಚ್ಚರಿಗಳ ಆಚರಣೆ ಮಕರ ಸಂಕ್ರಾಂತಿ

ಮಾನವ ಉತ್ಸವಪ್ರಿಯ. ದೇವತಾ ಉತ್ಸವಗಳನ್ನು ನಡೆಸುವುದು, ಹಬ್ಬಹರಿದಿನಗಳನ್ನು ಆಚರಿಸುವುದು ಎಂದರೆ ಎಲ್ಲಿಲ್ಲದ ಸಡಗರ. ಆದ್ದರಿಂದಲೇ ಕಾಳಿದಾಸ ಉತ್ಸವಪ್ರಿಯಾಃ ಖಲು ಮನುಷ್ಯಾಃ ಎಂದಿದ್ದಾನೆ.ನಾವು ಆಚರಿಸುವ ಉತ್ಸವಗಳಾಗಲಿ, ಹಬ್ಬಗಳಾಗಲಿ ವಿಶೇಷ ಅರ್ಥವನ್ನೊಳಗೊಂಡಿದೆ, ಪ್ರಾಕೃತಿಕ ಸಂಬಂಧ ವಿದೆ. ಅಧ್ಯಾತ್ಮದ ಹಿನ್ನೆಲೆಯಿದೆ. ವೈಜ್ಞಾನಿಕ ಪರಿಕಲ್ಪನೆ ಯಿದೆ. ಸುಸಂಸ್ಕೃತ ಮನುಕುಲದ ಹಂಬಲವಿದೆ. ಪಶುತ್ವ ವನ್ನು ಕಳೆದು ಮಾನವತ್ವದಿಂದ ದೈವತ್ವಕ್ಕೇ ರಿಸುವ ಉದಾತ್ತ ಭಾವವಿದೆ. ಪ್ರಾಕೃತಿಕ ಬದಲಾವಣೆಯನ್ನು ಗುರುತಿಸಿ ಅದು ಮನುಕುಲದ ಮೇಲೆ ಬೀರುವ ಪ್ರಭಾವವನ್ನು ನೆನಪಿಸುವು ದಕ್ಕಾಗಿ …

Read More »

ಮಿ ವಿವೇಕಾನಂದರು ಕೇವಲ ವ್ಯಕ್ತಿ ಅಲ್ಲ, ಅದೊಂದು ದಿವ್ಯ ಶಕ್ತಿ.:ವೈದ್ಯಾಧಿಕಾರಿ ಡಾ| ಭುವಿ

ಚಿಕ್ಕೋಡಿ: ಸ್ವಾಮಿ ವಿವೇಕಾನಂದರು ಕೇವಲ ವ್ಯಕ್ತಿ ಅಲ್ಲ, ಅದೊಂದು ದಿವ್ಯ ಶಕ್ತಿ. ಅವರು ಚಿಕ್ಯಾಗೊ ಸಮ್ಮೇಳನದಲ್ಲಿ ಮಾಡಿದ ಉಪನ್ಯಾಸ ಸುವರ್ಣ ಅಕ್ಷರಗಳಲ್ಲಿ ಬರೆದಿಡುವಂತದ್ದು ಎಂದು ಕಬ್ಬೂರ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ| ಭುವಿ ನುಡಿದರು.   ಚಿಕ್ಕೋಡಿ ತಾಲೂಕಿನ ಜಾಗನೂರ ಗ್ರಾಮದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ನೆಹರು ಯುವ ಕೇಂದ್ರ ಬೆಳಗಾವಿ, ಯುವ ಸಂಘಗಳ ಒಕ್ಕೂಟದ ತಾಲೂಕಾ ಘಟಕ, ಡಾ.ಅಂಬೇಡ್ಕರ ಕಲಾ ಮತ್ತು …

Read More »